ಪತಿ ರಾಜ್ ಕುಂದ್ರಾ ಪೋರ್ನ್ ವಿಡಿಯೋ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಪೋರ್ನ್ ವಿಡಿಯೋ ನಿರ್ಮಾಣ ಮತ್ತು ವಿತರಣೆ ಆರೋಪದಡಿ ಮುಂಬೈ ಪೊಲೀಸರು ರಾಜ್ ಕುಂದ್ರಾ ವಿರುದ್ಧ ಕಳೆದ ವರ್ಷಾಂತ್ಯದಲ್ಲಿ ಕೇಸು ದಾಖಲಿಸಿ, ಬಂಧಿಸಿದ್ದರು. ಇದೀಗ ಇಡಿ ಇದೇ ಪ್ರಕರಣದ ಹಣಕಾಸು ಅಂಶವನ್ನು ಪ್ರಧಾನವಾಗಿಸಿಕೊಂಡು ಕೇಸು ದಾಖಲಿಸಿದೆ. ರಾಜ್ ಕುಂದ್ರಾ ಒಡೆತನದ ಆರ್ಮ್ಸ್ ಪ್ರೈಂ ಮೀಡಿಯಾ ಲಿಮಿಟೆಡ್ ಸಂಸ್ಥೆಯು ‘ಹಾಟ್‌ಶಾಟ್ಸ್’ ಎಂಬ ಅಪ್ಲಿಕೇಶನ್ ಪ್ರಾರಂಭಿಸಿತ್ತು. ಇದೇ ಅಪ್ಲಿಕೇಶನ್‌ಗಾಗಿ ಭಾರತದಲ್ಲಿ […]

ಉಳ್ಳಾಲ: ತಾಲೂಕಿನ ಪಜೀರು ಗ್ರಾಮಸ್ಥರ ಹಲವು ವರ್ಷದ ಬೇಡಿಕೆಯಂತೆ ಪಾನೆಲಕ್ಕೆ ಬಸ್ಸು ಸಂಚಾರ ಆರಂಭವಾಗಿದೆ. ಮಂಗಳೂರು ಗ್ರಾಮ ಚಾವಡಿ- ಪಾನೆಲ- ಬೋಳಿಯಾರ್ – ಮುಡಿಪು ಮಾರ್ಗವಾಗಿ ಕೆಎಸ್ ಆರ್ ಟಿಸಿ ಬಸ್ಸು ಸಂಚಾರ ಆರಂಭವಾಗಿದ್ದು, ಸ್ವತಃ ಶಾಸಕ ಯು.ಟಿ. ಖಾದರ್ ಅವರೇ ಬಸ್ಸು ಚಲಾಯಿಸಿ ಚಾಲನೆ ನೀಡಿದರು. ಬಿಜೆಪಿ ಮುಖಂಡ ಹಾಗೂ ಮೈಸೂರು ಎಲೆಕ್ರ್ಟಿಕ್ ಪ್ರೈವೆಟ್ ಲಿಮಿಟೆಡ್ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಸೇರಿದಂತೆ ಗಣ್ಯರು ಭಾಗಿಯಾಗಿದ್ದರು. ಇತ್ತೀಚಿನ […]

ಒಂದು ಚಾರ್ಜ್‌ನಲ್ಲಿ 140 ಕಿ.ಮೀ. ಓಡುವ ಜತೆಗೆ ಹಲವು ಆಕರ್ಷಕ ಸೌಲಭ್ಯಗಳನ್ನು ಹೊಂದಿದೆ ಎಂದು ಸಂಸ್ಥೆಯು ಘೋಷಿಸಿದೆ. ಹೊಸ ಐ-ಕ್ಯೂಬ್ ಕ್ಲೀನ್ ಯುಐ ಸಹಿತವಾದ 7-ಇಂಚಿನ ಟಿಎಫ್‌ಟಿ ಟಚ್‌ ಸ್ಕ್ರೀನ್, ಅನಿಯಮಿತವಾದ ಥೀಮ್ ವೈಯಕ್ತೀಕರಣ, ವಾಯ್ಸ್ ಅಸಿಸ್ಟ್ ಮತ್ತು ಟಿವಿಎಸ್ ಐಕ್ಯೂಬ್ ಅಲೆಕ್ಸಾ ಹೊಂದಿದೆ ಎಂದು ವಿಎಸ್ ಮೋಟಾರ್ ಕಂಪನಿಯ ಎಂಡಿ ಸುದರ್ಶನ್ ವೇಣು ತಿಳಿಸಿದ್ದಾರೆ. ದೇಶದ 3ನೇ ಅತಿ ದೊಡ್ಡ ಮೋಟಾರು ವಾಹನಗಳ ಉತ್ಪಾದಕ ಸಂಸ್ಥೆಯಾದ ಟಿವಿಎಸ್, ಐಕ್ಯೂಬ್ […]

  ಗುವಾಹಟಿ, ಮೇ 19- ಈಶಾನ್ಯ ರಾಜ್ಯ ಅಸ್ಸೋಂನಲ್ಲಿ ಹಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ವರುಣನ ರೌದ್ರಾವತಾರಕ್ಕೆ 9 ಮಂದಿ ಬಲಿಯಾಗಿದ್ದು, 6 ಲಕ್ಷಕ್ಕೂ ಹೆಚ್ಚು ಮಂದಿ ಸಂಕಷ್ಟಕ್ಕೀಡಾಗಿದ್ದಾರೆ. ವರುಣನ ಆರ್ಭಟದಿಂದ ಭೂ ಕುಸಿತ ಉಂಟಾಗಿ ಅನೇಕ ಕಡೆ ರಸ್ತೆ, ರೈಲು ಮಾರ್ಗಗಳಿಗೆ ತೀವ್ರ ತೊಂದರೆಯಾಗಿದೆ. ನಾಗೋನ್ ಜಿಲ್ಲೆಯಲ್ಲಿ 2.8 ಲಕ್ಷ ಮಂದಿ ಪ್ರವಾಹ ಹಾಗೂ ಮಳೆಯಿಂದ ಸಂತ್ರಸ್ತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ 135 ಪರಿಹಾರ ಶಿಬಿರಗಳನ್ನು ಸ್ಥಾಪಿಸಿದ್ದು, 48 […]

ಉಡುಪಿ: ಜಿಲ್ಲೆಯಲ್ಲಿ 136 ಡೆಂಘೆ ಪ್ರಕರಣ ದಾಖಲಾಗಿದ್ದು, ಜನರದಲ್ಲಿ ಆತಂಕ ಮೂಡಿಸಿದೆ. ಬೈಂದೂರು ತಾಲೂಕು ವ್ಯಾಪ್ತಿಯ ಜಡ್ಕಲ್ ಮುದೂರು ಗ್ರಾಮದಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗೆ 10 ದಿನ ರಜೆ ಘೋಷಿಸಲಾಗಿದೆ. ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 114 ಡೆಂಘೆ ಪ್ರಕರಣಗಳು ಪತ್ತೆಯಾಗಿದೆ. ಈ ವ್ಯಾಪ್ತಿಯ ಮುದೂರು ಗ್ರಾಮದಲ್ಲಿ 105, ಜಡ್ಕಲ್​ನಲ್ಲಿ 7 ಪ್ರಕರಣ ಕಂಡು ಬಂದಿದೆ. ಕೊಲ್ಲೂರಿನಲ್ಲಿ ಇಬ್ಬರಿಗೆ ಡೆಂಘೆ ದೃಢಪಟ್ಟಿದೆ. ಜಡ್ಕಲ್ ಮುದೂರು ಭಾಗದಲ್ಲಿ ನಿರಂತರವಾಗಿ ಡೆಂಘೆ ಪ್ರಕರಣಗಳು […]

ನವದೆಹಲಿ, ಮೇ 19- ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಚಾರಣೆ ನಡೆಸದಂತೆ ಸುಪ್ರೀಂಕೋರ್ಟ್ ಒಂದು ದಿನದ ಮಟ್ಟಿಗೆ ತಡೆಯಾಜ್ಞೆ ನೀಡಿದೆ. ದೇಶಾದ್ಯಂತ ಕುತೂಹಲ ಕೆರಳಿಸಿರುವ ಈ ಪ್ರಕರಣವನ್ನು ಇಂದಿನಿಂದ ನಿರಂತರ ವಿಚಾರಣೆ ನಡೆಸಲು ವಾರಣಾಸಿ ನ್ಯಾಯಾಲಯ ಮುಂದಾಗಿತ್ತು. ಆದರೆ ವಿಚಾರಣೆಯನ್ನು ಮುಂದೂಡಿ, ಮತ್ತಷ್ಟು ಸಮಯಾವಕಾಶ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡುವುದಾಗಿ ಹಿಂದುಪರ ವಕೀಲ ವಿಷ್ಣು ಶಂಕರ್ ಜೈನ್ ತಿಳಿಸಿದ್ದರು, ಅದೇ ವೇಳೆ ಸುಪ್ರೀಂಕೋರ್ಟ್‍ನಲ್ಲೂ ಕಾಲಾವಕಾಶಕ್ಕಾಗಿ ಮನವಿ […]

ಮೈಸೂರು,ಮೇ 19- ರಾಜ್ಯದಲ್ಲಿ ಯಾವುದೇ ರಸಗೊಬ್ಬರದ ಕೊರತೆ ಇಲ್ಲ. ಕೃತಕ ಅಭಾವ ಸೃಷ್ಟಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸಗೊಬ್ಬರವನ್ನು ಸಬ್ಸಿಡಿ ದರದಲ್ಲಿ ಮಾರುತ್ತಿದ್ದೇವೆ. ಕಾಳಸಂತೆಕೋರರ ಪತ್ತೆಗೆ ಸ್ಕ್ವಾಡ್ ರಚಿಸಲಾಗಿದೆ. ಬಿತ್ತನೆ ಬೀಜದ ಕೊರತೆಯಾಗದಂತೆಯೂ ಕ್ರಮ ವಹಿಸಲಾಗಿದೆ ಎಂದರು. ಮಳೆಹಾನಿ ಬಗ್ಗೆಯೂ ವರದಿಯನ್ನು ನೀಡುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ವರದಿಯ ಆಧಾರದ ಮೇಲೆ ಪರಿಹಾರವನ್ನು ನೀಡಲಾಗುತ್ತದೆ. ಮಳೆಹಾನಿ […]

ಬೆಂಗಳೂರು: ನಗರದಲ್ಲಿ ಸುರಿದಂತ ಭಾರೀ ಮಳೆಯಿಂದ ಉಂಟಾದಂತ ಅವಾಂತರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಜನರ ಕಷ್ಟ, ಸಮಸ್ಯೆ ಪರಿಹರಿಸೋ ನಿಟ್ಟಿನಲ್ಲಿ, ಸಿಎಂ ಬಸವರಾಜ ಬೊಮ್ಮಾಯಿಯವರು ( CM Basavaraj Bommai ) ನಗರ ಪ್ರದಕ್ಷಿಣೆ ನಡೆಸುತ್ತಿದ್ದಾರೆ. ಇತ್ತ ಸಿಎಂ ನಗರ ಪ್ರದಕ್ಷಿಣೆ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ಧರಾಮಯ್ಯ   ಕೂಡ ಸಿಟಿ ರೌಂಡ್ಸ್ ಗೆ ಮುಂದಾಗಿದ್ದಾರೆ. ಹೌದು.. ಮಾಜಿ ಸಿಎಂ ಸಿದ್ಧರಾಮಯ್ಯ ಅವರು, ಇಂದು ಬೆಂಗಳೂರಿನ  ನೆರೆ, ಪ್ರವಾಹ ಪೀಡಿತ ಪ್ರದೇಶಗಳಿಗೆ […]

  ಮೈಸೂರು: ನಾನು ರಾಜ್ಯ ರಾಜಕಾರಣಕ್ಕೆ ಮರಳುತ್ತೇನೆ ಎಂಬ ಊಹಾಪೋಹದ ಸುದ್ದಿಗಳಿಗೂ ನಮಗೂ ಸಂಬಂಧವಿಲ್ಲ. ನಾನು ಕೇಂದ್ರ ಸಚಿವೆಯಾಗಿ ದೊಡ್ಡ ಅವಕಾಶವನ್ನು ನಮ್ಮ ಪಕ್ಷ ನೀಡಿದೆ. ರಾಜ್ಯದಲ್ಲಿ ಹರಡುತ್ತಿರುವ ಸುದ್ದಿಗಳಿಗೂ ನನಗೂ ಸಂಬಂಧವಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯರ ಗೋಮುಖ ವ್ಯಾಘ್ರತನ ಇಡೀ ರಾಜ್ಯದ ಜನರಿಗೆ ಗೊತ್ತಿದೆ. ಮೈಸೂರಿನ ಅಭಿವೃದ್ಧಿಗೆ ಅವರ ಕೊಡುಗೆ ಏನು ಎಂದು ಅವರು ಎದೆ ಮುಟ್ಟಿಕೊಂಡು ಹೇಳಲಿ. […]

ಹುಬ್ಬಳ್ಳಿ(ಮೇ.19): ಕಲ್ಲಿದ್ದಲು ಕೊರತೆಯಿಂದ (Coal Shortage) ಭಾರತ ದೇಶಾದ್ಯಂತ ನೂರಾರು ರೈಲುಗಳ (Train) ಸಂಚಾರ ಸ್ಥಗಿತಗೊಂಡಿದೆ. ದೇಶಾದ್ಯಂತ ತೀವ್ರ ವಿದ್ಯುತ್ (Electricity) ಸಂಕಷ್ಟ ಎದುರಾಗಿದ್ದು, ವಿದ್ಯುತ್ ಅಭಾವದಿಂದ ರೈಲು ಇಲಾಖೆಯೂ ಸಂಕಷ್ಟ ಅನುಭವಿಸುವಂತಾಗಿದೆ. ಕಲ್ಲಿದ್ದಲು ಕೊರತೆ ವಿದ್ಯುತ್ ತಯಾರಿಕೆ ಮೇಲೆ ಪ್ರತಿಕೂಲ ಪರಿಣಾಮವಾಗಿದ್ದು, ದೇಶಾದ್ಯಂತ ಬಹುತೇಕ ರಾಜ್ಯಗಳಲ್ಲಿ ವಿದ್ಯುತ್ ಕಣ್ಣಾ ಮುಚ್ಚಾಲೆ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿಯೇ ಮಹತ್ವದ ಹೆಜ್ಜೆ ಇಡೋ ಮೂಲಕ ನೈರುತ್ಯ ರೈಲ್ವೆ ಗಮನ ಸೆಳೆಯಲಾರಂಭಿಸಿದೆ. ಹುಬ್ಬಳ್ಳಿಯನ್ನು (Hubballi) […]

Advertisement

Wordpress Social Share Plugin powered by Ultimatelysocial