ಹೈದರಾಬಾದ್: ಚಿಕ್ಕ ವಯಸ್ಸಿನಲ್ಲಿ ನನ್ನ ತಂದೆಯಿಂದಲೆ ಲೈಂಗಿಕ ಕಿರುಕುಳಕ್ಕೆ ಗುರಿಯಾಗಿದ್ದೇ ಎಂಬ ನನ್ನ ಹೇಳಿಕೆ ಬಗ್ಗೆ ನನಗೆ ಯಾವುದೇ ನಾಚಿಕೆಯಾಗಿಲ್ಲ ಎಂದು ಬಿಜೆಪಿ ನಾಯಕಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಹೇಳಿದ್ದಾರೆ. ನಾನು ಆಶ್ಚರ್ಯಕರವಾದ ಹೇಳಿಕೆಯನ್ನು ನೀಡಿಲ್ಲ, ಆ ಹೇಳಿಕೆ ನನ್ನಿಂದ ಹೊರಬಂದ ಪ್ರಾಮಾಣಿಕತೆ ಎಂದು ನಾನು ಭಾವಿಸುತ್ತೇನೆ. ನಾನು ಹೇಳಿದ್ದಕ್ಕೆ ನಾಚಿಕೆಪಡುವುದಿಲ್ಲ ಏಕೆಂದರೆ ಇದು ನನಗೆ ಸಂಭವಿಸಿದೆ ಮತ್ತು ಅಪರಾಯು ತನ್ನ ಬಳಿ ಇರುವುದಕ್ಕೆ ನಾಚಿಕೆಪಡಬೇಕು […]

ಸುನೀಲ್ ಕುಮಾರ್.ಬಿ.ಆರ್ ಸಾರಥ್ಯದ ಟಿಪಿಎಲ್ ಸೀಸನ್ -2 ಟ್ರೋಫಿ, ಜೆರ್ಸಿ ಅನಾವರಣ – ಮಾರ್ಚ್ 12ರಿಂದ ಕಿರುತೆರೆ ತಾರೆಯರ ಕ್ರಿಕೆಟ್ ರಂಗು  ಎನ್ 1 ಕ್ರಿಕೆಟ್ ಅಕಾಡೆಮಿ ಆಯೋಜಿಸುವ ಕಿರುತೆರೆ ತಾರೆಯರ ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್ -2 ಇದೇ ತಿಂಗಳು ನಡೆಯುತ್ತಿದೆ. ಈಗಾಗಲೇ ತಂಡದ ನಾಯಕರು, ಆಟಗಾರರ ಪಟ್ಟಿ ಬಿಡುಗಡೆ ಮಾಡಿರುವ ಆಯೋಜಕರು ಇದೀಗ ಸೀಸನ್ -2 ಟ್ರೋಫಿ ಹಾಗೂ ಜೆರ್ಸಿ ಅನಾವರಣ ಮಾಡಿದ್ದಾರೆ. ಟಿಪಿಎಲ್ ಟ್ರೋಫಿ ಹಾಗೂ […]

ಮೊನ್ನೆಯಷ್ಟೇ ನಾಲ್ಕನೇ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ ಕಾರ್ಯಕ್ರಮ ಜರುಗಿತು. ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್ ಒಂದರಲ್ಲಿ ನಡೆದ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ 2022ರಲ್ಲಿ ಬಿಡುಗಡೆಗೊಂಡು ಅತ್ಯುತ್ತಮ ಸಾಧನೆ ಮಾಡಿದ ಚಿತ್ರಗಳಿಗೆ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಳೆದ ವರ್ಷ ಅಬ್ಬರಿಸಿದ ಕೆಜಿಎಫ್ ಚಾಪ್ಟರ್ 2 ಹಾಗೂ ಕಾಂತಾರ ಚಿತ್ರಗಳು ಹೆಚ್ಚು ಪ್ರಶಸ್ತಿಗಳನ್ನು ಬಾಚಿಕೊಂಡವು. ನಿರ್ದೇಶನದ ಜತೆಗೆ ನಟನೆಯನ್ನೂ ಸಹ ಮಾಡಿ ಕಾಂತಾರ ಚಿತ್ರದ ದೊಡ್ಡ ಯಶಸ್ಸಿನಲ್ಲಿ ಪ್ರಮುಖ […]

ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾಗಳ ಬಗ್ಗೆ ಕಳೆದೆರಡು ವರ್ಷಗಳಿಂದ ವಿಶ್ವದೆಲ್ಲೆಡೆ ಚರ್ಚೆಯಾಗುತ್ತಿದೆ. 2022ರಲ್ಲಿ ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾಗಳ ಅಬ್ಬರ ನೋಡಿ ಇಡೀ ಭಾರತೀಯ ಚಿತ್ರರಂಗವೇ ಒಮ್ಮೆ ದಂಗಾಗಿ ಹೋಗಿತ್ತು. ‘ಕೆಜಿಎಫ್ 2′,’ಕಾಂತಾರ’,’777 ಚಾರ್ಲಿ’, ‘ವಿಕ್ರಾಂತ್ ರೋಣ’ದಂತಹ ಸಿನಿಮಾಗಳು ಬಾಕ್ಸಾಫೀಸ್‌ನಲ್ಲಿ ಬೇಜಾನ್ ಸದ್ದು ಮಾಡಿದ್ದವು. 2023 ಕೂಡ ಕನ್ನಡ ಚಿತ್ರರಂಗದ ಪಾಲಿಗೆ ಅದೃಷ್ಟದ ವರ್ಷ ಆಗುತ್ತಾ? ಈ ಪ್ರಶ್ನೆಗೆ ಇನ್ನು ಕೆಲವೇ ದಿನಗಳಲ್ಲಿ ‘ಕಬ್ಜ’ ಉತ್ತರ ಕೊಡಲಿದೆ. ಉಪೇಂದ್ರ, ಕಿಚ್ಚ […]

ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಜಾನ್ವಿ ಕಪೂರ್ʼ ತಾಯಿ ಸಾವಿನ ರಹಸ್ಯ ಬಿಚಿಟ್ಟಿದ್ದಾರೆ. ಪತ್ರಕರ್ತೆ ಬರ್ಖಾ ದತ್ ಅವರು ಆಯೋಜಿಸಿದ್ದ ಪ್ರಮುಖ ಹಬ್ಬವಾದ ವಿ ದಿ ವುಮೆನ್‌ ಸಂದರ್ಭದಲ್ಲಿ ಅಮ್ಮ ಶ್ರೀದೇವಿಬಗ್ಗೆಜಾನ್ವಿ ಭಾವನಾತ್ಮಕ ಮಾತುಗಳನ್ನುಆಡಿದ್ದಾರೆ. “ಜಗತ್ತಿನಲ್ಲಿ ತಾಯಿ ಪ್ರೀತಿಸುವಷ್ಟು ಬೇರೆ ಯಾರು ಪ್ರೀತಿಸಲು ಸಾಧ್ಯವಿಲ್ಲ ಆಕೆಯ ಮಾತ್ರ ಎಲ್ಲವನ್ನು ಅರ್ಥ ಮಾಡಿಕೊಳ್ಳುತ್ತಾರೆ. “ನಾನು ಆ ನೋವುನ್ನು ಬಹಳ ಸಮಯದವರೆಗೆ ಅನುಭವಿಸಿದ್ದೇನೆ ಆದರೆ ಅಮ್ಮ ಇಲ್ಲ ಎಂದೂ ಭಾವಿಸುವುದಿಲ್ಲ. ಅಮ್ಮ ನನ್ನ ಜೊತೆ […]

ನಟಿ ರಮ್ಯಾ ಕೃಷ್ಣ ಸೌತ್‌ ಸಿನಿ ಇಂಡಸ್ಟ್ರಿಯಲ್ಲಿ ತಮ್ಮದೇ ಛಾಪು ಮೂಡಿಸಿದವರು. ಅನೇಕ ಕನ್ನಡ ಸಿನಿಮಾಗಳಲ್ಲಿಯೂ ಅವರು ಕೆಲಸ ಮಾಡಿದ್ದಾರೆ. 90 ರ ದಶಕದಿಂದಲೂ ತಮ್ಮ ನಟನೆ ಮತ್ತು ಅಂದಕ್ಕೆ ಹೆಸರುವಾಸಿ. ಆದರೆ ರಮ್ಯಾ ಕೃಷ್ಣ ಅವರ ವೈಯಕ್ತಿಕ ಜೀವನದ ಬಗ್ಗೆಯೂ ಸಾಕಷ್ಟು ವದಂತಿಗಳಿವೆ. ನಿರ್ದೇಶಕ ಕೆ.ಎಸ್.ರವಿಕುಮಾರ್ ಅವರ ಅಫೇರ್ ಬಗ್ಗೆ ಸೃಷ್ಟಿಯಾಗಿದ್ದ ವಿವಾದ ದೊಡ್ಡ ಚರ್ಚೆಗೆ ಗರಾಸವಾಗಿತ್ತು. ರಮ್ಯಾ ಕೃಷ್ಣ ಅವರು ನಿರ್ದೇಶಕ ಕೆ.ಎಸ್.ರವಿಕುಮಾರ್ ಜೊತೆಗೆ ಅನೇಕ ಚಿತ್ರಗಳಲ್ಲಿ […]

  ತಾರಾ ಚಲನಚಿತ್ರರಂಗವೆಂಬ ತಾರೆಗಳ ತೋಟದಲ್ಲಿ ವಿಶಿಷ್ಟರಾದ ತಾರಾ ಅವರ ಹುಟ್ಟಿದ ದಿನ ಮಾರ್ಚ್ 4. ಬಹಳ ವರ್ಷಗಳ ಕಾಲ ರಾಷ್ಟ್ರಮಟ್ಟದ ನಟನಾ ಪ್ರಶಸ್ತಿಗಳಲ್ಲಿ ಕನ್ನಡ ಚಿತ್ರರಂಗದ ಹೆಸರು ಮರೆತುಹೋಗಿದ್ದ ಸಮಯದಲ್ಲಿ, ತಾರಾ ಅವರು ತಮ್ಮ ‘ಹಸೀನಾ’ ಚಿತ್ರದ ಅಭಿನಯದ ಮೂಲಕ ಅದನ್ನು ಕನ್ನಡಕ್ಕೆ ಮತ್ತೊಮ್ಮೆ ತಂದರು. ‘ಕ್ರಮ’, ‘ಕರಿಮಲೆಯ ಕಗ್ಗತ್ತಲು’, ‘ಕಾನೂರು ಹೆಗ್ಗಡತಿ’, ‘ಮುಂಜಾನೆಯ ಮಂಜು’, ‘ನಿನಗಾಗಿ’, ‘ಸಯನೈಡ್’, ‘ಈ ಬಂಧನ’ ಹೀಗೆ ಹಲವು ಚಲನಚಿತ್ರಗಳಲ್ಲಿ ರಾಜ್ಯ ಪ್ರಶಸ್ತಿ […]

ವಸಿಷ್ಠ ಸಿಂಹ ನಟನೆಯ ಬಹು ನಿರೀಕ್ಷಿತ ಚಿತ್ರ ‘ಲವ್ ಲಿ’. ಆರಂಭದಿಂದಲು ಸಿನಿ ಪ್ರೇಕ್ಷಕರ ಗಮನ ಸೆಳೆಯುತ್ತಿರುವ ಈ ಚಿತ್ರಕ್ಕೆ ಚೇತನ್ ಕೇಶವ್ ಆಕ್ಷನ್ ಕಟ್ ಹೇಳಿದ್ದಾರೆ. ಕಮರ್ಶಿಯಲ್ ರೊಮ್ಯಾಂಟಿಕ್ ಲವ್ ಸ್ಟೋರಿ ಸಬ್ಜೆಕ್ಟ್ ಒಳಗೊಂಡ ಈ ಚಿತ್ರ ಅದ್ದೂರಿಯಾಗಿ ನಿರ್ಮಾಣವಾಗುತ್ತಿದ್ದು, ಸದ್ಯ ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಚಿತ್ರತಂಡ ಡಬ್ಬಿಂಗ್ ನಲ್ಲಿ ನಿರತವಾಗಿದೆ. ಲಂಡನ್ ನಲ್ಲಿ ಸೆರೆ ಹಿಡಿಯುವ ಸಾಂಗ್ ವೊಂದನ್ನು ಹೊರತು ಪಡಿಸಿ ಚಿತ್ರದ ಚಿತ್ರೀಕರಣ ಕಂಪ್ಲೀಟ್ ಮಾಡಿರುವ […]

ಬಹುಮುಖ ಪ್ರತಿಭೆ ಕನ್ನಡ ಅಲ್ಲದೆ ಬೇರೆ ಭಾಷೆಗಳ ಚಿತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟ ಬಾಲಾಜಿ ಮನೋಹರ್ ಹೀಗ “ತತ್ಸಮ ತದ್ಭವ” ಚಿತ್ರದಲ್ಲಿ ಸಿದ್ದಾರ್ಥ್ ಎಂಬ ವಿಶಿಷ್ಟ ಪಾತ್ರದಲ್ಲಿ ಕಾಣಿಸಿಕೊಂಡು ಕುತೂಹಲ ಮೂಡಿಸಿದ್ದಾರೆ…. “ವಿಭಿನ್ನ ಪಾತ್ರವೊಂದರಲ್ಲಿ ಅಭಿನಯಿಸಲು ಸಂತೋಷವಾಗುತ್ತಿದೆ. ತಮ್ಮ ಕಥೆಯನ್ನು ತೆರೆ ಮೇಲೆ ತರಲು ಇರಬೇಕಾದ ಧೈರ್ಯ ಮತ್ತು ಅದನ್ನು ಪ್ರಸ್ತುತಪಡಿಸುವ ಕಲೆ ಈ ಸಿನೆಮಾದ ಯುವ ನಿರ್ದೇಶಕರಿಗಿದೆ. ಒಟ್ಟಿನಲ್ಲಿ ಈ ಪಾತ್ರ ಸಂತಸ ತಂದಿದೆ”. ಬಾಲಾಜಿ […]

ತೆಲುಗಿನ ನಟ ನರೇಶ್ ಹಾಗೂ ಕನ್ನಡದ ನಟಿ ಪವಿತ್ರಾ ಲೋಕೇಶ್ ಪ್ರೀತಿ, ಪ್ರೇಮದ ಕುರಿತು ಯಾವ ವಿಷಯವೂ ಇದೀಗ ಗುಟ್ಟಾಗಿ ಉಳಿದಿಲ್ಲ. ಇದೇ ಕಾರಣಕ್ಕೆ ನರೇಶ್ ಎರಡನೇ ಪತ್ನಿ ರಮ್ಯಾ ಹಾಗೂ ನರೇಶ್ ಗೆ ಸಾಕಷ್ಟು ಗಲಾಟೆಗಳು ನಡೆದಿದೆ. ಇದೀಗ ಈ ಸಂಬಂಧದ ಮೇಲೆಯೇ ತೆಲುಗಿನಲ್ಲಿ ಸಿನಿಮಾ ಮಾಡುತ್ತಿದ್ದಾರೆ ನಿರ್ದೇಶಕ ಎಂ.ಆರ್.ರಾಜು. ಈ ಸಿನಿಮಾಗೆ ಸ್ವತಃ ಪವಿತ್ರಾ ಲೋಕೇಶ್ ಮತ್ತು ನರೇಶ್ ನಾಯಕ ಹಾಗೂ ನಾಯಕಿ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ […]

Advertisement

Wordpress Social Share Plugin powered by Ultimatelysocial