ಜನತೆಯು ಜಾತಿ, ಮತ ಧರ್ಮವನ್ನು ಬದಿಗಿಟ್ಟು ಕೋವಿಡ್-19 ವೈರಸ್ ವಿರುದ್ಧ ಒಗ್ಗಟ್ಟಿನಿಂದ ಹೋರಾಡಬೇಕೆಂದು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ,ಹೇಳಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆಯಂತೆ ರವಿವಾರ ರಾತ್ರಿ 9 ಗಂಟೆಗೆ ದೀಪವನ್ನು ಬೆಳಗಿಸಬೇಕು. ನಮ್ಮ ರಾಜ್ಯದ ಕೆಲವು ಜನರು ದೆಹಲಿಯಲ್ಲಿ ಧಾರ್ಮಿಕ ಸಮಾವೇಶಕ್ಕೆ ತೆರಳಿದ್ದರು. ಆ ಸಮಾವೇಶದಲ್ಲಿ ವಿದೇಶ ರಾಷ್ಟ್ರದಿಂದಲೂ ಸದಸ್ಯರು ಬಂದಿದ್ದರು. ಕೆಲವರು ವೈರಸ್ ಸೋಂಕಿಗೆ ಒಳಗಾಗಿದ್ದು, ಅಲ್ಲಿಂದ ವೈರಸ್ ಹರಡಿದೆ. ಆದರೆ, ವೈರಸ್ ಹರಡುವಿಕೆಗೆ ಒಂದು ನಿರ್ದಿಷ್ಟ ಸಮುದಾಯವನ್ನು ಹೊಣೆಯಾಗಿಸುವುದಕ್ಕೆ ಯಾವುದೇ ಕಾರಣವಿಲ್ಲ. ದೆಹಲಿಯಲ್ಲಿ ದುರದೃಷ್ಟಕರ ಘಟನೆಯೊಂದು ನಡೆದುಹೋಗಿದೆ. ಇದು ಎಲ್ಲಿ ನಡೆಯಬಾರದು. ಉದ್ದೇಶಪೂರ್ವಕವಾಗಿ ವೈರಸ್ ಹರಡದೇ ಇರುವ ಕಾರಣ ಬೇಧಭಾವ ಮಾಡುವುದಕ್ಕೂ ಯಾವುದೇ ಕಾರಣವಿಲ್ಲ ಎಂದು ಹೇಳಿದರು.
ಜಾತಿ, ಮತ ಧರ್ಮ ಬದಿಗಿಟ್ಟು ಕರೋನಾ ವಿರುದ್ಧ ನಿಲ್ಲಬೇಕು
Please follow and like us: