ಕೈಸಾಲಕ್ಕೆ ಹೆದರಿ ಕಾಂಡಿಮೆಂಟ್ಸ್ ಮಾಲೀಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಳಾಲ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿಯ ಇರಕಸಂದ್ರ ಕಾಲೋನಿಯ ಎಸ್ ವಿಎಸ್ ಕಾಂಡಿಮೆಂಟ್ಸ್ ಮಾಲೀಕ ಶಿವಕುಮಾರ್ 55 ವರ್ಷದ ವ್ಯಕ್ತಿಯೇ ಮೃತಪಟ್ಟ ದುರ್ದೈವಿ.ಇರಕಸಂದ್ರ ಕಾಲೋನಿಯ ಬಸ್ ನಿಲ್ದಾಣದಲ್ಲಿ ಕಾಂಡಿಮೆಂಟ್ಸ್ ಅಂಗಡಿಯ ವ್ಯಾಪಾರದಲ್ಲಿ ಕುಂಠಿತಗೊಂಡ ಹಿನ್ನೆಲೆಯಲ್ಲಿ ಕೈಸಾಲ ಮಾಡಿಕೊಂಡು ಕಳೆದ ಒಂದು ತಿಂಗಳಿಂದ ಅಂಗಡಿಯನ್ನ ಬಾಗಿಲು ಹಾಕಿದ್ದಾನೆ ಎಂದು ತಿಳಿದು ಬಂದಿದೆ.ಸಾಲ ತಿರಿಸಲು ಸಾಧ್ಯವಾಗದೇ […]

ಕೊರಟಗೆರೆ:- ಕೊರೊನಾ ಮತ್ತು ಪಾಶ್ಚುವಾರ್ಯ ರೋಗ ಬರೋದಿಲ್ಲ ಎಂಬ ಅನಾಮಿಕ ವ್ಯಕ್ತಿಯ ಮೂಢನಂಬಿಕೆಯ ಮಾತಿನಿಂದ ಅರಣ್ಯದಲ್ಲಿ ವಾಸಿಸುತ್ತೀದ್ದ ಕರಡಿಯನ್ನು ಸೆರೆಹಿಡಿದು ಸಾಯಿಸಿ ದೇಹವನ್ನು ಬೇಟ್ಟದ ಮೇಲೆ ಕತ್ತರಿಸಿ ಮಾಂಸವನ್ನಾಗಿ ಪರಿವರ್ತಿಸಿ ಸೇವಿಸಿರುವ ಘಟನೆ ಕೊರಟಗೆರೆ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ನಡೆದಿದೆ.ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಸಿದ್ದರಬೇಟ್ಟ ಗ್ರಾಪಂ ವ್ಯಾಪ್ತಿಯ ಗೌಜಗಲ್ಲು ಗ್ರಾಮದ ಚಿಕ್ಕಬಸವಯ್ಯ ಎಂಬುವರ ಮನೆಯ ಮೇಲೆ ಕೊರಟಗೆರೆ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಸುರೇಶ್ ನೇತೃತ್ವದ ತಂಡ ಖಚಿತ […]

ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಠಾಣೆಗಳಲ್ಲಿ ರೌಡಿ ಶೀಟರ್ ಆಗಿ ಗುರುತಿಸಿಕೊಂಡಿದ್ದ 3,263 ರೌಡಿಶೀಟರ್‌ಗಳಲ್ಲಿ 1256 ಮಂದಿಯ ರೌಡಿಶೀಟ್ ಗಳನ್ನು ಮಂಗಳೂರಲ್ಲಿ ಮುಕ್ತಗೊಳಿಸಲಾಯಿತು. ಹಲವು ವರ್ಷಗಳಿಂದ ಅಪರಾಧ ಚಟುವಟಿಕೆಗಳಿಂದ ದೂರ ಉಳಿದು ಉತ್ತಮ ಜೀವನ ರೂಪಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ರೌಡಿ ಶೀಟರ್ ಹಾಳೆಯಿಂದ ಮುಕ್ತ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಮಂಗಳೂರು ನಗರದಲ್ಲಿ ನಡೆದ ಪರಿವರ್ತನಾ ಸಭೆಯಲ್ಲಿ ಉದ್ಯಮಿ ಡಾ.ಎ.ಜೆ.ಶೆಟ್ಟಿ, ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತಾಧಿಕಾರಿ ರುಡಾಲ್ಫ್ ರವಿ […]

ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಮತ್ತೆ ಅಕ್ರಮ ಚಿನ್ನ ಪತ್ತೆಯಾಗಿದೆ. ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಲ್ಲಿ ಬಂದಿಳಿದ ಕಾಸರಗೋಡು ಜಿಲ್ಲೆಯ ತಳಂಗರೆ ಮೂಲದ ಮಹಿಳೆಯ ಬಳಿ 24 ಕ್ಯಾರಟ್ ನ 36 ಲಕ್ಷದ 43 ಸಾವಿರದ 270 ರೂಪಾಯಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಚಿನ್ನದ ಪೇಸ್ಟನ್ನು ಬೂದು ಬಣ್ಣದ ಪೇಪರ್ ನಲ್ಲಿ ಮರೆಮಾಚಿ ಒಳ ಉಡುಪಿನಲ್ಲಿ ಇಟ್ಟು ಹೊಲಿದು ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು.

ಶುದ್ಧ ನಂದಿನಿ ತುಪ್ಪ ಯಾರಿಗೆ ತಾನೇ ಇಷ್ಟವಾಗಲ್ಲ. ಆದರೆ ಇಲ್ಲಿ ನಂದಿನಿ ತುಪ್ಪ ಸೇವಿಸುವವರನ್ನು ಬೆಚ್ಚಿ ಬೀಳಿಸುವ ಸುದ್ದಿಯೊಂದು ಹೊರಬಿದ್ದಿದೆ..! ನಂದಿನಿ ತುಪ್ಪವನ್ನೇ ನಕಲಿ ಮಾಡಿ ತಯಾರಿಸುವ ಗೋಡೌನ್ ಒಂದು ಮೈಸೂರಿನ ಹೊಸ ಹುಂಡಿ ಬಳಿ ಪತ್ತೆಯಾಗಿದೆ.ಈ ಗೋಡೌನ್‌ನ ಮೂಲಕ ಕಳೆದ ನಾಲ್ಕು ತಿಂಗಳಿನಿಂದ ನಂದಿನಿ ತುಪ್ಪವನ್ನು ಮೈಸೂರು ನಗರಾದ್ಯಂತ ವಿತರಣೆ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಇದೀಗ ಈ ನಕಲಿ ತುಪ್ಪ ತಯಾರಕರ ವಿತರಣೆ ಜಾಲ ಬಯಲಾಗಿದೆ. ಗುರುವಾರ […]

2ವರ್ಷದ ಗಂಡು ಮಗುವನ್ನು ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಗಟ್ಟವಾಡಿ ಗ್ರಾಮದಲ್ಲಿ ನಡೆದಿದೆ ..2ವರ್ಷದ ಗಂಡು ಮಗುವನ್ನು ನೀರಿನ ತೊಟ್ಟಿಗೆ ಮುಳುಗಿಸಿ ಕೊಲೆ ಮಾಡಿರುವ ಹೆತ್ತ ತಾಯಿ ಮಗುವನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಕೊಲೆ ಮಾಡಿದ ಬಳಿಕ ತಾನೂ ಕೂಡ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ..ಗಟ್ಟವಾಡಿ ಗ್ರಾಮದ ಮಹದೇವ ಪ್ರಸಾದ್ ಅಲಿಯಾಸ್ ರಚ್ಚು ಎಂಬುವರ ಪತ್ನಿ ಅನ್ನಪೂರ್ಣ 22 ವರ್ಷದ ಮೃತ ವಿವಾಹಿತ ಮಹಿಳೆ.ಹಾಗೂ […]

ಬೆಂಗಳೂರು, ನ.2- ಬಿಟ್ ಕಾಯಿನ್ ಆರೋಪಿ ಶ್ರೀಕಿ ಜತೆ ಬಿಜೆಪಿಯ ಯಾವ ನಾಯಕರ ಸಂಪರ್ಕವೂ ಇಲ್ಲ. ಆದರೆ, ಕಾಂಗ್ರೆಸ್‍ನ ಪ್ರಮುಖರ ಮಕ್ಕಳ ಜತೆ ಆತ ಸಿಕ್ಕಿಬಿದ್ದಿರುವ ನಿದರ್ಶನವಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪಿಸಿದರು. ಮಾಜಿ ಶಾಸಕರೊಬ್ಬರ ಮಗನ ಜತೆ 2018ರಲ್ಲಿ ಡ್ರಗ್ಸ್ ಹಗರಣದಲ್ಲಿ ಕೂಡ ಶ್ರೀಕಿ ಸಿಕ್ಕಿಬಿದ್ದಿದ್ದ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಗ ಮುಖ್ಯಮಂತ್ರಿಯಾಗಿದ್ದರು. ಆಗಿನ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಿಲ್ಲ. […]

ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಪ್ರತಿಭಟನಾ ಸ್ಥಳದ ಬಳಿ ವೇಗವಾಗಿ ಬಂದ ಟ್ರಕ್ಕೊಂದು ಡಿವೈಡರ್ ಮೇಲೆ ಹರಿದ ಪರಿಣಾಮ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ನಡೆದಿದೆ. ಟ್ರಕ್ ಢಿಕ್ಕಿ ಹೊಡೆದಾಗ ಮಹಿಳೆಯರು ಡಿವೈಡರ್ ಮೇಲೆ ಕುಳಿತು ಆಟೋ ರಿಕ್ಷಾಕ್ಕಾಗಿ ಕಾಯುತ್ತಿದ್ದರು ಎನ್ನಲಾಗಿದೆ. ಅಪಘಾತದ ಸ್ಥಳದಿಂದ ಟ್ರಕ್ ಚಾಲಕ ಓಡಿಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಮಹಿಳೆಯರು […]

ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ  ಖಂಡಿಸಿ ಬಿಜಾಪುರ ಜಿಲ್ಲೆ ಸಿಂದಗಿಯಲ್ಲಿ ಬಾಲಕಿಯ ಪೋಷಕರು ಸೇರಿದಂತೆ ಸಾರ್ವಜನಿಕರು  ಪ್ರತಿಭಟನೆ ಮಾಡಿದ್ರು. ತಾಲೂಕಿನ ಬ್ಯಾಕೋಡ್ ಪಂಚಾಯತಿ ವ್ಯಾಪ್ತಿಯ ಅಂತರಂಗಿ ಗ್ರಾಮದ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಅಸಯ್ಯ ಕೃತ್ಯದಲ್ಲಿ ಭಾಗಿಯಾದ ವ್ಯಕ್ತಿಯನ್ನು  ಗಲ್ಲಿಗೇರಿಸಬೇಕೆಂದು  ಪಟ್ಟಣದ ವಿವೇಕಾನಂದ ವೃತ್ತದಲ್ಲಿ  ಪ್ರತಿಭಟನೆ ನಡೆಸಿದರು.ಇದೇ ವೇಳೆ  ತಹಸಿಲ್ದಾರ್ ಸಂಜೀವ್ ಕುಮಾರ್ ದಾಸರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ರು .   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ […]

ಕೆಎಸ್ಆರ್ಟಿಸಿ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ ಮಾಡಿದವರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ…ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಪೊಲೀಸರು   ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿ,ಸಂಚಾರಿ ನಿರೀಕ್ಷಕರ ಹುದ್ದೆಗಳನ್ನು ಕೊಡಿಸುವುದಾಗಿ ನಂಬಿಸಿದ ಆರೋಪಿಗಳು..ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ 70 ಲಕ್ಷ ಹಣ ವಂಚನೆ ಮಾಡಿದ್ದರು….ಅಭಿಷೇಕ್ ತಂದೆ ರಾಜಣ್ಣ ದೂರು ಅಧರಿಸಿ ಖದೀಮರನ್ನು ಬಂಧಿಸಿದ್ದಾರೆ…ಇನ್ನು ಬಂಧಿತ ಆರೋಪಿಗಳಿಂದ ನಗದು ಹಣ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ವಸ್ತುಗಳು ,ಕಾರು ಹಾಗೂ ಸೃಷ್ಟಿಸಿದ ನಕಲಿ ದಾಖಲಾತಿಗಳನ್ನು ಪೊಲೀಸರು ವಶಪಡಿಸಿಕೊಂಡುಈ ಬಗ್ಗೆ ಹೊಸದುರ್ಗ ಪೊಲೀಸ್ […]

Advertisement

Wordpress Social Share Plugin powered by Ultimatelysocial