ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಸಿನಿಮಾ
ಕಳೆದ ಒಂದು ವರ್ಷದ ಅವಧಿಯಲ್ಲಿ ಹಲವು ಬಾಲಿವುಡ್ ನಟರು ಮುಂಬೈನಲ್ಲಿ ಐಶಾರಾಮಿ ಮನೆಗಳನ್ನು ಖರೀದಿಸಿದರು. ಕೆಲವರು ಮಾರಿದರು ಸಹ. ಖರೀದಿಸಿದವರ ಸಾಲಿಗೆ ಬಾಲಿವುಡ್ನ ಪ್ರತಿಭಾವಂತ ನಟ ಆಯುಷ್ಮಾನ್ ಖುರಾನ ಸಹ ಸೇರಿಕೊಂಡಿದ್ದಾರೆ. ಬಾಲಿವುಡ್ನಲ್ಲಿ ಭಿನ್ನ ಮಾದರಿಯ ಸಿನಿಮಾಗಳ ಮೂಲಕ ತಮ್ಮದೇ ಆದ ಛಾಪು ಮೂಡಿಸುತ್ತಿರುವ ನಟ ಆಯುಷ್ಮಾನ್ ಖುರಾನಾ ರಿಯಲ್ ಎಸ್ಟೇಟ್ ಮೇಲೆ ಬಂಡವಾಳ ಹೂಡಿದ್ದು, ಮುಂಬೈನ ಅಂಧೇರಿಯ ಲೋಕಂಡ್ವಾಲಾ ಕಾಂಪ್ಲೆಕ್ಸ್ನಲ್ಲಿ ಐಶಾರಾಮಿ ಮನೆ ಖರೀದಿ ಮಾಡಿದ್ದಾರೆ. ವಿಂಡ್ಸರ್ […]
ಸದ್ಯಕ್ಕೆ ಬಾಲಿವುಡ್ನಲ್ಲಿ ಹರಿದಾಡುತ್ತಿರುವ ಬಿಸಿ ಬಿಸಿ ಸುದ್ದಿ ಇದು. ಬಾಲಿವುಡ್ನ ಮೋಸ್ಟ್ ಎಲಿಜಬಲ್ ಬ್ಯಾಚುಲರ್ ಅಂದರೆ ಅದು ಸಲ್ಮಾನ್ ಖಾನ್. ಹಾಗಾಗಿ ಸಲ್ಲು ಜೊತೆಗೆ ಯಾರ ಹೆಸರು ಕೇಳಿ ಬಂದರೂ ಕೂಡ, ಎಲ್ಲರ ಚಿತ್ತ ಸಲ್ಲು ಲವ್ ಕಹಾನಿಯತ್ತ ಸಾಗುತ್ತದೆ. ಈಗ ಸಲ್ಮಾನ್ ಖಾನ್ ಜೊತೆಗೆ ಸಮಂತಾ ಹೆಸರು ಕೇಳಿ ಬಂದಿದೆ. ಆದರೆ ಅದು ಸೌತ್ ನಟಿ ಸಮಂತಾ ರುತ್ ಪ್ರಭು ಅಲ್ಲ ಹಾಲಿವುಡ್ನ ಸಮಂತಾ ಲಾಕ್ವೂಡ್. ಸಲ್ಮಾನ್ ಖಾನ್ […]
ನಿನ್ನೆಯಷ್ಟೆ ರಾಜ್ಯಸರ್ಕಾರವು ರಾಜ್ಯದಾದ್ಯಂತ ವೀಕೆಂಡ್ ಲಾಕ್ಡೌನ್ ಹಾಗೂ ನೈಟ್ ಕರ್ಫ್ಯೂ ಹೇರಿದೆ. ಈ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರರಂಗದ ಹಲವರು ವೀಕೆಂಡ್ ಲಾಕ್ಡೌನ್ ಹಾಗೂ ನೈಟ್ ಕರ್ಫ್ಯೂ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ಯಾನ್ ಇ0ಡಿಯಾ ಸ್ಟಾರ್ ಆಗುವತ್ತ ಗಮನ ಹರಿಸಿದ ದುನಿಯಾ ವಿಜಯ್. ಈ ಬಗ್ಗೆ ಮಾತನಾಡಿರುವ ನಟ ದುನಿಯಾ ವಿಜಯ್, ಲಾಕ್ಡೌನ್ ಉದ್ದೇಶ ಪ್ರಾಮಾಣಿಕವಾಗಿದ್ದರೆ ಆಗಲಿ, ರಾಜಕೀಯ ದುರುದ್ದೇಶದಿಂದ ಲಾಕ್ಡೌನ್ ಮಾಡುವುದಾದರೆ ಖಂಡಿತ ಬೇಡ” ಎಂದು ತಮ್ಮ […]
ಬೆಂಗಳೂರು : ಸ್ಯಾಂಡಲ್ವುಡ್ ನಟ ಯಶ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 36ನೇ ವಸಂತಕ್ಕೆ ಕಾಲಿಟ್ಟಿರುವ ಅವರು ಕುಟುಂಬದವರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಓಮಿಕ್ರಾನ್, ಕೊರೊನಾ ಸೋಂಕಿನ ಭೀತಿ ಎಲ್ಲೆಡೆ ಇರುವುದರಿಂದ ಮನೆಯಲ್ಲಿಯೇ ಆಚರಿಸಿಕೊಳ್ಳುತ್ತಿದ್ದಾರೆ. ಯಶ್ ಜನ್ಮದಿನವಾದ ಇಂದು ಕರ್ನಾಟಕದಲ್ಲಿ ವಾರಾಂತ್ಯದ ಕರ್ಫ್ಯೂ ಇದೆ. ಈ ಕಾರಣಕ್ಕೆ ಯಶ್ ಮನೆ ಸಮೀಪ ತೆರಳೋಕೆ ಅಭಿಮಾನಿಗಳಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸೋಶಿಯಲ್ ಮೀಡಿಯಾ ಮೂಲಕವಾಗಿ ಶುಭಕೋರುತ್ತಿದ್ದಾರೆ. ಯಶ್ ಜನ್ಮದಿನಕ್ಕೆ ಕೇವಲ ಕರ್ನಾಟಕದ ಫ್ಯಾನ್ಸ್ ಮಾತ್ರವಲ್ಲದೆ, ಆಂಧ್ರ ಪ್ರದೇಶ, ತಮಿಳು ನಾಡು, […]
ಚೆನ್ನೈ: ಸಿನಿಮಾ ರಂಗದಲ್ಲಿ ಮಹಾಮಾರಿ ಕೊರೋನಾ ಭಾರೀ ಸದ್ದು ಮಾಡುತ್ತಿದೆ. ಬಾಲಿವುಡ್, ಟಾಲಿವುಡ್ ಹಾಗೂ ಕಾಲಿವುಡ್ನ ಟಾಪ್ ಹೀರೋಯಿನ್ಗಳು ಒಬ್ಬರ ನಂತರ ಮತ್ತೊಬ್ಬರು ಎಂಬಂತೆ ಸೋಂಕಿಗೆ ಒಳಗಾಗುತ್ತಿದ್ದಾರೆ. ಈಗಾಗಲೇ ಟಾಲಿವುಡ್ ಸೂಪರ್ಸ್ಟಾರ್ಗಳಾದ ಮಹೇಶ್ ಬಾಬು, ಮಂಚು ಮನೋಜ್, ಲಕ್ಷ್ಮಿ ಸಂಗೀತ ನಿರ್ದೇಶಕ ತಮನ್ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಈಗ ಹೊಸದಾಗಿ ನಟ ಬಾಹುಬಲಿ ಕಟ್ಟಪ್ಪ ಸತ್ಯರಾಜ್ ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಕೋವಿಡ್ ಪಾಸಿಟಿವ್ ಕಂಡುಬಂದ ನಂತರ ಕುಟುಂಬ […]
ನವದೆಹಲಿ: ಕೋವಿಡ್ ಸೋಂಕು ಎಲ್ಲೆಡೆಯೂ ವೇಗವಾಗಿ ಹರಡುತ್ತಿದೆ. ಅನೇಕ ಸೆಲೆಬ್ರಿಟಿಗಳಿಗಳಲ್ಲೂ ಸೋಂಕು ಕಾಣಿಸಿಕೊಳ್ಳುತ್ತಿದ್ದು, ನಟಿ ಸ್ವರಾ ಭಾಸ್ಕರ್ ಅವರಲ್ಲೂ ಕೋವಿಡ್ ಸೋಂಕು ದೃಢಪಟ್ಟಿದ್ದು, ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ . ಕೋವಿಡ್ ಹಿನ್ನೆಲೆಯಲ್ಲಿ ಜನವರಿ 5 ರಿಂದ ಐಸೋಲೇಷನ್ ನಲ್ಲಿದ್ದು , ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇನೆ . ನನ್ನ ಜೊತೆಗೆ ಸಂಪರ್ಕಕ್ಕೆ ಬಂದವರು, ಸೋಂಕು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸ್ವರಾ ಮನವಿ ಮಾಡಿದ್ದಾರೆ . ನನಗೆ […]
ತಮ್ಮ ಮಾತಿನ ಮೂಲಕವೇ ಮನೆಮಾತಾಗಿರುವ ಒಳ್ಳೆ ಹುಡುಗ ಪ್ರಥಮ್ ಪ್ರಥಮ ಬಾರಿಗೆ ನಿರ್ದೇಶಿಸಿರುವ ಚಿತ್ರ ” ನಟ ಭಯಂಕರ”. ಈ ಚಿತ್ರದ ನಾಯಕ ಕೂಡ ಪ್ರಥಮ್ ಅವರೆ. ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. “ಮದಗಜ” ರೋರಿಂಗ್ ಸ್ಟಾರ್ ಶ್ರೀಮುರಳಿ ಹಾಡುಗಳನ್ನು ಬಿಡುಗಡೆ ಮಾಡಿದರು. ಲಹರಿ ಸಂಸ್ಥೆಯ ವೇಲು, ಜಿಲ್ಲಾಧಿಕಾರಿ ದಯಾನಂದ್, ಗೀತರಚನೆಕಾರ ಡಾ||ವಿ.ನಾಗೇಂದ್ರಪ್ರಸಾದ್, ಗಿರೀಶ್, ಅರ್ಜುನ್ ಕುಮಾರ್ ಬಂಗಾರಪ್ಪ ಸೇರಿದಂತೆ ಅನೇಕ ಗಣ್ಯರು ಆಡಿಯೋ ರಿಲೀಸ್ […]
ನಟಿಯೊಬ್ಬರು ನಟನಂತೆ ದೊಡ್ಡ ಮಟ್ಟದ ಅಭಿಮಾನಿ ವರ್ಗ ಪಡೆಯುವುದು ಬಹಳ ಅಪರೂಪ. ಆದರೆ ಆ ರೀತಿಯ ಅಪರೂಪದ ನಟಿ ಅನುಷ್ಕಾ ಶೆಟ್ಟಿ. ಕರ್ನಾಟಕ ಮೂಲದ ಅನುಷ್ಕಾ ಶೆಟ್ಟಿ ತೆಲುಗು, ತಮಿಳು ಸಿನಿಮಾಗಳಲ್ಲಿ ಬಹಳ ದೊಡ್ಡ ಹೆಸರು. 2005 ರಿಂದಲೂ ನಟಿಸುತ್ತಿರುವ ಅನುಷ್ಕಾ ಶೆಟ್ಟಿ ಈ ಹದಿನೇಳು ವರ್ಷಗಳಲ್ಲಿ ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆ ಮೂಲಕ ದೊಡ್ಡ ಮಟ್ಟದ ಅಭಿಮಾನಿ ವರ್ಗವನ್ನು ಸಂಪಾದಿಸಿದ್ದಾರೆ. ವಯಸ್ಸಿನ ಕಾರಣಕ್ಕೆ ಅಥವಾ ಇತರೆ ಕಾರಣಗಳಿಂದಾಗಿ ಅನುಷ್ಕಾ […]
ಸ್ಯಾಂಡಲ್ ವುಡ್ ನ ನಾಯಕ ನಟ ಅನೀಶ್ ಅವರ ಮುಂದಿನ ಸಿನಿಮಾ ಅಧಿಕೃತವಾಗಿ ಘೋಷಣೆಯಾಗಿದೆ. ಹೊಸ ಸಿನಿಮಾದ ಹೆಸರು ಬಹಿರಂಗವಾಗಿದ್ದು ‘ಬೆಂಕಿ’ ಎನ್ನುವ ಈ ಪ್ರಾಜೆಕ್ಟ್ ಅಣ್ಣ ತಂಗಿ ಸೆಂಟಿಮೆಂಟ್ ಎಳೆಯನ್ನು ಹೊಂದಿರಲಿದೆ. ಬೆಂಕಿ ಸಿನಿಮಾವನ್ನು ಕನ್ನಡದ ನಿರ್ದೇಶಕ ಎ.ಆರ್.ಬಾಬು ಅವರ ಪುತ್ರ ಶಾನ್ ಅವರು ನಿರ್ದೇಶಿಸುತ್ತಿದ್ದಾರೆ. ಬೆಂಕಿ ಸಿನಿಮಾವನ್ನು ಅನೀಶ್ ಅವರೇ ನಿರ್ಮಾಣ ಮಾಡುತ್ತಿದ್ದಾರೆ ಎನ್ನುವುದು ವಿಶೇಷ. ಬೆಂಕಿ ಸಿನಿಮಾ ಕೇವಲ ಅಣ್ಣ-ತಂಗಿ ಸೆಂಟಿಮೆಂಟ್ ಮಾತ್ರವಲ್ಲ ಕಾಮಿಡಿ- ಹಾರರ್ […]