ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರಿನಲ್ಲಿ ದಾಸ ಬಣಜಿಗ ಶ್ರೀರಾಮ ಮಂದಿರದಲ್ಲಿ ಬದುಕು ಸೇವಾಟ್ರಸ್ಟ್ ವತಿಯಿಂದ 7ನೇವರ್ಷದ 2023ನೇ ಸಾಲಿನ ನೂತನ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಲಾಯಿತು.
ಕ್ಯಾಲೆಂಡರ್ ಬಿಡುಗಡೆ ಮಾಡಿ ಪುರಸಭಾ ಸದಸ್ಯ ಶಶಿಧರ್ ಮಾತನಾಡಿ ಸಾಮಾಜಿಕ ಕಳಕಳಿಯಿಂದ ರಚನೆಯಾದ ಬದುಕು ಟ್ರಸ್ಟ್ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುವ ಮೂಲಕ ಉತ್ತಮವಾದ ಕಾರ್ಯ ನಿರ್ವಹಿಸುತ್ತದೆ ಹಾಗಾಗಿ ಸಮುದಾಯದ ಹಿರಿಯರು ಈ ಸಾಮಾಜಿಕ ಕೆಲಸಕ್ಕೆ ಕೈಜೋಡಿಸಬೇಕೆಂದು ಎಂದು ಹೇಳಿದರು.
ರಾಮಾನುಜಾಚಾರ್ಯರ ಅನುಯಾಯಿಗಳಾದ ನಾವು ರಾಮನ ತತ್ವದಲ್ಲಿ ನಮ್ಮ ಜೀವನವನ್ನು ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು
ಟ್ರಸ್ಟ್ ನ ಅಧ್ಯಕ್ಷರಾದ ನಟರಾಜು ಮಾತನಾಡಿ ಗುಂಡ್ಲುಪೇಟೆಯಲ್ಲಿ ಕಳೆದ 6 ವರ್ಷಗಳಿಂದ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತಿದ್ದು ಆರೋಗ್ಯ ಕ್ಷೇತ್ರದಲ್ಲಿ ಜೆ.ಎಸ್ ಎಸ್ ಇನ್ನಿತರ ಆಸ್ಪತ್ರೆಗಳ ಸಹಕಾರದಿಂದ ಜಿಲ್ಲೆಯಲ್ಲಿ ಸುಮಾರು 150 ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಿದ್ದು ಮತ್ತು ಕಾಡಂಚಿನ ಗ್ರಾಮಗಳ ಬಡ ವಿಧ್ಯಾರ್ಥಿಗಳಿಗೆ ದಾನಿಗಳ ಸಹಾಯದಿಂದ ಸಲಕರಣೆಗಳನ್ನು ನೀಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮಾನಸ ಶಿಕ್ಷಣ ಸಂಸ್ಥೆಯ ಗೋವಿಂದರಾಜು, ಟ್ರಸ್ಟ್ ನ ಗೌರವ ಅಧ್ಯಕ್ಷ ನಾಗರಾಜು, ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯ ಪ್ರಭಾಕರ್ ಟ್ರಸ್ಟ್ ನ ಸಂತೋಷ್ ,ರಂಗನಾಥ್, ಪುನೀತ್ ರಮೇಶ್ ಶ್ರೀಕಂಠ ಮೂರ್ತಿ ಜಯರಾಂ ಇನ್ನಿತರರು ಉಪಸ್ಥಿತರಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada