“ಸಿರಿ ಲಂಬೋದರ ವಿವಾಹ”(ಎಸ್ ಎಲ್ ವಿ) ಚಿತ್ರ ಬಿಡುಗಡೆಯಾಗಿ, ಇಪ್ಪತ್ತೈದು ದಿನಗಳ ಯಶಸ್ವಿ ಪ್ರದರ್ಶನ ಕಂಡಿದೆ. ಈ ಸಂತಸವನ್ನು ಚಿತ್ರತಂಡದ ಸದಸ್ಯರು ಹಂಚಿಕೊಂಡರು. ನಮ್ಮ ಚಿತ್ರಕ್ಕೆ ಸಿಗುತ್ತಿರುವ ಪ್ರತಿಕ್ರಿಯೆಗೆ ಮನ ತುಂಬಿ ಬಂದಿದೆ. ಎಪ್ಪತ್ತು ವರ್ಷ ದಾಟಿದವರು, ಮಹಿಳೆಯರು ಹೀಗೆ ಎಲ್ಲಾ ತರಹದ ವಯಸ್ಸಿನವರು ನಮ್ಮ ಚಿತ್ರ ನೋಡಿ ಪ್ರೋತ್ಸಾಹಿಸುತ್ತಿದ್ದಾರೆ. ಈ ಚಿತ್ರದಿಂದ ನನಗೂ ಹೊಸ ಅವಕಾಶಗಳು ಬಂದಿದೆ. ನನ್ನ ತಂಡಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದು ನಾಯಕ ಅಂಜನ್ ಎ […]

ದುಬೈ ಸೆನ್ಸಾರ್ ಮಂಡಳಿಯ ಸದಸ್ಯ ಎಂದು ಹೇಳಿಕೊಳ್ಳುವ ಉಮೈರ್ ಸಂಧು ಮಾಡಿರುವ ಆರೋಪ ಟಾಲಿವುಡ್ ನಲ್ಲಿ ಸಂಚಲನ ಮೂಡಿಸುತ್ತಿದೆ. ಅವರು ಈಗಾಗಲೇ ನಟ ಪವನ್ ಕಲ್ಯಾಣ್, ಮಹೇಶ್ ಬಾಬು, ರವಿತೇಜ ಬಗ್ಗೆ ಕಾಮೆಂಟ್ ಮಾಡಿದ್ದಾರೆ ಮತ್ತು ಈಗ ವಿಜಯ್ ದೇವರಕೊಂಡ ಅವರ ಕುರಿತು ಮಾಡಿರುವ ಹೊಸ ಕಾಮೆಂಟ್ ಹಾಟ್ ಟಾಪಿಕ್ ಆಗಿದೆ. ವಾಸ್ತವವಾಗಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಡೇಟಿಂಗ್‌ ಮಾಡುತ್ತಿದ್ದರು ಎಂಬ ಮಾತು ಕೇಳಿಬರುತ್ತಿವೆ. ಈ ವಿಷಯವನ್ನು […]

ಸಿಂಧನೂರು ನಗರದ ಗಣೇಶ ದೇವಸ್ಥಾನದಿಂದ ನೂತನವಾಗಿ ನಿನ್ನೆ ತಾನೆ ಉದ್ಘಾಟನೆಗೊಂಡ ರಂಗಮಂದಿರಕ್ಕೆ ( ಟೌನ್ ಹಾಲ್) ವರೆಗೂ ನೂರಾರು ಪುನೀತ್ ಅಭಿಮಾನಿಗಳೊಂದಿಗೆ ಮೆರವಣಿಗೆ ಹೊರಟ ಸಂದರ್ಭದಲ್ಲಿ ಪೊಲೀಸರು ತಡೆಯಲು ಪ್ರಯತ್ನಿಸುವಾಗ ಅಭಿಮಾನಿಯೊಬ್ಬರಿಗೆ ಲಾಠಿ ಬೀಸಿ ಹಲ್ಲೆ ಮಾಡಿದ ಪರಿಣಾಮ ರೊಚ್ಚಿಗೆದ್ದ ಪುನೀತ್ ರಾಜಕುಮಾರ ಅಭಿಮಾನಿಗಳ ಮಧ್ಯೆ ಮಾತಿನ ಚಕಮಕಿ ಹಾಗೂ ನೂಕಾಟ ನಡೆದು ಪಿಎಸ್ಐ ಮಣಿಕಂಠ ಕೊರಳಪಟ್ಟಿ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು. ಸಿಪಿಐ ಮೇಲೆ ಜೆಡಿಎಸ್ ಯುವ ಮುಖಂಡ ಅಭಿಷೇಕ […]

ನಾಗ ಚೈತನ್ಯ ಅವರನ್ನು ಪ್ರೀತಿಸಿ ಮದುವೆಯಾಗಿದ್ದ ಸಮಂತಾಗೆ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದಿದ್ದಾರೆ. ಅಂದಿನಿಂದ ಸಮಂತಾಗೆ ಸಂಬಂಧಿಸಿದ ಅನೇಕ ಸುದ್ದಿಗಳು ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸಮಂತಾ-ನಾಗ ಚೈತನ್ಯ ವಿಚ್ಛೇದನ ವಿಚಾರವಾಗಿ ಸಿನಿಮಾ ವಿಮರ್ಶಕರೊಬ್ಬರು ಮಾಡಿರುವ ಟ್ವೀಟ್ ಇದೀಗ ಭಾರೀ ವೈರಲ್ ಆಗ್ತಿದೆ. ಯೇ ಮಾಯಾ ಚೇಸಾವೆ ಸಿನಿಮಾ ಮೂಲಕ ಆತ್ಮೀಯರಾದ ನಾಗ ಚೈತನ್ಯ ಹಾಗೂ ನಟಿ ಸಮಂತಾ, ಸ್ನೇಹವನ್ನು ಪ್ರೇಮವಾಗಿ ಬದಲಾಯಿಸಿ ನಂತರ ಅದ್ಧೂರಿಯಾಗಿ ಮದುವೆಯಾದರು. ಇಬ್ಬರೂ ಕುಟುಂಬ […]

ಮಂಡ್ಯ, ಮೈಸೂರು ಭಾಗದ ಬಹುವರ್ಷಗಳ ಕನಸು ಕೊನೆಗೂ ನನಸಾಗಿದೆ. ಸಕ್ಕರೆ ನಾಡಿನಲ್ಲಿ ಕೇಸರಿ ಕಲರವದೊಂದಿಗೆ ದಶಪಥ ಹೆದ್ದಾರಿಯನ್ನ ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದ್ದಾರೆ. ಪ್ರಧಾನಿ ಮೋದಿ ಉದ್ಘಾಟನಾ ಕಾರ್ಯಕ್ರಮದ ಬಳಿಕ ನಡೆದ ಕೆಲವು ಘಟನೆಗಳು ವಿವಾದಕ್ಕೆ ಕಾರಣವಾಗಿವೆ. ಈ ನಡುವೆ ಮತ್ತೆ ಸಂಸದರ ಕೋಲ್ಡ್​ ವಾರ್ ಶುರುವಾಗಿದೆ. ಮದುಮಗಳಂತೆ ಸಿಂಗಾರಗೊಂಡಿದ್ದ ಸಕ್ಕರೆನಾಡು. ಸಂಪೂರ್ಣ ಕೇಸರಿಯಮವಾಗಿದ್ದ ಜೆಡಿಎಸ್ ಭದ್ರಕೋಟೆ. ಎಲ್ಲೆಡೆ ರಾರಾಜಿಸಿದ್ದ ಪ್ರಧಾನಿ ಮೋದಿ ಫ್ಲೆಕ್ಸ್ ಮತ್ತು ಬ್ಯಾನರ್​ಗಳು. ರಸ್ತೆಯ ಇಕ್ಕೆಲಗಳಲ್ಲಿ ಸಾವಿರಾರು […]

ಕೆ.ಆರ್.ಜಿ ಸ್ಟುಡಿಯೋಸ್ ಬ್ಯಾನರ್‌ನಲ್ಲಿ ಯೋಗಿ. ಜಿ. ರಾಜ್ ಹಾಗೂ ಕಾರ್ತಿಕ್ ಗೌಡ ಅವರು ನಿರ್ಮಿಸಿರುವ ‘ಹೊಯ್ಸಳ’ ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಮಾರ್ಚ್ 30ರಂದು ವಿಶ್ವದಾದ್ಯಂತ ಕನ್ನಡ ಭಾಷೆಯಲ್ಲಿಯೇ ಬಿಡುಗಡೆಯಾಗಲಿದೆ. ಈಗಾಗಲೇ ಟೀಸರ್, ಹಾಡುಗಳಿಂದ ಪ್ರೇಕ್ಷಕರ ಹೃದಯ ಗೆದ್ದಿರುವ ‘ಹೊಯ್ಸಳ’ ತಂಡದಿಂದ ಸದ್ಯದಲ್ಲಿಯೇ ಟ್ರೇಲರ್ ಕೂಡ ಬಿಡುಗಡೆ ಆಗಲಿದೆ. ಚಿತ್ರದ ಪ್ರಮೋಷನ್ ಜೋರಾಗಿದ್ದು, ನಾಯಕ ಡಾಲಿ ಧನಂಜಯ್ ಉತ್ತರ ಕರ್ನಾಟಕದಲ್ಲಿ ಸಂಚರಿಸುತ್ತಿದ್ದಾರೆ. ಇತ್ತೀಚೆಗೆ ನಡಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಧನಂಜಯ್ […]

ಮಾಧುರಿ ದೀಕ್ಷಿತ್ ಅಬೋಧ್ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದರು. ದಯಾವಾನ್ ಮತ್ತು ವರ್ದಿಯಂತಹ ಚಿತ್ರಗಳಲ್ಲಿನ ಕೆಲವು ಚಿಕ್ಕ ಹಾಗೂ ಪೋಷಕ ಪಾತ್ರಗಳ ಬಳಿಕ, ಅವರು ತೇಜ಼ಾಬ್ ಚಿತ್ರದಲ್ಲಿ ಮುಖ್ಯ ಸ್ತ್ರೀ ಪಾತ್ರದಲ್ಲಿ ಕಾಣಿಸಿಕೊಂಡರು ಮತ್ತು ಈ ಚಿತ್ರ ಅವರನ್ನು ತಾರಾಪಟ್ಟಕ್ಕೇರಿಸುವುದರ ಜೊತೆಗೆ ಅವರಿಗೆ ಅವರ ಮೊದಲ ಫ಼ಿಲ್ಮ್‌ಫ಼ೇರ್ ನಾಮನಿರ್ದೇಶನ ತಂದುಕೊಟ್ಟಿತು. ನಂತರ, ಅವರು ರಾಮ್ ಲಖನ್, ಪರಿಂದಾ ತ್ರಿದೇವ್, ಕಿಶನ್ ಕನ್ಹೈಯಾ, ಮತ್ತು ಪ್ರಹಾರ್, ಚಿತ್ರಗಳನ್ನು ಒಳಗೊಂಡಂತೆ, ಅನೇಕ ಯಶಸ್ವಿ […]

ಬೆಂಗಳೂರು: ಸಂಸದೆ ಸುಮಲತಾ ಅಂಬರೀಷ್ ಇಂದು ಬಿಜೆಪಿ ಪಕ್ಷಕ್ಕೆ ಬೆಂಬಲ ಸೂಚಿಸಿ, ಸಹ ಸದಸ್ಯತ್ವ ಪಡೆಯುವ ಘೋಷಣೆಯನ್ನ ಮಂಡ್ಯದಲ್ಲಿ ಮಾಡಿದರು. ಈ ಘೋಷಣೆ ಬೆನ್ನಲೇ ಮಂಡ್ಯ ರಾಜಕೀಯದಲ್ಲಿ ಹಲವಾರು ಲೆಕ್ಕಾಚಾರ ಮುನ್ನಲೆಗೆ ಬರುತ್ತಿದೆ. ಈ ಪೈಕಿ ಮುಖ್ಯವಾಗಿ ಹಿನ್ನಲೆಗೆ ಸರಿದಿದ್ದ ಮಾಜಿ ಸಂಸದೆ ರಮ್ಯಾ (ದಿವ್ಯಾ ಸ್ಪಂದನ ) ರಾಜಕೀಯ ಪಯಣ ಮತ್ತೆ ಮುಖ್ಯ ರಸ್ತೆಗೆ ಬರುವ ಸಾಧ್ಯತೆ ಹೆಚ್ಚಿದೆ. ಕೆಲ ವರ್ಷಗಳಿಂದ ರಾಜಕೀಯ ಹಾಗೂ ಚಿತ್ರರಂಗದಿಂದ ದೂರ ಉಳಿದಿದ್ದ ಮಾಜಿ […]

ಟ್ವಿಟರ್.. ದಿನದಿಂದ ದಿನಕ್ಕೆ ಹೆಚ್ಚೆಚ್ಚು ಕ್ರೇಜ್ ಹಾಗೂ ಬಳಕೆದಾರರನ್ನು ಪಡೆದುಕೊಳ್ಳುತ್ತಿರುವ ಸಾಮಾಜಿಕ ಜಾಲತಾಣದ ಪ್ರಮುಖ ವೇದಿಕೆ. ಇತ್ತೀಚಿನ ದಿನಗಳಲ್ಲಿ ಟ್ವಿಟರ್ ಮಾಲೀಕತ್ವದಲ್ಲಿ ಭಾರೀ ಬದಲಾವಣೆಗಳಾಗಿ, ಟ್ವಿಟರ್‌ನ ನೀತಿ, ನಿಯಮಗಳು ದೊಡ್ಡ ಮಟ್ಟದಲ್ಲಿ ಬದಲಾವಣೆಯಾದರೂ ಈ ಅಪ್ಲಿಕೇಶನ್‌ನ ಕ್ರೇಜ್ ಮಾತ್ರ ಸ್ವಲ್ಪವೂ ತಗ್ಗಿಲ್ಲ. ಬಳಕೆದಾರರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಲೇ ಇದೆ. ಇನ್ನು ಇತರೆ ಸಾಮಾಜಿಕ ಜಾಲತಾಣದ ಅಪ್ಲಿಕೇಶನ್‌ಗಳಿಗೆ ಹೋಲಿಸಿದರೆ ಟ್ವಿಟರ್ ವೇಗವಾಗಿ ಅತಿಹೆಚ್ಚು ನಿಖರವಾಗಿ ಸುದ್ದಿಗಳನ್ನು ತಲುಪಿಸುವ ಕಾರಣದಿಂದ […]

ಮೀಟು ಅಭಿಯಾನ ಶುರುವಾದ ಮೇಲೆ ನಟ- ನಟಿಯರು ಚಿತ್ರರಂಗದಲ್ಲಿ ತಮಗಾದ ಕಹಿ ಅನುಭವಗಳನ್ನು ಬಿಚ್ಚಿಡುತ್ತಾ ಬರ್ತಿದ್ದಾರೆ. ಕಾಸ್ಟಿಂಗ್ ಕೌಚ್ ಹೆಸರಿನಲ್ಲಿ ಮಂಚಕ್ಕೆ ಕರೆಯುವ ಚಿತ್ರರಂಗದವರ ಕರಾಳ ಮುಖವನ್ನು ಅನಾವರಣ ಮಾಡುತ್ತಿದ್ದಾರೆ. ಸ್ಯಾಂಡಲ್‌ವುಡ್‌ನಿಂದ ಬಾಲಿವುಡ್‌ವರೆಗೂ ನಟಿಯರು ತಮಗಾದ ಕೆಟ್ಟ ಅನುಭವವನ್ನು ಹೇಳಿಕೊಂಡಿದ್ದಾರೆ. ಈಗ ವಿದ್ಯಾ ಬಾಲನ್ ಕೂಡ ಅದೊಂದು ಘಟನೆ ನೆನಪಿಸಿಕೊಂಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ನಟಿ ವಿದ್ಯಾಬಾಲನ್, “ನನಗೆ ನಿಜವಾಗಿಯೂ ಕಾಸ್ಟಿಂಗ್ ಕೌಚ್‌ ಸಂದರ್ಭ ಎದುರಾಗಿಲ್ಲ. ನಾನು ತುಂಬಾ ಅದೃಷ್ಟಶಾಲಿ. ಏಕೆಂದರೆ […]

Advertisement

Wordpress Social Share Plugin powered by Ultimatelysocial