ಮತಾಂತರಗೊಂಡ ವ್ಯಕ್ತಿಯಿಂದ ಹಿಂದೂ ದೇಗುಲದ ವಿಗ್ರಹ ಭಗ್ನಗೊಳಿಸಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ವಡ್ಡರಗುಡಿ ಗ್ರಾಮದಲ್ಲಿ ನಡೆದಿದೆ…ದೇವರ ವಿಗ್ರಹ ಮೂರ್ತಿಯನ್ನ ಒಡೆದು ಹಾಕಿ ವಿಕೃತಿ ಮೆರೆದಿದ್ದಾರೆ… ಚಿಕ್ಕಬೇರ್ಯ ಗ್ರಾಮದ ಮಹೇಶ್ ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿ ಗ್ರಾಮದೇವತೆ ಶ್ರೀ ಲಕ್ಷ್ಮೀದೇವಿಯ ವಿಗ್ರಹ ಒಡೆದು ಹಾಕಿದ್ದಾನೆ.  ಕೃತ್ಯ ನಡೆಸಿತ್ತಿದ ವೇಳೆ ಗ್ರಾಮಸ್ಥರ ಕೈಗೆ ಆರೋಪಿ ಸಿಕ್ಕಿ ಬಿದ್ದಿದ್ದರಿಂದ  ಗ್ರಾಮಸ್ಥರು ಆರೋಪಿಯನ್ನ ಪೊಲೀಸರ ವಶಕ್ಕೆ ನೀಡಿದ್ದಾರೆ…ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ ಮಹೇಶ್ ಎಂದು […]

ಹುಬ್ಬಳ್ಳಿ: ಸದನದಲ್ಲಿ ರಮೇಶ್ ಕುಮಾರ್​​ ಅವರಂತಹ ಹಿರಿಯರು ಆ ರೀತಿ ಹೇಳಬಾರದಾಗಿತ್ತು. ಅವರು ಯಾಕೆ ಹೇಳಿದ್ರು ಅಂತ ಅರ್ಥ ಆಗಲಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.ನಗದರಲ್ಲಿಂದು ಮಾತನಾಡಿದ ಅವರು, ಈ ರೀತಿ ಶಬ್ದ ಪ್ರಯೋಗ ಅಥವಾ ಮಹಿಳೆಯರ ಬಗ್ಗೆ ಮಾತನಾಡೋದು ಸರಿ ಅಲ್ಲ. ರಮೇಶ್ ಕುಮಾರ್ ಈ ಬಗ್ಗೆ ಸ್ಪಷ್ಟಿಕರಣ ಕೊಡಬೇಕು. ನಿನ್ನೆಯೇ ಆ ಬಗ್ಗೆ ಕ್ಷಮೆ ಕೇಳಬೇಕಿತ್ತು, ಇವತ್ತು ಕೇಳಿದ್ದಾರೆ.ಒಳ್ಳೆ ರೀತಿಯ ಸಂಸದೀಯ ಪಟು ಆಗಿದ್ದವರ […]

ಹಿಂದುಳಿದ ವರ್ಗಗಳು ಮತ್ತು ಜಾತಿಗಳ ಕುರಿತು ಸಂಶೋಧನೆಗಾಗಿ ಸ್ಥಾಪಿಸಿರುವ ದೇವರಾಜ ಅರಸು ಸಂಶೋಧನಾ ಸಂಸ್ಥೆಯನ್ನು ಮುಚ್ಚುವ ಪ್ರಸ್ತಾವ ಸರ್ಕಾರ ಮುಂದೆ ಇಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್‌ ಪ್ರಶ್ನೆಗೆ ಉತ್ತರಿಸಿದ ಅವರು, ಅರಸು ಸಂಶೋಧನಾ ಸಂಸ್ಥೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಈ ಸಂಸ್ಥೆಯನ್ನು ಮತ್ತಷ್ಟು ಬಲಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.ಹಿಂದುಳಿದ ವರ್ಗಗಳ […]

40 ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ(96) ವಿಧಿವಶರಾಗಿದ್ದಾರೆ.ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಸ್ವಗ್ರಾಮ ತೂಬಗೆರೆಯಲ್ಲಿ ಬೆಳಗ್ಗೆ 9 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.9 ಗಂಟೆಯ ನಂತರ ಪಾರ್ಥಿವ ಶರೀರವನ್ನು ದೊಡ್ಡಬಳ್ಳಾಪುರದ ಜಾಲಪ್ಪ ಇಂಜಿನಿಯರಿಂಗ್ ಕಾಲೇಜಿಗೆ ಸ್ಥಳಾಂತರ ಮಾಡಲಾಗುವುದು. ಅಂತಿಮ ದರ್ಶನದ ನಂತರ ಇಂದು ಸಂಜೆ 5 ಗಂಟೆಯೊಳಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಈಡಿಗರ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.ಅಕ್ಟೋಬರ್ 19, 1925 […]

ನೆಲಮಂಗಲ: ಮಠ ಮಾನ್ಯಗಳು ವಿದ್ಯಾರ್ಥಿಗಳ ಪಾಲಿಕೆ ಜೀವನವನ್ನು ಕಲಿಸುವ ಗುರುಕುಲ ಇದ್ದಂತೆ, ಆದರೆ ಇಲ್ಲೊಂದು ಮಠ ಮಕ್ಕಳಿಗೆ ವಿದ್ಯೆ, ವಸತಿ, ಪ್ರಸಾದ ನೀಡುವ ಬದಲಿಗೆ ಕಾವಲು ಕಾಯುವ ಕೆಲಸದ ಶಿಕ್ಷೆ ನೀಡಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ವನಕಲ್ಲು ಮಲ್ಲೇಶ್ವರ ಮಠದ ಶ್ರೀ ಬಸವರಮಾನಂದ ಸ್ವಾಮೀಜಿ ತಮ್ಮ ಮಠದ ಶಾಲೆಯಲ್ಲಿ ಶಿಕ್ಷಣ ಕಲಿಯಬೇಕಾಗಿದ್ದ ಮಕ್ಕಳಿಗೆ ಪ್ರತಿನಿತ್ಯ ಕಾವಲು ಕಾಯೋ ಕೆಲಸಕ್ಕೆ ನೇಮಕ ಮಾಡಿರುವ ಆರೋಪ ಕೇಳಿಬಂದಿದೆ. […]

ಬೆಳಗಾವಿ: ಇಲ್ಲಿನ ಉದ್ಯಮ್ ಬಾಗ್ ನಲ್ಲಿ ಇರುವ ಗೋಗಟೆ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಎಂಜಿನಿಯರಿಂಗ್, ಡಿಪ್ಲೊಮಾ ಮತ್ತು ಐಟಿಐ ಪದವೀಧರರಿಗೆ ಡಿ.23ರಂದು ಉದ್ಯೋಗ ಮೇಳ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.ಜಿಲ್ಲೆಯ ಸಚಿವರು ಮತ್ತು ಜನಪ್ರತಿನಿಧಿಗಳ ಜತೆ ಶುಕ್ರವಾರ ಇಲ್ಲಿನ ಸುವರ್ಣ ಸೌಧದಲ್ಲಿ ಸಭೆ ನಡೆಸಿದ ಅವರು, ಈ ವಿಚಾರ ತಿಳಿಸಿದರು. ಓಲಾ, […]

ಕೊರಟಗೆರೆ:- ಕೊರೊನಾ ಮತ್ತು ಪಾಶ್ಚುವಾರ್ಯ ರೋಗ ಬರೋದಿಲ್ಲ ಎಂಬ ಅನಾಮಿಕ ವ್ಯಕ್ತಿಯ ಮೂಢನಂಬಿಕೆಯ ಮಾತಿನಿಂದ ಅರಣ್ಯದಲ್ಲಿ ವಾಸಿಸುತ್ತೀದ್ದ ಕರಡಿಯನ್ನು ಸೆರೆಹಿಡಿದು ಸಾಯಿಸಿ ದೇಹವನ್ನು ಬೇಟ್ಟದ ಮೇಲೆ ಕತ್ತರಿಸಿ ಮಾಂಸವನ್ನಾಗಿ ಪರಿವರ್ತಿಸಿ ಸೇವಿಸಿರುವ ಘಟನೆ ಕೊರಟಗೆರೆ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ನಡೆದಿದೆ.ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಸಿದ್ದರಬೇಟ್ಟ ಗ್ರಾಪಂ ವ್ಯಾಪ್ತಿಯ ಗೌಜಗಲ್ಲು ಗ್ರಾಮದ ಚಿಕ್ಕಬಸವಯ್ಯ ಎಂಬುವರ ಮನೆಯ ಮೇಲೆ ಕೊರಟಗೆರೆ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಸುರೇಶ್ ನೇತೃತ್ವದ ತಂಡ ಖಚಿತ […]

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನಾ ಕಾರ್ಯಕರ್ತರು ಕನ್ನಡ ಬಾವುಟವನ್ನು ಸುಟ್ಟು ಹಾಕಿರುವ ಘಟನೆಯನ್ನು ಖಂಡಿಸಿ ಲಕ್ಷ್ಮೇಶ್ವರ ಪಟ್ಟಣದಲ್ಲಿ ಕರವೇ ಪ್ರವೀಣ್ ಶೇಟ್ಟಿ ಬಣ ಪ್ರತಿಭಟನೆ ಮಾಡಿದರು, ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ‘ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು’ ಎಂದು ಆಗ್ರಹಿಸಿದ್ದಾರೆ.ಲಕ್ಷ್ಮೇಶ್ವರ ಪಟ್ಟಣದ ಹಾವಳಿ ಹನಮಂತ ದೇವಸ್ಥಾನದಿಂದ ಶಿಗ್ಲಿ ನಾಕಾವರೆಗೂ ಪಂಜಿನ ಮೆರವಣಿಗೆ ಹಾಗೂ ಮಹಾರಾಷ್ಟ್ರ ಮುಖಮಂತ್ರಿ ಉದ್ದತ ಠಾಕ್ರೆ ವೇಶದ ಸ್ಟಾಚು ಸುಡುವ ಮೂಲಕ ಕರವೇ ಪ್ರವೀಣ್ […]

ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಿದ್ಧಾಂತದ ಗೆಲುವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಪರಿಷತ್ ಅಭ್ಯರ್ಥಿ ಸಲೀಂ ಅಹ್ಮದ್ ಹೇಳಿದ್ದಾರೆ.ಈ ಫಲಿತಾಂಶ ಬಿಜೆಪಿ ನೇತೃತ್ವದ ಸರ್ಕಾರದ ವೈಫಲ್ಯಗಳಿಗೆ ನೀಡಿದ ಉತ್ತರ. ಪಂಚಾಯತ್ ರಾಜ್ ವ್ಯವಸ್ಥೆ ಮೂಲಕ ಗ್ರಾಮೀಣ ಭಾಗದ ಏಳಿಗೆಯನ್ನು, ಬಿಜೆಪಿಯ ಭ್ರಷ್ಟಾಚಾರ ಹಾಗೂ ದುರಾಡಳಿತ ಕಸಿದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸುಳ್ಳು ಆಶ್ವಾಸನೆ ಹಾಗೂ ಅಹಂಕಾರಕ್ಕೆ ಜನರು ತಕ್ಕ ಉತ್ತರ ನೀಡಿದ್ದಾರೆ ಎಂದು ಸಲೀಂ ಅಹ್ಮದ್ […]

ಕೊರಟಗೆರೆ :- ತಾಲ್ಲೂಕು ಪಟ್ಟಣ ಪಂಚಾಯ್ತಿಯ ಅಧ್ಯಕ್ಷ ಸ್ಥಾನವು ಇತ್ತೀಚೆಗಷ್ಟೇ ಹಿಂದೆ ಇದ್ದ ಅಧ್ಯಕ್ಷರು ವೈಯಕ್ತಿಕ ಕಾರಣದಿಂದ ರಾಜೀನಾಮೆ ಕೊಟ್ಟಿದ್ದರು. ತದನಂತರ ಖಾಲಿ ಇದ್ದ ಅಧ್ಯಕ್ಷ ಸ್ಥಾನಕ್ಕೆ ಅಲಿ ಉಪಾಧ್ಯಕ್ಷರಾಗಿದ್ದ ಭಾರತಿ ಸಿದ್ಮಲ್ಲಪ್ಪ ರವರು ಅವಿರೋಧವಾಗಿ ಆಯ್ಕೆಯಾಗಿದ್ದು ಇಂದು ಸರ್ವ ಸದಸ್ಯರ ಸಮ್ಮುಖದಲ್ಲಿ ಅಧ್ಯಕ್ಷ ಸ್ಥಾನವನ್ನು ಸ್ವೀಕರಿಸಿ ಮಾತನಾಡಿದ ಅವರು. ನಾನು ಇಂದಿನಿಂದ ತಾಲ್ಲೂಕು ಪಟ್ಟಣ ಪಂಚಾಯಿತಿಯ ಪ್ರಭಾರ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದೇನೆ ನನ್ನ ಅಧ್ಯಕ್ಷಸ್ಥಾನ ಇರುವವರೆಗೂ ತಾಲ್ಲೂಕಿನ ಜನತೆಯ ಕುಂದುಕೊರತೆಗಳ […]

Advertisement

Wordpress Social Share Plugin powered by Ultimatelysocial