ಗಂಗಾ ಎಕ್ಸ್ಪ್ರೆಸ್ವೇ ಉತ್ತರ ಪ್ರದೇಶದಲ್ಲಿ ಸಂಪರ್ಕವನ್ನು ಸುಧಾರಿಸಲಿದ್ದು, ಆರ್ಥಿಕ ಅಭಿವೃದ್ಧಿ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಇಂದು ಮಧ್ಯಾಹ್ನ 1 ಗಂಟೆಗೆ, ಗಂಗಾ ಎಕ್ಸ್ಪ್ರೆಸ್ವೇಗೆ ಶಂಕುಸ್ಥಾಪನೆ ಮಾಡಲು ಶಹಜಹಾನ್ಪುರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದೇನೆ.ಈ ಎಕ್ಸ್ಪ್ರೆಸ್ವೇ ಉತ್ತರ ಪ್ರದೇಶದಾದ್ಯಂತ ಸಂಪರ್ಕವನ್ನು ಸುಧಾರಿಸುವ ಪ್ರಮುಖ ಮೂಲ ಯೋಜನೆಯಾಗಿದೆ. ಆರ್ಥಿಕ ಅಭಿವೃದ್ಧಿ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಎಂದು ಹೇಳಿದ್ದಾರೆ.ಉತ್ತರ […]
CM
ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಧ್ವಂಸಗೊಳಿಸಿ, ಅಟ್ಟಹಾಸ ಮೆರೆದಿರೋದು ಖಂಡನೀಯವಾಗಿದೆ. ಈ ಕ್ರಮವನ್ನು ಸರ್ಕಾರ ಎಂದೂ ಮನ್ನಿಸೋದಿಲ್ಲ. ಪುತ್ಥಳಿ ಕೆಡವಿ, ಪುಂಡಾಟ ಮೆರೆದಂತ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಎಚ್ಚರಿಕೆ ನೀಡಿದ್ದಾರೆ.ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸ್ವಾತಂತ್ರ್ಯ ಸಂದರ್ಭದಲ್ಲಿ ದೇಶಕ್ಕಾಗಿ ಹೋರಾಡಿ, ವೀರ ಮರಣಹೊಂದಿದಂತ ಮಹಾನಾಯಕ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಆಗಿದ್ದಾರೆ. ಬ್ರಿಟೀಷರ ವಿರುದ್ಧ ಹೋರಾಡಿ ದೇಶದ […]
ಬೆಳಗಾವಿಯಲ್ಲಿ ನಡೆದ ಪುಂಡಾಟಿಕೆ ಖಂಡನೀಯ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ ತೆಗೆದುಕೊಳ್ಳಲು ಗೃಹಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ. ಬೆಳಗಾವಿಯಲ್ಲಿ ನಡೆದ ಪುಂಡಾಟಿಕೆ ಖಂಡನೀಯ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ ತೆಗೆದುಕೊಳ್ಳಲು ಗೃಹಸಚಿವರಿಗೆ ಸೂಚನೆ ನೀಡಲಾಗಿದ್ದು, ಹಲವರ ಬಂಧನವೂ ಆಗಿದೆ. ಕಲ್ಲು ತೂರಾಟ, ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವುದು ಕಾನೂನುಬಾಹಿರ. ಇಂತಹ ಘಟನೆ […]
ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ವಿಚಾರ ನೆಲಮಂಗಲದಲ್ಲಿ ಸಚಿವ ಡಾ.ಅಶ್ವಥ್ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ…ರಾಜ್ಯದಲ್ಲಿ ಪ್ರತಿಯೊಬ್ಬರೂ ಪರಸ್ಪರ ಪ್ರೀತಿಸುವಂತಾಗಬೇಕು, ವೈ ಮನಸ್ಸು ಬಿಡಬೇಕು.ಬೆಳಗಾವಿ ಎಂದೆಂದೂ ಕರ್ನಾಟಕದ ಅವಿಭಾಜ್ಯ ಅಂಗ,ಇನ್ನೂ ರೀತಿಯಲ್ಲಿ ಮಾಡುತ್ತಿರುವುದು ದುರದೃಷ್ಟಕರ.ಗಲಾಟೆ ಪುಂಡಾಟಿಕೆ ಯಾವಾಗಲೂ ಪ್ರಯೋಜನಕ್ಕೆ ಬರಲ್ಲ ತೊಡೆ ತಟ್ಟೊದ್ರಿಂದ ಏನೂ ಆಗಲ್ಲ.ಈ ಎಂಇಎಸ್ ಪೌರುಷಗಳು ಕೇವಲ ತಾತ್ಕಾಲಿಕ.ಸದನ ನಡೆಯುವ ವೇಳೆ ಈ ರೀತಿಯಲ್ಲಿ ಹಾಗುವುದು ಸಾಮಾನ್ಯ.ಪುಂಡಾಟಿಕೆಯನ್ನ ನಾನು ಖಂಡಿಸುತ್ತೇನೆ..ಏನೇ ತಲೆಕೆಳಗಾದ್ರು ಏನೂ ಹಾಗಲ್ಲ ವಿಫಲ ಪ್ರಯತ್ನ ಮಾಡಿ ಮೈ […]
ಮತಾಂತರ ನಿಷೇಧ ಕಾಯಿದೆ ಜಾರಿಗೆ ತರುವ ಸರ್ಕಾರದ ನಿರ್ಧಾರದ ಹಿಂದೆ ದುರುದ್ದೇಶ ಅಡಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.ಮತಾಂತರ ನಿಷೇಧ ಕಾಯಿದೆ ಜಾರಿಗೆ ತರಲು ಮುಂದಾಗಿರುವ ಸರ್ಕಾರದ ತೀರ್ಮಾನ ವಿರೋಧಿಸಿ ಭಾರತೀಯ ಕ್ರೆöÊಸ್ತ ಒಕ್ಕೂಟ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಯಿದೆ ತರುವ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿದರು.ಸರ್ಕಾರ ಜಾರಿಗೆ ತರಲು ಹೊರಟಿರುವ ಕಾಯಿದೆ ಹಿಂದೆ ಜನರ ಹಿತವೇನೂ ಇಲ್ಲ. ದೇಶದ […]
ಹುಬ್ಬಳ್ಳಿ: ಸದನದಲ್ಲಿ ರಮೇಶ್ ಕುಮಾರ್ ಅವರಂತಹ ಹಿರಿಯರು ಆ ರೀತಿ ಹೇಳಬಾರದಾಗಿತ್ತು. ಅವರು ಯಾಕೆ ಹೇಳಿದ್ರು ಅಂತ ಅರ್ಥ ಆಗಲಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.ನಗದರಲ್ಲಿಂದು ಮಾತನಾಡಿದ ಅವರು, ಈ ರೀತಿ ಶಬ್ದ ಪ್ರಯೋಗ ಅಥವಾ ಮಹಿಳೆಯರ ಬಗ್ಗೆ ಮಾತನಾಡೋದು ಸರಿ ಅಲ್ಲ. ರಮೇಶ್ ಕುಮಾರ್ ಈ ಬಗ್ಗೆ ಸ್ಪಷ್ಟಿಕರಣ ಕೊಡಬೇಕು. ನಿನ್ನೆಯೇ ಆ ಬಗ್ಗೆ ಕ್ಷಮೆ ಕೇಳಬೇಕಿತ್ತು, ಇವತ್ತು ಕೇಳಿದ್ದಾರೆ.ಒಳ್ಳೆ ರೀತಿಯ ಸಂಸದೀಯ ಪಟು ಆಗಿದ್ದವರ […]
40 ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ(96) ವಿಧಿವಶರಾಗಿದ್ದಾರೆ.ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಸ್ವಗ್ರಾಮ ತೂಬಗೆರೆಯಲ್ಲಿ ಬೆಳಗ್ಗೆ 9 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.9 ಗಂಟೆಯ ನಂತರ ಪಾರ್ಥಿವ ಶರೀರವನ್ನು ದೊಡ್ಡಬಳ್ಳಾಪುರದ ಜಾಲಪ್ಪ ಇಂಜಿನಿಯರಿಂಗ್ ಕಾಲೇಜಿಗೆ ಸ್ಥಳಾಂತರ ಮಾಡಲಾಗುವುದು. ಅಂತಿಮ ದರ್ಶನದ ನಂತರ ಇಂದು ಸಂಜೆ 5 ಗಂಟೆಯೊಳಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಈಡಿಗರ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.ಅಕ್ಟೋಬರ್ 19, 1925 […]
ಅತಿಥಿ ಉಪನ್ಯಾಸಕರ ನೇಮಕ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸದನದಲ್ಲಿ ಪ್ರಸ್ತಾಪ ಮಾಡಿದ್ದಾರೆ…ಕರ್ನಾಟಕದಲ್ಲಿ ಪ್ರಥಮ ದರ್ಜೆ ಕಾಲೇಜು 430 ಇವೆ.ಅದರಲ್ಲಿ 14ಸಾವಿರಕ್ಕೂ ಹೆಚ್ಚು ಜನ ಅತಿಥಿ ಉಪನ್ಯಾಸಕರಿದ್ದಾರೆ.ಬಹಳ ಜನ PHD, ಮಾಸ್ಟರ್ ಡಿಗ್ರಿ ಮಾಡಿದ್ದಾರೆ.ಕಾಲೇಜು ನಡೆಯುವ ವೇಳೆ ವೇತನ ನೀಡಿ ಕೆಲಸ ಮಾಡಿಸಿಕೊಳ್ಳಲಾಗ್ತಿದೆ.ಅವರು ಈಗ ವಿಧಾನಸೌಧದಲ್ಲಿ ಪ್ರತಿಭಟನೆ ಮಾಡ್ತಿದ್ದಾರೆ.ನನಗೂ ಬಂದು ಮನವಿ ನೀಡಿದ್ದಾರೆ.ಅವರದ್ದು ಎರಡು ಬೇಡಿಕೆ.12 ತಿಂಗಳು ವೇತನ ನೀಡಬೇಕು ಮತ್ತು ದೆಹಲಿಯಲ್ಲಿ 16ಸಾವಿರ ಜನ ಅತಿಥಿ ಉಪನ್ಯಾಸಕರನ್ನ ನೇಮಕ […]
ಅತ್ಯಾಚಾರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು ಅತ್ಯಂತ ದುಃಖಕರ, ದುರದೃಷ್ಟದ ಹೇಳಿಕೆಯಾಗಿದೆ.ದೇಶವು ಇನ್ನೂ ಸ್ತ್ರೀದ್ವೇಷ ಹೊಂದಿರುವ ಸಾರ್ವಜನಿಕ ಪ್ರತಿನಿಧಿಗಳನ್ನು ಹೊಂದಿದೆ ಎಂದಿದ್ದಾರೆ.ಅತ್ಯಾಚಾರ ತೆಡಯಲು ಸಾಧ್ಯವಾಗದಿದ್ದಾಗ ಮಲಗಿ ಆನಂದಿಸಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ಗುರುವಾರ ಸದನದಲ್ಲಿ ನೀಡಿದ್ದ ಹೇಳಿಕೆ ರಾಷ್ಟ್ರದಾದ್ಯಂತ ತೀವ್ರ […]
ಮುಂದಿನ ಶೈಕ್ಷಣಿಕ ವರ್ಷದಿಂದ ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಪರಿಚಯಿಸಲು ಯೋಜನೆ ಮಾಡಿದ್ದೇವೆ ಎಂಧು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ಬಿ.ಸಿ.ನಾಗೇಶ್ ಅವರು, ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಪರಿಚಯಿಸಲು ಯೋಚನೆ ಮಾಡಿದ್ದೇವೆ.ಅಲ್ಲಿರುವ ಸಿಬ್ಬಂದಿಗೆ ತರಬೇತಿ ನೀಡಿ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.ಇನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣದಲ್ಲಿ ಹಂತ ಹಂತವಾಗಿ ಎನ್ ಇಪಿ ಜಾರಿ ಮಾಡಲಾಗುತ್ತದೆ. 26 […]