ಏ. 1 ರಿಂದಲೇ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಿಎಂ ಸೂಚನೆ

ಬೆಂಗಳೂರು: ಆಯವ್ಯಯದಲ್ಲಿ ಘೋಷಿಸಿದ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಅನುಷ್ಠಾನ ಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲ ಸಿದ್ಧತೆ ಮಾಡಿಕೊಂಡಿದ್ದಾರೆ.2022 -23 ನೇ ಸಾಲಿನ ಆರ್ಥಿಕ ವರ್ಷ ಆರಂಭದ ಮೊದಲ ದಿನವಾಗಿರುವ ಏಪ್ರಿಲ್ 1 ರಿಂದಲೇ ಬಜೆಟ್ ಘೋಷಿತ ಯೋಜನೆಗಳ ಜಾರಿಗೆ ಸರ್ಕಾರಿ ಆದೇಶಗಳನ್ನು ಹೊರಡಿಸುವಂತೆ ಸರ್ಕಾರದ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.ಈ ಕುರಿತು ಖುದ್ದು ಎಲ್ಲ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿರುವ ಮುಖ್ಯಮಂತ್ರಿಯವರು, ಆಯವ್ಯಯದಲ್ಲಿ ಘೋಷಿಸಿರುವ ಕಾರ್ಯಕ್ರಮಗಳನ್ನು ಉಲ್ಲೇಖಿಸಿ, ಈ ಕುರಿತು ಇಲಾಖೆಯಿಂದ ಯೋಜನೆಯ ರೂಪುರೇಷೆಗಳ ಕುರಿತು ಪ್ರಸ್ತಾವನೆ ಸಿದ್ಧಪಡಿಸಿ, ಆರ್ಥಿಕ ಇಲಾಖೆಯ ಆಯವ್ಯಯ ಸಲಹೆಯಂತೆ ಏಪ್ರಿಲ್ 1 ರಿಂದಲೇ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸುವಂತೆ ಸೂಚಿಸಿದ್ದಾರೆ.

ಅಲ್ಲದೆ, ಈ ಯೋಜನೆಗಳನ್ನು ಅತಿ ಶೀಘ್ರವಾಗಿ ಜಾರಿಗೊಳಿಸುವಂತೆ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿಯವರು ನಿರ್ದೇಶನ ನೀಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿವೇಕ್ ಅಗ್ನಿಹೋತ್ರಿಯವರ ದಿ ಕಾಶ್ಮೀರ್ ಫೈಲ್ಸ್ ಬಗ್ಗೆ ಆರ್ ಮಾಧವನ್ ಏಕೆ ಅಸೂಯೆಪಡುತ್ತಾರೆ?

Fri Mar 18 , 2022
ಕಾಶ್ಮೀರ ಫೈಲ್ಸ್ ಗಲ್ಲಾಪೆಟ್ಟಿಗೆಯಲ್ಲಿ ಅದ್ಭುತವಾದ ರನ್ ಗಳಿಸುತ್ತಿದೆ. ಈ ಚಿತ್ರವು ಈಗಾಗಲೇ ಯಾವುದೇ ಹಿಂದಿ ಚಿತ್ರದಂತೆ ಸಾಂಕ್ರಾಮಿಕ ನಂತರದ ದಾಖಲೆಗಳನ್ನು ಮುರಿದಿದೆ ಮತ್ತು 100 ಕೋಟಿ ಕ್ಲಬ್‌ಗೆ ಪ್ರವೇಶಿಸುವ ಅಂಚಿನಲ್ಲಿದೆ. ಮಾರ್ಚ್ 11 ರಂದು ಬಿಡುಗಡೆಯಾದ ಚಿತ್ರವನ್ನು ಅಭಿಮಾನಿಗಳು ಮತ್ತು ವಿಮರ್ಶಕರು ಶ್ಲಾಘಿಸಿದ್ದಾರೆ. ಹೆಚ್ಚಿನ ಬಾಲಿವುಡ್ ಖ್ಯಾತನಾಮರು ಚಿತ್ರದ ಬಗ್ಗೆ ಇನ್ನೂ ಕಾಮೆಂಟ್ ಮಾಡದಿದ್ದರೂ, ನಟ ಆರ್ ಮಾಧವನ್ ಅವರು ಗುರುವಾರ ಒಪ್ಪಿಕೊಂಡರು ಮತ್ತು ಇದು ಬಾಕ್ಸ್ ಆಫೀಸ್‌ನಲ್ಲಿ ಉತ್ತಮವಾಗಿ […]

Advertisement

Wordpress Social Share Plugin powered by Ultimatelysocial