ರಾಯಚೂರು: ನಮ್ಮ ಊರಿನಲ್ಲಿ ಪಾನಿಪುರಿ ಮಾರುವರೇ ಗುಜರಾತ್ ನವರು. ಪಾನ್ ಮಸಾಲಾ ಮಾರುವವವರು ಗುಜರಾತ್ ‌ನವರೇ. ಕರ್ನಾಟಕದವರು ಗುಜರಾತ್ ಗೆ ಪಾನಿಪುರಿ, ಜೋಳದ ರೊಟ್ಟಿ ಮಾರಲು ಹೋಗಿದ್ದಾರಾ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಕಳೆದ 36 ವರ್ಷದಿಂದಿದೆ. ಜನರಿಗೆ ಜೆಡಿಎಸ್ ಪರಿಚಯ ಮಾಡುವ ಅವಶ್ಯಕತೆ ಇಲ್ಲ. ನಮ್ಮ ಕನ್ನಡಿಗರು ಪ್ರಧಾನಿಯಾಗಿದ್ದ ಪಕ್ಷ ನಮ್ಮದು. ಹತ್ತಾರು ನೀರಾವರಿ ಯೋಜನೆಗಳನ್ನು ‌ನಮ್ಮ ದೇವೇಗೌಡರು […]

  ನವದೆಹಲಿ, ಮೇ 21- ಕೋವಿಡ್ ಸೋಂಕುಗಳ ಏರಿಳಿತದ ನಡುವೆ ಓಮಿಕ್ರಾನ್ ರೂಪಾಂತರಿಯ ಉಪತಳಿ ಬಿಎ.4 ಸೋಂಕಿನ ಎರಡನೆ ಪ್ರಕರಣ ತಮಿಳುನಾಡಿಲ್ಲಿ ಪತ್ತೆಯಾಗಿದೆ. ಅತ್ಯಂತ ವೇಗವಾಗಿ ಹರಡುವ ಸಾಮಥ್ರ್ಯ ಹೊಂದಿರುವ ಹಾಗೂ ಲಸಿಕೆ ಪ್ರತಿರೋಧವನ್ನು ಮೆಟ್ಟಿ ಹಾನಿ ಮಾಡಬಹುದು ಎಂದು ವಿಶ್ಲೇಷಿಸಲಾಗುವ ಬಿಎ.4 ಉಪತಳಿ ಚೆನೈನಿಂದ 30 ಕಿಲೋ ಮೀಟರ್ ದೂರದಲ್ಲಿರುವ ಚೆಂಗ್ಲಪಟ್ಟು ಜಿಲ್ಲೆಯ ನವಲೂರಿನ ನಿವಾಸಿಯೊಬ್ಬರಲ್ಲಿ ಪತ್ತೆಯಾಗಿದೆ ಎಂದು ತಮಿಳುನಾಡಿನ ಆರೋಗ್ಯ ಸಚಿವ ಮಾ ಸುಬ್ರಮಣ್ಯ ತಿಳಿಸಿದ್ದಾರೆ. ಮೇ […]

ಮೈಸೂರು: ಪಠ್ಯಪುಸ್ತಕ ಪರಿಷ್ಕರಣೆ ರಾಜಕೀಯ ಸಂಘರ್ಷವಲ್ಲ. ನಾವೆಲ್ಲ ಸೇರಿ ಶಿಕ್ಷಣ ಹಾಳು ಮಾಡುತ್ತಿದ್ದೇವೆ. ರೋಹಿತ್ ಚಕ್ರತೀರ್ಥ ಯಾರಪ್ಪ? ಸಂಘ ಪರಿವಾರದ ಕಾರ್ಯಕರ್ತ ಅವರು. ಶಿಕ್ಷಣ ತಜ್ಞರಲ್ಲದವರು ಪಠ್ಯ ಪುಸ್ತಕ ತಯಾರಿಯ ಅಧ್ಯಕ್ಷರಾಗಿರುವುದು ದುರಂತ ಎಂದು ಮೈಸೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕದಲ್ಲಿ ಕೇಸರಿಕರಣ ನುಸುಳುತ್ತಿರುವುದು ಅಪಾಯಕಾರಿ. ಧರ್ಮದ ಆಧಾರಿತ ಪಠ್ಯ ಯಾವುದೇ ಕಾರಣಕ್ಕೂ ಬೇಡ. ಯಜ್ಞ ಕುಂಡ ಯಾವ ಕಡೆ […]

  ಬೆಂಗಳೂರು, ಮೇ 20: ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಂಬಂಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೇ 21ರಂದು ದೆಹಲಿಯತ್ತ ಪ್ರಯಾಣ ಬೆಳೆಸಲು ಮುಂದಾಗಿದ್ದಾರೆ. ಕಲಬುರ್ಗಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, “ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್‌ನಿಂದ ಯಾರನ್ನು ಕಣಕ್ಕಿಳಿಸಬೇಕು ಹಾಗೂ ರಾಜ್ಯಸಭೆಯಲ್ಲಿ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಂಬಂಧ ಚರ್ಚಿಸಲು ಹೈಕಮಾಂಡ್‌ನಿಂದ ಬುಲಾವ್ […]

  ಮೈಸೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ಮೋದಿ ಅವರು ಆಗಮಿಸುವ ಬಗ್ಗೆ ಪ್ರಧಾನ ಮಂತ್ರಿ ಸಚಿವಾಲಯ ಖಚಿತ ಪಡಿಸಿದೆ‌.   ಜೂನ್ 21ರಂದು ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸಲು ಮೈಸೂರಿಗೆ ಮೋದಿ ಆಗಮಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಖಚಿತಪಡಿಸಿರುವುದನ್ನು ಸಂಸದ ಪ್ರತಾಪ್ ಸಿಂಹ ತಮ್ಮ ಟ್ವಿಟರ್ ಖಾತೆಯಲ್ಲಿ ಹಾಕಿಕೊಂಡಿದ್ದಾರೆ. ಪ್ರಧಾನ ಮಂತ್ರಿ ಕಾರ್ಯಾಲಯವು ಈಗಾಗಲೇ ರಾಜ್ಯ ಸರ್ಕಾರಕ್ಕೆ ಈ ಕುರಿತು ಪತ್ರ ಬರೆದಿದೆ. […]

  ದೀಸ್ಪುರ್​: ಭಾರೀ ಪ್ರವಾಹದ ಹೊಡೆತಕ್ಕೆ ಅಸ್ಸಾಂ ರಾಜ್ಯ ತತ್ತರಿಸಿದೆ. ಜಮುನಮುಖ್​ ಜಿಲ್ಲೆಯ ಎರಡು ಪ್ರವಾಹ ಪೀಡಿತ ಗ್ರಾಮದ ಸುಮಾರು 500ಕ್ಕೂ ಹೆಚ್ಚು ಕುಟುಂಬಗಳು ನೆಲೆ ಕಳೆದುಕೊಂಡಿದ್ದು, ರೈಲ್ವೆ ಹಳಿಗಳ ಮೇಲೆ ತಾತ್ಕಾಲಿಕ ಬದುಕು ಸಾಗಿಸುವಂತಹ ಶೋಚನಿಯ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದ ನೀರಿಗೆ ಮುಳಗಡೆಯಾಗದಷ್ಟು ಎತ್ತರದಲ್ಲಿರುವ ಒಂದೇ ಒಂದು ಪ್ರದೇಶ ರೈಲ್ವೆ ಹಳಿಯಾಗಿರುವುದರಿಂದ ಎರಡು ಗ್ರಾಮದ ಕುಟುಂಗಳು ಹಳಿಗಳ ಮೇಲೆ ಬದುಕುವಂತಾಗಿದೆ. ಅಸ್ಸಾಂ ಪ್ರವಾಹದಲ್ಲಿ ಬಹುತೇಕ ಎಲ್ಲವನ್ನೂ ಕಳೆದುಕೊಂಡಿರುವ ಚಂಗ್ಜುರೈ […]

  ಪ್ರೇಮಕತಾ ಸಿನಿಮಾಗಳ ಮೂಲಕ ತಮ್ಮದೇ ಪ್ರತ್ಯೇಕ ಛಾಪು ಮೂಡಿಸಿರುವ ನಿರ್ದೇಶಕ ಪ್ರೀತಂ ಗುಬ್ಬಿ ಇದೀಗ ಮತ್ತೊಂದು ಪ್ರೇಮಕತೆ ಹೊತ್ತು ತಂದಿದ್ದಾರೆ. ಪ್ರೀತಂ ಗುಬ್ಬಿ ಮತ್ತೆ ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ಕೈಜೋಡಿಸಿದ್ದು ಹೊಸ ಸಿನಿಮಾ ಘೋಷಿಸಿದ್ದಾರೆ. ಸಿನಿಮಾದ ಹೆಸರು ‘ಬಾನ ದಾರಿಯಲ್ಲಿ’. ಸಿನಿಮಾವು ಅಪ್ಪಟ ಪ್ರೇಮಕತಾ ಸಿನಿಮಾ ಆಗಿರುವ ಜೊತೆಗೆ ಕೆಲವು ವಿಶೇಷತೆಗಳನ್ನು ಸಹ ಒಳಗೊಂಡಿದೆ. ಸಿನಿಮಾದಲ್ಲಿ ಸುಂದರ ನಟಿ ಕಲ್ಯಾಣಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಸಿನಿಮಾದಲ್ಲಿ ಅವರ ಪಾತ್ರಕ್ಕೆ […]

  ಬೆಳಗಾವಿ : ಮೋಳೆ ತಾಲೂಕಿನ ಶ್ರೀ ಮಹರ್ಷಿ ವಾಲ್ಮೀಕಿ ನಾಯಕರ ಸಮಾಜ ಸೇವಾ ಸಂಘದ ವತಿಯಿಂದ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಗೆ 7.5% ಮೀಸಲಾತಿ ನೀಡುವಂತೆ ಆಗ್ರಹಿಸಿ ಸಮಾಜದ ಮುಖಂಡರ ನೇತೃತ್ವದಲ್ಲಿ ಕಾಗವಾಡ ಚೆನ್ನಮ್ಮ ವೃತ್ತದಿಂದ ನೂರಾರು ಜನರು ಸೇರಿಕೊಂಡು ತಹಶಿಲ್ದಾರ ಕಚೇರಿವರಗೆ ಕಾಲ್ನಡಿಗೆಯ ಮೂಲಕ ತೆರಳಿ ತಹಶಿಲ್ದಾರ ರಾಜೇಶ ಬುರ್ಲಿ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಮುಖಂಡ ರಮೇಶ ನಾಯಿಕ ಪರಿಶಿಷ್ಟ ಪಂಗಡದ […]

ವಿಶ್ವ ಪ್ರಸಿದ್ಧ ದೇವಾಲಯ ಮಳೆಗೆ ಆಹುತಿಯಾಗಿರುವ ಘಟನೆ ಮೈಸೂರು ಜಿಲ್ಲೆ    ಟಿ ನರಸೀಪುರ ತಾಲೂಕು ಮೂಗೂರು ಗ್ರಾಮದಲ್ಲಿ ನಡೆದಿದೆ. ಮೂಗೂರು ತಿಬ್ಬದೇವಿ ಪಕ್ಕದಲ್ಲಿರುವ ಈಶ್ವರ ದೇವಾಲಯ ಮುಜರಾಯಿ ಇಲಾಖೆಯ ಬೇಜವಾಬ್ದಾರಿತನದಿಂದ ಈ ಘಟನೆ  ಸಂಭವಿಸಿದೆ. ತಾಲ್ಲೂಕು ಆಡಳಿತ ತಲೆ ಕೆಡಿಸಿಕೊಳ್ಳುತ್ತಿಲ್ಲ, ಅತಿಯಾದ ಮಳೆಯಿಂದ ಈ ಘಟನೆ ಸಂಭವಿಸಿದೆ ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://plಇay.google.com/store/apps/details?id=com.speed.newskannada  

ಕೊರಟಗೆರೆ:- ನವಿಲುಕುರಿಕೆ ಕೆರೆಯ ಪುನಶ್ಚೇತನ ಮತ್ತು ಅಭಿವೃದ್ದಿಯು ಕಳೆದ 45ವರ್ಷದಿಂದ ಮರೀಚಿಕೆ.. ಕೆರೆಯ ತೂಬು ಶಿಥಿಲವಾಗಿ ಬಿರುಕು ಬಿಟ್ಟಿರುವ ಕೆರೆಯ ಏರಿಯ ದುರಸ್ಥಿಯೇ ಹಗಲು ಕನಸು.. ಸಣ್ಣನೀರಾವರಿ ಇಲಾಖೆಯ ದಿವ್ಯ ನಿರ್ಲಕ್ಷದಿಂದ ಇಂದು 50ರೈತ ಕುಟುಂಬ ಬೆಳೆದಿರುವ 120ಎಕರೇಗೂ ಅಧಿಕ ಭತ್ತದ ಬೆಳೆಯು ಕೆರೆಯ ನೀರಿನಲ್ಲಿ ಮುಳುಗಿ ಮೊಳಕೆ ಹೊಡೆದಿದೆ. ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಜೆಟ್ಟಿಅಗ್ರಹಾರ ಗ್ರಾಪಂ ವ್ಯಾಪ್ತಿಯ ನವಿಲುಕುರಿಕೆ ಗ್ರಾಮದ ಕೆರೆಯು 1972ರಲ್ಲಿ ನಿರ್ಮಾಣವಾಗಿದೆ. ಕಳೆದ 45ವರ್ಷದಿಂದ […]

Advertisement

Wordpress Social Share Plugin powered by Ultimatelysocial