ಕಾರು ಕದ್ದು ಪರಾರಿಯಾಗಲು ಯತ್ನಿಸಿದ ಕಳ್ಳ.

ಕಾರು ಕದ್ದ ಕಳ್ಳನೋರ್ವ ಟೋಲ್‍ಗೇಟ್ ಮೂಲಕ ಪರಾರಿಯಾಗಲು ಯತ್ನಿಸಿರುವ ಘಟನೆ ವಿಜಯಪುರ ನಗರದ ಟೋಲ್‍ಗೇಟ್ ಬಳಿ ರವಿವಾರ ನಡೆದಿದೆ.
ಇಳಕಲ್‍ನಲ್ಲಿ ಅನ್ಸಾರಿ ನಂಬರಿನ ಕಾರು ಕಳ್ಳತನ ಮಾಡಿ ಇಳಕಲ್‍ನಿಂದ ವಿಜಯಪುರಕ್ಕೆ ಆಗಮಿಸಿದ್ದಾನೆ. ಈ ವೇಳೆ ನಗರದ ಟೋಲ್‍ಗೇಟ್‍ನಲ್ಲಿ ಸಿಬ್ಬಂದಿಗಳು ತಪಾಸಣೆ ಮಾಡಿದ್ದಾರೆ. ಈ ವೇಳೆ ಕಳ್ಳನ ಮೇಲೆ ಅನುಮಾನಗೊಂಡ ಸಿಬ್ಬಂದಿಗಳು ತಪಾಸಣೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಕಳ್ಳ ಚಾಕು ತೋರಿಸಿ ಹಲ್ಲೆ ಮಾಡಲು ಮುಂದಾಗಿದ್ದಾನೆ. ತಕ್ಷಣವೇ ಇತರೆ ಸಿಬ್ಬಂದಿಗಳು ಸಹಾಯಕ್ಕೆ ಓಡಿ ಬಂದಿದ್ದು ಕಂಡು ಕಳ್ಳ ಕಾರು ಅಲ್ಲಿಯೇ ಬಿಟ್ಟು ಜಮೀನಿನಲ್ಲಿ ಪರಾರಿಯಾಗಿದ್ದಾನೆ. ಈ ಸಂಬಂಧ ವಿಜಯಪುರ ಗ್ರಾಮೀಣ ಪೆÇಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಫೆಬ್ರವರಿಯಲ್ಲಿ ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ.

Sun Jan 22 , 2023
ಬೆಂಗಳೂರು : ಕರ್ನಾಟಕದಲ್ಲಿ ಮತದಾರರನ್ನು ಸೆಳೆಯುತ್ತಿರುವ ಬಿಜೆಪಿ ಈಗಾಗಲೇ ರಾಜ್ಯದ ಹಲವು ಕಡೆ ಭರ್ಜರಿ ಸಮಾವೇಶ, ಪ್ರಚಾರ ನಡೆಸಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ಫೆ.6 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದು, ಧಾರವಾಡ, ತುಮಕೂರು ಜಿಲ್ಲೆಗೆ ಭೇಟಿ ನೀಡಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.ಬಳಿಕ ಚಿಕ್ಕಬಳ್ಳಾಪುರ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪೆರೇಸಂದ್ರ […]

Advertisement

Wordpress Social Share Plugin powered by Ultimatelysocial