ಬೆಳಗಾವಿಯಲ್ಲಿ ಕಳೆದ ರಾತ್ರಿ ಪುಂಡರು ಪೊಲೀಸ್ ವಾಹನಗಳಿಗೆ ಹಾನಿ ಮಾಡಿ ಬೆಂಕಿ ಹಚ್ಚಿರುವ ಘಟನೆಯನ್ನ ಖಂಡನೀಯ ಕರ್ನಾಟಕ ಬಂದ್ ಮಾಡೋ ಬಗ್ಗೆ ತೀರ್ಮಾನ ಮಾಡ್ತಿವಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಹೇಳಿದ್ದಾರೆ…ಎಲ್ಲಾ ಸಂಘಟನೆ ಒಂದಾಗ್ತಿವಿ, ಈ ಸರ್ಕಾರ ಕನ್ನಡ ಪರವಾಗಿಲ್ಲ,ನಾವೇ ಕನ್ನಡ ಧ್ರೋಹಿಗಳಿಗೆ ತಕ್ಕ ಪಾಠ ಕಲಿಸ್ತಿವಿ.ಕರ್ನಾಟಕದಲ್ಲಿ ಕನ್ನಡಪರವಾದ ಸರ್ಕಾರವಿದೆಯೋ ಅಥವಾ ಬೇರೆ ಸರ್ಕಾರ ಇದ್ರೋ ಗೊತ್ತಾಗ್ತಿಲ್ಲ.ನಮ್ಮ ಕನ್ನಡ ಸಂಘಟನೆಗಳ ಕಾರ್ಯಕರ್ತರು ಮಸಿ ಬಳಿದ್ರೇ 307 ಕೇಸ್ ಹಾಕ್ತಾರೆ.ಕಾಂಗ್ರೆಸ್ […]
ಜಿಲ್ಲಾ
ಶಿವಾಜಿ ಮಹಾರಾಜರ ಮೂರ್ತಿಗೆ ಕಪ್ಪು ಮಸಿ ಬಳಿದಿರುವುದನ್ನು ಖಂಡಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ನಾಯಕಿಯರು, ಬಿಜೆಪಿ ಮುಖಂಡ ಕಿರಣ ಜಾಧವ ಸೇರಿದಂತೆ ಅನೇಕರು ಶನಿವಾರ ಬೆಳಗ್ಗೆ ಶಹಾಪುರದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಕ್ಷೀರಾಭಿಷೇಕ ಮಾಡಿದ್ದಾರೆ.144 ಕಲಂ ನಿಷೇಧಾಜ್ಞೆ ಮಧ್ಯೆಯೂ ಶಿವಾಜಿ ಮಹಾರಾಜರ ಮೂರ್ತಿಗೆ ಹಾಲಿನ ಅಭಿಷೇಕ ಮಾಡಿದರು. ಹಾಲಿನ ಅಭಿಷೇಕ, ಪೂಜೆ ಮಡುವ ನೆಪ ಮಾಡಿ ಗುಂಪು ಕಟ್ಟಿಕೊಂಡು ಬಂದು ಶಾಂತಿ ಕದಡಿಸಲು ಯತ್ನಿಸುತ್ತಿದ್ದಾರೆ.ಎಂಇಎಸ್ ನಾಯಕಿಯರಾದ ಮಾಜಿ ಮೇಯರ್ […]
ಬೆಳಗಾವಿಯಲ್ಲಿ ಕಳೆದ ರಾತ್ರಿ ಪುಂಡರು ಪೊಲೀಸ್ ವಾಹನಗಳಿಗೆ ಹಾನಿ ಮಾಡಿ ಬೆಂಕಿ ಹಚ್ಚಿರುವುದು ಅಕ್ಷಮ್ಯ. ವಿಧಾನಮಂಡಲ ಅಧಿವೇಶನಕ್ಕೆ ಹೋಗಲು ಪಾಸ್ ಅಂಟಿಸಲಾಗಿದ್ದ ವಾಹನಗಳನ್ನೇ ಗುರಿಯಾಗಿಸಿಕೊಂಡು ಕಲ್ಲುತೂರಾಟ ನಡೆಸಲಾಗಿದೆ.ರಾಯಣ್ಣ ಪ್ರತಿಮೆ ಹಾಳು ಮಾಡಿರುವುದು ಕ್ಷಮಾರ್ಹವಲ್ಲದ ಅಪರಾಧ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ. ಸರಣಿ ಟ್ವೀಟ್ ಮೂಲಕ ಕಿಡಿಕಾರಿರುವ ಕುಮಾರಸ್ವಾಮಿ, ಬೆಳಗಾವಿಯಲ್ಲಿ ಪ್ರಕ್ಷುಬ್ಧತೆ ಸೃಷ್ಟಿಸಿ ಭಾಷ ವೈಷಮ್ಯ ಹೆಚ್ಚಿಸುವುದು ದುರುಳರ ಉದ್ದೇಶವಿದ್ದಂತಿದೆ. ಶಾಂತಿ ಕದಡಿ ಜನರಲ್ಲಿ ಭಯಭೀತಿ ಉಂಟುಮಾಡಲು ಪುಂಡರನ್ನು […]
ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಧ್ವಂಸಗೊಳಿಸಿ, ಅಟ್ಟಹಾಸ ಮೆರೆದಿರೋದು ಖಂಡನೀಯವಾಗಿದೆ. ಈ ಕ್ರಮವನ್ನು ಸರ್ಕಾರ ಎಂದೂ ಮನ್ನಿಸೋದಿಲ್ಲ. ಪುತ್ಥಳಿ ಕೆಡವಿ, ಪುಂಡಾಟ ಮೆರೆದಂತ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಎಚ್ಚರಿಕೆ ನೀಡಿದ್ದಾರೆ.ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸ್ವಾತಂತ್ರ್ಯ ಸಂದರ್ಭದಲ್ಲಿ ದೇಶಕ್ಕಾಗಿ ಹೋರಾಡಿ, ವೀರ ಮರಣಹೊಂದಿದಂತ ಮಹಾನಾಯಕ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಆಗಿದ್ದಾರೆ. ಬ್ರಿಟೀಷರ ವಿರುದ್ಧ ಹೋರಾಡಿ ದೇಶದ […]
ದೇವನಹಳ್ಳಿ ತಾಲೂಕಿನ ಚಿಕ್ಕೋಬದೇನಹಳ್ಳಿ ಗ್ರಾಮದ ಗ್ರಾಮ ಠಾಣಾ ೮ ಎಕರೆ ೪ ಗುಂಟೆ ಜಮೀನಿಗೆ ಸಂಬಂಧಿಸಿದಂತೆ ಅಕ್ರಮ ಖಾತೆಗಳನ್ನು ಸೃಷ್ಠಿ ಮಾಡಿರುವವರ ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯಿತಿ ಆವರಣದ ಮುಂಭಾಗದಲ್ಲಿ ರೈತ ಸಂಘ, ಹಸಿರು ಸೇನೆ, ಪ್ರಜಾವಿಮೋಚಾನಾ ಚಳುವಳಿ ಸಂಘಟನೆ ವತಿಯಿಂದ ಗ್ರಾಮಸ್ಥರೊಡನೆ ಪ್ರತಿಭಟನೆ ನಡೆಸಿದರು. ಇತ್ತೀಚೆಗೆ ಭೂಗಳ್ಳರ ಆವಳಿ ಹೆಚ್ಚಾಗುತ್ತಿದ್ದು, ನಕಲಿ ದಾಖಲೆಗಳ ಸೃಷ್ಠಿಕೋರರು ಸಹ ಹೆಚ್ಚಾಗುತ್ತಿದ್ದಾರೆ. ಸರಕಾರದಡಿಯಲ್ಲಿ ಸೇವೆ ಸಲ್ಲಿಸುವ […]
ಅಖಿಲ ಕರ್ನಾಟಕ ಡಾ. ಜಿ. ಪರಮೇಶ್ವರ್ ಯುವ ಸೈನ್ಯದ ವತಿಯಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೆಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆಭಾರತದ ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಸುಖಿ ರಾಜ್ಯದ ಪರಿಕಲ್ಪನೆಯು ನಮ್ಮ ಸಂವಿಧಾನದ ಆಶಯವಾಗಿದೆ .ಭಾರತದಲ್ಲಿ ಪ್ರತಿಯೊಬ್ಬ ಕಟ್ಟ ಕಡೆಯ ವ್ಯಕ್ತಿ ಸಂವಿಧಾನದ ಆಶಯಗಳನ್ನು ಈಡೇರಿಸಿಕೊಂಡು ಬದುಕು ಕಟ್ಟಿಕೊಂಡು ಜೀವನ ಸಾಗಿಸುವಂತ ಪರಿಸ್ಥಿತಿಯಲ್ಲಿ ಸುಮಾರು ಎರಡು ವರ್ಷಗಳಿಂದ ದೇಶದಲ್ಲಿ ಜನರು ನರಕದ ಜೀವನ […]
ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ವಿಚಾರ ನೆಲಮಂಗಲದಲ್ಲಿ ಸಚಿವ ಡಾ.ಅಶ್ವಥ್ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ…ರಾಜ್ಯದಲ್ಲಿ ಪ್ರತಿಯೊಬ್ಬರೂ ಪರಸ್ಪರ ಪ್ರೀತಿಸುವಂತಾಗಬೇಕು, ವೈ ಮನಸ್ಸು ಬಿಡಬೇಕು.ಬೆಳಗಾವಿ ಎಂದೆಂದೂ ಕರ್ನಾಟಕದ ಅವಿಭಾಜ್ಯ ಅಂಗ,ಇನ್ನೂ ರೀತಿಯಲ್ಲಿ ಮಾಡುತ್ತಿರುವುದು ದುರದೃಷ್ಟಕರ.ಗಲಾಟೆ ಪುಂಡಾಟಿಕೆ ಯಾವಾಗಲೂ ಪ್ರಯೋಜನಕ್ಕೆ ಬರಲ್ಲ ತೊಡೆ ತಟ್ಟೊದ್ರಿಂದ ಏನೂ ಆಗಲ್ಲ.ಈ ಎಂಇಎಸ್ ಪೌರುಷಗಳು ಕೇವಲ ತಾತ್ಕಾಲಿಕ.ಸದನ ನಡೆಯುವ ವೇಳೆ ಈ ರೀತಿಯಲ್ಲಿ ಹಾಗುವುದು ಸಾಮಾನ್ಯ.ಪುಂಡಾಟಿಕೆಯನ್ನ ನಾನು ಖಂಡಿಸುತ್ತೇನೆ..ಏನೇ ತಲೆಕೆಳಗಾದ್ರು ಏನೂ ಹಾಗಲ್ಲ ವಿಫಲ ಪ್ರಯತ್ನ ಮಾಡಿ ಮೈ […]
ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಪ್ರಕರಣ ದಾಖಲಾಗಿದ್ದು, ಈವರೆಗೆ 27 ಜನರನ್ನು ಬಂಧಿಸಲಾಗಿದೆ.ಬೆಂಗಳೂರಿನಲ್ಲಿ ಶಿವಾಜಿ ಮೂರ್ತಿಗೆ ಮಸಿ ಬಳಿದಿರುವ ಘಟನೆಯನ್ನು ನೆಪವಾಗಿಸಿಕೊಂಡು ಮಹಾರಾಷ್ಟ್ರ ಏಕೀಕರಣ ಸಮಿತಿ, ಶಿವಸೇನೆ ನೇತೃತ್ವದಲ್ಲಿ ಪುಂಢರು ಸಂಭಾಜಿ ವೃತ್ತದಲ್ಲಿ ಸೇರಿ ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಕಲ್ಲು ತೂರಾಟ ನಡೆಸಿ ಪೊಲೀಸ್ ವಾಹನ ಸೇರಿದಂತೆ 20ಕ್ಕೂ ಹೆಚ್ಚು ವಾಹನಗಳನ್ನು ಧ್ವಂಸ ಮಾಡಿದ್ದರು.ಈ ಸಂಬಂಧ ಖಡೇಬಜಾರ್, ಕ್ಯಾಂಪ್ ಹಾಗೂ ಮಾರ್ಕೆಟ್ ಪೊಲೀಸ್ ಠಾಣೆಗಳಲ್ಲಿ […]
ಅಪಾರ್ಟ್ಮೆಂಟ್ ಒಂದರ ಐದನೆ ಮಹಡಿಯಿಂದ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ನೀಲಾದ್ರಿ ಇನ್ವೆಸ್ಟ್ ಮೆಂಟ್ ಲೇಔಟ್ನಲ್ಲಿ ನಡೆದಿದೆ…ಇಲ್ಲಿನ ಅಪಾರ್ಟ್ಮೆಂಟ್ನ ಐದನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ,ದಿವ್ಯಾಂಶ್ ರೆಡ್ಡಿ (2) ಬಾಲಕ ಮೃತಪಟ್ಟಿದ್ದಾನೆ.ಬಾಡಿಗೆ ಮನೆ ವಿಚಾರಿಸಲು ಅಜ್ಜಿಯೊಂದಿಗೆ ತೆರೆಳಿದ್ದ ಮಗು ಅಪಾರ್ಟ್ಮೆಂಟ್ನ 5ನೇ ಮಹಡಿಯಲ್ಲಿ ಅಜ್ಜಿ ಮನೆ ನೋಡುತ್ತಿದ್ದರೆ, ದಿವ್ಯಾಂಶ್ ಬಾಲ್ಕನಿಯಲ್ಲಿ ಆಟವಾಡುತ್ತಿದ್ದ. ಆ ವೇಳೆ ಬಾಲ್ಕನಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ದಿವ್ಯಾಂಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಅಪಾರ್ಟ್ ಮೆಂಟ್ […]
ಬೆಳಗಾವಿ-ತಲವಾರ,ಬರ್ಚಿ ಹಿಡಿದುಕೊಂಡು ಬಂದ ಕಿಡಗೇಡಿಗಳು ರಾಯಣ್ಣ ಸರ್ಕಲ್ ನಲ್ಲಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯ ಮೇಲೆ ದಾಳಿ ಮಾಡಿ ಮೂರ್ತಿಯ ಮುಖವನ್ನು ಭಗ್ನಗೊಳಿಸಿ,ಖಡ್ಗವನ್ನು ಮುರಿದು ಮೂರ್ತಿಯ ಕೈಯನ್ನು ಧ್ವಂಸ ಮಾಡಿದ ಘಟನೆ ಮದ್ಯರಾತ್ರಿ ಅನಿಗೋಳದಲ್ಲಿ ನಡೆದಿದೆ..ತಡರಾತ್ರಿ ಏಕಾಏಕಿ ದಾಳಿ ಮಾಡಿದ ಕಿಡಗೇಡಿಗಳು ರಾಯಣ್ಣನ ಮೂರ್ತಿಯ ಮೇಲೆ ದಾಳಿ ಮಾಡಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಸಂಪೂರ್ಣವಾಗಿ ಭಗ್ನಗೊಳಿಸಿದ್ದಾರೆ.