ಪುತ್ರ ವಿಜಯೇಂದ್ರ ಹೇಳಿದ್ರ ಅಪ್ಪನ ಭವಿಷ್ಯ..?
ಹೌದು ವರಿಷ್ಠರ ಒತ್ತಡದಿಂದಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಮುಂದಿನ ದಿನಗಳು ಹೇಗಿರಲಿದೆ ಎನ್ನುವುದರ ಬಗ್ಗೆ ಅವರ ಪುತ್ರ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷರೂ ಆಗಿರುವ ಬಿ.ವೈ.ವಿಜಯೇಂದ್ರ ಹೊಸ ವಿಷಯವನ್ನ ಹೊರಗೆಡವಿದ್ದಾರೆ. ಎರಡು ಅಸೆಂಬ್ಲಿ ಕ್ಷೇತ್ರಗಳ ಉಪಚುನಾವಣೆಯ ಪೈಕಿ ಹಾನಗಲ್ ಕ್ಷೇತ್ರದ ಉಸ್ತುವಾರಿಯೂ ಆಗಿರುವ ವಿಜಯೇಂದ್ರ ಅವರು, ನಾಡಿನ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ದರ್ಶನ ಪಡೆದು, ನಂತರ ಬಿಜೆಪಿ ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡುತ್ತಿದ್ದರು.