ಟಾಟಾ ಟೆಕ್ನಾಲಜೀಸ್ ಅಧ್ಯಕ್ಷ ಆನಂದ್ ಬಢೆ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.ರಾಜ್ಯ ಸರ್ಕಾರದೊಂದಿಗೆ ಮಾಡಿಕೊಂಡ ಒಪ್ಪಂದದಂತೆ ರಾಜ್ಯದಲ್ಲಿ 150 ಸರ್ಕಾರಿ ಐಟಿಐ ಗಳ ಉನ್ನತೀಕರಣವನ್ನು ಟಾಟಾ ಟೆಕ್ನಾಲಜೀಸ್ ಸಂಸ್ಥೆ ಇತರ ಕಾರ್ಪೊರೇಟ್ ಸಂಸ್ಥೆಗಳ ಸಹಯೋಗದೊಂದಿಗೆ ಕೈಗೆತ್ತಿಕೊಂಡಿದ್ದು, ಮೂಲಸೌಕರ್ಯ ಉನ್ನತೀಕರಣ ಬಹುತೇಕ ಪೂರ್ಣಗೊಂಡಿದೆ. ಜೊತೆಗೆ ಐಟಿಐ ಬೋಧಕ ಸಿಬ್ಬಂದಿಗೂ ತರಬೇತಿ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.ಮುಖ್ಯಮಂತ್ರಿಯವರು ಐಟಿಐಗಳ ಒಟ್ಟಾರೆ ಅಭಿವೃದ್ಧಿಗೆ, […]

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಕೊರಟಗೆರೆ ತಾಲ್ಲೂಕಿನ ಸಿ ಎನ್ ದುರ್ಗ ಹೋಬಳಿಯ ಅಜ್ಜಿಹಳ್ಳಿ ಗ್ರಾಮದಲ್ಲಿ ಟಿ.ಆರ್ ತಿಮ್ಮರಾಜು ಬಿನ್ ರಂಗಶಾಮಯ್ಯ ಎನ್ನುವವರನ್ನು ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ಖಚಿತ ಮಾಹಿತಿ ಮೇರೆ ದಾಳಿ ನಡೆಸಿದ ಅಧಿಕಾರಿಗಳು ಬಂಧಿತ ಆರೋಪಿಗಳಿಂದ ಅಕ್ರಮಾವಗಿ ತಮ್ಮ ಮನೆಯಲ್ಲಿ ಅಡಗಿಟ್ಟಿಸಿದ್ದ ಸುಮಾರು 17 ಲೀಟರ್‌ ನಷ್ಟು ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಬಕಾರಿ ನಿರೀಕ್ಷಿತ ಶ್ರೀಲತಾ ತಿಳಿಸಿದ್ದಾರೆ.ಇನ್ನು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯದ ಆದೇಶದ ಮೇರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Advertisement

Wordpress Social Share Plugin powered by Ultimatelysocial