ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಪ್ರಕಟಿಸಲು ಕೇಂದ್ರ ಸರ್ಕಾರದ ಮೇಲೆ ಎಲ್ಲಾ ರೀತಿಯ ಒತ್ತಡ ತರಲಾಗಿದೆ. ನ್ಯಾಯಾಲಯದ ವಾಜ್ಯ ಇತ್ಯರ್ಥವಾದ ಬಳಿಕವೇ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.ವಿಧಾನ ಪರಿಷತ್‍ನಲ್ಲಿ ಸದಸ್ಯ ಪ್ರಕಾಶ್ ರಾಥೋಡ್ ಅವರು ಪ್ರಶ್ನೆಗೆ ಉತ್ತರಿಸಿದ ಅವರು, ಕೃಷ್ಣಾ ನ್ಯಾಯಾೀಕರಣದ ತೀರ್ಪು ಅಸೂಚನೆ ಪ್ರಕಟವಾದ ಬಳಿಕ ಕೃಷ್ಣಾ ಮೇಲ್ದಂಡೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಕೇಂದ್ರ […]

ಬೆಳೆ ಹಾನಿ ಕುರಿತು ಚಾರಿತ್ರಿಕ ಮಹತ್ವಪೂರ್ಣ ನಿರ್ಣಯ ಕೈಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರ ರೈತ ಪರವೆಂದು ಮತ್ತೊಮ್ಮೆ ಸಾಬೀತಾಗಿದೆ.ಈ ಮೂಲಕ ದೇಶದ ರೈತರ ಬೆಂಬಲಕ್ಕೆ ಬಿಜೆಪಿ ಸರ್ಕಾರ ನಿಂತಿದೆ ಎಂದು ಬಿಜೆಪಿ ಮಾಜಿ ವಿಧಾನ ಪರಿಷತ್ ಸದಸ್ಯ ಎಂ ಆರ್ ಹುಲಿನಾಯ್ಕರ್ ತಿಳಿಸಿದರು.ತುಮಕೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗಾಗಿ ಅತ್ಯಂತ ಮಹತ್ವಪೂರ್ಣ ನಿರ್ಧಾರಗಳನ್ನು ಪ್ರಕಟಿಸಿದೆ ಇದು ಕರ್ನಾಟಕದಲ್ಲಿ ಈ ವರೆಗೆ ಕಂಡಿರುವ […]

ಮತಾಂತರ ನಿಷೇಧ ಕಾಯ್ದೆ ಜಾರಿ ಹಿನ್ನೆಲೆ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ…ಮತಾಂತರ ನಿಷೇಧ ಕಾಯ್ದೆ ಇವತ್ತು ಮಂಡನೆ ಆಗುತ್ತಿದೆ.ಇದಕ್ಕೆ ಸರ್ವಾನುಮತದಿಂದ ಜಾರಿ ಮಾಡಬೇಕು.ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೋಪದಲ್ಲಿ ಬಿಲ್ ಹರಿದು ಬೀಸಾಕಿದ್ದಾರೆ.ಅದಕ್ಕಾಗಿ ಅವರು ಕ್ಷಮೆಯಾಚಿಸಬೇಕು.ಯಾವ ರೀತಿ ಹರಿದು ಬೀಸಾಕಿದ್ರೊ, ಅದೇ ರೀತಿ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಹರಿದು ಹಾಕಿದ್ದಾರೆ.ನಾವುಗಳು ಅಲ್ಪಸಂಖ್ಯಾತರ ವಿರೋಧಿಗಳ ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆ ಮಾಡಬಾರದು ಡಿ.ಕೆ ಶಿವಕುಮಾರ್‌ ಕ್ಷಮೆಗೆ ಮಾಜಿ ಸಿಎಂ ಯಡಿಯೂರಪ್ಪ […]

  ರಾಜ್ಯ ಸರ್ಕಾರ ರಾಜ್ಯದಲ್ಲಿ ಅಶಾಂತಿ ಉಂಟುಮಾಡುವ ಹಾಗೂ ಅವರ ವೈಫಲ್ಯಗಳು ಮತ್ತು ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳುವ ಹುನ್ನಾರದೊಂದಿಗೆ ಅಲ್ಪಸಂಖ್ಯಾತರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡು ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021 ಜಾರಿಗೊಳಿಸಲು ಮುಂದಾಗಿದೆ.ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಕಾಯ್ದೆ ವಾಪಾಸ್ ಪಡೆಯುತ್ತೇವೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹೇಳಿದರು.ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಮತಾಂತರ ಕಾಯ್ದೆ ಉತ್ತರ ಪ್ರದೇಶ,ಗುಜರಾತ್, ಮಧ್ಯಪ್ರದೇಶದಲ್ಲಿ ಅಸ್ತಿತ್ವದಲ್ಲಿದೆ. ಗುಜರಾತ್‌ನಲ್ಲಿ […]

ಮಹಿಳೆಯರ ಮದುವೆಯ ಕನಿಷ್ಠ ವಯಸ್ಸನ್ನು 21ಕ್ಕೆ ಏರಿಸುವುದಕ್ಕೆ ಸಂಬಂಧಿಸಿದ ಮಸೂದೆಯನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಲೋಕಸಭೆಯಲ್ಲಿ ಮಂಡಿಸಿದರು.ಈ ಮಸೂದೆಗೆ ವಿರೋಧ ಪಕ್ಷಗಳ ಸದಸ್ಯರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಹೀಗಾಗಿ ಸಮಗ್ರ ಪರಿಶೀಲನೆಗಾಗಿ ಮಸೂದೆಯನ್ನು ಸಂಸದೀಯ ಸಮಿತಿಗೆ ಒಪ್ಪಿಸಲಾಯಿತು.ವಿರೋಧ ಪಕ್ಷಗಳ ಕೆಲ ಸದಸ್ಯರು ಈ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ‘ಈ ಮಸೂದೆಯಿಂದ ಕೆಲ ವೈಯಕ್ತಿಕ ಕಾಯ್ದೆಗಳು ಹಾಗೂ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ’ ಎಂದು ವಾದಿಸಿದರು. ಇತ್ತೀಚಿನ ಸುದ್ದಿಗಳಿಗಾಗಿ […]

ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರ ಪ್ರಶ್ನೆಗೆ ಉತ್ತರಿಸಿ,ಮಾತನಾಡಿದರು. ಶಾಲೆಗಳಿಂದ ಹೊರಗುಳಿದ ಅಲ್ಪಸಂಖ್ಯಾತರ ಮಕ್ಕಳನ್ನು ಮರಳಿ ಶಾಲೆಗೆ ತರಲು ಈಗಾಗಲೇ ಮುಚ್ಚಲ್ಪಟ್ಟ ಸರ್ಕಾರಿ ಉರ್ದು ಶಾಲೆಗಳ ಜಾಗದಲ್ಲಿ 200 ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಿ ಕಾರ್ಯನಿರ್ವಹಿಸಲಾಗುತ್ತಿದೆ. ಹೊಸದಾಗಿ ಶಾಲೆಗಳನ್ನು ಪ್ರಾರಂಭಿಸಲು ಜನಪ್ರತಿನಿಧಿಗಳಿಂದ ಪ್ರಸ್ತಾವನೆಗಳು ಬಂದಿವೆ. ಇವುಗಳ ಕಾರ್ಯಸಾಧ್ಯತೆಗಳನ್ನು ಪರಿಶೀಲಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಹೊಸದಾಗಿ ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು […]

ಹಿಟ್ಲರ್‌ ಆಸ್ಥಾನದಲ್ಲಿ ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದ ಗೊಬೆಲ್‌ನಂತೆಯೇ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.ಸರಣಿ ಟ್ವೀಟ್‌ ಮಾಡಿರುವ ಅವರು, ‘ಜೆಡಿಎಸ್‌ ಜಟ್ಟಿಗಳನ್ನು ಸೃಷ್ಟಿಸುವ ಪಕ್ಷ. ಜಟ್ಟಿಗಳನ್ನು ಎಗರಿಸಿಕೊಂಡು ಹೋಗುವ ‘ಬ್ರೋಕರಪ್ಪ’ನ ಕುತಂತ್ರಕ್ಕೆ ಹೆದರುವ ಪ್ರಶ್ನೆಯೇ ಇಲ್ಲ. ಹಿಂದೆ ದೇವರಾಜ ಅರಸು ಅವರಿಗೆ ನರಕಯಾತನೆ ನೀಡಿದ್ದ ಕಾಂಗ್ರೆಸ್‌, ಈಗ ‘ಅಭಿನವ ಅರಸು’ ಎಂಬ ಪುಂಗಿ ಬಿಡುವ […]

ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಮಸೂದೆ ಮಂಡನೆಗೆ ಮುಂದಾಗಿದೆ. ಮತಾಂತರ ನಿಷೇಧ ವಿಧೇಯಕ ಮಂಡನೆ ಮಾಡುತ್ತಿದ್ದು, ಎಲ್ಲಾ ಪಕ್ಷಗಳು ಸರ್ವಾನುಮತದಿಂದ ಬೆಂಬಲ ನೀಡಿ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.ಬೆಳಗಾವಿಯಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಮತಾಂತರ ನಿಷೇಧ ಕಾಯ್ದೆ ಮಂಡಿಸುತ್ತಿದ್ದೇವೆ. ಈಗಾಗಲೇ ದೇಶದ ವಿವಿಧ ರಾಜ್ಯಗಳಲ್ಲಿ ಈ ಕಾಯ್ದೆ ಜಾರಿಯಲ್ಲಿದೆ. ಹೀಗಾಗಿ ಜನರ ಹಿತದೃಷ್ಟಿಯಿಂದ ರಾಜ್ಯದಲ್ಲಿಯೂ ಈ ಕಾಯ್ದೆ ಜಾರಿಗೆ ಬರಲಿದೆ. […]

ಎರಡ್ಮೂರು ದಿನಗಳ ಬೆಳಗಾವಿ ನಗರದ ಗಲಭೆಗಳಿಗೆ ರಾಯಣ್ಣ ಮೂರ್ತಿ ವಿರೂಪ ಮಾಡಿದ್ದ ಕಾರಣ  ಕೆಲ ಕಿಡಗೇಡಿಗಳ ಕೆಲಸ ಕಾರಣವಾಗಿತ್ತು ಎಂದು ಬೆಳಗಾವಿಯ ಅನಗೋಳದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ…ನಾನು ಮೊದಲ ಭಾರಿಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ತೀರ್ಮಾನಿಸಿದ್ದೆ.೨೦೦೬ ರಲ್ಲಿ ಪ್ರತಿಭಟನೆ ಮಾಡೋಕೆ ಅವಕಾಶ ನೀಡಿದ್ದೆ.ಅವಗಾಲೇ ನಾವು ಅಧಿವೇಶನ ನಡೆಸಲು ತಿರ್ಮಾನಿಸಿದ್ದೆವು.ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಅವಾಗ ನಮಗೆ ಮರಾಠಿಗರು ನಮಗೆ ಸೌಹಾರ್ದತೆ ನೀಡಿದ್ದರು.ನಾವು ಅಣ್ತಮ್ಮಂದಿತ ರೀತಿ ಬದುಕುಬೇಕು. ಅದನ್ನ […]

ರಾಜ್ಯ ಸರ್ಕಾರ ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಮಸೂದೆಗೆ ನಮ್ಮ ವಿರೋಧವಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ತಡೆ ವಿಧೇಯಕ ತರುವ ಮುನ್ನ ವಿದೇಶದಲ್ಲಿರುವ ಕನ್ನಡಿಗರ ಬಗ್ಗೆಯೂ ಸರ್ಕಾರ ಯೋಚಿಸಬೇಕು.ಇಂತಹ ಕಾಯ್ದೆಯನ್ನು ಜಾರಿಗೆ ತಂದರೆ ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು ನೆಮ್ಮದಿಯಾಗಿರಲು ಸಾಧ್ಯವೇ ಎಂದು ಪ್ರಶ್ನಿಸಿದರು.ಈ ಕಾನೂನನ್ನು ಕ್ರಿಶ್ಚಿಯನ್ ಸಮುದಾಯವನ್ನು ಗುರಿಯಾಗಿರಿಸಿಕೊಂಡು ತರುತ್ತಿದ್ದಾರೆ ಎಂದು ಆರೋಪಿಸಿದ ಅವರು, ಬಿಜೆಪಿಯವರು ತಮ್ಮ ಮಕ್ಕಳನ್ನು ಕ್ರಿಶ್ಚಿಯನ್ ಶಾಲೆಗಳಲ್ಲಿ […]

Advertisement

Wordpress Social Share Plugin powered by Ultimatelysocial