ನವದೆಹಲಿ: ಕೊರೊನಾ ವೈರಸ್ನಿಂದಾಗಿ ಲಾಕ್ಡೌನ್ ಹಿನ್ನಲೆಯಲ್ಲಿ ಮನೆಯಲ್ಲಿ ಕುಳಿತು ಕಾಲ ಕಳೆಯುತ್ತಿರೋ ಜನರು, ಹೆಚ್ಚಾಗಿ ಜ್ಯೂಮ್ ಆ್ಯಪ್ ಅನ್ನು ಹೆಚ್ಚಾಗಿ ಬಳಸೋಕೆ ಶುರು ಮಾಡಿದ್ದರು. ವರ್ಕ್ ಫ್ರಮ್ ಹೋಮ್ ಮಾಡುವ ಪ್ರತಿಷ್ಟಿತ ಕಂಪನಿಗಳ ಸಿಬ್ಬಂದಿ, ಉದ್ಯಮಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಜೂಮ್ ಆ್ಯಪ್ ಡೌನ್ಲೋಡ್ ಮಾಡಿಕೊಂಡು ವಿಡಿಯೋ ಕಾನ್ಪರೆನ್ಸ್ ಬಳಕೆ ಮಾಡ್ತಿದ್ರು. ಈ ಜ್ಯೂಮ್ ಆ್ಯಪ್ ಅಷ್ಟೊಂದು ಸೇಫ್ ಅಲ್ಲ. ಬಳಕೆದಾರರ ಮಾಹಿತಿ ಸೋರಿಕೆ ಆಗುತ್ತೆ ಅಂತ ಕಳೆದ ವಾರವಷ್ಟೇ ಕೇಂದ್ರ […]
ದೇಶ
ಕೇರಳ: ಕೋವಿಡ್ ಸೋಂಕಿನ ನಡುವೆ ಕೇರಳದ ವಯನಾಡ್ ಜಿಲ್ಲೆಯಲ್ಲಿ ಬೆಕ್ಕುಗಳು ಸಾವನ್ನಪ್ಪಿವೆ. ಆದರೆ ಈ ಪ್ರಕರಣಕ್ಕೆ ಫೆಲೆನ್ ಪಾರ್ವೋ ವೈರಸ್ ಕಾರಣ ಎಂಬುದು ಗೊತ್ತಾಗಿದೆ. ಜಿಲ್ಲೆಯ ಮಾನಂದವಾಡಿ ಎಂಬಲ್ಲಿ ಕಳೆದ ಮೂರು ದಿನಗಳಲ್ಲಿ ೧೫ಕ್ಕೂ ಹೆಚ್ಚು ಬೆಕ್ಕುಗಳು ಮೃತ ಪಟ್ಟಿವೆ. ಹೀಗೆ ಸಾವಿಗೀಡಾದ ಬೆಕ್ಕುಗಳ ದೇಹದ ಅಸ್ಥಿಪಂಜರ ಸಂಗ್ರಹಿಸಿದ ಪಶುಸಂಗೋಪನಾ ಇಲಾಖೆ ವೈದ್ಯರು, ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ಬೆಕ್ಕುಗಳ ಸಾವು ವೈರಸ್ನಿಂದ ಸಂಭವಿಸಿದೆ ಎಂಬುದು ದೃಢಪಟ್ಟಿದೆ. ಈ ಸುದ್ದಿ ಕೇಳಿದ ಜನರು […]
ನವದೆಹಲಿ: ರಾಸಾಯನಿಕ ಸೋಂಕು ನಿವಾರಕಗಳ ಸಿಂಪಡಣೆಯಿಂದ ದೈಹಿಕ ಅಥವಾ ಮಾನಸಿಕ ಹಾನಿ ಉಂಟಾಗಬಹುದು ಎಂದು ಕೇಂದ್ರ ಆರೋಗ್ಯ ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದೆ. ಕೋರೊನಾ ತಡೆಗಟ್ಟುವ ಉದ್ದೇಶದಿಂದ ದೇಶದ ಅನೇಕ ಪ್ರದೇಶಗಳ ತರಕಾರಿ ಮಾರುಕಟ್ಟೆ, ಸರಕಾರಿ ಆಸ್ಪತ್ರೆಗಳಲ್ಲಿ ರೋಗನಿರೋಧಕ ಸುರಂಗಗಳನ್ನು ಸ್ಥಾಪಿಸಿರುವ ಸಂದರ್ಭದಲ್ಲಿ ಸಚಿವಾಲಯ ಈ ಎಚ್ಚರಿಕೆ ನೀಡಿದೆ. ಈ ರೀತಿಯಾಗಿ ಸೋಂಕು ನಿವಾರಕಗಳ ಸಿಂಪಡಣೆ ಮಾಡುವುದರಿಂದ ಜನರಲ್ಲಿ ನಾವು ಸುರಕ್ಷಿತರಾಗಿದ್ದೇವೆ ಎನ್ನುವ ತಪ್ಪು ಕಲ್ಪನೆಯನ್ನು ಮೂಡಿಸುತ್ತದೆ. […]
ಬೆಂಗಳೂರು.ಏ.20: ಕೆಳ ರ್ಯಾಂಕಿಂಗ್ ಆಟಗಾರರಿಗೆ ನೆರವು ನೀಡಲು ಸ್ಟಾರ್ ಆಟಗಾರರಾದ ರೋಜರ್ ಫೆಡರರ್, ರಾಫೆಲ್ ನಡಾಲ್, ನೊವಾಕ್ ಜೊಕೊವಿಕ್ ಮುಂದೆ ಬಂದಿದ್ದಾರೆ. ಪುರುಷರ ಟೆನಿಸ್ ಆಡಳಿತ ಸಂಸ್ಥೆ ಎಟಿಪಿ ಸ್ಲಾಂ ಟೆನಿಸ್ ಸಂಘಟಕರ ಜತೆಗೂಡಿ ದತ್ತಿನಿಧಿಯೊಂದನ್ನು ಆರಂಭಿಸಲು ಯೋಜನೆ ನಿರೂಪಿಸಿದ್ದಾರೆ.
ಪಾದರಾಯನಪುರದಲ್ಲಿ ನಿನ್ನೆ ರಾತ್ರಿ ರ್ತವ್ಯ ನಿರತ ಪೊಲೀಸ್ ಮೇಲೆ ಪುಂಡರು ಗುಂಪು ಗುಂಪಾಗಿ ಹಲ್ಲೆ ನಡೆಸಿದ್ದಾರೆ. ಕೊರೊನಾ ಸೋಂಕು ಹೆಚ್ಚಾದ ಹಿನ್ನಲೆಯಲ್ಲಿ ಪಾದರಾಯನಪುರವನ್ನು ಸಂಪರ್ಣ ಸೀಲ್ ಡೌನ್ ಮಾಡಲಾಗಿದ್ದು, ರಸ್ತೆ, ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. ಆ ವೇಳೆ ಕೊರೊನಾ ಸೋಂಕಿತ ೫೯ ಮಂದಿಯನ್ನು ಬೇರೆಡೆ ಸ್ಥಳಾಂತರಿಸಲು ಪೊಲೀಸರು ಹಾಗೂ ಆರೋಗ್ಯ ಸಿಬ್ಬಂದಿಗಳು ಮುಂದಾದಾಗ ಆ ವೇಳೆ ಪುಂಡರು ಪೊಲೀಸರು ಮೇಲೆ ಹಲ್ಲೆ ನಡೆಸಿದ್ದಾರೆ. ಪೊಲೀಸರು ಹಾಕಿದ ಚೆಕ್ ಪೋಸ್ಟ್, […]
ಕೊರೋನಾ ಸೋಂಕು ವಿರುದ್ಧ ಭಾರತೀಯರು ಒಗ್ಗಟ್ಟು ಪ್ರದರ್ಶಿಸಲು ಇಂದು ರಾತ್ರಿ 9 ಗಂಟೆಗೆ 9 ನಿಮಿಷ ವಿದ್ಯುತ್ ದ್ದೀಪಗಳನ್ನು ಆರಿಸಿ ಹಣತೆ, ದೀಪ ಹಚ್ಚಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದರು. ಅದಕ್ಕೆ ಕ್ಷಣಗಣನೆ ಆರಂಭವಾಗಿದ್ದು 9pm9minute ಎಂದು ಮೋದಿ ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮೂಲಕ ಮತ್ತೊಮ್ಮೆ ಎಚ್ಚರಿಸಿದ್ದಾರೆ. ವರದಿ: ಪೊಲಿಟಿಕಲ್ ಬ್ಯೂರೊ ಸ್ಪೀಡ್ ನ್ಯೂಸ್ ಕನ್ನಡ
ಜನತೆಯು ಜಾತಿ, ಮತ ಧರ್ಮವನ್ನು ಬದಿಗಿಟ್ಟು ಕೋವಿಡ್-19 ವೈರಸ್ ವಿರುದ್ಧ ಒಗ್ಗಟ್ಟಿನಿಂದ ಹೋರಾಡಬೇಕೆಂದು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ,ಹೇಳಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆಯಂತೆ ರವಿವಾರ ರಾತ್ರಿ 9 ಗಂಟೆಗೆ ದೀಪವನ್ನು ಬೆಳಗಿಸಬೇಕು. ನಮ್ಮ ರಾಜ್ಯದ ಕೆಲವು ಜನರು ದೆಹಲಿಯಲ್ಲಿ ಧಾರ್ಮಿಕ ಸಮಾವೇಶಕ್ಕೆ ತೆರಳಿದ್ದರು. ಆ ಸಮಾವೇಶದಲ್ಲಿ ವಿದೇಶ ರಾಷ್ಟ್ರದಿಂದಲೂ ಸದಸ್ಯರು ಬಂದಿದ್ದರು. ಕೆಲವರು ವೈರಸ್ ಸೋಂಕಿಗೆ ಒಳಗಾಗಿದ್ದು, ಅಲ್ಲಿಂದ ವೈರಸ್ ಹರಡಿದೆ. ಆದರೆ, ವೈರಸ್ ಹರಡುವಿಕೆಗೆ ಒಂದು […]
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಜನರಿಗೆ ಇಂದು ಭಾನುವಾರ ಅಚ್ಚರಿ ಕಾದಿತ್ತು. ಪ್ರಯಾಣಿಕರನ್ನು ಬರಮಾಡಿಕೊಳ್ಳಲು ವಿಮಾನ ನಿಲ್ದಾಣಕ್ಕೆ ಬಂದಿದ್ದವರಿಗೆ ನಿಜಕ್ಕೂ ಪರಮಾಶ್ಚರ್ಯ. ಇಂದು ಐಶ್ವರ್ಯಾ ರೈ ಬಚ್ಚನ್ ಹಾಗೂ ಪತಿ ಅಭಿಷೇಕ್ ಬಚ್ಚನ್ ಮಂಗಳೂರಿಗೆ ಆಗಮಿಸಿದ್ದರು. ಮಂಗಳೂರು ಮೂಲದವರಾಗಿರುವ ಐಶ್ವರ್ಯಾ ರೈ ತನ್ನ ಚಿಕ್ಕಪ್ಪನ ಶ್ರಾದ್ಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಗಳೂರಿಗೆ ಆಗಮಿಸಿದ್ದಾರೆ.