ಸಿದ್ದರಾಮಯ್ಯ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದವಾಗಿದೆ: ಹೊಸ ಬಾಂಬ್ ಸಿಡಿಸಿದ ಸಿ.ಎಂ.ಇಬ್ರಾಹಿಂ

 

ಬೆಂಗಳೂರು: ರಾಜ್ಯಸಭೆ ಚುನಾವಣೆ ಬೆನ್ನಲ್ಲೇ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ನಡುವೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಎಂ.ಇಬ್ರಾಹಿಂ, ಸ್ಥಳೀಯ ನಾಯಕರಿಂದ ಕೊನೇ ಕ್ಷಣದಲ್ಲಿ ಗೇಮ್ ಚೇಂಜ್ ಆಗಿದೆ. ಇದು ಮುಸ್ಲಿಂ ಸಮುದಾಯಕ್ಕೆ ಮಾಡಿರುವ ಅಪಮಾನ.

ಬಿಜೆಪಿಯನ್ನು ಗೆಲ್ಲಿಸಲು ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಲೆಹರ್ ಸಿಂಗ್ ಬಿ ಎಸ್ ವೈ ಬೆಂಬಲಿತ ಅಭ್ಯರ್ಥಿಯಾಗಿದ್ದಾರೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಲೂ ಲೆಹರ್ ಸಿಂಗ್ ಸಹಾಯ ಮಾಡಿದ್ದರು ಎಂದು ಹೇಳಿದರು.

ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಕಾಂಗ್ರೆಸ್ ಸಹಾಯ ಮಾಡುತ್ತಿದೆ. ಬಿಜೆಪಿ ಹಾಗೂ ಸಿದ್ದರಾಮಯ್ಯ ನಡುವೆ ಒಳ ಒಪ್ಪಂದವಾಗಿರುವುದು ನಿಜ ಎಂದು ಇಬ್ರಾಹಿಂ ಹೇಳಿದ್ದಾರೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಟಿಕೆಟ್​ ಹಂಚಿಕೆ ಕುರಿತು ಬಿಜೆಪಿಯಲ್ಲಿ ಯಾವುದೇ ಅಸಮಾಧಾನ ಇಲ್ಲ:

Tue May 31 , 2022
ಮಂಡ್ಯ: ಬಿಜೆಪಿಯಿಂದ ಟಿಕೆಟ್​ ಹಂಚಿಕೆಯಲ್ಲಿ ಯಾವುದೇ ಅಸಮಾಧಾನವಿಲ್ಲ, ಪರಿಷತ್​ ಹಾಗೂ ರಾಜ್ಯಸಭಾ ಟಿಕೆಟ್​​ ಹಮಚಿಕೆಯಲ್ಲಿ ಎಲ್ಲಾ ವರ್ಗಗಳಿಗೂ ಪ್ರಾತಿನಿದ್ಯ ಕೊಟ್ಟಿದ್ದೇವೆ ಎಂದು .ಸದಾನಂದಗೌಡ ತಿಳಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಎಲ್ಲರನ್ನೂ ಮುಟ್ಟುವ ಕೆಲಸ ಪಕ್ಷ ಮಾಡಿದೆ. ಗೆಲ್ಲುವ ಪಕ್ಷವಾಗಿರುವುದರಿಂದ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಿಸುತ್ತದೆ. ಕೆಲವೊಮ್ಮೆ ಆಯ್ಕೆ ಸಂದರ್ಭದಲ್ಲಿ ಗೊಂದಲ ಇರುವುದು ಸಹಜ. ವಾಸ್ತವವಾಗಿ ಎಲ್ಲರ ಸಹಮತ ಪಡೆದೆ ಕೋರ್ ಕಮಿಟಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿರುತ್ತದೆ. ವಿಧಾನಸಭೆ ಚುನಾವಣೆಗೆ ತುಂಬಾ ಕ್ರಿಯಾಶೀಲರು […]

Advertisement

Wordpress Social Share Plugin powered by Ultimatelysocial