ಬಿಜೆಪಿ ನಾಯಕರ ವಾಹನ ಬಂದಾಗ ಬಹಳ ಎಚ್ಚರಿಕೆ, ಜೋಪಾನ ಎಂದು ಕೆಪಿಸಿಸಿ ಅದ್ಯಕ್ಷ ಡಿ.ಕೆ .ಶಿವಕುಮಾರ್ ಅವರು ಶುಕ್ರವಾರ ಜನತೆಗೆ ಕಿವಿಮಾತು, ಬುದ್ದಿಮಾತು ಹೇಳಿದ್ದಾರೆ. ಬಿಜೆಪಿ ನಾಯಕರ ಕಾರು ನಿಮ್ಮ ಅಕ್ಕ ಪಕ್ಕದಲ್ಲಿ ಹೋಗುವಾಗ ಮೊಬೈಲ್ ಕ್ಯಾಮರಾದಿಂದ ರೆಕಾರ್ಡ್ ಮಾಡಿಕೊಳ್ಳಿ. ಯಾವಾಗ, ಯಾರ ಮೇಲೆ ಕಾರು ಹತ್ತಿಸಿ ಕೊಲ್ಲುತ್ತಾರೆ ಎಂಬುದೇ ತಿಳಿಯುವುದಿಲ್ಲ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ಕೇಂದ್ರ ಸಚಿವರೊಬ್ಬರ […]

ಮೊದಲ ಬಾರಿಗೆ ನಟ ದುನಿಯಾ ವಿಜಯ್ ನಿರ್ದೇಶನ ಮಾಡಿ ಅಭಿನಯಿಸಿರುವ ಸಲಗ ಸಿನಿಮಾ ಬಿಡುಗಡೆಗೆ ಸಿದ್ಧತೆ ಈಗಾಗಲೇ  ಜೋರಾಗಿ ನಡೆಯುತ್ತಿದೆ. ಚಿತ್ರ ಬಿಡುಗಡೆಗೂ ಮುನ್ನ ಅದ್ಧೂರಿ ಕಾರ್ಯಕ್ರಮ ಆಯೋಜಿಸಿರುವ ಚಿತ್ರತಂಡ, ಅದಕ್ಕಾಗಿ ಅತಿಥಿಗಳ ಆಯ್ಕೆಯನ್ನು ಅಂತಿಮಗೊಳಿಸಿದೆ. ಅಕ್ಟೋಬರ್ 14 ರಂದು ಸಲಗ ಸಿನಿಮಾ ಬೆಳ್ಳಿ ಪರದೆ ಮೇಲೆ ಮೊದಲ ಪ್ರದರ್ಶನ ಕಾಣಲಿದೆ. ಅಕ್ಟೋಬರ್ 10 ರಂದು ಚಿತ್ರತಂಡದಿಂದ ಪ್ರಿ–ರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಘಟಾನುಘಟಿ ನಾಯಕರು ಭಾಗವಹಿಸುತ್ತಿದ್ದಾರೆ ಮಾಜಿ […]

 ಮುಂದಿನ ವಿಧಾನಸಭೆ ಚುನಾವಣೆಗೂ ಮೊದಲು ಕಾಂಗ್ರೆಸ್ ಎರಡು ಹೋಳಾಗಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಸಿಂಧಗಿ ವಿಧಾನಸಭೆ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಈಶ್ವರಪ್ಪ ಸಚಿವ  ಕೆ ಸ್‌ ಈಶ್ವರಪ್ಪ  ಈವರೆಗೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಾನು ಸಿಎಂ ನಾನು ಸಿಎಂ ಎನ್ನುತ್ತಿದ್ದರು. ಒಬ್ಬರು ಎಡಕ್ಕೆ ಎಳೆದರೆ, ಇನ್ನೊಬ್ಬರು ಬಲಕ್ಕೆ ಎಳೆಯುತ್ತಾರೆ. ಇದೀಗ ಅನಿವಾರ್ಯವಾಗಿ ಒಂದಾಗಿದ್ದಾರೆ ಎಂದು ವ್ಯಂಗ್ಯ […]

ಹುಬ್ಬಳ್ಳಿ: ಬಿಜೆಪಿ ಒಡೆದ ಮನೆಯಾಗಿದ್ದು, ಹಾನಗಲ್  ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬಿಜೆಪಿ ಅಭ್ಯರ್ಥಿಯನ್ನು ಹೊರ ಹಾಕಿ ಅಲ್ಲಿನ ಮುಖಂಡರು ಸಭೆ ಮಾಡಿದ್ದಾರೆ. ಕ್ಷೇತ್ರದ ಜನರಿಗೆ ಅಭ್ಯರ್ಥಿ ಬೇಡವಾಗಿದ್ದು, ಅವರನ್ನು ಸೋಲಿಸಲು ಜನರೇ ಮುಂದಾಗಿದ್ದಾರೆ. ಈ ಉಪ ಚುನಾವಣೆಯನ್ನು ಪ್ರತಿಯೊಬ್ಬ ನಾಯಕರು ಮಾಡು ಇಲ್ಲವೇ ಮಡಿ ಎಂದು ನಿರ್ಧರಿಸಿ ಪ್ರಾಮಾಣಿಕವಾಗಿ ಚುನಾವಣೆ ಮಾಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು. ಹುಬ್ಬಳ್ಳಿಯ ಖಾಸಗಿ ಹೊಟೇಲ್‌ ನಲ್ಲಿ ಕಾಂಗ್ರೆಸ್‌ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆಗಾಗಿ 20 […]

ಡಿ.ಕೆ.ಶಿ ಕಾರು ತಪಾಸಣೆ ಮಾಡಿದ ಚುನಾವಣಾಧಿಕಾರಿಗಳು ಬೆಂಗಳೂರು, ಅ.8- ಸಿಂಧಗಿ ವಿಧಾನಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆ ಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದಾರೆ. ಹೆಲಿಕಾಫ್ಟರ್‍ನಲ್ಲಿ ತೆರಳಿದ ಡಿ.ಕೆ.ಶಿವಕುಮಾರ್ ಅವರು ಸಿಂಧಗಿಗೆ ಹೋಗುವ ಮಾರ್ಗ ಮಧ್ಯೆ ಮೊರಟಗಿ ಚೆಕ್ ಪೋಸ್ಟ್‍ನಲ್ಲಿ ಚುನಾವಣಾ ಅಧಿಕಾರಿಗಳು ಬೆಂಗಾವಲು ವಾಹನ ಮತ್ತು ಕಾರುಗಳನ್ನು ತಡೆದಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ತಮ್ಮ ಕಾರಿನ ಬಾಗಿಲು ತೆಗೆದು […]

ಉಪಚುನಾವಣೆಯಲ್ಲಿ ಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸಿರುವುದು, ಅವರ ರಾಜಕೀಯ ತಂತ್ರಗಾರಿಕೆ. ಅನುಭವಕ್ಕೆ ತಕ್ಕಂತೆ ಅವರು ತಂತ್ರಗಾರಿಕೆ ಮಾಡುತ್ತಾರೆ. ನಮ್ಮ ಪಕ್ಷದ ಸೂಚನೆ ಮೇರೆಗೆ ಸಮ್ಮಿಶ್ರ ಸರ್ಕಾರದಲ್ಲಿ ನಾನು ನನ್ನ ಕರ್ತವ್ಯ ಮಾಡಿದ್ದೆ. ಅದರ ಫಲ ಆ ಭಗವಂತ ನೋಡಿಕೊಳ್ಳಲಿ.ನಾವೇ ಅವರನ್ನ ಸಿಎಂ ಮಾಡಬೇಕು ಅಂತಾ ಹೋಗಿದ್ದು ನಿಜ. ಕೊನೆ ಘಳಿಗೆವರೆಗೂ ಬೆಂಬಲವಾಗಿ ನಿಂತಿದ್ದೆವು. ಮುಂದೆ ರಾಜ್ಯ ಹಾಗೂ ರಾಷ್ಟ್ರಕ್ಕೆ ಒಳ್ಳೆಯದಾಗಲು ಎಲ್ಲ ರೀತಿಯ ಕೆಲಸ ಮಾಡುತ್ತೇವೆ ಎಂದ್ರು ಡಿ.ಕೆ.ಶಿ.ಬಿಜೆಪಿ ಸರಕಾರ […]

ಸಿಂಧಗಿ ಮತ್ತು ಹಾನಗಲ್‌ ಉಪಚುನಾವಣೆಯ ದಿನಾಂಕವೂ ಪ್ರಕಟವಾಗಿದೆ .ಯಾವ ಯಾವ ಪಕ್ಷದಿಂದ ಯಾವ ಅಭ್ಯಾರ್ಥಿ ಸ್ಪರ್ಧಿಸಲಿದ್ದಾರೆ ಎಂಬುದು ಕೂಡ ಈಗಾಗಲೇ ಫೈನಲ್‌ ಆಗಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌  ತಮ್ಮ ಅಭ್ಯಾರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ರೆ ಬಿಜೆಪಿ ,ಮಾತ್ರ ತಮ್ಮ ಅಭ್ಯಾರ್ಥಿಗಳ ಪಟ್ಟಿಯನ್ನು ನಿಗೂಢವಾಗಿ ಇಟ್ಟಿತ್ತು ಆದರೆ ಬಿಜೆಪಿ ಕೂಡ ಈಗಾಗಲೇ ಹಾನಗಲ್‌ ಸಿಂಧಗಿ ಉಪ ಚುನಾವಣೆಯ ಅಭ್ಯಾರ್ಥಿಗಳನ್ನು ಘೋಷಣೆ ಮಾಡಿದೆ . ಕಾಂಗ್ರೆಸ್‌ ನಲ್ಲಿ ಈಗಾಗಲೇ  ಶ್ರೀನಿವಾಸ ಮಾನೆ ಅವರನ್ನು […]

ಲಖನೌ: ಪ್ರಿಯಾಂಕಾ ಗಾಂಧಿ ಬೆನ್ನಲ್ಲೇ ಇತ್ತ ರಾಹುಲ್ ಗಾಂಧಿ ಪ್ರವೇಶಕ್ಕೂ ಉತ್ತರ ಪ್ರದೇಶ ಪೊಲೀಸರು ತಡೆ ಹಾಕಿದ್ದು, ಲಖನೌ ಏರ್ ಪೋರ್ಟ್ ನಲ್ಲೇ ಕಾಂಗ್ರೆಸ್ ನಾಯಕನಿಗೆ ತಡೆವೊಡ್ಡಿದ್ದಾರೆಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣದ ಬಳಿಕ ಉತ್ತರ ಪ್ರದೇಶ ಭಾರಿ ಸುದ್ದಿಗೆ ಗ್ರಾಸವಾಗುತ್ತಿದ್ದು, ಉತ್ತರ ಪ್ರದೇಶ ಸರ್ಕಾರ ಕಾಂಗ್ರೆಸ್ ನಾಯಕರಿಗೆ ಲಖೀಂಪುರ್ ಖೇರಿಗೆ ಭೇಟಿ ನೀಡಲು ಅನುಮತಿ ನೀಡಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲಖನೌಗೆ ಆಗಮಿಸಿದ್ದು, ಲಖೀಂಪುರ್ ಖೇರಿಗೆ ಭೇಟಿ […]

ಉತ್ತರ ಪ್ರದೇಶದ ಲಖಿಂಪುರದಲ್ಲಿ ರೈತರ ಮೇಲೆ ನಡೆದಿರುವ ದೌರ್ಜನ್ಯ ದೇಶದಲ್ಲಿ ಅಲ್ಲೋಲ ಕಲ್ಲೋಲ ಉಂಟುಮಾಡಿದೆ. ದೇಶದ ಅನ್ನದಾತರ ಮೇಲೆ ಉತ್ತರ ಪ್ರದೇಶ, ಹರಿಯಾಣ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರದ ಬಿಜೆಪಿ ಸರ್ಕಾರಗಳು ದೌರ್ಜನ್ಯ ನಡೆಸುತ್ತಿವೆ.ಮೂರು ಕರಾಳ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ರೈತರು ಕಳೆದ 10 ತಿಂಗಳಿಂದ ಚಳುವಳಿ ಮಾಡುತ್ತಿದ್ದಾರೆ. ಇಂತಹ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಕಾರು ಹರಿಸಿ ಹತ್ಯೆ […]

ರಾಮ ಹುಟ್ಟಿದ ರಾಜ್ಯ, ರಾವಣ ರಾಜ್ಯವಾಗುತ್ತಿದೆ…! ರಾಮ ಹುಟ್ಟಿದ ಉತ್ತರ ಪ್ರದೇಶ ರಾಜ್ಯ ಈಗ ರಾವಣರ ರಾಜ್ಯವಾಗುತ್ತಿದೆ. ರೈತರನ್ನ ರಕ್ಷಿಸುವ ಬದಲು ಅವರನ್ನ ಸಾಯಿಸುವ ಘಟನೆ ಆ ರಾಜ್ಯದಲ್ಲಿ ನಡೆಯುತ್ತಿದೆ. ಮೃತ ರೈತರ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟರೆ ಅವರನ್ನ ತಡೆದು ಗೃಹಬಂಧನದಲ್ಲಿ ಇಡಲಾಗಿದೆ. ಬಿಜೆಪಿ ಸರ್ಕಾರಕ್ಕೆ ನಾಚಿಕೆಯಾಗಬೇಕು. ರೈತರು ಪ್ರತಿಭಟನೆ ಆರಂಭಿಸಿ 10 ತಿಂಗಳಾದರೂ ಅವರಿಗೆ ನ್ಯಾಯ ಕೊಡಲು, ಕಾನೂನಿಗೆ ತಿದ್ದುಪಡಿ ತರಲು ಆಗಿಲ್ಲ. ಇಂತಹ ಸರ್ಕಾರ ನಮಗೆ […]

Advertisement

Wordpress Social Share Plugin powered by Ultimatelysocial