ಎರಡು ಕಾರುಗಳು ಪರಸ್ಪರ ಡಿಕ್ಕಿ ಬೆಂಗಳೂರು!

ವಿಟ್ಲ: ಎರಡು ಕಾರುಗಳು ಪರಸ್ಪರ ಡಿಕ್ಕಿಯಾಗಿ ಬೆಂಗಳೂರು ನಿವಾಸಿಯೊಬ್ಬರು ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಭಾನುವಾರ ಮುಂಜಾನೆ ಮಾಣಿ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.
ಬೆಂಗಳೂರು ಜೆ.ಸಿ.ನಗರದ ಕುರುಬರಹಳ್ಳಿ ನಿವಾಸಿ ಲಕ್ಷ್ಮಣ ಆಚಾರಿ (65) ಮೃತರಾಗಿದ್ದಾರೆ.

ಚಾಲಕ ಪ್ರಜ್ವಲ್ (22) ಸಹಿತ ನಾಲ್ವರು ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಬರುತ್ತಿದ್ದ ಕಾರನ್ನು ಪ್ರಜ್ವಲ್ ಚಲಾಯಿಸಿದ್ದು, ಲಕ್ಷ್ಮಣ ಆಚಾರಿ ಅವರು ಪುತ್ರಿಯ ವಿವಾಹ ಆಮಂತ್ರಣ ನೀಡುವ ನಿಟ್ಟಿನಲ್ಲಿ ಊರಿಗೆ ಆಗಮಿಸುತ್ತಿದ್ದರೆನ್ನಲಾಗಿದೆ. ಮಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದ ಕಾರಿನವರಿಗೆ ಮಾಣಿ ಜಂಕ್ಷನ್ ನಲ್ಲಿ ರಸ್ತೆ ತಪ್ಪಿ ಬೆಂಗಳೂರು ಮಾರ್ಗದಲ್ಲಿ ಮುಂದುವರಿದ್ದಾರೆ. ಈ ಸಮಯ ಬುಡೋಳಿ ಎಂಬಲ್ಲಿ ಈ ಅಪಘಾತ ನಡೆದಿದೆ.
ಪ್ರೆಂಡ್ಸ್ ವಿಟ್ಲ ತಂಡ ವಾಹನವನ್ನು ಸ್ಥಳದಿಂದ ತೆರವು ಮಾಡಿ ಠಾಣೆಗೆ ತಲುಪಿಸಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಾಕಿಸ್ತಾನದ ಮುಂದಿನ ನಾಯಕನಿಗೆ ಕಠಿಣ ಸವಾಲುಗಳನ್ನು ಬಿಟ್ಟಿದ್ದ,ಇಮ್ರಾನ್ ಖಾನ್!

Sun Apr 10 , 2022
ಇಮ್ರಾನ್ ಖಾನ್ ಸೋತಿದ್ದಾರೆ.ಅಡೆತಡೆಗಳ ನಂತರ ಅಡೆತಡೆಗಳನ್ನು ಎದುರಿಸಿದ ಪಾಕಿಸ್ತಾನದ ಏಕೀಕೃತ ಪ್ರತಿಪಕ್ಷವು ಇಮ್ರಾನ್ ಖಾನ್ ನೇತೃತ್ವದ ಸರ್ಕಾರವನ್ನು ಉರುಳಿಸುವ ಉದ್ದೇಶದಲ್ಲಿ ಯಶಸ್ವಿಯಾಗಿದೆ. ಶನಿವಾರ ತಡರಾತ್ರಿ, ಅವಿಶ್ವಾಸ ಮತದ ಸಂದರ್ಭದಲ್ಲಿ ದೇಶದ ರಾಷ್ಟ್ರೀಯ ಅಸೆಂಬ್ಲಿಯ 174 ಸದಸ್ಯರು ಅವರ ವಿರುದ್ಧ ಹೋದ ಕಾರಣ, ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಅಧಿಕಾರದಿಂದ ಹೊರಗುಳಿದರು. ವಿರೋಧ ಪಕ್ಷವು ಆಚರಿಸಲು ಕಾರಣವನ್ನು ಹೊಂದಿದೆ, ಆದರೆ ಬಹುಶಃ ದೀರ್ಘಕಾಲ ಅಲ್ಲ. ಇಮ್ರಾನ್ ಖಾನ್ ಅವರನ್ನು ತೆಗೆದುಹಾಕುವುದು […]

Advertisement

Wordpress Social Share Plugin powered by Ultimatelysocial