ನವದೆಹಲಿ: ಹಬ್ಬದ ಹೊತ್ತಲ್ಲಿ ಚಿನ್ನಾಭರಣ ಖರೀದಿಸಬೇಕೆಂದುಕೊಂಡವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಚಿನ್ನದ ಬೆಲೆ ಏರಿಕೆ ಕಂಡಿದೆ. ದೆಹಲಿ ಚಿನಿವಾರಪೇಟೆಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 256 ರೂಪಾಯಿ ಹೆಚ್ಚಳವಾಗಿದೆ. 10 ಗ್ರಾಂ ಚಿನ್ನದ ದರ 46,580 ರೂ.ಗೆ ಮಾರಾಟವಾಗಿದೆ. ಬೆಳ್ಳಿ ದರ ಕೆಜಿಗೆ 188 ರೂಪಾಯಿ ಹೆಚ್ಚಳವಾಗಿದ್ದು, 62,328 ರೂಗೆ ಮಾರಾಟವಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆಯ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಳವಾಗಿದೆ. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ […]

ಮೈಸೂರು, ಅ.17, 2021 :  ದಸರಾ ಗಜಪಡೆಯ ಕ್ಯಾಪ್ಟನ್ ಅಭಿಮನ್ಯುವಿನ ಮಾವುತ ವಸಂತನಿಗೆ ಮೈಸೂರಿನ ಟಿವಿ9 ಪ್ರತಿನಿಧಿ ರಾಮ್, ಟ್ಯಾಬ್ ಒಂದನ್ನು ಉಡುಗೊರೆ ನೀಡಿ ವಿಶೇಷತೆ ಮೆರೆದಿದ್ದಾರೆ. ದಸರೆಯ ಆಚೆಗೂ ಅಭಿಮನ್ಯು ಹಾಗೂ ವಸಂತ ನನ್ನ ನೆಚ್ಚಿನ ಹೀರೋಗಳು. ಕಾಡಾನೆಗಳನ್ನು ಪಳಗಿಸುವುದರಲ್ಲಿ ನಿಷ್ಣಾತ ಅಭಿಮನ್ಯು. ಸಮಯಪ್ರಜ್ಞೆಯ ಸಾರಥಿ ವಸಂತ. ಇವರಿಬ್ಬರದ್ದು ಸಾಹಸಮಯ ಬದುಕು. ದಿನದ 24 ಗಂಟೆಯೂ ಕಾಡಿನಲ್ಲಿ ಕಳೆಯುವ ಇವರದ್ದು ಭಲೇ ಜೋಡಿ. ಇವರಿಬ್ಬರ ಸಾಹಸಮಯ ಕಥೆಗಳನ್ನು ಕೇಳಿದರೆ […]

ಬೆಂಗಳೂರು,ಏಪ್ರಿಲ್,24,2021 :  ಬೆಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಕೊರೋನಾ ಸೊಂಕಿತರಿಗೆ ಚಿಕಿತ್ಸೆ ನೀಡಲು ಬಳಸಲಾಗುವ ರೆಮ್ಡಿಸಿವಿರ್  ಅನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 16 ಮಂದಿಯನ್ನು ಬಂಧಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿ ಮಾಹಿತಿ ನೀಡಿದ  ಸಿಸಿಬಿ ಜಂಟಿ ಆಯುಕ್ತ  ಸಂದೀಪ್ ಪಾಟೀಲ್ ಅವರು, ಅಕ್ರಮವಾಗಿ ರೆಮ್ಡಿಸಿವಿರ್ ಮಾರಾಟ ಮಾಡುತ್ತಿದ್ದ 16 ಮಂದಿಯನ್ನ ಬಂಧಿಸಲಾಗಿದೆ. ‘ಅಕ್ರಮವಾಗಿ ಚುಚ್ಚುಮದ್ದು ಸಂಗ್ರಹಿಸಿಟ್ಟುಕೊಂಡಿದ್ದ ಆರೋಪಿಗಳು, 10 ಸಾವಿರ ರೂದಿಂದ 11 ಸಾವಿರ ರೂಗೆ […]

ವಿಜಯಪುರ, ಅಕ್ಟೋಬರ್ 19, 2021 : “ನಾನು ಎಷ್ಟು ದಿನ ಬದುಕಿರುತ್ತೇನೆ ಎಂದು ನನಗೆ ಗೊತ್ತಿಲ್ಲ. ಆದರೆ ನನ್ನ ಸಾವಿನ ನಂತರವೂ ಪ್ರಾದೇಶಿಕ ಪಕ್ಷ ಉಳಿಯಬೇಕು ಎಂದು ನಾನು ಬಯಸುತ್ತೇನೆ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅಭಿಪ್ರಾಯಪಟ್ಟರು. ಅವರು ಚಟ್ಟರಕಿ ಗ್ರಾಮದಲ್ಲಿ ಸಿಂದಗಿ ಉಪಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಿದರು, ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಪರವಾಗಿ. ಅವನು ಅವಳ ಮನೆಗೆ ಭೇಟಿ ನೀಡಿದನು. ಆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ […]

ನವದೆಹಲಿ, ಅ.18- ರಾತ್ರಿಯೆಲ್ಲಾ ಮೋಜು-ಮಸ್ತಿ ಮಾಡಿದ ಅಪ್ರಾಪ್ತ ಬಾಲಕರ ತಂಡ ಮುಂಜಾನೆ ಟೀ ಅಂಗಡಿಯವನಿಗೆ ಗುಂಡಿಟ್ಟು ಹತ್ಯೆ ಮಾಡಲು ಯತ್ನಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಸಫ್ದರ್‍ಜಂಗ್ ಪ್ರಾಂತ್ಯದಲ್ಲಿ ಘಟನೆ ನಡೆದಿದ್ದು, ಗುಂಡೇಟು ತಿಂದ 26 ವರ್ಷದ ರಾಮಕೃಷ್ಣ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರ ಆರೋಗ್ಯ ಸ್ಥಿರವಾಗಿದೆ. ಘಟನೆಗೆ ಸಂಬಂಧ ಪಟ್ಟಂತೆ ಮೂವರು ಬಾಲಕರನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ. ಮುಂಜಾನೆ 4 ಗಂಟೆ ಸುಮಾರಿನಲ್ಲಿ ರಾಮಕೃಷ್ಣ ತನ್ನ ಟೀ ಅಂಗಡಿ ಆರಂಭಿಸುವ […]

ಬೆಂಗಳೂರು: ಒಂದು ವಾರದಿಂದ ನಗರದಲ್ಲಿ ಸುರಿದ ಭಾರಿ ಮಳೆಯಿಂದ ನಗರದ ಬೊಮ್ಮನಹಳ್ಳಿ ವಲಯದ ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ಪ್ರವಾಹ ಉಂಟಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ದಿಢೀರ್‌ ಭೇಟಿ ನೀಡಿದರು. ಎಚ್‌ಎಸ್‌ಆರ್‌ ಬಡಾವಣೆಯ ಅಗರ ಕೆರೆ ಆಸುಪಾಸಿನಲ್ಲಿ ಮನೆಗಳಿಗೆ ನೀರು ನುಗ್ಗಿರುವ ತಗ್ಗುಪ್ರದೇಶಗಳಿಗೆ ಭೇಟಿ ನೀಡುವ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ, ‘ನಗರದಲ್ಲಿ ಕೆಲವು ಕಡೆ ಪ್ರವಾಹ ಬಂದು ಜನವಸತಿಗಳಿಗೆಲ್ಲ ಸಾಕಷ್ಟು ತೊಂದರೆ ಆಗಿದೆ. ಅತಿ ಹೆಚ್ಚು ಮಳೆಯಾದ […]

ಮುಂಬೈ: ತಮ್ಮ ಹಾಗೂ ಕತ್ರಿನಾ ಕೈಫ್ ಅವರ ನಿಶ್ಚಿತಾರ್ಥದ ವದಂತಿಗೆ ನಟ ವಿಕ್ಕಿ ಕೌಶಲ್ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದ ವೇಳೆ “ನೀವು ಮತ್ತು ಕತ್ರಿನಾ ಕೈಫ್ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿರುವ ವಿಷಯ ನಿಮ್ಮ ಸ್ನೇಹಿತರಿಂದ ಹೊರ ಬಿದ್ದಿದೆ” ಎನ್ನುವ ಪ್ರಶ್ನೆಗೆ ನಗುಮುಖದಲ್ಲಿಯೇ ಉತ್ತರಿಸಿದ ಅವರು ನಾವು ಶೀಘ್ರದಲ್ಲಿಯೇ ಎಂಗೇಜ್ಮೆಂಟ್ ಮಾಡಿಕೊಳ್ಳುತ್ತೇವೆ..ಸಾಕಾ ? ಎಂದು ಉತ್ತರಿಸಿದ್ದಾರೆ. ಬಾಲಿವುಡ್ ಕ್ಯಾಟ್ ಕತ್ರಿನಾ ಈ ಹಿಂದೆ ಸಲ್ಮಾನ್ ಖಾನ್ ಜೊತೆಗಿನ ಡೇಟಿಂಗ್ ನಲ್ಲಿದ್ದರು. ಆದಾದ ಬಳಿಕ […]

ಪಿ.ಬಿ. ಸ್ಟುಡಿಯೋಸ್​ ಲಾಂಛನದಲ್ಲಿ ಮೂಡಿಬರುತ್ತಿರುವ ಸಿನಿಮಾದಲ್ಲಿ ಮೇಘನಾ ನಟಿಸುತ್ತಿದ್ದಾರೆ. ವಿಶಾಲ್​ ಹೆಸರಿನ ಹೊಸ ಪ್ರತಿಭೆ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಸಿನಿಮಾಗೆ ಇನ್ನೂ ಹೆಸರಿಟ್ಟಿಲ್ಲ.ಮೇಘನಾ ರಾಜ್​ ಅವರು ಸ್ಯಾಂಡಲ್​ವುಡ್​ ಹಾಗೂ ಮಾಲಿವುಡ್​ನಲ್ಲಿ ಸಾಕಷ್ಟು ಹೆಸರು ಮಾಡಿದ ನಟಿ. ಅವರಿಗೆ ಎರಡೂ ಕಡೆಗಳಲ್ಲಿ ಬೇಡಿಕೆ ಇದೆ. ಆದರೆ ಕಾರಣಾಂತರಗಳಿಂದ ನಟನೆಯಿಂದ ದೂರ ಉಳಿಯುವ ಪರಿಸ್ಥಿತಿ ಬಂದೊದಗಿತ್ತು. ಈಗ ಅವರು ಮತ್ತೆ ಕಂಬ್ಯಾಕ್ ಮಾಡಿದ್ದಾರೆ. ಪನ್ನಗ ಭರಣ ನಿರ್ಮಾಣದ ಸಿನಿಮಾದಲ್ಲಿ ಅವರು ಮುಖ್ಯ ಪಾತ್ರ ಮಾಡುತ್ತಿದ್ದಾರೆ. […]

ಅಗಸೆ ಬೀಜಗಳಲ್ಲಿ ನಾರಿನ ಅಂಶ ಹೆಚ್ಚಿದ್ದು, ಇದು ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ. ಸಂತಾನ ಶಕ್ತಿಯನ್ನು ಹೆಚ್ಚಿಸಲು ಮಾತ್ರವಲ್ಲ ಕೂದಲಿನ ಹಲವು ಸಮಸ್ಯೆಗಳಿಗೆ ಇದು ರಾಮಬಾಣ. ಇದರಲ್ಲಿ ವಿಟಮಿನ್ ಇ ಹೇರಳವಾಗಿದ್ದು, ಕೂದಲು ಉದುರುವ ಸಮಸ್ಯೆ, ಹೊಟ್ಟಿನ ಸಮಸ್ಯೆಗಳನ್ನು ನಿವಾರಿಸುತ್ತದೆ. ಅಗಸೆ ಬೀಜಕ್ಕೆ ನೀರು ಹಾಕಿ ಚೆನ್ನಾಗಿ ಕುದಿಸಿ. ಅದು ಅರ್ಧ ಲೋಟ ಆಗಿ ಜೆಲ್ ರೂಪಕ್ಕೆ ಬರಲಿ. ತಣಿದ ಬಳಿಕ ಬಟ್ಟೆಯ ಸಹಾಯದಿಂದ ಸೋಸಿ. ನಂತರ ಕೊಬ್ಬರಿ ಎಣ್ಣೆ ಮಿಕ್ಸ್ […]

ತಿರುವನಂತಪುರ: ಕೇರಳದಲ್ಲಿ ಶನಿವಾರದಿಂದೀಚೆಗೆ ವ್ಯಾಪಕ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಮತ್ತು ಭೂಕುಸಿತ ಮುಂದುವರಿದಿದೆ. ರವಿವಾರ ಮಧ್ಯಾಹ್ನದ ವೇಳೆಗೆ ಮಳೆಯ ತೀವ್ರತೆ ಕಡಿಮೆಯಾಗಿದ್ದು, ಸಂಭಾವ್ಯ ಭೂಕುಸಿತದ ಬಗ್ಗೆ ಅಧಿಕಾರಿಗಳು ತೀವ್ರ ನಿಗಾ ಇರಿಸಿದ್ದಾರೆ. ಏತನ್ಮಧ್ಯೆ ಮಳೆ ಸಂಬಂಧಿ ಅನಾಹುತಗಳಿಂದ ಮೃತಪಟ್ಟವರ ಸಂಖ್ಯೆ 24ಕ್ಕೇರಿದ್ದು, 11 ಜಿಲ್ಲೆಗಳಲ್ಲಿ ಸೋಮವಾರ ಕೂಡಾ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳ ವಿವಿಧೆಡೆ ಈ ವ್ಯಾಪಕ ಮಳೆಗೆ ಮೇಘ ಸ್ಫೋಟ ಕಾರಣ […]

Advertisement

Wordpress Social Share Plugin powered by Ultimatelysocial