ಬೆಂಗಳೂರು(ಫೆ.9): ಟರ್ಕಿ, ಸಿರಿಯಾ ದೇಶಗಳಲ್ಲಿ ಈಗಾಗಲೇ ನರಕ ಸದೃಶ ದೃಶ್ಯಗಳು ಒಂದಾದ ಮೇಲೊಂದು ಅಪ್ಪಳಿಸುತ್ತಲೇ ಇವೆ. ಜನರ ಪಾಡು ಹೇಳೋಕೆ, ನೋಡೋದಕ್ಕೆ ಅಸಾಧ್ಯ ಎಂಬ ಪರಿಸ್ಥಿತಿ ಉಂಟಾಗಿದೆ. ಇದರಿಂದ ವಿವಿಧ ದೇಶಗಳು ಟರ್ಕಿಯತ್ತ ಮುಖ ಮಾಡಿದ್ದು, ಭಾರತವೂ ನೆರವಿನ ಹಸ್ತ ಚಾಚಿದ್ದು, ಭೂಕಂಪಪೀಡಿತ ಟರ್ಕಿ ದೇಶಕ್ಕೆ ರಕ್ಷಣಾ ಕಾರ್ಯದಲ್ಲಿ ನೆರವಾಗಲು ಭಾರತದಿಂದ ಐದನೇ ವಿಮಾನ ಹಾರಿ ಹೋಗಲಿದೆ. ಇದರಲ್ಲಿ ಎನ್​ಡಿಆರ್​ಎಫ್ ತಜ್ಞರು, ಪರಿಹಾರ ಸಾಮಗ್ರಿ ಇತ್ಯಾದಿಯನ್ನು ಕಳುಹಿಸಿಕೊಡಲಾಗುತ್ತಿದೆ. ಈಗಾಗಲೇ ಟರ್ಕಿ […]

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಪಾವತಿಗೆ ನೀಡಲಾದ ಶೇಕಡ 50ರಷ್ಟು ರಿಯಾಯಿತಿ ನಾಳೆ ಕೊನೆಯಾಗಲಿದೆ. ಫೆಬ್ರವರಿ 11 ಕ್ಕೆ ಶೇಕಡ 50ರಷ್ಟು ರಿಯಾಯಿತಿ ಅವಧಿ ಮುಕ್ತಾಯವಾಗಲಿದ್ದು, ಅವಧಿ ವಿಸ್ತರಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಇಲಾಖೆ ಆಯುಕ್ತ ಸಿದ್ದರಾಮಪ್ಪ ಹೇಳಿದ್ದಾರೆ. ಪಾನಮತ್ತ ಚಾಲನೆ ಹೊರತಾಗಿ ಉಳಿದೆಲ್ಲ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಫೆಬ್ರವರಿ 11ರವರೆಗೆ ಶೇಕಡ 50ರಷ್ಟು ರಿಯಾಯಿತಿ ನೀಡಿ ದಂಡಪಾವತಿಸಲು ಆದೇಶ ಹೊರಡಿಸಲಾಗಿತ್ತು. ಫೆಬ್ರವರಿ 11 […]

ಬೆಂಗಳೂರು : ಹಿರಿಯ ರಾಜಕಾರಣಿ ಟಿ. ಜಾನ್ (92) ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಂದು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೇರಳ ಮೂಲದ ಟಿ.ಜಾನ್ ಕೊಡುಗೈ ದಾನಿ ಎಂದೇ ಖ್ಯಾತರಾಗಿದ್ದರು. ಟಿ ಜಾನ್ ಅವರು ಕಷ್ಟದಲ್ಲಿರುವ ಸಹಾಯ ಮಾಡುವ ಮೂಲಕ ಅಪಾರ ಜನಮನ್ನಣೆಗಳಿಸಿದ್ದರು. ಎಸ್ ಎಂ ಕೃಷ್ಣ ಸಂಪುಟದಲ್ಲಿ ಸಚಿವರಾಗಿದ್ದರು. ಅಬಕಾರಿ ಉದ್ಯಮದ ಮೂಲಕ ಹೆಸರು ಪ್ರಸಿದ್ದಿ ಪಡೆದಿದ್ದರು. ಶಿಕ್ಷಣ ಸಂಸ್ಥೆಗಳು. ರೆಸಾರ್ಟ್ ಗಳನ್ನೂ ಆರಂಭಿಸಿ ಜನರ ಸೇವೆ ಮಾಡಿದ್ದ […]

  ಹೊಸದಿಲ್ಲಿ,ಫೆ.9: ಗುರುವಾರ ರಾಜ್ಯಸಭೆಯಲ್ಲಿ ಪ್ರತಿಪಕ್ಷ ಸದಸ್ಯರಿಂದ ‘ಮೋದಿ-ಅದಾನಿ ಭಾಯಿ ಭಾಯಿ’ ಘೋಷಣೆಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗಳಿಗೆ ಉತ್ತರಿಸಿದರು. ಕೇಂದ್ರ ಸರಕಾರವು ಅದಾನಿ ಗ್ರೂಪ್‌(Adani Group)ಗೆ ಒಲವು ತೋರಿದೆ ಎಂಬ ಆರೋಪಗಳಿಗೆ ಪ್ರಧಾನಿಯವರು ಉತ್ತರಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮತ್ತು ಇತರ ಪ್ರತಿಪಕ್ಷಗಳು ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಭಟನೆಗಳನ್ನು ನಡೆಸುತ್ತಿವೆ. ಪ್ರತಿಪಕ್ಷ ಸಂಸದರ ಪ್ರತಿಭಟನೆಗಳ ನಡುವೆಯೇ ಮೋದಿ ತನ್ನ […]

ಲಖನೌ: ಪ್ರಧಾನ ಮಂತ್ರಿ ಆವಾಸ್​ ಯೋಜನೆ (ಪಿಎಂಎವೈ)ಯ ಹಣ ಸ್ವೀಕರಿಸಿದ ಬಳಿಕ ನಾಲ್ವರು ವಿವಾಹಿತ ಮಹಿಳೆಯರು ತಮ್ಮ ಗಂಡಂದಿರಿಗೆ ಕೈಕೊಟ್ಟು ಲವರ್ಸ್​ ಜೊತೆ ಎಸ್ಕೇಪ್​ ಆಗಿರುವ ವಿಚಿತ್ರ ಪ್ರಕರಣ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ. ಪಿಎಂಎವೈ ಕೇಂದ್ರೀಯ ಯೋಜನೆಯಾಗಿದ್ದು, ಬಡವರಲ್ಲಿ ನಗರ ವಸತಿ ಕೊರತೆಯನ್ನು ಪರಿಹರಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯಡಿ ಸರ್ಕಾರವು ಫಲಾನುಭವಿಗಳ ಖಾತೆಗಳಿಗೆ ಹಣವನ್ನು ವರ್ಗಾಯಿಸುತ್ತದೆ. ಇದರಿಂದ ಅವರು ಮನೆ ಹೊಂದಬಹುದು. ಈ ಯೋಜನೆಯಡಿ ಕೇಂದ್ರ ಸರ್ಕಾರವು ಕುಟುಂಬದ […]

  ದಾವಣಗೆರೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ತಾವು ಸಿಎಂ ಆದ ವಿಚಾರವನ್ನು ಬಿಚ್ಚಿಟ್ಟಿದ್ದಾರೆ. ದಾವಣಗೆರೆಯ ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಜಾತ್ರೆಯಲ್ಲಿ ಗುರುವಾರ ಮಾತನಾಡಿದ ಅವರು, ‘ನಾನೇನು ಬಯಸಿ ಬಯಸಿ ಸಿಎಂ ಆದವನಲ್ಲ. ಪ್ರಧಾನಿ ಮೋದಿ ಹಾಗೂ ಜನರ ಆಶೀರ್ವಾದದಿಂದ ಸಿಎಂ ಆಗಿದ್ದೇನೆ’ ಎಂದು ಹೇಳಿದರು. ಸಿಎಂ ಆದ ವಿಚಾರ ಬಿಚ್ಚಿಟ್ಟ ಬೊಮ್ಮಾಯಿಯವರು ಈ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಹೆಸರು ಹೇಳಲು ಮರೆತರು. ‘ನಿಮ್ಮ ಆಶೀರ್ವಾದ ವ್ಯರ್ಥವಾಗಲು ಬಿಡುವುದಿಲ್ಲ. ನನ್ನ […]

ಬೆಂಗಳೂರು : ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ )ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ‘ಒಂದು ಅಂಕ’ ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಬಿ.ಸಿ ನಾಗೇಶ್ ( Minister BC Nagesh ) ಅವರು, 2023ರ ಮಾರ್ಚ್‌ನಲ್ಲಿ ನಡೆಯುವ ‘ವಾರ್ಷಿಕ ಪರೀಕ್ಷೆ’ಯಿಂದ ಈ ಹೊಸ ನಿಯಮ ಅನ್ವಯವಾಗಲಿದೆ. […]

ಅಂಕಾರಾ/ಜಕಾರ್ತಾ:ಟರ್ಕಿ ಮತ್ತು ಸಿರಿಯಾದಲ್ಲಿ ಭೂಕಂಪ ಉಂಟಾಗಿ ಗುರುವಾರಕ್ಕೆ ಮೂರು ದಿನಗಳು ಪೂರ್ತಿಯಾಗಿವೆ. ಎರಡು ದೇಶಗಳಲ್ಲಿ ಅಸುನೀಗಿದವರ ಸಂಖ್ಯೆ 19,300ನ್ನು ದಾಟಿವೆ. ಟರ್ಕಿಯ ಪ್ರಧಾನ ನಗರ ಅಂಕಾರ ಸೇರಿದಂತೆ ಹಲವೆಡೆ ಇನ್ನೂ ರಕ್ಷಣೆ ಮತ್ತು ಪರಿಹಾರ ಕಾರ್ಯ ಚುರುಕುಗೊಂಡಿಲ್ಲ. ಹಲವೆಡೆ ಜನರು ಇನ್ನೂ ಕೂಡ ಕುಸಿದ ಬಿದ್ದ ಕಟ್ಟಡಗಳ ಅವಶೇಷಗಳ ಎಡೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಹಲವರನ್ನು ಜೀವಂತವಾಗಿ ಪಾರು ಮಾಡಲಾಗಿದೆ. ಇದರ ನಡುವೆಯೇ, ಟರ್ಕಿಯ ಸರ್ಕಾರ […]

  ಕೊಪ್ಪಳ: ಚುನಾವಣೆ ಬಂದಾಗ ರೆಸಾರ್ಟ್​ ಶಬ್ದ ಕೇಳಿಸಿದರೆ ಸಾಕು, ಕಿವಿಗಳು ನೆಟ್ಟಗಾಗುತ್ತವೆ. ರಾಜಕೀಯದಿಂದ ಹಿಡಿದು ಅನೈತಿಕ ಚಟುವಟಿಕೆಗಳಿಗೆ ರೆಸಾರ್ಟ್​ಗಳ ಬಳಕೆಯ ಬಗ್ಗೆ ಜನರು ಹೆಚ್ಚಾಗಿ ಕೇಳಿರುವುದು ಇದಕ್ಕೆ ಕಾರಣ ಎಂದು ಹೇಳಬಹುದೋ ಏನೋ. ಇದೀಗ ಅಧಿಕಾರಿಗಳು 60ಕ್ಕೂ ಹೆಚ್ಚು ಅನಧಿಕೃತ ರೆಸಾರ್ಟ್​ಗಳ ಮೇಲೆ ದಾಳಿ ಮಾಡಿದ್ದು ಕಟ್ಟಡಗಳನ್ನು ತೆರವುಗೊಳಿಸುವಂತೆ ಆದೇಶಿಸಿ ಮಾಲೀಕರಿಗೆ ಚುರುಕು ಮುಟ್ಟಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಸಣಾಪೂರ, ಜಂಗ್ಲಿ, ರಾಂಪೂರ, ಹನುಮನಹಳ್ಳಿ, ಮಲ್ಲಾಪೂರ, […]

ಸುಳ್ಯ: ಮದುವೆಗೆ ಎಲ್ಲ ಸಿದ್ಧತೆಗಳನ್ನು ನಡೆಸಿ ಮದುವೆ ಸಭಾಭವನದಲ್ಲಿ ವಧುವಿನ ಕಡೆಯವರು ಬಂದಿದ್ದರೂ, ವರ ಬಾರದ ಹಿನ್ನಲೆಯಲ್ಲಿ ಮದುವೆಯೊಂದು ರದ್ದಾದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಉಬರಡ್ಕ ಗ್ರಾಮದ ಯುವತಿಗೆ ಪುತ್ತೂರಿನ ಯುವಕನೊಂದಿಗೆ ಮದುವೆ ನಿಗದಿಯಾಗಿತ್ತು. ಗುರುವಾರ ಸುಳ್ಯದ ಪುರಭವನದಲ್ಲಿ ಮದುವೆ ನಡೆಯಬೇಕಾಗಿತ್ತು. ಮದುಮಗನ ಕಡೆಯಿಂದ ಜನ ಬಂದು ಪುರಭವನದ ಸಭಾಭವನ ಅಲಂಕಾರವೂ ನಡೆದಿತ್ತು. ಬುಧವಾರ ದಿನ ವಧುವಿನ ಮನೆಯಲ್ಲಿ ಡಿ.ಜೆ. ಅಳವಡಿಸಿ ಸಂಭ್ರಮಪಡಲಾಗಿತ್ತು. ಗುರುವಾರ ವಧುವಿನ ಕಡೆಯವರು ಮದುವೆಗಾಗಿ ಸುಳ್ಯದ […]

Advertisement

Wordpress Social Share Plugin powered by Ultimatelysocial