ಹುಬ್ಬಳ್ಳಿ : ಹುಬ್ಬಳ್ಳಿ ಗಲಭೆ ವೇಳೆ ನಾಲ್ಕೈ ತಲೆಗಳು ಉರುಳಿದ್ರೆ ಹುಬ್ಬಳ್ಳಿ ಶಾಂತವಾಗಿರುತ್ತಿತ್ತು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿವಾದತ್ಮಾಕ ಹೇಳಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿ.ಟಿ.
ರವಿ. ಹುಬ್ಬಳ್ಳಿಯಲ್ಲಿ ನಡೆದ ಗಲಭೆ ವೇಳೆ ನಾಲ್ಕೈದು ತಲೆಗಳು ಉರುಳಿದ್ರೆ ಹುಬ್ಬಳ್ಳಿ ಶಾಂತವಾಗಿರ್ತಿತ್ತು. ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಗಲಭೆ ಹತೋಟಿಗೆ ಬಂದಿದೆ ಎಂದು ಹೇಳಿದ್ದಾರೆ.
ಇನ್ನು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಗಲಭೆಕೋರರಿಗೆ ಸಹಕಾರ ನೀಡಿದ್ದಾರೆ. ಓಟ್ ಬ್ಯಾಂಕ್ ಸಲುವಾಗಿ ಗಲಭೆಕೋರರ ಓಲೈಕೆಗೆ ಮುಂದಾಗಿದ್ದಾರೆ. ಗಲಭೆಕೋರರು ತಮ್ಮ ಸಹೋದರಂತೆ ಕಾಂಗ್ರೆಸ್ ನವರು ಭಾವಿಸುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಹಳೇ ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ 154 ಮಂದಿಯನ್ನು ಬಂಧಿಸಿದ್ದು, ಬಂಧನಕ್ಕೊಳಗಾಗಿರುವ ಆರೋಪಿಗಳು ನೀಡಿರುವ ಸುಳಿವಿನ ಮೇರೆಗೆ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಸಲಾಗುತ್ತಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: