ಸಿಎಂ ಬೊಮ್ಮಾಯಿ ಭೇಟಿಯಾದ ಜಿ.ಟಿ.ದೇವೇಗೌಡ ̤

 

ಬೆಂಗಳೂರು,ಮೇ 29- ಇತ್ತೀಚೆಗೆ ಬಿದ್ದ ಮಳೆಯಿಂದ ತಮ್ಮ ಕ್ಷೇತ್ರದಲ್ಲಿ ಉಂಟಾಗಿರುವ ಹಾನಿಗೆ ಪರಿಹಾರ ನೀಡುವಂತೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

ಇಂದು ಬೆಳಗ್ಗೆ ಆರ್‍ಟಿನಗರದಲ್ಲಿರುವ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಇತ್ತೀಚೆಗೆ ಬಿದ್ದ ಮಳೆಯಿಂದ ಉಂಟಾಗಿರುವ ನಷ್ಟಕ್ಕೆ ಪರಿಹಾರ ನೀಡುವಂತೆ ಕೋರಿದರು.

ಬಳಿಕೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ಹಿನಕಲ್ ಕೆರೆ, ಬೋಗಾದಿ ಕೆರೆ ಹಾಗೂ ಲಿಂಗಾಬುದಿ ಕೆರೆಗಳು ಸುಮಾರು 20 ವರ್ಷಗಳ ನಂತರ ಕೊಡಿ ಬಿದ್ದಿವೆ. ಇದರಿಂದ ಜನವಸತಿ ಪ್ರದೇಶಗಳು ಮತ್ತೊಮ್ಮೆ ಜಲಾವೃತಗೊಂಡು ಸಾರ್ವಜನಿಕರು ತಿರುಗಾಡುವ ಸೇತುವೆಗಳು, ರಸ್ತೆಗಳು, ಚರಂಡಿಗಳು ತೀವ್ರವಾಗಿ ಹಾಳಾಗಿವೆ ಎಂದರು.

ಸ್ಥಳೀಯ ಸಂಸದರು, ಪಾಲಿಕೆ ಸದಸ್ಯರು, ಜಿಲ್ಲಾಕಾರಿಗಳು, ಪಾಲಿಕೆ ಆಯುಕ್ತರು, ಹಾಗೂ ಸಂಬಂಧಪಟ್ಟ ಅಕಾರಿಗಳೊಂದಿಗೆ ಸ್ಥಳ ಪರಿಶೀಲಿಸಿ ಇನ್ನು ಮುಂಬರುವ ದಿನಗಳಲ್ಲಿ ಈ ರೀತಿ ಪುನರಾವರ್ತನೆಯಾಗದಂತೆ ತಡೆಯಲು ಪಾಲಿಕೆ ಆಯುಕ್ತರು ಈ ಸಂಬಂಧ ವಿವರವಾದ ಮಾಹಿತಿ ಒಳಗೊಂಡ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಉದ್ದೇಶಿತ ಕಾಮಗಾರಿಗಳಿಗೆ 27.50 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.

ಈ ಕಾಮಗಾರಿಗಳನ್ನು ತುರ್ತಾಗಿ ಕೈಗೊಳ್ಳಬೇಕಾಗಿದ್ದು ಅನುದಾನವನ್ನು ಬಿಡುಗಡೆ ಮಾಡಿಕೊಟ್ಟು ಈ ಭಾಗದಲ್ಲಿ ವಾಸಿಸುತ್ತಿರುವ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಟ್ಟು ಸಹಾಯ ಮಾಡುವಂತೆ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ಜಿ.ಟಿ ದೇವೇಗೌಡರು ತಿಳಿಸಿದರು.

ಕಳೆದ ವರ್ಷ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಚಾಮುಂಡೇಶ್ವರಿ ಕ್ಷೇತ್ರದ ಬೋಗಾದಿ 2ನೇ ಹಂತ, ಸಿಫ್‍ಟಿಆರ್‍ಐ ಬಡಾವಣೆ, ಆನಂದನಗರ ಆಶ್ರಯ ಬಡಾವಣೆ, ಆನಂದ ಬಡಾವಣೆ, ಪ್ರೀತಿ ಬಡಾವಣೆ, ರಾಮಕೃಷ್ಣನಗರ ದಟ್ಟಗಳ್ಳಿ ಶಾರದಾದೇವಿ ನಗರ ಹಾಗೂ ಇನ್ನಿತರ ಜನವಸತಿ ಪ್ರದೇಶಗಳು ಜಲಾವೃತಗೊಂಡಿದ್ದವು.

ಇದರಿಂದ ಗೃಹಪಯೋಗಿ ವಸ್ತುಗಳು ಹಾಗೂ ಧವಸಧಾನ್ಯಗಳು ನೀರುಪಾಲಾಗಿ ಅಪಾರ ಪ್ರಮಾಣದ ನಷ್ಟವಾಗಿತು.್ತ ಆಗ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಕಾಮಗಾರಿಗಳನ್ನು ಕೈಗೊಳ್ಳಲು 138 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕ್ರೇಜಿ಼ಸ್ಟಾರ್ ಹುಟ್ಟುಹಬ್ಬಕ್ಕೆ ಬಂತು 'ತ್ರಿವಿಕ್ರಮ' ಹಾಡು

Sun May 29 , 2022
ಮಮ್ಮಿ ಸಾಂಗ್ ರಿಲೀಸ್ ಮಾಡಿದ ಸೆಂಚುರಿ ಸ್ಟಾರ್‌ ಕ್ರೇಜಿ಼ಸ್ಟಾರ್ ವಿ.ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ನಟಿಸಿರುವ ‘ತ್ರಿವಿಕ್ರಮ’ ಜೂನ್ 24ರಂದು ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ವಿಕ್ಕಿ ನಾಯಕ ನಟನಾಗಿ ಎಂಟ್ರಿ ಕೊಡುತ್ತಿರುವ ಚೊಚ್ಚಲ ಸಿನಿಮಾ ಇದಾಗಿದ್ದು, ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಪ್ರಾರಂಭದಿಂದಲೂ ಈ ಚಿತ್ರಕ್ಕೆ ಚಂದನವನದ ತಾರೆಯರು ಸಾಥ್ ನೀಡಿದ್ದಾರೆ. ಇದೀಗ ಸೆಂಚುರಿ ಸ್ಟಾರ್‌ ಶಿವರಾಜ್‌ಕುಮಾರ್ ಸಹ ‘ತ್ರಿವಿಕ್ರಮ’ನಿಗೆ ಸಾಥ್ ನೀಡಿದ್ದಾರೆ. ಮೇ 30ರಂದು […]

Advertisement

Wordpress Social Share Plugin powered by Ultimatelysocial