ಬಹುಭಾಷಾ ನಟಿ ಪ್ರಣಿತಾ ಸುಭಾಷ್ ಮದುವೆಯಾದ ಬಳಿಕ ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದಾರೆ. ಫ್ಯಾಮಿಲಿ ಜೊತೆ ಖುಷಿಯಾಗಿ ಕಾಲ ಕಳೆಯುತ್ತಿರುವ ನಟಿ ಪ್ರಣಿತಾ ಕೆಲವು ತಿಂಗಳುಗಳ ಹಿಂದೆ ತಮ್ಮ ಪ್ರೆಗ್ನೆಸ್ಸಿಯನ್ನು ಅನೌನ್ಸ್ ಮಾಡಿದ್ದರು. ಆದಾದ ಬಳಿಕ ಇತ್ತಿಚಿಗಷ್ಟೇ ಅದ್ಧೂರಿಯಾಗಿ ಸೀಮಂತ ಕಾರ್ಯ ಕೂಡ ನೇರವೇರಿತ್ತು. ಸದ್ಯ ಈಗ ಪ್ರಣಿತಾ ಸುಭಾಷ್ ಬೇಬಿ ಬಂಪ್ ಪೋಟೊಶೂಟ್ ಮಾಡಿಸಿಕೊಂಡಿದ್ದಾರೆ. ಸ್ಕೈ ಬ್ಲೂ ಡ್ರೆಸ್‌ನಲ್ಲಿ ವಿಭಿನ್ನವಾಗಿ ಪೋಟೊಶೂಟ್ ಮಾಡಿಸಿದ್ದಾರೆ. ಪತಿ ನಿತಿನ್ ರಾಜು ಕೂಡ ಪತ್ನಿ […]

  ಇತ್ತೀಚಿನ ದಿನಗಳಲ್ಲಿ ಸೌತ್ ಸಿನಿಮಾಗಳ ಅಬ್ಬರದಿಂದಾಗಿ ಬಾಲಿವುಡ್ ಸಿನಿಮಾಗಳು ಮೂಲೆಗುಂಪಾಗಿದ್ದವು. ‘ಕೆಜಿಎಫ್‌ 2’, ‘ಪುಷ್ಪ’, ‘RRR’ ನಂತಹ ಸೌತ್ ಸ್ಟಾರ್‌ ಸಿನಿಮಾಗಳು ಬಾಲಿವುಡ್‌ ಅಂಗಳದಲ್ಲೂ ಆರ್ಭಟಿಸಿ ಬಾಲಿವುಡ್‌ನ ಸ್ಟಾರ್‌ ನಟರ ಸಿನಿಮಾಗಳನ್ನೇ ಹಿಂದಕ್ಕೆ ತಳ್ಳಿತ್ತು. ಕಳೆದ ಎರಡು ಮೂರು ತಿಂಗಳಲ್ಲಿ ರಿಲೀಸ್‌ ಆದ ಯಾವುದೇ ಬಾಲಿವುಡ್ ಸಿನಿಮಾಗಳು ಹಿಟ್ ಕಾಣಲಿಲ್ಲ. ಅಲ್ಲದೆ ಸೌತ್ ಸಿನಿಮಾಗಳ ಆರ್ಭಟದಿಂದ ಈ ಸಿನಿಮಾಗಳ ಕಡೆ ಪ್ರೇಕ್ಷಕರು ಕೂಡ ಹೆಚ್ಚು ಆಸಕ್ತಿ ತೋರಲಿಲ್ಲ. ಹೀಗಾಗಿ […]

  ನವದೆಹಲಿ, ಮೇ 23: ಭಾರತದಲ್ಲಿ ಚಿನ್ನ-ಬೆಳ್ಳಿ ಬೆಲೆಯಲ್ಲಿನ ಏರಿಳಿತ ಮುಂದುವರಿದಿದೆ. ದೇಶದಲ್ಲಿ ಭಾನುವಾರ ಸ್ಥಿರತೆ ಕಾಯ್ದುಗೊಂಡಿದ್ದ ಚಿನ್ನದ ಬೆಲೆಯು ಸೋಮವಾರ 100 ರೂಪಾಯಿ ಏರಿಕೆಯಾಗಿದೆ. ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 47,150 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯ 51,430 ರೂಪಾಯಿ ಆಗಿದೆ. ಬೆಳ್ಳಿ ದರದಲ್ಲೂ 400 ರೂಪಾಯಿ ಏರಿಕೆಯಾಗಿದ್ದು, ಒಂದು ಕೆಜಿ ಬೆಳ್ಳಿಗೆ 61,800 ರೂಪಾಯಿ […]

  ಬೆಂಗಳೂರು: ದಲಿತರು, ಹಿಂದುಳಿದವರು, ಹಿಂದೂಗಳು, ಕ್ರೈಸ್ತರೂ ಗೋಮಾಂಸ ತಿನ್ನುತ್ತಾರೆ. ಹಾಗಾಗಿ ಗೋ ಮಾಂಸ ನಿಷೇಧ ಮಾಡಬಾರದೆಂದು ಸಿದ್ದರಾಮಯ್ಯ ಹೇಳಿದ್ದಾರೆ. ಬೇಕಾದರೆ ಅವರು ಗೋಮಾಂಸ ತಿನ್ನಲಿ. ಆದರೆ ವಕೀಲಿಕೆ ಮಾಡುವುದು ಬೇಡ ಎಂದು ಬಿಜೆಪಿ ರಾಜ್ಯ ವಕ್ತಾರ ಛಲವಾದಿ ನಾರಾಯಣಸ್ವಾಮಿ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ನಿರ್ಧಾರ ತೆಗೆದುಕೊಂಡಾಗ ಅದಕ್ಕೆ ಬೆಂಬಲ ನೀಡಬೇಕು. ಆದರೆ ಅದನ್ನು ವಿರೋಧಿಸುವುದು ಬೇಡ ಎಂದರು. ಸಿದ್ದರಾಮಯ್ಯ ದೇವಸ್ಥಾನಕ್ಕೆ‌ ಹೋಗುವಾಗ ಮಾಂಸ […]

ಜೆದ್ದಾ: ಎರಡು ವರ್ಷಗಳ ಬಳಿಕ ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ ಎನ್ನುವಾಗಲೇ ಮತ್ತೊಮ್ಮೆ ವೈರಸ್​ ಭೀತಿ ಎದುರಾಗಿದೆ. ಆದರೆ ಈ ಬಾರಿ ಎಚ್ಚೆತ್ತುಕೊಂಡಿರುವ ಕೆಲ ರಾಷ್ಟ್ರಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿವೆ. ಈ ನಿಟ್ಟಿನಲ್ಲಿ ಸೌದಿ ಅರೇಬಿಯಾ ಕೂಡ ನಿರ್ಧಾರ ಕೈಗೊಂಡಿದ್ದು, ಕರೊನಾ 4ನೇ ಅಲೆಯನ್ನು ತಡೆಗಟ್ಟುವ ಉದ್ದೇಶದಿಂದ ಸೋಂಕು ಕಂಡುಬರುತ್ತಿರುವ ರಾಷ್ಟ್ರಗಳ ಪ್ರವೇಶಕ್ಕೆ ನಿರ್ಬಂಧ ಹೇರಲು ಮುಂದಾಗಿದೆ. ಈ ನಿಟ್ಟಿನಲ್ಲಿ ಭಾರತ ಸೇರಿದಂತೆ 16 ರಾಷ್ಟ್ರಗಳಿಗೆ ನಿರ್ಬಂಧ ಹೇರಿದೆ. ಇಲ್ಲಿನ ಜನರು […]

ಬೆಂಗಳೂರು: ಪರಿಶಿಷ್ಟ ಪಂಗಡ (ಎಸ್​ಟಿ) ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲು ಪ್ರಮಾಣ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ. ನ್ಯಾಯಮೂರ್ತಿ ಸುಭಾಷ್ ಆಡಿ ನೇತೃತ್ವದ ಸಮಿತಿ ವರದಿ ಸಲ್ಲಿಸಿದ ನಂತರ ಅನುಷ್ಠಾನಕ್ಕೆ ತರಲಿದೆ ಎಂದು ರಾಜ್ಯ ಬಿಜೆಪಿ ಎಸ್​ಟಿ ಮೋರ್ಚಾ ಅಧ್ಯಕ್ಷರೂ ಆದ ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್ ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತಿಪ್ಪರಾಜು ಹವಾಲ್ದಾರ್, ಎಸ್​ಟಿ ಮೀಸಲು ಪ್ರಮಾಣ ಶೇ.7.5.ಕ್ಕೆ ಏರಿಸಲು ಒತ್ತಾಯಿಸಿ […]

  ಬೆಂಗಳೂರು: ಮೇಲ್ಮನೆ ಟಿಕೆಟ್ ವಿಚಾರದ ಬಗ್ಗೆ ಪಕ್ಷದ ಅಧ್ಯಕ್ಷರು, ವಿಧಾನಸಭೆಯ ವಿಪಕ್ಷ ನಾಯಕರ ಜೊತೆ ಚರ್ಚೆ ಮಾಡಿರುತ್ತಾರೆ. ಅವರಿಗೆ ಅದರ ಬಗ್ಗೆ ಗೊತ್ತಿರುತ್ತದೆ. ನನಗೆ ಅದರ ಬಗ್ಗೆ ಯಾವುದೂ ಗೊತ್ತಿಲ್ಲ. ಅವರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಹೇಳಿದರು. ಎಸ್.ಆರ್.ಪಾಟೀಲ್ ಅವರಿಗೆ ಮೇಲ್ಮನೆ ಟಿಕೆಟ್ ನೀಡಲು ವಿರೋಧ ಕುರಿತಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ವಿರೋಧ ಮಾಡುವ ಬಗ್ಗೆ ಪ್ರಶ್ನೆ ಉದ್ಬವಿಸುವುದಿಲ್ಲ. ಈ […]

ಚಂಡೀಗಢ: ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸದ್ಯ ಜೈಲಿನಲ್ಲಿದ್ದಾರೆ. ಕಳೆದ 35 ವರ್ಷದ ಹಿಂದಿನ ಕೇಸ್ ನಲ್ಲಿ ಜೈಲುಪಾಲಾಗಿದ್ದು, ಸದ್ಯ ಅನಾರೋಗ್ಯದ ಕಾರಣ ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ. ವೇಯ್ಟ್ ಅಲರ್ಜಿಯಿಂದ ಬಳಲುತ್ತಿರುವ ನವಜೋತ್ ಸಿಂಗ್ ಸಿಧು, ಪಟಿಯಾಲ ಸೆಂಟ್ರಲ್ ಜೈಲಿನಿಂದ ರಾಜೇಂದ್ರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಸಿಧು ಪರ ವಕೀಲರು ಮಾಹಿತಿ ನೀಡಿದ್ದಾರೆ. ನವಜೋತ್ ಸಿಂಗ್ ಸಿಧು, 1988ರಲ್ಲಿ ರಸ್ತೆ ಮಧ್ಯೆ ನಿಲ್ಲಿಸಲಾಗಿದ್ದ ಜಿಪ್ಸಿಯಲ್ಲಿ ಕುಳಿತಿದ್ದರು. […]

  ಬೆಂಗಳೂರು, ಮೇ 23- ವಿಧಾನ ಪರಿಷತ್ ಚುನಾವಣೆಯಲ್ಲಿ ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿದ್ದು, ಹೊಸ ಹೊಸ ಹೆಸರುಗಳು ಪ್ರಸ್ತಾಪವಾಗುತ್ತಿದೆ. ರಾಜ್ಯಸಭೆಗೆ ಬಹುತೇಕ ಜೈರಾಮ್ ರಮೇಶ್ ಮರು ಆಯ್ಕೆಯಾಗುವ ಸಾಧ್ಯತೆ ಇದೆ. ವಿಧಾನ ಪರಿಷತ್‍ನ ಎರಡು ಸ್ಥಾನಗಳಿಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕ್ರಿಶ್ಚಿಯನ್ ಸಮುದಾಯದ ಐವಾನ್ ಡಿ ಸೋಜಾ, ತಮ್ಮ ಆಪ್ತರಾದ ವಿ.ಎಸ್.ಉಗ್ರಪ್ಪ, ಮಾಜಿ ಸಚಿವರ ಎಂ.ಆರ್.ಸೀತಾರಾಮ್ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಎಂ.ಆರ್.ಸೀತಾರಾಂ ಅವರಿಗೆ ಅವಕಾಶ ನೀಡುವುದರಿಂದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ […]

  ದ್ವೀಪ ರಾಷ್ಟ್ರ  ಶ್ರೀಲಂಕಾ  ವಿನಾಶಕಾರಿ ಆರ್ಥಿಕ ಬಿಕ್ಕಟ್ಟಿನೊಂದಿಗೆ   ಹೋರಾಡುತ್ತಿದ್ದು, ಪರಿಸ್ಥಿತಿ ದಿನೇ ದಿನೇ ಬಿಗಡಾಯಿಸುತ್ತಲೇ ಇದೆ. ಅಗತ್ಯ ವಸ್ತುಗಳ  ಬೆಲೆ   ಗಗನಕ್ಕೇರಿದೆ. ಅವಶ್ಯಕ ವಸ್ತುಗಳಾದ ಅಕ್ಕಿ (Rice), ಹಾಲಿನ ಪುಡಿ  ಬೇಳೆಕಾಳು   ಎಲ್ಪಿಜಿ  , ಸಕ್ಕರೆ   ಸೇರಿದಂತೆ ಹಲವು ದಿನಬಳಕೆಯ ವಸ್ತುಗಳ ಬೆಲೆಯಲ್ಲಿ ಧಿಡೀರ್ ಏರಿಕೆಯಾಗಿದೆ. ಆರ್ಥಿಕ ಪರಿಸ್ಥಿತಿ ಜೊತೆಗೆ ವಿದ್ಯುತ್, ಇಂಧನ, ಅನಿಲ, ಅಡುಗೆ ಎಣ್ಣೆ, ಸಿಲಿಂಡರ್ ಬೆಲೆಯೂ ಕೆಗೆಟಕುವ ಯಾವುದೇ ಲಕ್ಷಣಗಳನ್ನು ತೋರುತ್ತಿಲ್ಲ. ಆಹಾರ ಕೊರತೆ […]

Advertisement

Wordpress Social Share Plugin powered by Ultimatelysocial