ಜಾತಿ ತಾರತಮ್ಯ ದೇಶದ ಹಲವು ಭಾಗಗಳಲ್ಲಿ ಇನ್ನೂ ತಾಂಡವವಾಡುತ್ತಿದ್ದು,

ಜಾತಿ ತಾರತಮ್ಯ ದೇಶದ ಹಲವು ಭಾಗಗಳಲ್ಲಿ ಇನ್ನೂ ತಾಂಡವವಾಡುತ್ತಿದ್ದು, ಅಸ್ಪೃಶ್ಯತೆಯ ಆಚರಣೆ ವಿಚಾರ ಮಾಧ್ಯಮಗಳಲ್ಲಿ ವರದಿಯಾಗುತ್ತಿರುತ್ತದೆ. ಇದನ್ನು ಸಂಪೂರ್ಣವಾಗಿ ಹೋಗಲಾಡಿಸುವ ನಿಟ್ಟಿನಲ್ಲಿ ಕಾರ್ಯಗಳು ನಡೆಯುತ್ತಿದ್ದು, ಇದಕ್ಕೆ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ.

ಹೌದು, ತಮಿಳುನಾಡಿನ ತಿರುವಣ್ಣಾಮಲೈನಲ್ಲಿರುವ ಮುತ್ತು ಮಾರಿಯಮ್ಮ ದೇಗುಲ ಪ್ರವೇಶಕ್ಕೆ 80 ವರ್ಷಗಳ ಬಳಿಕ ದಲಿತ ಸಮುದಾಯದ ಜನರಿಗೆ ಅವಕಾಶ ಮಾಡಿಕೊಡಲಾಗಿದೆ. ಮೇಲ್ವರ್ಗದ ಜನರ ವಿರೋಧದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಸುಮಾರು 300 ಮಂದಿ ದೇವರ ದರ್ಶನ ಪಡೆದಿದ್ದಾರೆ.

ಈ ದೇಗುಲದಲ್ಲಿ ಅಸ್ಪೃಶ್ಯತೆ ಆಚರಣೆ ಮಾಡುವ ಕುರಿತಂತೆ ಇತ್ತೀಚೆಗೆ ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಹಲವು ಸುತ್ತಿನ ಮಾತುಕತೆ ನಡೆಸಲಾಗಿತ್ತು. ಅಂತಿಮವಾಗಿ ಸೋಮವಾರದಂದು ದಲಿತರಿಗೆ ದೇಗುಲ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಯಿತು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪದೇ ಪದೇ ಅತ್ಯಾಚಾರದಿಂದ ಗರ್ಭಿಣಿಯಾದ ಮಗಳು, ತಂದೆಗೆ ಜೀವಾವಧಿ ಶಿಕ್ಷೆ.

Tue Jan 31 , 2023
ಮಲಪ್ಪುರಂ(ಕೇರಳ): ತನ್ನ ಅಪ್ರಾಪ್ತ ಮಗಳ ಮೇಲೆ ಪದೇ ಪದೇ ಅತ್ಯಾಚಾರ ಮಾಡಿ ಗರ್ಭ ಧರಿಸುವಂತೆ ಮಾಡಿದ ತಂದೆಗೆ ಕೇರಳದ ನ್ಯಾಯಾಲಯ ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಪೋಕ್ಸೊ ಕಾಯ್ದೆಯಡಿ ಅಪರಾಧಿಗೆ ಮೂರು ಜೀವಾವಧಿ ಶಿಕ್ಷೆ ವಿಧಿಸಲಾಗಿದೆ ಮತ್ತು ನ್ಯಾಯಾಲಯವು ಅವನ ಜೀವನದ ಉಳಿದ ಅವಧಿಯಲ್ಲಿ ಜೈಲಿನಲ್ಲಿರಲು ನಿರ್ದೇಶಿಸಿದೆ. ಅಷ್ಟೇ ಅಲ್ಲದೇ, ನ್ಯಾಯಾಲಯವು ಆರೋಪಿಗೆ 6.6 ಲಕ್ಷ ರೂ. ದಂಡವನ್ನೂ ವಿಧಿಸಿದೆ. ಪ್ರಕರಣದ ವಿವರಗಳನ್ನು ನೀಡಿದ ಎಸ್‌ಪಿಪಿ, ಮಾರ್ಚ್ 2021 ರಲ್ಲಿ […]

Advertisement

Wordpress Social Share Plugin powered by Ultimatelysocial