ಮಾಜಿ ಬ್ಯಾಟ್ಸ್ ಮನ್ ರಾಹುಲ್ ದ್ರಾವಿಡ್ ಟೀಮ್ ಇಂಡಿಯಾದ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಇದರೊಂದಿಗೆ ದ್ರಾವಿಡ್ ಅವರೇ ಭಾರತ ತಂಡದ ಕೋಚ್ ಆಗುವುದು ಬಹುತೇಕ ಖಚಿತಗೊಂಡಿದೆ. ರಾಹುಲ್ ದ್ರಾವಿಡ್ ನೂತನ ಕೋಚ್ ಆಗಿ ಅಧಿಕಾರ ಸ್ವೀಕರಿಸುವುದು ಕೆಲವು ವಾರಗಳ ಹಿಂದೆಯೇ ಖಾತ್ರಿಯಾಗಿತ್ತು. ಇದನ್ನು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಔಪಚಾರಿಕವಾಗಿ ಹೇಳಿದ್ದರು. ಆದರೆ ಕ್ರಿಕೆಟ್ ಮಂಡಳಿಯ ಸಂಪ್ರದಾಯದಂತೆ ಅರ್ಜಿ ಮೂಲಕವೇ ಈ ಪ್ರಕ್ರಿಯೆ ನಡೆಯ ಬೇಕಿತ್ತು.ಹೀಗಾಗಿ ದ್ರಾವಿಡ್ ಇದನ್ನು […]
BANGALORE
ಸುಡಾನ್ನಲ್ಲಿ ಸೇನಾ ಮುಖ್ಯಸ್ಥ ಜನರಲ್ ಅಬ್ದುಲ್ ಫತಾಹ್ ಬರ್ಹಾನ್ ನೇತೃತ್ವದಲ್ಲಿ ಸೋಮವಾರ ನಡೆದ ಕ್ಷಿಪ್ರಕ್ರಾಂತಿಯನ್ನು ವಿರೋಧಿಸಿ ರಾಜಧಾನಿ ಖರ್ಟೂಮ್ನಲ್ಲಿ ಸತತ 2ನೇ ದಿನವೂ ಪ್ರತಿಭಟನೆ ನಡೆದಿದೆ. ಸರಕಾರವನ್ನು ವಿಸರ್ಜಿಸಿ ದೇಶದಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ಜನರಲ್ ಬರ್ಹಾನ್ ಘೋಷಿಸಿದ ಕೆಲವೇ ಗಂಟೆಗಳ ಬಳಿಕ ಪ್ರಜಾಪ್ರಭುತ್ವ ವ್ಯವಸ್ಥೆಯ ಸಾವಿರಾರು ಬೆಂಬಲಿಗರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದರು. ಪ್ರತಿಭಟನೆಯನ್ನು ಹತ್ತಿಕ್ಕಲು ಭದ್ರತಾ ಪಡೆಗಳು ಹಿಂಸಾತ್ಮಕ ಕ್ರಮ ಕೈಗೊಂಡಿದ್ದು ಸೋಮವಾರ 7 ಮಂದಿ ಮೃತಪಟ್ಟಿದ್ದಾರೆ […]
ಸತತ 2 ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ ಕಂಡಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ ಮತ್ತು ಲೀಟರ್ ಡೀಸೆಲ್ ದರದಲ್ಲಿ ಕ್ರಮವಾಗಿ 35 ಪೈಸೆ ಹೆಚ್ಚಳವಾಗಿದೆ. ಇನ್ನು ಪೆಟ್ರೋಲ್ ಬೆಲೆಯೊಂದೇ ಅಲ್ಲ ಲೀಟರ್ ಡೀಸೆಲ್ ದರದವೂ ಸಹ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಇಂಧನ ದರ ಗರಿಷ್ಠ ಮಟ್ಟ ತಲುಪಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ Rs 111.70, ಡೀಸೆಲ್ Rs 102.60 ಆಗಿದೆ. […]
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದ ಟ್ಯಾಕ್ಸಿ ನಿಲ್ದಾಣದಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಸ್ಫೋಟದಲ್ಲಿ ಆರು ನಾಗರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಂಡಿಪೋರಾದ ಟ್ಯಾಕ್ಸಿ ಸ್ಟಾಂಡ್ನಲ್ಲಿ ನಿಂತಿದ್ದ ಟಾಟಾ ಸುಮೋ ಸ್ಫೋಟಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟದ ರಭಸಕ್ಕೆ ಟಾಟಾ ಸುಮೋ ಅಕ್ಕಪಕ್ಕ ಇದ್ದ ವಾಹನಗಳು ಜಖಂಗೊಂಡಿದ್ದು, ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada
ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯ ಶಂಕರಪುರಂನಲ್ಲಿ ಪಟಾಕಿ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ, ದುರಂತದಲ್ಲಿ ಐವರು ಸಾವನ್ನಪ್ಪಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ. ದೊಡ್ಡ ಅಂಗಡಿಯಲ್ಲಿ ಪಟಾಕಿ ಸ್ಫೋಟಗೊಂಡು, ಬೆಂಕಿ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದೆ. ಪಟಾಕಿ ಅಂಗಡಿ ಬಳಿಯಿದ್ದ ಬೇಕರಿಯೊಂದಕ್ಕೂ ಬೆಂಕಿ ವ್ಯಾಪಿಸಿ ಭಯಂಕರ ಶಬ್ಧದೊಂದಿಗೆ ಸಿಲಿಂಡರ್ ಸಹ ಸ್ಫೋಟಗೊಂಡಿದೆ. ಸ್ಥಳದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : […]
ಉತ್ತರ ನೈಜೀರಿಯಾದ ನೈಗರ್ ರಾಜ್ಯದ ಮಝಾಕುಕಾ ಗ್ರಾಮದ ಮಸೀದಿಯಲ್ಲಿ ಸೋಮವಾರ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕನಿಷ್ಠ 18 ಜನ ಮೃತಪಟ್ಟು, 4 ಮಂದಿ ತೀವ್ರ ಗಾಯಗೊಂಡಿದ್ದಾರೆ ಎಂದು ಸ್ಥಳೀಯಾಡಳಿತ ಪ್ರದೇಶದ ಅಧ್ಯಕ್ಷ ಅಲ್ಹಾಸನ್ ಇಸಾ ಮಾಹಿತಿ ನೀಡಿದ್ದಾರೆ. ಫುಲಾನಿ ಅಲೆಮಾರಿಗಳು ಈ ದಾಳಿ ಮಾಡಿರುವದಾಗಿ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗಷ್ಟೆ ವಾಯುವ್ಯ ಸುಕೊಟೋ ಪ್ರದೇಶದಲ್ಲಿ ದುಷ್ಕರ್ಮಿಗಳು ಇದೆ ರೀತಿ ದಾಳಿ ನಡೆಸಿದ್ದು, ಕನಿಷ್ಠ 40 ಮಂದಿ ಮೃತಪಟ್ಟಿದ್ದರು. […]
ಕೆಜಿಎಫ್ ಎಸ್ಪಿ ಕಚೇರಿ, ಡಿಎಅರ್ ಸ್ಥಳಾಂತರಕ್ಕೆ ಕೋಲಾರ ಜಿಲ್ಲೆಯಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದೆ… ಕೆಜಿಎಫ್ ನಗರದ ಸೂರಜ್ ಮಾಲ್ ವೃತ್ತದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗುತ್ತದೆ..ಕೆಜಿಎಫ್ ಹಾಗೂ ಬಂಗಾರಪೇಟೆ ತಾಲ್ಲೂಕು ಬಂದ್ ಮಾಡಲಾಗಿದ್ದು ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ …ವಿವಿಧ ಜನಪರ ಸಂಘಟನೆಗಳ ಒಕ್ಕೂಟದಿಂದ ಬಂದ್ ಗೆ ಕರೆ ನೀಡಲಾಗಿತ್ತು …ಇನ್ನೂ ಬಂದ್ ಗೆ ಕೇಂದ್ರ ಸರ್ಕಾರದ ಬೇಮೆಲ್ ಕಾರ್ಖಾನೆ ಬಂದ್ ಗೆ ಬೆಂಬಲ ನೀಡಿದ್ದು ಆಡಳಿತ ಮಂಡಳಿ […]
ರಾಜಕಾರಣಿ ,ನಟ ಎರಡೂ ಆಗಿರುವ ನಿಖಿಲ್ ಕುಮಾರಸ್ವಾಮಿ ಎರಡು ವೃತ್ತಿಯ ಜವಾಬ್ದಾರಿ ನಿಭಾಯಿಸಿಕೊಂಡು ಸಾಗುತ್ತಿದ್ದಾರೆ. ಚಿತ್ರರಂಗದಲ್ಲಿ ನಿಖಿಲ್ ಸಕ್ರಿಯರಾಗಿದ್ದು, ಕೆಲವು ಒಳ್ಳೆಯ ಸಿನಿಮಾಗಳನ್ನು ನಿಖಿಲ್ ನೀಡಿದ್ದಾರೆ. ಇದೀಗ ಚಿತ್ರರಂಗವನ್ನು ತೊರೆಯಬೇಕು ಎಂಬ ಒತ್ತಡ ನಿಖಿಲ್ ಮೇಲೆ ಹೆಚ್ಚಾಗಿದೆಯಂತೆ ಈ ಬಗ್ಗೆ ಸ್ವತಃ ಅವರೇ ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದಾರೆ. ಜೆಡಿಎಸ್ ಮುಖಂಡ ಶರವಣ ನಿಖಿಲ್ ಮೇಲೆ ಸಿನಿಮಾ ಬಿಡುವಂತೆ ಸತತ ಒತ್ತಡ ಹೇರುತ್ತಿದ್ದಾರಂತೆ.”ನಮ್ಮದು ರಾಜಕೀಯದ ಕುಟುಂಬ. ಹಾಗಾಗಿ ಹಲವು ಜನ, ನಿಖಿಲ್ ಸಿನಿಮಾ […]
ಜೆಡಿಎಸ್ ಯುವ ಘಟಕದ ರುದ್ರೇಶ್ ಮೇಲೆ ಅ.24 ರ ರಾತ್ರಿ ದುಷ್ಕರ್ಮಿಗಳಿಂದ ಮಾರಾಣಾಂತಿಕ ಹಲ್ಲೆ ನಡೆದಿತ್ತು… ಇದಕ್ಕೆ ಸಂಬಂಧಿಸಿದಂತೆ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು… ಪೊಲೀಸರು ಹಲ್ಲೆ ಮಾಡಿರುವ ಕಿಡಿಗೇಡಿಗಳನ್ನು ಬಂದಿಸಬೇಕು ಎಂದು ಆಗ್ರಹಿಸಿ ಇಂದು ಜೆಡಿಎಸ್ ಮುಖಂಡರಾದ ಕೆ,ಆನೇಕಲ್ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾದ .ಪಿ.ರಾಜು ಸೇರಿದಂತೆ ವೀರಶೈವ ಲಿಂಗಾಯಿತ ಸಮುದಾಯದ ಮುಖಂಡರು ಆನೇಕಲ್ ಪೋಲಿಸ್ ಠಾಣೆಗೆ ಭೇಟಿ ನೀಡಿ ಪೋಲಿಸರಿಗೆ ಮನವಿ ಸಲ್ಲಿಸಿದರು. ತಾಜಾ […]
ಕೋಲಾರದ ಜಿಲ್ಲೆಯ ಬಂಗಾರಪೇಟೆ ಹಾಗೂ ಕೆಜಿಎಫ್ ಮಾರ್ಗದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣವಾಗಿ ಗಿಂಡಿಗಳಿಂದ ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ಎದುರಾಗಿದ್ದು, ಈ ದುರಸ್ಥಿಗೆ ಕೋಲಾರದ ಸಂಸದ ಎಸ್ ಮುನಿಸ್ವಾಮಿ ಅವರು ರಸ್ತೆಗಳನ್ನು ಮುಚ್ಚಲು ಸ್ವಂತ ಖರ್ಚಿನಲ್ಲಿ ಕಾಂಕ್ರಿಟ್ ವ್ಯವಸ್ಥೆ ಮಾಡಿಸಿದ್ದಾರೆ… ಬಂಗಾರಪೇಟೆ ಹೊರವಲಯದಿಂದ ಕೆಜಿಎಫ್ ನಗರದ ವರೆಗಿನ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿದ್ದು ,ಇತ್ತೀಚೆಗೆ ಸುರಿದ ಮಳೆಯಿಂದಾಗಿ ಗುಂಡಿಗಳಿಂದ ಅಫಘಾತಗಳು ಸಂಭವಿಸುತ್ತಿದೆ, ಹೀಗಾಗಿ ಎಲ್ಲಾ ಗುಂಡಿಗಳನ್ನ ತಾತ್ಕಾಲಿಕವಾಗಿ ಮುಚ್ಚಿಸಲು […]