ಒಂದೇ ಕಾರಿನಲ್ಲಿ ಲಾಂಗ್ ಡ್ರೈವ್ ಹೋಗಿದ್ದ 6 ವಿದ್ಯಾರ್ಥಿಗಳು: ಹೊಸಕೋಟೆ ಬಳಿ ಹೆದ್ದಾರಿಯಲ್ಲಿ ಕಾರು ಪಲ್ಟಿ, 3 ಯುವಕರು, 1 ಯುವತಿ ಸಾವು

ಬೆಳ್ಳಂ ಬೆಳಗ್ಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಟ್ಟೂರು ಗೇಟ್ ಬಳಿ ರಾ.ಹೆ. 75ರಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಡಿವೈಡರ್ ದಾಟಿ ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿ ಪಕ್ಕದ ರಸ್ತೆಗೆ ಹಾರಿ ಲಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ವೈಷ್ಣವಿ, ಭರತ್, ಸಿರಿಲ್, ವೆಂಕಟ್ ಮೃತ ದುರ್ದೈವಿಗಳು. ಮೃತರೆಲ್ಲರೂ ಗಾರ್ಡನ್ ಸಿಟಿ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಸಿರಿಕೃಷ್ಣ, ಅಂಕಿತರೆಡ್ಡಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಂದಹಾಗೆ ಇಂದು ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಕೆಆರ್ ಪುರಂನ ಗಾರ್ಡನ್ ಸಿಟಿ ಕಾಲೇಜಿನ ಆರು ಜನ ವಿದ್ಯಾರ್ಥಿಗಳು ಕೋಲಾರದ ನರಸಾಪುರ ಬಳಿಯಿರೂ ಕೆಫೆ ಕಾಫಿ ಡೇ ಗೆ ಲಾಂಗ್ ಡ್ರೈವ್ ಹೋಗಿದ್ದು ತಮಿಳುನಾಡು ನೋಂದಣಿಯ TN-77-P-4512 ಸ್ವಿಫ್ಟ್ ಕಾರಿನಲ್ಲಿ ಕೋಲಾರದ ಕಡೆಯಿಂದ ಬೆಂಗಳೂರು ಕಡೆಗೆ ವಾಪಸ್ಸಾಗ್ತಿದ್ರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಾಜಿ ಶಾಸಕ ಎಚ್.ಡಿ.ಚೌಡಯ್ಯ ನಿಧನ: ಗಣ್ಯರ ಸಂತಾಪ

Wed Feb 16 , 2022
ಮಂಡ್ಯ ಫೆಬ್ರವರಿ 16: ಮಾಜಿ ಶಾಸಕರು ಹಾಗೂ ಜನಮುಖಿ ಮುತ್ಸದ್ಧಿ ರಾಜಕಾರಣಿ ಆಗಿದ್ದ ಎಚ್.ಡಿ.ಚೌಡಯ್ಯ (94) ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮಾಜಿ ಶಾಸಕ ಡಾ. ಎಚ್.ಡಿ.ಚೌಡಯ್ಯ ಅನಾರೋಗ್ಯದಿಂದ ಕಳೆದ ರಾತ್ರಿ ಮಂಡ್ಯದ ಹೊಳಲು ನಿವಾಸದಲ್ಲಿ ನಿಧನರಾದರು. ಇವರು ನಾಲ್ಕು ಬಾರಿ ಶಾಸಕರಾಗಿದ್ದರು. ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿಯೂ ಜನಸೇವೆ ಮಾಡಿದ್ದಾರೆ. ಕಾವೇರಿ ಹೋರಾಟದಲ್ಲಿ ಮಾದೇಗೌಡರೊಂದಿಗೆ ಚೌಡಯ್ಯ ಪಾಲ್ಗೊಂಡಿದ್ದರು. ಪಿಇಟಿ […]

Advertisement

Wordpress Social Share Plugin powered by Ultimatelysocial