ದಾವಣಗೆರೆ, ಸೆಪ್ಟೆಂಬರ್ 29: “ಯಡಿಯೂರಪ್ಪ ಅವರು ನಮ್ಮ ಬೆಂಬಲಕ್ಕೆ ನಿಂತಿದ್ದಕ್ಕೆ ವೀರಶೈವ ಸಮಾಜ ಉಳಿಯಿತು” ಎಂದು ಹೇಳುವ ಮೂಲಕ ಕಾಂಗ್ರೆಸ್ ನ ಪ್ರಭಾವಿ ಮುಖಂಡ, ಶಾಸಕ ಹಾಗೂ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆದ ಶಾಮನೂರು ಶಿವಶಂಕರಪ್ಪ ಅವರು ಅಚ್ಚರಿ ಮೂಡಿಸಿದ್ದಾರೆ. ಆ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ. ದಾವಣಗೆರೆಯಲ್ಲಿ ಭಾನುವಾರ ನಡೆದ ದಸರಾ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಅವರು, ವೀರಶೈವ ಲಿಂಗಾಯತ ಸಮಾಜವನ್ನು ದುರುಪಯೋಗ ಪಡಿಸಿಕೊಳ್ಳುವಾಗ ಯಡಿಯೂರಪ್ಪ ಅವರು ಬೆನ್ನಿಗೆ ನಿಂತಿದ್ದರು. ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರ ನಿರ್ಧಾರವೇ ನಮ್ಮ ನಿರ್ಧಾರ ಎಂದು ಹೇಳಿದ್ದರು. ಆ ಕಾರಣದಿಂದ ನಮ್ಮ ವೀರಶೈವ ಸಮಾಜ ಉಳಿಯುವಂತಾಯಿತು ಎಂದು ಹೇಳಿದ್ದಾರೆ.
ಯಡಿಯೂರಪ್ಪರಿಂದ ವೀರಶೈವ ಸಮಾಜ ಉಳಿಯಿತು: ಶಾಮನೂರು ಶಿವಶಂಕರಪ್ಪ
Please follow and like us: