ನಟಿ ಆಲಿಯಾ ಭಟ್ ಅವರ ಖಾಸಗಿ ಫೋಟೋವನ್ನ ಇತ್ತೀಚಿಗೆ ಕ್ಲಿಕ್ ಮಾಡಿದ್ದನ್ನ ಗಂಭೀರವಾಗಿ ಪರಿಗಣಿಸಿರುವ ಅವರ ಪತಿ ರಣಬೀರ್ ಕಪೂರ್ ಇದನ್ನು ‘ಕೊಳಕು’ ಎಂದು ಬಣ್ಣಿಸಿದ್ದಾರೆ. ಪತ್ನಿ ಆಲಿಯಾ ಭಟ್ ಮನೆಯಲ್ಲಿದ್ದಾಗ ಫೋಟೋಗಳನ್ನು ಅವರಿಗೆ ತಿಳಿಯದಂತೆ ಪಾಪರಾಜಿಗಳು ಕ್ಲಿಕ್ ಮಾಡಿದ ಘಟನೆಯ ಬಗ್ಗೆ ನಟ ರಣಬೀರ್ ಕಪೂರ್ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಘಟನೆಯನ್ನು ಕೊಳಕು ಎಂದು ಕರೆದ ರಣಬೀರ್ ಕಪೂರ್ ಈ ವಿಷಯವನ್ನು ಕಾನೂನುಬದ್ಧವಾಗಿ ಕೊಂಡೊಯ್ಯುವುದಾಗಿ ಹೇಳಿದರು. ಇದು ಗೌಪ್ಯತೆಯ ಆಕ್ರಮಣವಾಗಿದೆ. […]

ಭೋಜ್‌ಪುರಿ ಚಿತ್ರರಂಗದ ಖ್ಯಾತ ನಟ ಪವನ್‌ ಸಿಂಗ್‌ಗೆ ಲೈವ್ ಶೋನಲ್ಲಿ ಕಹಿ ಅನುಭವ ಆಗಿದೆ. ವೇದಿಕೆಯಲ್ಲಿ ನಟ ಹಾಡುತ್ತಿದ್ದಾಗ ಯಾರೋ ಕಿಡಿಗೇಡಿಗಳು ಕಲ್ಲಿನಿಂದ ಹೊಡೆದಿದ್ದಾರೆ. ನಟನಾಗಿ ಮಾತ್ರವಲ್ಲದೇ ಪವನ್ ಸಿಂಗ್ ಗಾಯಕರಾಗಿಯೂ ಗಮನ ಸೆಳೆದಿದ್ದಾರೆ. ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಹೋಳಿ ಹಬ್ಬದ ವಿಶೇಷವಾಗಿ ನಡೆದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಹೋಳಿ ಹಬ್ಬದ ವಿಶೇಷವಾಗಿ ಆಯೋಜಿಸಿದ್ದ ರಸಮಂಜರಿ ಕಾರ್ಯಕ್ರಮದಲ್ಲಿ ಪವನ್ ಸಿಂಗ್ ಹಾಜರಾಗಿದ್ದರು. ಹಾಡು ಹಾಡಿ ನೆರೆದಿದ್ದವರನ್ನು ರಂಜಿಸುತ್ತಿದ್ದರು. […]

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಗೆ ಮುಹೂರ್ತ ನಿಗದಿಯಾಗಿದೆ. ಸುಮಲತಾ ಪಕ್ಷ ಸೇರ್ಪಡೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿದುಬಂದಿದೆ. ಸಂಸದೆ ಸುಮಲತಾ ನಾಳೆಯೇ ಬಿಜೆಪಿ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ. ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದಲ್ಲಿ ಸುಮಲತಾ ಬಿಜೆಪಿ ಸೇರ್ಪಡೆಗೆ ಯೋಜನೆ ರೂಪಿಸಲಾಗಿತ್ತು. ಆದರೆ ಸರ್ಕಾರಿ ಕಾರ್ಯಕ್ರಮವಾಗಿದ್ದರಿಂದ ನಾಳೆ ಸುಮಲತಾ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ನಾಳೆ ಸುಮಲತಾ ನಡೆಸಲಿರುವ […]

ಮಂಡ್ಯ: ಮುಂದಿನ ವಿಧಾನಸಭೆ ಚುನಾವಣೆ ರಣತಂತ್ರ ರೂಪಿಸುತ್ತಿರೋ ಬೆನ್ನಲ್ಲೆ ಸುಮಲತಾ ಅಂಬರೀಷ್‌  ಬಿಜೆಪಿ ಸೇರ್ಪಡೆ ಬಗ್ಗೆ ನಾಳೆ ಮಹತ್ವದ ತೀರ್ಮಾನವಾಗಲಿದೆ ಎಂದು ವರದಿಯಾಗಿದ್ದು, ಈ ಬಗ್ಗೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸುಮಲತಾ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್‌ನಿಂದ ಗ್ರೀನ್‌ ಸಿಗ್ನಲ್ ನೀಡುವ ಬಗ್ಗೆ ನಾಳೆ ಸುಮಲತಾ ನಿವಾಸದಲ್ಲೇ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಸುಮಲತಾ ಅಂಬರೀಷ್‌ ಮಹತ್ವದ ಘೋಷಣೆಯನ್ನು ಮಾಡಲಿದ್ದಾರೆ. ಸುಮಲತಾ ಅಂಬರೀಷ್‌ ಬಿಜೆಪಿ ಸೇರ್ಪಡೆ ಬಗ್ಗೆ ಆಪ್ತರೊಳಗಡೆ ಒಮ್ಮತ ತೀರ್ಮಾನ ಸಾಧ್ಯತೆಯಿದೆ. […]

ಸಿಂಪಲ್ ಸುನಿ ನಿರ್ದೇಶನದಲ್ಲಿ ವಿನಯ್ ರಾಜ್ ಕುಮಾರ್ ನಟಿಸುತ್ತಿರುವ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ‘ಒಂದು ಸರಳ ಪ್ರೇಮಕಥೆ’. ಚಿತ್ರದಲ್ಲಿ ನಾಯಕಿಯರಾಗಿ ಸ್ವಾತಿಷ್ಠ ಕೃಷ್ಣನ್, ‘ರಾಧಾ ಕೃಷ್ಣ’ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ನಟಿಸುತ್ತಿದ್ದಾರೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಮೈಸೂರಿನಲ್ಲಿ ಎರಡನೇ ಹಂತದ ಚಿತ್ರೀಕರಣದಲ್ಲಿ ನಿರತವಾಗಿದ್ದು, ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ ಚಿತ್ರತಂಡ. ನಟ ವಿನಯ್ ರಾಜ್ ಕುಮಾರ್ ಮಾತನಾಡಿ […]

  ಪಠಾಣ್‌ ಸಿನಿಮಾದ ಭರ್ಜರಿ ಗೆಲುವಿನ ಸಂತಸದಲ್ಲಿರುವ ಬಾಲಿವುಡ್‌ ಸ್ಟಾರ್‌ ನಟಿ ದೀಪಿಕಾ ಪಡುಕೋಣೆ, ಶೀಘ್ರದಲ್ಲೇ ಮತ್ತೊಂದು ಪ್ಯಾನ್‌ ಇಂಡಿಯಾ ಸಿನಿಮಾದಲ್ಲಿ ಮಿಂಚಲಿದ್ದು, ಪ್ರಾಜೆಕ್ಟ್ ಕೆ ಸಿನಿಮಾಗಾಗಿ ನಟಿಗೆ 10 ಕೋಟಿ ರೂ. ಸಂಭಾವನೆ ನೀಡಲಾಗಿದೆಯಂತೆ. ನಾಗ್‌ ಅಶ್ವಿ‌ನ್‌ ನಿರ್ದೇಶನದ ಸಿನಿಮಾದಲ್ಲಿ ಪ್ರಭಾಸ್‌ ಜತೆಗೆ ದೀಪಿಕಾ ತೆರೆ ಹಂಚಿಕೊಳ್ಳಲಿದ್ದಾರೆ . ಸದ್ಯಕ್ಕೆ ಹೈದರಾಬಾದ್‌ನಲ್ಲಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲೂ ದೀಪಿಕಾ ಖ್ಯಾತಿ ಹೆಚ್ಚುತ್ತಿರುವ ನಡುವೆಯೇ, ಬೇಡಿಕೆ ಜತೆಗೆ ಸಂಭಾವನೆ […]

ಬಾಲಿವುಡ್‌ ನಿರ್ಮಾಪಕ ಹಾಗೂ ವಿತರಕ ಮಾಧು ಮಾಂಟೇನಾ ತಂದೆ ಮುರಳಿ ರಾಜು ಹೈದರಾಬಾದ್‌ನಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು. ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಮುರಳಿ ಕೃಷ್ಣ ಅವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ (ಮಾರ್ಚ್ 7) ಕೊನೆಯುಸಿರೆಳೆದಿದ್ದಾರೆ. ಬಾಲಿವುಡ್ ನಿರ್ಮಾಪಕ ಮಧು ಮಾಂಟೇನಾ ತಂದೆ ನಿಧನದ ಬೆನ್ನಲ್ಲೇ ಬಾಲಿವುಡ್ ಸೂಪರ್‌ಸ್ಟಾರ್ ಆಮಿರ್ ಖಾನ್ ಹಾಗೂ ಟಾಲಿವುಡ್ ಸೂಪರ್‌ಸ್ಟಾರ್ ಅಲ್ಲು ಅರ್ಜುನ್ ಇಬ್ಬರೂ ಸಂಪಾತ […]

ಮುಂಬಯಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ನ್ಯಾಷನಲ್‌ ಕ್ರಶ್‌ ಎನ್ನುವ ಖ್ಯಾತಿಯನ್ನು ಪಡೆದುಕೊಂಡಿದ್ದಾರೆ. ಸದ್ಯ ಬಿಟೌನ್‌ ಸೇರಿ ಇತರ ಸಿನಿಮಾರಂಗದಲ್ಲಿ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿರುವ ರಶ್ಮಿಕಾ ಅವರ ಬಗ್ಗೆ ಸದಾ ಒಂದಲ್ಲ ಒಂದು ವಿಚಾರ ಗಾಸಿಪ್‌ ಆಗಿ ಹರಿದಾಡುತ್ತಿರುತ್ತದೆ. ರಶ್ಮಿಕಾ ಟಾಲಿವುಡ್‌ ನಟ ವಿಜಯ್‌ ದೇವರಕೊಂಡಾ ಅವರೊಂದಿಗೆ ಡೇಟಿಂಗ್‌ ನಲ್ಲಿದ್ದಾರೆ ಎನ್ನುವ ವಿಚಾರ ಕಳೆದ ಕೆಲ ಸಮಯದಿಂದ ಹರಿದಾಡುತ್ತಿರುವುದು ಗೊತ್ತೇ ಇದೆ. ಅನೇಕ ಬಾರಿ ಇಬ್ಬರು ಜೊತೆಯಾಗಿ ಕಾಣಿಸಿಕೊಳ್ಳದಿದ್ದರೂ, ಇಬ್ಬರು […]

ಮುಂಬೈ: ಸೈಬರ್ ವಂಚನೆ ಪ್ರಕರಣದಲ್ಲಿ ವಿದ್ಯಾವಂತರು, ಸೆಲೆಬ್ರಿಟಿಗಳು ವಂಚನೆಗೊಳಗಾಗುತ್ತಿರುವ ನಡುವೆಯೇ ಇದೀಗ ಬಾಲಿವುಡ್ ನಟಿ, ರಾಜಕಾರಣಿ ನಗ್ಮಾ ಮೊರಾರ್ಜಿ ಕೆವೈಸಿ(KYC) ವಂಚನೆಗೊಳಗಾದ ಪ್ರಕರಣ ವರದಿಯಾಗಿದೆ.  ಸೈಬರ್ ವಂಚಕರು ಕಳುಹಿಸಿದ ನಕಲಿ ಲಿಂಕ್ ಅನ್ನು ಕ್ಲಿಕ್ಕಿಸಿದ ಪರಿಣಾಮ ನಟಿ ನಗ್ಮಾ ಅವರು ತಮ್ಮ ಖಾತೆಯಿಂದ ಒಂದು ಲಕ್ಷ ರೂಪಾಯಿ ಕಳೆದುಕೊಂಡಿರುವುದಾಗಿ ವರದಿ ವಿವರಿಸಿದೆ. ಟೈಮ್ಸ್ ಆಫ್ ಇಂಡಿಯಾದ ವರದಿ ಪ್ರಕಾರ, ನಟಿ ನಗ್ಮಾ ಅವರು ಫೆಬ್ರುವರಿ 28ರಂದು ನಕಲಿ ಲಿಂಕ್ ಅನ್ನು ಕ್ಲಿಕ್ಕಿಸಿದ […]

ಬಾಲಿವುಡ್‌ ಸೂಪರ್‌ಸ್ಟಾರ್ ಶಾರುಖ್ ಖಾನ್ ಮನೆಯಲ್ಲಿ ಇಬ್ಬರು ಅಭಿಮಾನಿಗಳು ಅಡಗಿ ಕೂತಿದ್ದರು. ಕಿಂಗ್ ಖಾನ್ ಅನ್ನು ಕಣ್ತುಂಬಿಕೊಳ್ಳಬೇಕು ಅಂತಲೇ ಮುಂಬೈನಲ್ಲಿರುವ ಶಾರುಖ್ ಬಂಗಲೆ ಮನ್ನಥ್ ಕಾಂಪೌಂಡ್ ಹಾರಿದ್ದರು. ಸುಮಾರು 8 ಗಂಟೆಗಳ ಕಾಲ ಅಡಗಿ ಕೂತಿದ್ದರು.  ಕಳೆದ ವಾರ ನಡೆದ ಈ ಘಟನೆಯ ಸಂಬಂಧ ಮುಂಬೈ ಪೊಲೀಸರು ಇಬ್ಬರು ಅಭಿಮಾನಿಗಳನ್ನು ಬಂಧಿಸಿದ್ದಾರೆ. ಪೊಲೀಸರ್ ಮೂಲಗಳ ಪ್ರಕಾರ, ಗುಜರಾತಿನಿಂದ ಬಂದಿದ್ದ ಪಠಾಣ್ ಸಾಹಿಲ್ ಖಾನ್ ಹಾಗೂ ರಾಮ್ ಶರಾಫ್ ಕುಶ್‌ವಾಹ ಎಂಬ […]

Advertisement

Wordpress Social Share Plugin powered by Ultimatelysocial