ಕ್ಯಾಂಪಸ್ ಫ್ರಂಟ್ ವತಿಯಿಂದ ಉಡುಪಿಯಲ್ಲಿ ವಿಶ್ವ ಹಿಜಾಬ್ ದಿನಾಚರಣೆ

ವಿಶ್ವ ಹಿಜಾಬ್ ದಿನಾಚರಣೆಯ ಅಂಗವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಉಡುಪಿಯ ದುರ್ಗಾ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ವಿಚಾರ ಸಂಕಿರಣ ನಡೆಯಿತು.ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಆಯಿಶಾ ಮುರ್ಶಿದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿ, ಇಂದು ಹಿಜಾಬ್ ಮುಸ್ಲಿಂ ಮಹಿಳೆಯರ ಘನತೆ ಹಾಗೂ ರಕ್ಷಣೆಯ ಕವಚವಾಗಿದೆ. ಆದರೆ ಸಂಘ ಪರಿವಾರ ಇಂದು ತನ್ನ ರಾಜಕೀಯ ಷಡ್ಯಂತ್ರದ ಭಾಗವಾಗಿ ಮುಸ್ಲಿಂ ಮಹಿಳೆಯರ ಶಿಕ್ಷಣವನ್ನು ಮೊಟಕುಗೊಳಿಸುವ ಹುನ್ನಾರವಿದೆ ಎಂದು ಆರೋಪಿಸಿದರು. ನ್ಯಾಷನಲ್ ವಿಮೆನ್ಸ್ ಫ್ರಂಟ್ ಕರ್ನಾಟಕ ರಾಜ್ಯ ಸಮಿತಿ ಸದಸ್ಯೆಯಾದ ನಸೀಮ್ ಉಡುಪಿ ಹಾಗೂ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಮುಖಂಡರಾದ ಝಮ್ ಝಮ್ ಕಪ್ತಿ ಹಾಗೂ ಅಡ್ವಕೇಟ್ ಶಹನಾಝ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿವಿಧ ಕಾಲೇಜಿನ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಿದಾ ಅಫ್ರಾ ಸ್ವಾಗತಿಸಿ, ಸುಹಾ‌ ನಝ್ಮ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೈಕ್- ಓಮ್ನಿ ಕಾರು ನಡುವೆ ಢಿಕ್ಕಿ ಸವಾರ ಗಂಭೀರ

Wed Feb 2 , 2022
ಬೈಕ್ ಹಾಗೂ ಓಮ್ನಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ.ಗಾಯಗೊಂಡವರನ್ನು ಪಡುಬೆಟ್ಟು ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದೆ.ಈತ ಸ್ನೇಹಿತನ ಕಾರಿನಲ್ಲಿ ಪೆಟ್ರೋಲ್ ಖಾಲಿಯಾಗಿದೆ ಎಂದು ಕರೆ ಬಂದ ಹಿನ್ನೆಲೆ ತನ್ನ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ನೆಲ್ಯಾಡಿ ಹೈಸ್ಕೂಲ್ ಬಳಿ ಓಮ್ನಿ ಕಾರು ನಡುವೆ ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ನೆಲ್ಯಾಡಿ […]

Advertisement

Wordpress Social Share Plugin powered by Ultimatelysocial