ಮೈಸೂರು: ರಾಜ್ಯಾದ್ಯಂತ ನಿರಂತರ ಮಳೆಯಿಂದ ಬೆಳೆ ಹಾನಿಯಾದ ಹಿನ್ನೆಲೆಯಲ್ಲಿ ಕೃಷಿ ಅಧಿಕಾರಿಗಳು ಹೊಲಗಳಿಗೆ ಹೋಗಿ ಪರಿಶೀಲನೆ ನಡೆಸಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕೃಷಿ ಅಧಿಕಾರಿಗಳು ಜಮೀನಿಗೆ ತೆರಳದಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಅಧಿಕಾರಿಗಳು ಮಳೆಹಾನಿ ಬಗ್ಗೆ ಮಾಹಿತಿ ಸಂಗ್ರಹಿಸಬೇಕೆಂದು ಸಚಿವರು ಸೂಚನೆ ನೀಡಿದ್ದಾರೆ. ಬೆಳೆಹಾನಿ ಮಾಹಿತಿ ಸಂಗ್ರಹಿಸಿದ ನಂತರ ಸೂಕ್ತ ಪರಿಹಾರ ನೀಡಲಾಗುತ್ತದೆ. ರೈತರು ಯಾವುದೇ ಆತಂಕಕ್ಕೆ ಒಳಗಾಗಬಾರದು. ರಾಜ್ಯ ಸರ್ಕಾರ ಬೆಳೆ […]
ಇತರೆ
ಬೆಂಗಳೂರು: ಪತ್ನಿಗೆ ಕಿರುಕುಳ ನೀಡಿದ ಆರೋಪದಡಿ ಐಪಿಎಸ್ ಅಧಿಕಾರಿ ರವಿ.ಡಿ.ಚೆನ್ನಣ್ಣವರ್ ಸಹೋದರ ರಾಘವೇಂದ್ರ ಚನ್ನಣ್ಣವರ್ ವಿರುದ್ಧ ಬೆಂಗಳೂರಿನ ಚಂದ್ರಾಲೇಔಟ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. 2015ರಲ್ಲಿ ರಾಘವೇಂದ್ರ ಚನ್ನಣ್ಣವರ್ ರೋಜಾ ಎಂಬುವವರನ್ನು ವಿವಾಹವಾಗಿದ್ದು, ರವಿ ಡಿ.ಚನ್ನಣ್ಣವರ್ ಮುಂದೆ ನಿಂತು ಮದುವೆ ಮಾಡಿಸಿದ್ದರು. ಆದರೆ ರೋಜಾ ಅವರನ್ನು ಮದುವೆಯಾದ ಒಂದೇ ವರ್ಷಕ್ಕೆ ಬಿಟ್ಟು ಬೇರೊಂದು ಮಹಿಳೆಯೊಂದಿಗೆ ವಿವಾಹವಾಗಿ ಸಂಸಾರ ನಡೆಸಿದ್ದ. ಈ ಬಗ್ಗೆ ಪ್ರಶ್ನಿಸಿದಾಗ ತಿದ್ದಿಕೊಳ್ಳಲು ಸಮಾಯವಕಾಶ ಕೊಡು ಎಂದು […]
ಶಂಕರ್ ಷಣ್ಮುಗಂ, ಎಸ್. ಶಂಕರ್ ಅಥವಾ ಅವರ ಇನ್ನೊಂದು ಹೆಸರು ಶಂಕರ್ ಎಂದು ಮನ್ನಣೆ ಪಡೆದಿದ್ದಾರೆ. ಇವರು ತಮಿಳು ಚಿತ್ರರಂಗದಲ್ಲಿ ಪ್ರಧಾನವಾಗಿ ಕೆಲಸ ಮಾಡುವ ಭಾರತೀಯ ಚಲನಚಿತ್ರ ನಿರ್ಮಾಪಕರಾಗಿದ್ದಾರೆ. ಅವರು ಜಂಟಲ್ಮ್ಯಾನ್ ಚಿತ್ರದಲ್ಲಿ ನಿರ್ದೇಶಕರಾಗಿ ತಮ್ಮ ಚೊಚ್ಚಲ ಪ್ರವೇಶ ಮಾಡಿದರು, ಇದಕ್ಕಾಗಿ ಶಂಕರ್ ಅವರು ಫಿಲ್ಮ್ಫೇರ್ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಮತ್ತು ಅತ್ಯುತ್ತಮ ನಿರ್ದೇಶಕರಿಗಾಗಿ ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಸಹ ಗೆದ್ದು ಕೊಂಡಿದ್ದಾರೆ. ಹೌದು ಇದೀಗ ಅದೇ ನಿರ್ದೇಶಕ […]
ಶಿವರಾಜ್ಕುಮಾರ್ ಸುಮ್ಮನೆ ಕೂತಿದ್ದು ನೋಡೇ ಇಲ್ಲ. ಒಂದಲ್ಲ ಒಂದು ಸಿನಿಮಾದಲ್ಲಿ ಬ್ಯುಸಿಯಾಗಿರುತ್ತಾರೆ. ಪ್ರತಿ ಶೂಟಿಂಗ್ ಮಾಡಲೇಬೇಕು. ಈ ಕಾರಣಕ್ಕೆ ಸೆಂಚುರಿ ಸ್ಟಾರ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಈಗ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಇದು ಶಿವಣ್ಣನ ಅಭಿಮಾನಿಗಳಿಗೆ ವಿಶೇಷ ಸಿನಿಮಾ ಆಗಲಿದೆ. ‘ಅವನೇ ಶ್ರೀಮನ್ನಾರಾಯಣ’ ಸಿನಿಮಾದ ನಿರ್ದೇಶಕ ಸಚಿನ್ ರವಿ ಸೆಂಚುರಿ ಸ್ಟಾರ್ ಶಿವಣ್ಣನಿಗೆ ಸಿನಿಮಾ ಮಾಡೋದು ಗೊತ್ತಿತ್ತು. ಆದರೆ, ಶಿವಣ್ಣ ಹೇಗೆ ಕಾಣಿಸಿಕೊಳ್ಳಲಿದ್ದಾರೆ? […]
ಬಾಲಿವುಡ್ನಲ್ಲಿ ಹಲವು ವರ್ಷಗಳಿಂದ ಪ್ರಣಯ ಪಕ್ಷಿಗಳಂತೆ ಸುತ್ತುತ್ತಿರುವ ಮಲೈಕಾ ಮತ್ತು ಅರ್ಜುನ್ ಲವ್ ಕಹಾನಿ ಎಲ್ಲರಿಗೂ ಗೊತ್ತೇ ಇದೆ. ಮಲೈಕಾ ಅರೋರಾ ಮತ್ತು ಅರ್ಜುನ್ ಕಪೂರ್ ನಾಲ್ಕು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದಾರೆ. ಈ ಜೋಡಿ ಈಗ ತಮ್ಮ ಸಂಬಂಧವನ್ನು ಮದುವೆಯಲ್ಲಿ ಬಂಧಿಸಲು ಹೊರಟಿದೆ. ಬಾಲಿವುಡ್ನಲ್ಲಿ ಈಗ ಇದೇ ಸುದ್ದಿ ಆಗಿ ಬಿಟ್ಟಿದೆ. ಒಬ್ಬರಾಗೇ ಬಾಲಿವುಡ್ ತಾರೆಯರು ಮದುವೆಯಾಗುತ್ತಿದ್ದಾರೆ. ಈಗ ಮಲೈಕಾ ಮತ್ತು ಅರ್ಜುನ್ ಸರದಿ ಎನ್ನಲಾಗುತ್ತಿದೆ. ಬಾಲಿವುಡ್ನ ಹಲವು ಪೋರ್ಟಲ್ನಲ್ಲಿ […]
ವಿಜಯ್ ದೇವರಕೊಂಡ ಮತ್ತು ಸಮಂತಾ ನಟನೆಯ `ಖುಷಿ’ ಚಿತ್ರದ ಫಸ್ಟ್ ಲುಕ್ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸುದ್ದಿ ಮಾಡುತ್ತಿದೆ. ಈಗ ವಿಜಯ್ ನಟನೆಯ `ಖುಷಿ’ ಚಿತ್ರದ ವಿಚಾರವಾಗಿ ಪವನ್ ಕಲ್ಯಾಣ ಫ್ಯಾನ್ಸ್ ಫುಲ್ ಗರಂ ಆಗಿದ್ದಾರೆ. ಟಾಲಿವುಡ್ನಲ್ಲಿ ಸಖತ್ ಸೌಂಡ್ ಮಾಡುತ್ತಿರೋ ವಿಜಯ್ ದೇವರಕೊಂಡ ಮತ್ತು ಸಮಂತಾ ನಟನೆಯ `ಖುಷಿ’ ಸಿನಿಮಾ ಮೇಲೆ ಪವನ್ ಕಲ್ಯಾಣ್ ಫ್ಯಾನ್ಸ್ ಮುನಿಸಿಕೊಂಡಿದ್ದಾರೆ. ವಿಜಯ್ ಅಭಿನಯದ `ಖುಷಿ’ ಟೈಟಲ್ ಅನೌನ್ಸ್ ಆಗುತ್ತಿದ್ದಂತೆ ಪವನ್ ಕಲ್ಯಾಣ […]
ಬಹುಭಾಷಾ ತಾರೆ ಪ್ರಿಯಾಂಕಾ ಚೋಪ್ರಾ ಬಾಲಿವುಡ್ ಹಾಗೂ ಹಾಲಿವುಡ್ನ ಬಹುಬೇಡಿಕೆಯ ನಟಿಯಾಗಿದ್ದಾರೆ. ಸದ್ಯ ಈಗ ಹಾಲಿವುಡ್ ಸಿನಿಮಾಗಳಲ್ಲಿ ಹೆಚ್ಚು ಸಕ್ರಿಯರಾಗಿರುವ ಅವರು ಹೆಚ್ಚಾಗಿ ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರುತ್ತಾರೆ. ಆಗಾಗ ಹೊಸ ಹೊಸ ಪೋಟೊಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿರುತ್ತಾರೆ. ಸದ್ಯ ಪ್ರಿಯಾಂಕಾ ಚೋಪ್ರಾ ಈಗ ಹಂಚಿಕೊಂಡಿರುವ ಪೋಟೊವೊಂದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಪ್ರಸ್ತುತ ‘ಸಿಟಾಡೆಲ್’ನ ಚಿತ್ರೀಕರಣದಲ್ಲಿ ಪ್ರಿಯಾಂಕಾ ಬ್ಯುಸಿಯಾಗಿದ್ದಾರೆ. ಸದ್ಯ ಆ ಚಿತ್ರೀಕರಣದ ಸೆಟ್ನಲ್ಲಿರುವ ಪೋಟೊವೊಂದನ್ನು ತಮ್ಮ […]
ಧಾರಾವಾಹಿ ಪ್ರಿಯರಿಗೆ ಸಿಹಿಸುದ್ದಿ. ವಿನೂತನ ಧಾರಾವಾಹಿಗಳನ್ನು ಹಾಗೂ ವಿಭಿನ್ನ ಶೋಗಳನ್ನು ನೋಡುಗರಿಗೆ ನೀಡುತ್ತಿರುವ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಇದೇ ಮೇ 23 ರಿಂದ ಆರಂಭವಾಗಲಿದೆ. ಸಂಜೆ 7 ಗಂಟೆಗೆ ಈ ಧಾರಾವಾಹಿ ಪ್ರಸಾರವಾಗಲಿದೆ. ಖ್ಯಾತ ನಟಿ ಪ್ರಿಯಾಂಕ ಉಪೇಂದ್ರ ಈ ಧಾರಾವಾಹಿಯ ರಾಯಭಾರಿಯಾಗಿದ್ದಾರೆ. ನನ್ನ ಸ್ನೇಹಿತೆ ಉಷಾ ಅವರು ಈ ಧಾರಾವಾಹಿಯ ಕುರಿತು ಹೇಳಿದರು. ನಂತರ ಕಥೆ ಕೇಳಿದೆ. ಇಷ್ಟವಾಯಿತು. ರಾಯಭಾರಿಯಾಗಲು ಒಪ್ಪಿಕೊಂಡೆ. ಒಳ್ಳೆಯ ಕೌಟುಂಬಿಕ ಧಾರಾವಾಹಿ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ […]
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2,364 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 10 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 524303 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 15419 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2582 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ […]
ನವದೆಹಲಿ: ಜನಸಾಮಾನ್ಯರ ಮೇಲೆ ಬೆಲೆ ಏರಿಕೆ ಬರೆಯ ಗಾಯ ಇನ್ನೂ ಹಸಿಯಾಗಿರುವಗಲೇ ಮತ್ತೊಂದು ಬರೆ ಬಿದ್ದಿದೆ. ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಇಂದು (ಮೇ.19) ಮತ್ತೆ 3.50 ರೂಪಾಯಿ ಹೆಚ್ಚಳವಾಗಿದೆ. ಗೃಹ ಬಳಕೆ ಮಾತ್ರವಲ್ಲದೆ, ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ 8 ರೂಪಾಯಿ ಹೆಚ್ಚಳವಾಗಿದೆ. ಈ ತಿಂಗಳಲ್ಲಿ ಎರಡನೇ ಬಾರಿಗೆ ಬೆಲೆ ಏರಿಕೆಯಾಗಿದ್ದು, ಜನರ ಜೇಬಿಗೆ ಮತ್ತಷ್ಟು ಹೊರೆಯಾಗಲಿದೆ. ಮೇ. 7ರಂದು 50 ರೂಪಾಯಿ ಹೆಚ್ಚಳವಾಗಿತ್ತು. ಇಂದು ಮತ್ತೆ […]