ಯಳಂದೂರು ಪಟ್ಟಣದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಕೂರುವ ಸ್ಥಳದಲ್ಲಿ ಕುಡಿದು ಮಲಗಿರುವ ಕುಡುಕರು. ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು, ಮಹಿಳೆಯರು, ವಯಸ್ಕರು ಹಾಗೂ ವಿವಿಧ ಗ್ರಾಮಗಳಿಗೆ ತೆರಳಲು ಸಾರ್ವಜನಿಕರು ಕುಳಿತುಕೊಳ್ಳಲು ಜಾಗವಿಲ್ಲದೆ ಬಸ್ ಬರುವವರೆಗೂ ನಿಂತುಕೊಂಡು ಆಯಾಸ ಪಡುವ ಪರಿಸ್ಥಿತಿ ಇದೆ ಎಂದು ಪ್ರಯಾಣಿಕರು ಮಾಧ್ಯಮಕ್ಕೆ ಮಾಹಿತಿ ನೀಡಿದರು ಪ್ರತಿ ದಿನ ಕುಡಿದು ಬಸ್ ನಿಲ್ದಾಣದಲ್ಲಿ ಮಲಗುವವರ ಸಂಖ್ಯೆ ಹೆಚ್ಚಾಗಿದ್ದು ಸಂಬಂಧಪಟ್ಟ ಇಲಾಖೆ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ ಎಂದು ಮಳಿಗೆ ಮಾಲೀಕರು ತಿಳಿಸಿದರು.ಬಸ್ ನಿಲ್ದಾಣದಲ್ಲಿ ವಾಹನಗಳನ್ನು ಅಡ್ಡದಿಡ್ಡಿ ನಿಲ್ಲಿಸುತ್ತಾರೆ ಬಸ್ ಗಳನ್ನು ರಸ್ತೆ ಮಧ್ಯದಲ್ಲಿಯೇ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿ, ಹತ್ತಿಸಿಕೊಳ್ಳುತ್ತಾರೆ ಟ್ರಾಫಿಕ್ ಜಾಮ್ ಉಂಟಾಗುತ್ತದೆ. ಆಗಾಗಿ ಬಸ್ ನಿಲ್ದಾಣಕ್ಕೆ ಪೊಲೀಸರನ್ನು ನೇಮಿಸಿ ಪ್ರಯಾಣಿಕರ ಸಮಸ್ಯೆ ಬಗೆಹರಿಸಿ ಎಂದು ಪ್ರಯಾಣಿಕರು ಮಾಧ್ಯಮದ ಮೂಲಕ ಮನವಿ ಮಾಡಿದರು.
https://play.google.com/store/apps/details?id=com.speed.newskannada