ಕೊರೋನಾ ಲಸಿಕೆಯನ್ನ ತಡೆಯುವಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರು ಯಶ ಕಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗ್ತಾಯಿದೆ. ಆಸ್ಟ್ರಾಜೆನಿಕಾ ಕಂಪನಿ ಸಹಯೋಗದಲ್ಲಿ ಕೊರೊನಾ ಸೋಂಕು ತಡೆಯಲು ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಸಂಶೋಧಕರ ತಂಡ ಸಿದ್ಧಪಡಿಸಿದ ಲಸಿಕೆಯ ಮಾನವ ಕ್ಲಿನಿಕಲ್ ಪ್ರಯೋಗ ಯಶಸ್ವಿಯಾಗಿ ಮುಂದುವರೆದಿದೆ. ಯಾವುದೇ ಕ್ಷಣದಲ್ಲಾದರು ಪರೀಕ್ಷೆ ಯಶಸ್ವಿಯಾಗಿವ ಸಾಧ್ಯತೆಯಿದ್ದು……ಒಂದು ವೇಳೆ ಯಶಸ್ವಿಯಾದರೆ ತಕ್ಷಣಕ್ಕೆ ಕೈಗೆಟಕುವ ಸಾಧ್ಯತೆಯಿದೆ.
ಆರೋಗ್ಯ
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಇಂದಿರಾನಗರದಲ್ಲಿರುವ ಸಿವಿ ರಾಮನ್ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆ, ಸೌಲಭ್ಯಗಳ ಪರಿಶೀಲನೆ ನಡೆಸಿದರು. ವೈದ್ಯರು, ಸಿಬ್ಬಂದಿ ಬಳಿ ಮಾಹಿತಿ ಪಡೆದು ಸಮಾಲೋಚನೆ ನಡೆಸಿ, ಸಲಹೆ ನೀಡಿದರು. ನಂತರ ಕೋವಿಡ್ ರೋಗಿಗಳ ಜತೆ ವಿಡಿಯೋ ಸಂವಾದ ನಡೆಸಿದ ಸಚಿವರು ಮಾಹಿತಿ ಪಡೆದರು. ಲಘು ರೋಗ ಲಕ್ಷಣ ಇರುವವರನ್ನು ದಾಖಲು ಮಾಡಿರುವ ಬಗ್ಗೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು. […]
ಬಚ್ಚನ್ ಕುಟುಂಬದ ನಾಲ್ವರಿಗೆ ಸೋಂಕು ಧೃಢಪಟ್ಟ ಹಿನ್ನಲೆಯಲ್ಲಿ ಖ್ಯಾತ ನಟಿ ಹೇಮಾ ಮಾಲಿನಿ ಅವರಿಗು ಸೋಂಕು ಇದೆ ಅವರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ ಎನ್ನವ ವದಂತಿಗಳು ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಆದರೆ ಈಗ ಅದಕ್ಕೆಲ್ಲ ನಟಿ ಹೇಮಮಾಲಿನಿ ಅವರು ವಿಡೀಯೊ ಸಂದೇಶದ ಮೂಲಕ ತನಗೇನು ಆಗಿಲ್ಲ, ತಾನು ಆರಾಮಾಗಿದ್ದೇನೆ….ನನಗೆ ಕೊರೋನಾ ಇಲ್ಲ ಹಾಗಾಗಿ ಸುಳ್ಳು ಸುದ್ದಿಗಳನ್ನ ಹಬ್ಬಿಸಬೇಡಿ ಎಂದು ಹೇಳಿದ್ದಾರೆ.
ನಿಲೋಗಪುರ ಗ್ರಾಮದ ಯುವಕ ಒಂದು ವರ್ಷ ದಿಂದ ಕೋಮಾ ಸ್ಥಿತಿಯಲ್ಲಿದ್ದಾನೆ. ಹೌದು ಕೊಪ್ಪಳ ತಾಲೂಕಿನ ನಿಲೋಗಪುರ ಗ್ರಾಮದ ವೆಂಕಟೇಶ್ ಎಂಬ ಯುವಕ ಕಳೆದ ವರ್ಷ ಆಂಜನೇಯ ಜಾತ್ರೆಯ ವೇಳೆ ದೇವಸ್ಥಾನ ಗೋಪುರ ಕೆಲಸ ಮಾಡುವಾಗ ಕೈ ಜಾರಿ ಮೇಲಿಂದ ಬಿದ್ದು ಕೋಮಾ ಸ್ಥಿತಿಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಜೀವನದ ಕನಸುಗಳನ್ನು ಸುಂದರಗೊಳಿಸುವ ಧಾವಂತದಲ್ಲಿರುವಾಗಲೇ ಗೋಪುರ ಕೆಲಸ ಮಾಡುವಾಗ ಕೈ ಜಾರಿ ಮೇಲಿಂದ ಬಿದ್ದು ಇವತ್ತಿಗೂ ಕೋಮಾ ಸ್ಥಿತಿಯಲ್ಲಿದ್ದಾನೆ. ಇರುವ […]
ಕೊರೋನಾ ಭೀತಿಯಿಂದಾಗಿ ಈ ಪ್ರಸ್ತುತ ಸಾಲಿನ ಶಾಲಾ-ಕಾಲೇಜುಗಳ ಶೈಕ್ಷಣಿಕ ತರಗತಿಗಳು ಆರಂಭವಾಗುವುದು ಅನುಮಾನ ಎನ್ನಲಾಗಿತ್ತು. ಆದರೆ, ಅಕ್ಟೋಬರ್ 01 ರಿಂದ ಕಾಲೇಜುಗಳು ತೆರೆಯಲಿವೆ, ಎಂದಿನಂತೆ ತರಗತಿಗಳು ಪ್ರಾರಂಭವಾಗಲಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಕೊರೊನಾ ಶುರುವಾದ ನಂತರ ಆನ್ಲೈನ್ ತರಗತಿ ಕುರಿತು ರಾಜ್ಯಾದ್ಯಂತ ದೊಡ್ಡ ಮಟ್ಟದ ಚರ್ಚೆ ಶುರುವಾಗಿದೆ. ಕೆಲವರು ಆನ್ಲೈನ್ ತರಗತಿಗಳು ಬೇಕು ಎಂದರೆ, ಕೆಲವರು ಆನ್ಲೈನ್ ತರಗತಿಯನ್ನು ವಿರೋಧಪಡಿಸುತ್ತಿದ್ದಾರೆ. ಆದರೆ, ಈ ಎಲ್ಲಾ ಅನುಮಾನಗಳಿಗೆ ರಾಜ್ಯ ಸರ್ಕಾರ […]
ರಾಜ್ಯದಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿದ್ದು, ಜನತೆ ತತ್ತರಿಸಿದ್ದಾರೆ. ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಮಾರಕ ಕೊರೊನಾ ಸೋಂಕು ಭೀತಿ ಎದುರಾಗಿದೆ. ಈ ಕುರಿತು ಸಿಎಂ ತಮ್ಮ ಕಾರ್ಯಕ್ರಮಗಳಿಂದ ದೂರ ಉಳಿದು ಮನೆಯಲ್ಲೇ ಉಳಿದಿದ್ದಾರೆ. ಸಿಎಂ ಯಡಿಯೂರಪ್ಪ ಅವರ ಬೆಂಗಾವಲು ಪಡೆಯ ವಾಹನವೊಂದರ ಚಾಲಕನಿಗೆ ಸೋಂಕು ತಗುಲಿದ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಸೋಂಕು ಭೀತಿ ಶುರುವಾಗಿದೆ. ಹೀಗಾಗಿ ಅವರ ಸಂಪರ್ಕಕ್ಕೆ ಬಂದಿರುವ ಎಲ್ಲರನ್ನು ಕ್ವಾರಂಟೈನ್ ಮಾಡಲಾಗಿದೆ. […]
ಪ್ರತಿ ತಿಂಗಳ ಗೌರವ ಧನವನ್ನು 12 ಸಾವಿರಕ್ಕೆ ಹೆಚ್ಚಿಸಬೇಕೆಂದು ಆಗ್ರಹಿಸಿ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಿ ಆಶಾ ಕಾರ್ಯಕರ್ತೆಯರು ಹುಬ್ಬಳ್ಳಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಕೊರೊನಾ ಸಂಬಂಧಿದಸಿದ ಕೆಲಸದಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತೆಯರಿಗೆ ಅಗತ್ಯ ರಕ್ಷಣಾ ಸಾಧನೆಗಳನ್ನು ನೀಡಬೇಕು ಎಂದು ಆಗ್ರಹಿಸಿದರು. ಚಪ್ಪಾಳೆ ತಟ್ಡುವ ಮೂಲಕ ಗೌರವ ಸಲ್ಲಿಸುತ್ತಿರುವುದು ಸಂತಸ ತಂದಿದೆ. ಆದರೆ, ಜೀವ ಪಣಕ್ಕಿಟ್ಡು ಕೆಲಸ ಮಾಡುತ್ತಿರುವ ನಮಗೆ ಗೌರವ ಧನ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು. ಈ ಬಗ್ಗೆ ಈಗಾಗಲೇ […]
ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆ ಮೈಸೂರು ಜಿಲ್ಲೆಯಲ್ಲೂ ಆತಂಕ ಹೆಚ್ಚಾಗಿದೆ. ಒಂದೇ ದಿನಕ್ಕೆ 52 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 639ಕ್ಕೆ ಏರಿಕೆಯಾಗಿದೆ. ಈ ಕುರಿತು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಬಿಗಿಗೊಳಿಸಿದೆ. ಹೀಗಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಐದು ದಿನಗಳ ಕಾಲ ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ. ಇದೇ ವೇಳೆ […]
ಮಹಡಿ ಮೇಲಿನಿಂದ ಬಿದ್ದ ಮಗುವಿನ ಚಿಕಿತ್ಸೆಗಾಗಿ ತಂದೆ ಪರದಾಡಿದ ವರದಿಯೊಂದು ವೈದ್ಯಕೀಯ ಶಿಕ್ಷಣ ಸಚಿವರ ಮನಕಲಕಿತ್ತು. ಹೀಗಾಗಿ ಕೋವಿಡ್ ಬಿಕ್ಕಟ್ಟಿನ ಈ ಸಂದರ್ಭದಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ನಿಯಮಗಳ ಅನುಸಾರವಾಗಿ ಮತ್ತು ಹೆಚ್ಚು ಸಂವೇದನಾಶೀಲರಾಗಿ ನಡೆದುಕೊಳ್ಳಬೇಕು ಎಂಬುದಾಗಿ ಖಡಕ್ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಹಡಿ ಮೇಲೆ ಆಟವಾಡುತ್ತಿದ್ದಂತ ಮಗುವೊಂದು ಕೆಳಗೆ ಬಿದ್ದಿತ್ತು. ಕೊರೋನಾ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಿಸಲಾಯಿತು ಆದರೂ, ಸರಿಯಾದ ಸಮಯದಲ್ಲಿ ಚಿಕಿತ್ಸೆ ಸಿಗದೇ ಮಗು ಅಸುನೀಗಿತು. ನಂತರ ಪೋಷಕರಿಗೆ ಹಿಂದಿರುಗಿಸುವ […]
ಸಿದ್ದರಾಮಯ್ಯನವರೇ ನಿಮ್ಮ ಮಟ್ಟವನ್ನು ಪ್ರಧಾನಿಗೆ ಹೋಲಿಕೆ ಮಾಡಿಕೊಳ್ಳಬೇಡಿ. ಪ್ರತಿ ಬಾರಿ ನಿಮ್ಮನ್ನು ಪ್ರಶ್ನಿಸಿದಾಗ ನೀವು ಪ್ರಧಾನಿ ಹೆಸರು ಮಧ್ಯೆ ತರಬೇಡಿ. ನಮ್ಮನ್ನ ಕೇಳಿ ನಾವು ಉತ್ತರಿಸುತ್ತೇವೆ ಎಂದು ಮೈಸೂರಿನಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ ಹೇಳಿದರು. ಕೋವಿಡ್ ನಿಯಂತ್ರಣದಲ್ಲಿ ಅಕ್ರಮ ಆಗಿದೆ ಎಂದು ಹೇಳುತ್ತೀರ. ಆದರೆ ದಾಖಲೆ ಪರಿಶೀಲನೆ ಮಾಡಲು ವಿಧಾನಸೌಧಕ್ಕೆ ಬನ್ನಿ ಅಂದರೆ ಬರುವುದಿಲ್ಲ. ಅಲ್ಲದೇ ಪಿಎಂ ಕೇರ್ ಲೆಕ್ಕವನ್ನು ಕೇಳುತ್ತೀರಾ. ಇದು ಹೇಗೆ ಆಗುತ್ತೆ ಸಿದ್ದರಾಮಯ್ಯನವರೇ ಎಂದು […]