ಬೆಂಗಳೂರಿನಲ್ಲಿ ಶೀಘ್ರವೇ ಹೊಸ ಟೆಕ್ನಾಲಜಿ ಸೆಂಟರ್ ಸ್ಥಾಪಿಸುವ ಉದ್ದೇಶವಿದ್ದು, ಸ್ಥಳೀಯ ಪ್ರತಿಭೆಗಳನ್ನೂ ಉದ್ಯೋಗಕ್ಕೆ ಸೇರ್ಪಡೆಗೊಳಿಸಲಾಗುವುದು. ಅಷ್ಟೇ ಅಲ್ಲ, ಮುಂದಿನ ಕೆಲವು ವರ್ಷಗಳ ಅವಧಿಯಲ್ಲಿ ಭಾರತದಾದ್ಯಂತ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸುವುದಾಗಿ ಝೂಮ್ ವಿಡಿಯೋ ಕಮ್ಯೂನಿಕೇಷನ್ಸ್ ಘೋಷಿಸಿದೆ. ಭಾರತದಲ್ಲಿ ಈ ವರ್ಷ ಜನವರಿಯಿಂದ ಏಪ್ರಿಲ್ ವರೆಗಿನ ಅವಧಿಯಲ್ಲಿ ಝೂಮ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಯೂಸರ್ ಸೈನ್ ಅಪ್ ಪ್ರಮಾಣ ಶೇಕಡ 6700ರ ಬೆಳವಣಿಗೆ ದರದಲ್ಲಿತ್ತು. ಕಂಪನಿಗೆ ಈಗಾಗಲೇ ಮುಂಬೈನಲ್ಲಿ ಒಂದು ಕಚೇರಿ ಮತ್ತು […]
ದೇಶ
ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 37,148 ಮಂದಿಗೆ ಕೊರೊನಾ ಸೋಂಕು ತಗುಲಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,55,191ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 587 ಮಂದಿ ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ. ದೇಶದಲ್ಲಿ 28,084 ಮಂದಿ ಮಹಾಮಾರಿ ಕೊರೊನಾ ವೈರಸ್ ನಿಂದ ಮೃತಪಟ್ಟಿದ್ದಾರೆ. 11,55,191 ಮಂದಿ ಸೋಂಕಿತರ ಪೈಕಿ 7,24,578 ಜನರು ಕೊರೊನಾದಿಂದ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನೂ ಉಳಿದ 4,02,529 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]
ಈಶಾನ್ಯ ರಾಜ್ಯ ಅಸ್ಸಾಂಗೆ ಮಳೆ, ಪ್ರವಾಹ ಹೊಸತಲ್ಲ. ಆದರೆ, ಈ ವರ್ಷ ಕೋವಿಡ್ ವೈರಸ್ ವಿರುದ್ಧದ ಹೋರಾಟದ ನಡುವೆಯೇ ಪ್ರವಾಹದ ವಿರುದ್ಧವೂ ಸೆಣಸಬೇಕಾದ ಅನಿವಾರ್ಯತೆಗೆ ರಾಜ್ಯ ಸಿಲುಕಿದೆ. ಇಲ್ಲಿನ ೩೩ ಜಿಲ್ಲೆಗಳ ಪೈಕಿ ೨೫ ಜಿಲ್ಲೆಗಳು ಮಳೆ, ಪ್ರವಾಹದಿಂದ ತತ್ತರಿಸಿಹೋಗಿದ್ದು, ೪೦ ಲಕ್ಷಕ್ಕೂ ಅಧಿಕ ಮಂದಿ ಅತಂತ್ರರಾಗಿದ್ದಾರೆ. ಅದರಲ್ಲೂ ವಿಶ್ವವಿಖ್ಯಾತ ಕಾಜಿರಂಗಾ ರಾಷ್ಟ್ರೀಯ ಉದ್ಯಾನದಲ್ಲಿನ ವನ್ಯಜೀವಿಗಳು ತೀವ್ರ ಸಂಕಷ್ಟಕ್ಕೆ ಗುರಿಯಾಗಿವೆ. ಅಸ್ಸಾಂನ ಹೆಮ್ಮೆ ಎಂದೇ ಕರೆಯಲ್ಪಡುವ ಒಂದು ಕೊಂಬಿನ ಘೇಂಡಾಮೃಗಗಳು […]
ರಾಮಾಯಣದಲ್ಲಿ ಬರುವ ರಾವಣ, ಭಾರತೀಯರಿಗೆ ರಾಕ್ಷಸನಿರಬಹುದು. ಸೀತೆಯನ್ನು ಕದ್ದೊಯ್ದ ಖಳನಾಯಕನಿರಬಹುದು. ಆದರೆ, ಶ್ರೀಲಂಕಾನ್ನರಿಗೆ ಆತ ಮಹಾನ್ ರಾಜ, ವಿದ್ವಾಂಸ ಹಾಗೂ ವಿಶ್ವದ ಮೊದಲ ವಾಯುಯಾನಿ. ಮೊಟ್ಟಮೊದಲ ಬಾರಿಗೆ ವಿಮಾನದ ಮೂಲಕ ಹಾರಾಟ ನಡೆಸಿದ ರಾಜ ಎಂಬ ಬಲವಾದ ನಂಬಿಕೆ ಅವರದು. ೫ ಸಾವಿರ ವರ್ಷಗಳಷ್ಟು ಹಿಂದೆಯೇ ಆತ ವಿಮಾನದ ಮೂಲಕ ಹಾರಾಟ ನಡೆಸಿದ್ದ ಎಂದು ಪ್ರತಿಪಾದಿಸುವ ಶ್ರೀಲಂಕಾದ ನಾಗರಿಕ ವಿಮಾನ ಯಾನ ಪ್ರಾಧಿಕಾರ, ಪ್ರಾಚೀನ ಕಾಲದಲ್ಲಿಯೇ ಆತ ವಿಮಾನ ಹಾರಿಸಲು ಬಳಸಿದ […]
ಕಿಶನ್ಗಂಜ್: ಗಡಿಭಾಗದಲ್ಲಿ ಪಾಕಿಸ್ತಾನ, ಚೀನೀಯರಷ್ಟೇ ಅಲ್ಲ, ನೇಪಾಳದವರೂ ಗುಂಡು ಹಾರಿಸೋದಕ್ಕೆ ಶುರುಮಾಡಿದ್ರು! ಬಿಹಾರದ ಕಿಶನ್ಗಂಜ್ ಪ್ರದೇಶದಲ್ಲಿರುವ ಭಾರತ- ನೇಪಾಳದ ಗಡಿಯಲ್ಲಿ ನೇಪಾಳ ಪೊಲೀಸರು ಮೂವರು ಭಾರತೀಯರ ಮೇಲೆ ಗುಂಡು ಹಾರಿಸಿದ ಪರಿಣಾಮ ಒಬ್ಬ ಗಾಯಗೊಂಡಿದ್ದಾನೆ. ಉಭಯ ದೇಶಗಳ ನಡುವೆ ಸಂಬAಧ ಅಷ್ಟೇನೂ ಹಿತವಲ್ಲದೇ ಇರುವ ಈ ಸಂದರ್ಭದಲ್ಲೂ ನೇಪಾಳ ಪೊಲೀಸರು ಈ ರೀತಿ ಸಾಹಸಕ್ಕೆ ಕೈ ಹಾಕಿರುವುದು ಈಗ ಎಲ್ಲರ ಹುಬ್ಬೇರಿಸಿದೆ. ಕಿಶನ್ಗಂ ಮಾಫಿ ತೋಲಾ ಎಂಬಲ್ಲಿ ಈ ಘಟನೆ […]
ರಾಜಸ್ಥಾನ ರಾಜಕೀಯ ಪ್ರಹಸನ ಮಹತ್ವದ ಘಟ್ಟ ತುಲುಪಿದ್ದು. ಸಚಿನ್ ಪೈಲೆಟ್ ಕಾಂಗ್ರೆಸ್ ಪಕ್ಷ ತೂರೆಯವುದು ಬಹುತೇಕ ನಿಶ್ಚಯವಾಗಿರುವ ಹಾಗೆ ಭಾಸವಾದುತ್ತಿದೆ. ಪೈಲೆಟ್ ಹಾಗೂ ಅವರ ಬೆಂಬಲಿಗರು ಅಶೋಕ್ ಗೆಹ್ಲೋಟ್ ನಾಯಕ್ವತದ ಬಗ್ಗೆ ಚಕಾರ ಎತ್ತುತ್ತಲ್ಲೆ ಬಂದಿದ್ದಾರೆ. ಯಾವ ಕಾಂಗ್ರೆಸ್ ನಾಯಕರ ಮಾತಿಗೆ ಬಗ್ಗದೆ ತಮ್ಮದೆ ದಾರಿ ನೋಡಿಕೊಂಡ ಹಾಗೆ ಕಾಣುತ್ತಿದೆ. ಎಲ್ಲಾ ಪ್ರಹಸನದ ಮದ್ಯಯು ಪ್ರಸುತ್ತ ಮುಖ್ಯ ಮಂತ್ರಿ ಅಶೋಕ್ ಗೆಹ್ಲೋಟ್ ಬಹುಮತ ಸಾಬೀತು ಪಡಿಸಲು ಸಿದ್ದರಾಗಿದ್ದಾರೆ. ತಮಗೆ ೧೦೯ […]
ಕೊರೋನಾ ವೈರಸ್, ದೇಶೀಯ ಉತ್ಪನ್ನ ಮತ್ತು ಚೀನಾದೊಂದಿಗೆ ಗಡಿ ವಿವಾದ ವಿಷಯದಲ್ಲಿ ಬಿಜೆಪಿ ಸುಳ್ಳು ಹೇಳುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ತಮ್ಮ ವಾಗ್ದಾಳಿ ಮುಂದುವರಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೋವಿಡ್-೧೯ ಪರೀಕ್ಷೆಯನ್ನು ನಿರ್ಬಂಧಗೊಳಿಸಿ ಸಾವಿನ ಸಂಖ್ಯೆಯನ್ನು ತಪ್ಪಾಗಿ ವರದಿ ಮಾಡುತ್ತಿದೆ. ಜಿಡಿಪಿ ವಿಚಾರದಲ್ಲಿ ಹೊಸ ಲೆಕ್ಕಾಚಾರ ವಿಧಾನಗಳನ್ನು ಅನುಸರಿಸುತ್ತಿದೆ. ಇನ್ನು ಮಾಧ್ಯಮಗಳನ್ನು ಹೆದರಿಸುವ ಮೂಲಕ ಚೀನಾ ಆಕ್ರಮಣಶೀಲತೆ ತೋರಿಸುತ್ತಿದೆ, ಭ್ರಮೆ ಶೀಘ್ರವೇ ಮುರಿಯಲಿದ್ದು ಇದಕ್ಕೆ […]
ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆಗೆ ಅನುಮತಿ ಕೋರಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ ಪತ್ರ ಬರೆದಿದ್ದು, ಹೆಚ್ಚು ಕಡಿಮೆ ಆ.5ರಂದು ಪೂಜೆ ನೆರವೇರಲಿದೆ.ಭೂಮಿ ಪೂಜೆಯ ತಾತ್ಕಾಲಿಕ ದಿನಾಂಕವನ್ನು ಟ್ರಸ್ಟ್ ನಮೂದಿಸಿದ್ದು, ಅಂತಿಮ ನಿರ್ಧಾರವನ್ನು ಪ್ರಧಾನ ಮಂತ್ರಿ ಕಾರ್ಯಾಲಯ ಕೈಗೊಳ್ಳಲಿದೆ.ಶನಿವಾರ ಅಯೋಧ್ಯೆಯ ಸರ್ಕ್ಯುಟ್ ಹೌಸ್ ನಲ್ಲಿ ಟ್ರಸ್ಟ್ ನ ಸಭೆ ನಡೆಸಲಾಗಿತ್ತು.ನಂತರ ಮಾತನಾಡಿದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಕೊರೋನಾ ಸೋಂಕಿನ ಕಾರಣ […]
ಅಯೋಧ್ಯೆಯ ರಾಮಮಂದಿರ ನಿರ್ಮಾಣದ ಕುರಿತಂತೆ ನಡೆದ ವಿಡೀಯೊ ಸಂವಾದದಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಾಗಿಯಾದರು.ಈ ಸಭೆಯಲ್ಲಿ ೩೦೦ ಕೋಟಿ ವೆಚ್ಚದ ರಾಮಂದಿರ ನಿರ್ಮಾಣದ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಯಿತು ಎಂದು ಹೇಳಲಾಗ್ತಾಯಿದೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ಶ್ರೀಗಳು ೨೦೦ ಅಡಿ ಆಳದಲ್ಲಿ ಭೂಮಿಯ ಸಾಮರ್ಥ್ಯವನ್ನ ಪರೀಕ್ಷಿಸಲಾಗುತ್ತಿದ್ದು ಅಲ್ಲಿ ತಾಮ್ರಪತ್ರವನ್ನಿಟ್ಟು ದೇವಸ್ಥಾನವನ್ನ ನಿರ್ಮಾಣ ಮಾಡಲಾಗುವುದು ಹಾಗು ತಾಮ್ರ ಪತ್ರದಲ್ಲಿ ಬರೆಯಬೇಕಾದ ವಿವರದ ಕುರಿತು ಚರ್ಚೆ ನಡೆಯಿತು […]
ಆಗ್ರಾ-ಲಖನೌ ಹೆದ್ದಾರಿಯ ಬಳಿ ಭೀಕರ ಅಪಘಾತ .ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ಒಂದು ರಸ್ತೆ ಬದಿ ಸುಮ್ಮನೇ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐದು ಮಂದಿ ಸಾವಿಗೀಡಾಗಿದ್ದು, 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದರ ಬಗ್ಗೆ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಗೌರವ್ ಶುಕ್ಲಾ ಎಂಬುವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಹಾಗು ಸ್ಥಳೀಯರು ಘಟನೆ ನಡೆದ ಪ್ರದೇಶಕ್ಕೆ ಆಗಮಿಸಿ ಬಸ್ಸಿನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಿದ್ದು, ಗಾಯಗೊಂಡಿದ್ದವರನ್ನು ಸ್ಥಳೀಯ ಆಸ್ಪತ್ರೆಗೆ […]