ರಾಜ್ಯದ ಕೆಲವೆಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಹದಗೆಟ್ಟಿರುವುದು ತಮ್ಮ ಗಮನಕ್ಕೆ ಬಂದಿದ್ದು, ಈ ಬಗ್ಗೆ ಕಾಲಮಿತಿಯೊಳಗೆ ತುರ್ತಾಗಿ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕೆಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರು ರಾಷ್ಟ್ರೀಯ ಹೆದ್ದಾರಿ ನಿರ್ವಹಣಾಧಿಕಾರಿಗಳಿಗೆ ಗಡುವು ನೀಡಿದ್ದಾರೆ.. ವಿಕಾಸಸೌಧದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕೈಗೊಂಡಿರುವ ಕೆಲಸ ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಿದ ಬಳಿಕ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಈ ಬಾರಿ ಮಳೆಯ ಪರಿಣಾಮದಿಂದಾಗಿ ಪೂನಾ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯೂ ಸೇರಿದಂತೆ ಹಲವು ಹೆದ್ದಾರಿಗಳಲ್ಲಿ ಗುಂಡಿಗಳು ನಿರ್ಮಾಣವಾಗಿ ವಾಹನ […]

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ 25ನೇ ಘಟಿಕೋತ್ಸವದಲ್ಲಿ ಕನ್ನಡಕ್ಕೆ ಅಪಮಾನ ಮಾಡಲಾಗಿದೆ ಎಂದು ಎಚ್‌.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ .ಈ ಸಂಬಂಧ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಕನ್ನಡ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ ಎಂದಿದ್ದಾರೆ. ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು ಹಾಗೂ ಸಂಸದರಿದ್ದ ವೇದಿಕೆಯಲ್ಲೇ ಕನ್ನಡವನ್ನು ಮೂರನೇ ಸ್ಥಾನಕ್ಕಿಳಿಸಿರುವುದು ಅಕ್ಷಮ್ಯ ಎಂದಿದ್ದಾರೆ. ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ […]

ರಾಜ್ಯದ ಪ್ರಬಲ ಬಿಜೆಪಿ ನಾಯಕ ಬಿ.ಎಸ್​. ಯಡಿಯೂರಪ್ಪ ನಾಲ್ಕು ಬಾರಿ ಸಿಎಂ ಆಗಿದ್ದರೂ ಸಹ ಅವರು ಪೂರ್ಣ ಅವಧಿಗೆ ಅಧಿಕಾರವನ್ನು ನಿರ್ವಹಿಸಿರಲಿಲ್ಲ. ವಯಸ್ಸಿನ ಕಾರಣಕ್ಕೆ ಇದೀಗ ಅವರನ್ನು ಅಧಿಕಾರದಿಂದ ಇಳಿಸಿ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಸ್ಥಾನಕ್ಕೆ ಏರಿಸಲಾಗಿದೆ. ಇದು ಸಾಮಾನ್ಯವಾಗಿ ಯಡಿಯೂರಪ್ಪ ಅವರಿಗೂ ಸಹ ಅಸಮಾಧಾನಕ್ಕೆ ಕಾರಣವಾಗಿರುವುದು ಸುಳ್ಳಲ್ಲ. ಆದರೆ, ಕಾಂಗ್ರೆಸ್ ನಾಯಕರು​ ಕಳೆದ ಎರಡು ತಿಂಗಳಿನಿಂದ ಬಿ.ಎಸ್​. ಯಡಿಯೂರಪ್ಪ ಅವರಿಗೆ ಬಿಜೆಪಿ ಮೋಸ ಮಾಡಿದೆ ಎಂದು ಮಾತನಾಡುತ್ತಿದ್ದಾರೆ. […]

ಕರ್ನಾಟಕ ಪ್ರಗತಿಪರ ರಾಜ್ಯವಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಸದಾ ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅರಮನೆ ಮೈದಾನದಲ್ಲಿಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯೋಜಿಸಿರುವ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಗಾರ ಸಿಎಂ ಬೊಮ್ಮಾಯಿ ಅವರು  ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಅತಿ ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳಿವೆ. ರಕ್ಷಣೆ, ಬಯೋಟೆಕ್ನಾಲಜಿ, ಇಂಜಿನಿಯರಿಂಗ್, ವೈಮಾನಿಕ, ಬಾಹ್ಯಾಕಾಶ ಸೇರಿದಂತೆ ಸುಮಾರು 180ಕ್ಕೂ ಹೆಚ್ಚು ಅಂತಾರಾಷ್ಟ್ರೀಯ […]

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯೋಜಿಸಿದ್ದ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ , ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ ನಾರಾಯಣ್, ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಗಣಿ ಮತ್ತು ಭೂವಿಜ್ಞಾನ […]

ರಾಜ್ಯ ಸರ್ಕಾರದಿಂದಲೇ ಏರ್ಪಟ್ಟಿದ್ದ ಸಿಎಂ ಬೊಮ್ಮಾಯಿ ಅವರ ಕಾರ್ಯಕ್ರಮದಲ್ಲೇ ಮತ್ತೊಮ್ಮೆ ಕನ್ನಡ ಮಾಯವಾಗಿದ್ದು ಈ ಅನುಮಾನಕ್ಕೆ ಕಾರಣವಾಗಿದೆ. ರಾಜೀವ್ ಗಾಂಧಿ ಆಸ್ಪತ್ರೆ ಆವರಣದಲ್ಲಿ ನಡೆದ ಕೋವಿಡ್ ಗಾಗಿ ಪ್ರತ್ಯೇಕ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಎಲ್ಲಿಯೂ ಕನ್ನಡದ ಸುಳಿವು ಇಲ್ಲದಿರುವುದು ಕನ್ನಡಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಈ ಹಿಂದೆ ಮೆಟ್ರೋ ಉದ್ಘಾಟನೆ ಸಂದರ್ಭದಲ್ಲಿಯೂ ಕೂಡ ಕನ್ನಡ ಭಾಷೆಯನ್ನು ಕಡೆಗಣಿಸಿರುವುದಕ್ಕೆ ಜನರಿಂದ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಆದರೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು ಮತ್ತದೆ ಕಥೆ […]

ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಇತ್ತೀಚೆಗೆ ತಮ್ಮ ಪುಟ್ಟ ಸ್ನೇಹಿತನನ್ನು ಟ್ವಿಟ್ಟರ್‌ ಮುಖಾಂತರ ಪರಿಚಯಿಸಿದ್ದಾರೆ. ಅಷ್ಟೇ ಅಲ್ಲ ಅವರೊಂದಿಗಿನ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಗೂಗಲ್ ಬಾಯ್‘ ಎಂದು ಕರೆಯಲ್ಪಡುವ ಹಿತೇನ್, ಐದು ವರ್ಷದ ಬಾಲಕ ಭಾರತ ಮಾತ್ರವಲ್ಲ ಅಮೆರಿಕಾದ ಎಲ್ಲಾ ರಾಜ್ಯಗಳ ಹೆಸರುಗಳನ್ನು ಹೇಳುತ್ತಾನೆ. ಸಂಸ್ಕೃತ, ಇಂಗ್ಲಿಷ್ ಮತ್ತು ಫ್ರೆಂಚ್ ಭಾಷೆಗಳಲ್ಲಿಯೂ ನಿರರ್ಗಳವಾಗಿ ಮಾತನಾಡುತ್ತಾನೆ. 5 ವರ್ಷದ ಮಕ್ಕಳೆಂದರೆ ವರ್ಣಮಾಲೆ, ಆಕಾರಗಳು ಮತ್ತು ಬಣ್ಣಗಳು ಮುಂತಾದ ವಿಷಯಗಳ ಬಗ್ಗೆ […]

ಬೆಂಗಳೂರು ನಗರ ಉಸ್ತುವಾರಿ ವಿಚಾರವಾಗಿ ಸಚಿವ ವಿ.ಸೋಮಣ್ಣ ಹಾಗೂ ಆರ್.ಅಶೋಕ್ ನಡುವೆ ಪೈಪೋಟಿ ತೀವ್ರಗೊಂಡಿದ್ದು, ಸಚಿವ ಆರ್.ಅಶೋಕ್ ವಿರುದ್ಧ ವಿ.ಸೋಮಣ್ಣ  ಗರಂ ಆಗಿದ್ದಾರೆ.. ಸುದ್ದಿಗಾರರೊಂದಿಗೆ ಮಾತನಾಡಿದ ವಿ.ಸೋಮಣ್ಣ, ಬೆಂಗಳೂರು ಉಸ್ತುವಾರಿಯನ್ನು ನೀಡುವಾಗ ಮುಖ್ಯಮಂತ್ರಿಗಳು ಜೇಷ್ಠತೆಯನ್ನು ಪರಿಗಣಿಸಬೇಕು. ಉಸ್ತುವಾರಿ ಸಿಎಂ ಬಳಿಯೇ ಇದ್ದರೆ ನಮ್ಮ ಅಭ್ಯಂತರವಿಲ್ಲ, ಆದರೆ ಬೇರೆಯವರಿಗೆ ಕೊಟ್ಟರೆ ನನ್ನನ್ನು ಪರಿಗಣಿಸಬೇಕು ನಾನು ಬೆಂಗಳೂರಿಗೆ ಹಿರಿಯ ಸಚಿವ ಎಂಬುದನ್ನು ಹೇಳಿದ್ದೇನೆ .. ಬೆಂಗಳೂರಿನ ಉಸ್ತುವಾರಿ ಮಾಡಲು ಯಾರ ಅನುಭವ ಏನು […]

ಆರ್‌ಎಸ್‌ಎಸ್ ಯಾವುದೇ ಪಕ್ಷಕ್ಕೆ ಸೀಮಿತವಾಗಿಲ್ಲ ಜೆಡಿಎಸ್ ಆಗಲಿ ಬೇರೆಯವರಾಗಲಿ ಚುನಾವಣೆಯಲ್ಲಿ ಎದುರಿಸಬೇಕಿರುವುದು ಬಿಜೆಪಿಯನ್ನ ಹೊರತು ಆರ್‌ಎಸ್‌ಎಸ್‌ ಅಲ್ಲ. ಹೀಗಾಗಿ ವಿನಾಕಾರಣ ಸಂಘಟನೆಯನ್ನು ಚರ್ಚೆಗೆ ಎಳೆಯಬೇಡಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಎಚ್ಚರಿಕೆ ನೀಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ ಎಸ್‌ ಎಸ್ ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸುವ, ಧರ್ಮ ರಕ್ಷಣೆಯ ಉದ್ದೇಶ ಹೊಂದಿದೆ ಎಂದರು. ದೇವೆಗೌಡರು ಪ್ರಧಾನಿ ಆಗಿದ್ದಾಗ […]

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ರಾಜ್ಯದ ಕಲ್ಲಿದ್ದಲು ವಿಚಾರಗಳಿಗೆ ಸಂಬಂಧಿಸಿದಂತೆ ಕೇಂದ್ರ ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಪ್ರಹ್ಲಾದ್ ಜೋಶಿ ಅವರನ್ನು ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದರು.  ಬಳಿಕ ಕೇಂದ್ರದ ಅರಣ್ಯ, ಪರಿಸರ ಮತ್ತು ಹವಮಾನ ಬದಲಾವಣೆ ಸಚಿವರಾದ ಬೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.  ಸಚಿವರಾದ ಡಾ. ಕೆ. ಸುಧಾಕರ್ , ಸುನೀಲ್ ಕುಮಾರ್, ರಾಜ್ಯ ಸರ್ಕಾರದ ಮುಖ್ಯ […]

Advertisement

Wordpress Social Share Plugin powered by Ultimatelysocial