ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಏರಿಯಾಗಳಲ್ಲಿ ತನ್ನ ಕೈ ಚಳಕ ತೋರಿಸಿ ವಾಹನ ಕಳ್ಳತನ ಮಾಡುತ್ತಿದ್ದ ಕಳ್ಳರ ಗ್ಯಾಂಗ್ ಇದೀಗಾ ಪೊಲೀಸರ ಅತಿಥಿಗಳಾಗಿದ್ದಾರೆ. ದೇವನಹಳ್ಳಿ ಸೇರಿದಂತೆ ಹಲವು ಕಡೆ ದ್ವಿಚಕ್ರ ವಾಹನ ಕದ್ದು ಪರಾರಿಯಾಗುತ್ತಿದ್ದ ಕಳ್ಳರನ್ನು ದೇವನಹಳ್ಳಿ ಪೊಲೀಸರು ಬೀಸಿದ ಖೆಡ್ಡಕ್ಕೆ ಬಿದಿದ್ದಾರೆ. ಒಟ್ಟು 5 ಖತರ್ನಾಕ್ ಖದೀಮರನ್ನು ಬಂಧಿಸಿದ್ದು, ಬಂಧಿತರಿಂದ 7.65 ಲಕ್ಷದ 13 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕ್ರೈಮ್
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೆ ಸಂತ್ರಸ್ತ ಯುವತಿಯ ವಿಚಾರಣೆ ನಡೆಯಲಿದೆ. ಇಂದು ವಿಚಾರಣೆಗೆ ಹಾಜರಾಗುವಂತೆ ಯುವತಿಗೆ ನೊಟೀಸ್ ನೀಡಲಾಗಿದೆ. ಐದಾರು ದಿನಗಳಿಂದ ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ರಮೇಶ್ ಜಾರಕಿಹೊಳಿ ಅನಾರೋಗ್ಯದ ನೆಪವೊಡ್ಡಿ ವಿಚಾರಣೆಗೆ ಹಾಜರಾಗದಿರಲು ಅನುಮತಿ ಪಡೆದಿದ್ದಾರೆ. ಇಂದು ರಮೇಶ್ ಜಾರಕಿಹೊಳಿ ಅವರ ಕೊರೋನಾ ಟೆಸ್ಟ್ನ ರಿಸಲ್ಟ್ ಕೂಡ ಬರುವ ಸಾಧ್ಯತೆಯಿದ್ದು, ಕೊರೋನಾ ಇರುವುದು ದೃಢವಾದರೆ ಇನ್ನೂ ಹದಿನೈದು ದಿನ ಜಾರಕಿಹೊಳಿಯನ್ನು ಅರೆಸ್ಟ್ […]
ಲಾರಿ ಮತ್ತು ಕಾರ್ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ಬೇವಿನಹಟ್ಟಿ ಕ್ರಾಸ್ ಬಳಿ ನಡೆದಿದೆ. ಸ್ನೇಹಿತರೊಬ್ಬರ ಬರ್ತಡೇ ಪಾರ್ಟಿಯಲ್ಲಿ ಪಾಲ್ಗೊಂಡು ಇಳಕಲ್ ಗೆ ವಾಪಸ್ ತೆರಳುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಇನ್ನೂ ಅಪಘಾತದಲ್ಲಿ ಕಾರ್ ಚಾಲಕ ವಿಜಯಕುಮಾರ್ ಗಾಯಗೊಂಡಿದ್ದು, ಅವರನ್ನು ಬಾಗಲಕೋಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಳಿಕ ಲಾರಿ ಸಮೇತ ಚಾಲಕ ಎಸ್ಕೇಪ್ ಆಗಿದ್ದಾನೆ. ಸದ್ಯ ಈ ಕುರಿತು ಹುನಗುಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. […]
ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಹನದ ಮೇಲೆ ಚಪ್ಪಲಿ ಎಸೆದಿರುವ ರಮೇಶ್ ಜಾರಕಿಹೊಳಿ ಬೆಂಬಲಿಗರ ವರ್ತನೆಗೆ ಕರ್ನಾಟಕ ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ. ಸರ್ಕಾರಕ್ಕೆ ಬೆದರಿಕೆ ಹಾಕಿ, ಪುಂಡರಿಗೆ ಹಣ ಕೊಟ್ಟು ದಾಂಧಲೆ ಎಬ್ಬಿಸಿದಾಕ್ಷಣ ಅತ್ಯಾಚಾರಿ ಸದಾಚಾರಿಯಾಗಿ ಬದಲಾಗುವುದಿಲ್ಲ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದನ್ನೂಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ.!
ಕೆರೆಯ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದೆ. ಈ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಇಟ್ಟಿಗೇರಿಯಲ್ಲಿ ನಡೆದಿದ್ದು, ಸದ್ಯ ಸ್ಥಳಕ್ಕೆ ಭೇಟಿ ನೀಡಿದ ಲಕ್ಷ್ಮೇಶ್ವರ ಪಿಎಸ್ ಐ ಶಿವಯೋಗಿ ಲೋಹರ್ ಅವರು ಅನಾಮಧೇಯ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಇನ್ನು ಈ ಪ್ರಕರಣ ಲಕ್ಷ್ಮೇಶ್ವರ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ. ಇದನ್ನೂ ಓದಿ: ಜನತಾ ಕರ್ಫ್ಯೂ ಇಡೀ ಜಗತ್ತಿಗೆ ಸ್ಫೂರ್ತಿ -ಪ್ರಧಾನಿ ನರೇಂದ್ರ ಮೋದಿ
ಟ್ರ್ಯಾಕ್ಟರ್ ಪಲ್ಟಿಯಾಗಿ ಮಹಿಳೆಯೋರ್ವಳು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಕಲ್ಲೂರು ಗ್ರಾಮದ ಬಳಿ ನಡೆದಿದೆ. ಮೃತ ದುರ್ದೈವಿ ಯಲ್ಲಮ್ಮಗಂಡ ಭೀಮರಾವ ಎಂದು ತಿಳಿದುಬಂದಿದ್ದು, ಬಿಸಿಲಿನ ತಾಪಕ್ಕೆ ಟ್ರ್ಯಾಕ್ಟರ್ನ ಮುಂದಿನ ಟೈರ್ ಸಿಡಿದು ಅಪಘಾತಕ್ಕೀಡಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಟ್ರಾಕ್ಟರ್ನಲ್ಲಿದ್ದ 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡ ಎಲ್ಲರನ್ನು ಕಲಬುರಗಿ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಇದನ್ನೂ ಓದಿ: `ರಾಬರ್ಟ್’ ಚಿತ್ರದ ವಿಜಯಯಾತ್ರೆ ರದ್ದು..!
ಕೆಮಿಕಲ್ ಫ್ಯಾಕ್ಟರಿಯಿಂದ ವಿಷಾನಿಲ ಸೋರಿಕೆಯಿಂದಾಗಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ರಾಯಚೂರಿನ ಕೈಗಾರಿಕಾ ವಲಯದ ಚಿಕ್ಕಲ್ಲೂರು ಗ್ರಾಮದಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಜೆವೈ ಫಾರ್ಮ್ ಕಾರ್ಖಾನೆಯಲ್ಲಿ ವಿಷಪೂರಿತ ಅನಿಲ ಸೋರಿಕೆಯಿಂದಾಗಿ ವ್ಯಕ್ತಿ ಮೃತಪಟ್ಟಿದ್ದಾನೆ. ಆಂಧ್ರ ಮೂಲದ ರಂಗ (೨೮) ಮೃತ ದುರ್ದೈವಿ ಮತ್ತು ಉಳಿದ 4 ಜನರ ಪರಿಸ್ಥಿತಿ ಬಹಳ ಗಂಭೀರವಾಗಿದೆ. ಈ ಕಾರ್ಖಾನೆಯು 3 ತಿಂಗಳಿಂದೆಯಷ್ಟೇ ಪ್ರಾರಂಭವಾಗಿದ್ದು, ಕಾರ್ಖಾನೆಯ ಹೆಸರಾಗಲೀ, ದಾಖಲಾತಿಯಾಗಲೀ, ಲೈಸೆನ್ಸ್ ಯಾವುದೂ ಇಲ್ಲ. ಇನ್ನು ದುರಂತ ಆದ […]
ವಿಜಯಪುರ ಜಿಲ್ಲೆ ತಾಳಿಕೋಟಿ ತಾಲೂಕಿನ ಶಿವಪುರ ಗ್ರಾಮದ ಬೀರಪ್ಪ ದೊಡ್ಡಪ್ಪ ಹೊಕ್ರಾಣಿ ಅವರ ಜಮೀನಿನಲ್ಲಿ ಅಕ್ರಮವಾಗಿ ಬೆಳೆದ 900 ಗ್ರಾಮ ಗಾಂಜಾವನ್ನು ಜಪ್ತಿ ಮಾಡಲಾಗಿದೆ ಖಚಿತ ಮಾಹಿತಿ ಆದರಿಸಿ ಡಿವೈಎಸ್ಪಿ ಅರುಣ ಕುಮಾರ್ ಕೋಳೂರು. ಸಿಪಿಐ ಆನಂದ ವಾಗ್ಮೊಡೆ. ಪಿಎಸ್ಐ ಶಿವಾಜಿ ಪವಾರ ಹಾಗೂ ಸಿಬ್ಬಂದಿಗಳ ನೇತೃತ್ವದಲ್ಲಿ ದಾಳಿ ನಡೆಸಿ ಹಸಿ ಗಾಂಜಾವನ್ನು ಪಡಿಸಿಕೊಂಡು ಆರೋಪಿ ಬೀರಪ್ಪ ದೊಡ್ಡಪ್ಪ ಹೊಕ್ರಾಣಿ ಅವನನ್ನು ಬಂಧಿಸಲಾಗಿದೆ.ಈ ಕುರಿತು ತಾಳಿಕೋಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ […]
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಹಾಗೂ ಅದರ ರೂವಾರಿಗಳೆನ್ನಲಾದ ಇಬ್ಬರು ಪತ್ರಕರ್ತರನ್ನು ಪತ್ತೆ ಮಾಡಲು ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಪೊಲೀಸರು ಕಾಯುತ್ತಿರುವಂತೆಯೇ ಆ ಯುವತಿ 3ನೇ ಬಾರಿಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ತಮ್ಮ ವಕೀಲರ ಮೂಲಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸುವುದಾಗಿ ಅವರು ಇವತ್ತು ರಿಲೀಸ್ ಆದ ವಿಡಿಯೋದಲ್ಲಿ ತಿಳಿಸಿದ್ದಾರೆ. ಒಂದು ವೇಳೆ ದೂರು ದಾಖಲಾದರೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಬಂಧನದ ಭೀತಿ […]
ಆಟೋ ರಿಕ್ಷಾವೊಂದರಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಶ್ರೀರಾಮಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸತೀಶ್ ಹಾಗೂ ವಸಂತ ಎಂದು ಗುರುತಿಸಲಾಗಿದ್ದು, ಬಂಧಿತರಿಂದ ಬರೋಬ್ಬರಿ 45 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಆರೋಪಿಗಳು ವಿಶಾಖಪಟ್ಟಣಂನಿಂದ ರೈಲಿನ ಮೂಲಕ ಬೆಂಗಳೂರಿಗೆ ಗಾಂಜಾ ತಂದು ಸಣ್ಣ ಸಣ್ಣ ಪ್ಯಾಕೇಟ್ ಗಳಾಗಿ ಮಾಡಿ ಮಾರಾಟ ಮಾಡುತ್ತಿದ್ದರೆಂದು ತಿಳಿದು ಬಂದಿದೆ. ಇದನ್ನೂ ಓದಿ: ಸ್ಪೀಕರ್ ಸಿಎಂ ಯಡಿಯೂರಪ್ಪರ ರಬ್ಬರ್ ಸ್ಟಾಂಪ್.!