ಉತ್ತರ ಪ್ರದೇಶದಲ್ಲಿ ನಡೆದ ಘಟನೆ ಮತ್ತು ರೈತರ ಕುಟುಂಬದವರಿಗೆ ಸಾಂತ್ವನ ಹೇಳಲು ಹೋದ ಕಾಂಗ್ರೆಸ್‌ ಪಕ್ಷದ ನಾಯಕಿ ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಬೆಂಗಳೂರಿನ  ಕೆಪಿಸಿಸಿ ಕಚೇರಿಯಿಂದ ರಾಜಭವನದವರೆಗೆ ಪಂಜಿನ ಮೆರವಣಿಗೆ ನಡೆಸಲು ಮುಂದಾದ ಕಾಂಗ್ರೆಸ್‌ ನಾಯಕರನ್ನು  ಇಂಡಿಯಾನ್‌ ಎಕ್ಸ್ ಪ್ರೆಸ್‌ ವೃತ್ತದ ಬಳಿ ಪೊಲೀಸರು ತಡೆದು ಮೆರವಣಿಗೆಯಲ್ಲಿದ್ದ ಕೈ ನಾಯಕರನ್ನು ವಶಪಡಿಸಿಕೊಂಡಿದ್ದಾರೆ.  ಉತ್ತರಪ್ರದೇಶದಲ್ಲಿ ರೈತರ  ಮೇಲೆ ನಡೆದ ಹಿಂಸಾಚಾರವನ್ನು ಖಂಡಿಸಿ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದವರು ಪ್ರತಿಭಟನೆ ಜಾಥಗಳನ್ನು ನಡೆಸುತ್ತಿದ್ದಾರೆ..ಪ್ರತಿಭಟನೆಯಲ್ಲಿ  […]

ಮುಂದಿನ ಒಂದೂವರೆ ವರ್ಷದಲ್ಲಿ ರಾಜ್ಯದ್ಯಂತ ವಿಧಾನಸಭೆ ಚುನಾವಾಣೆಯಲ್ಲಿ ಹೇಗಾದರು ಮಾಡಿ ಗದ್ದುಗೆ ಯನ್ನು ಏರಲೇ ಬೇಕು ಎಂದು ಕಾಂಗ್ರೆಸ್‌ ಮತ್ತು ಜನತಾ ದಳ ಪಕ್ಷವೂ ಪೈಪೋಟಿ ಈಗಿನಿಂದಲೇ ಶುರುವಾಗಿದೆ. 2023ರಲ್ಲಿ ಅಧಿಕಾರವನ್ನು ಹಿಡಿಯಲೇ ಬೇಕು ಎಂದು ಕಾಂಗ್ರೆಸ್‌ ಒಂದು ಕಡೆ ಪ್ಲಾನ್‌ ಮಾಡಿದರೆ ಮತ್ತೊಂದು ಕಡೆ ಜೆಡಿಎಸ್‌ ಪಕ್ಷವು ಕಾರ್ಯಗಾರ ಸರಣಿ ಸಭೆಗಳಿಂದ ಅಹಿಂದ ಮತಗಳನ್ನು ಸೆಳೆಯಲು ಸತತ ಪ್ರಯತ್ನ ನಡೆಸುತ್ತಿದ್ದಾರೆ.ಹಾಗಾದ್ರೆ ಈ ಎರೆಡೂ ಪಕ್ಷಗಳು ಯಾವ ರೀಯಲ್ಲಿ ಮತಗಳನ್ನು […]

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಕಾಂಗ್ರೆಸ್‌ನ ನಾಯಕಯ ರಾಮಲಿಂಗಾರೆಡ್ಡಿ ತಿರುಗೇಟು..! ಕಾಂಗ್ರೆಸ್ ಪಕ್ಷದ ದಲಿತ ನಾಯಕರ ಸೋಲಿಗೆ ಅವರೇ ಕಾರಣ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯರಿಗೆ ನಮ್ಮ ಪಕ್ಷದ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಕಾಂಗ್ರೆಸ್‌ನ ನಾಯಕಯ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ… ನಾವು ಯಾವುದೇ ಒಂದು ಸಮುದಾಯವನ್ನ ಒಲೈಕೆ ಮಾಡೋದಿಲ್ಲ  ಜೆಡಿಸ್‌ ಪಕ್ಷದಂತೆ ನಾವು ಕೆಲ ಸಮುದಾಯಗಳಿಗೆ ಮಾತ್ರ ಸೀಮಿತವಾಗಿಲ್ಲ ಕಾಂಗ್ರೆಸ್‌ […]

ರೈತರ ಮೇಲೆ ಸಚಿವರ ಮಗನ ಕಾರು ಹರಿದು, ರೈತರು ಮೃತಪಟ್ಟಿರುವ ಪ್ರಕರಣ ಬಿಜೆಪಿ ಕೊಲೆಗಡುಕ ಮನಸ್ಸಿಗೆ ಸಾಕ್ಷಿ. ರೈತರನ್ನು ಶತ್ರುಗಳೆಂದು ತಿಳಿದಿರುವ ಬಿಜೆಪಿ ಸರ್ಕಾರ ಅವರನ್ನು ಪೊಲೀಸರ ಮೂಲಕ ದಮನಿಸಲು ಯತ್ನಿಸಿ ವಿಫಲವಾದ ನಂತರ ಈಗ ನೇರವಾಗಿ ಹತ್ಯೆ ಮಾಡಲು ಹೊರಟಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಗೂಂಡಾ ರಾಜ್ಯದಲ್ಲಿ ರೈತರು, ಮಹಿಳೆಯರು, ಬಡವರು, ದಲಿತರ ಮಾನ–ಪ್ರಾಣ ಯಾವುದೂ ಸುರಕ್ಷಿತವಲ್ಲ. […]

ಮೇಕೆದಾಟು ಯೋಜನೆ ಪ್ರಾರಂಭಕ್ಕೆ , ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಿದ ಡಿಕೆಶಿ…! ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ಅವರು ಈ ಹಿಂದೆ ನೀರಾವರಿ ಸಚಿವರಾಗಿದ್ದವರು. ಅದಕ್ಕೆ ಸಂಬಂಧಿಸಿದ ಕಾನೂನು ಬಲ್ಲವರು. ಮೇಕೆದಾಟು ಯೋಜನೆಗೆ ಅಡ್ಡಿಪಡಿಸಲು ತಮಿಳುನಾಡಿಗೆ ಹಕ್ಕಿಲ್ಲ ಎಂದು ಅವರೆ ಹೇಳಿದ್ದಾರೆ. ಇದನ್ನೇ ನಾವು ಕೂಡ ಇಷ್ಟುದಿನಗಳಿಂದ ಹೇಳುತ್ತಾ ಬಂದಿದ್ದೇವೆ.ನೀವು ಮುಖ್ಯಮಂತ್ರಿಗಳಾದಾಗಿನಿಂದ ಈ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ, ಯಾಕೆ? ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿ ಕೂತಿರುವ ನೀವು ಕೃಷ್ಣ, ಮಹದಾಯಿ […]

  ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಗೆ ಹುಚ್ಚು ಹಿಡಿದಿದೆ ಅವರನ್ನು ಆಸ್ಪತ್ರೆಗೆ ಸೇರಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ವ್ಯಂಗ್ಯವಾಡಿದರು.. ಸಿದ್ದರಾಮಯ್ಯ ಗೆ  ಮತ್ತೊಮ್ಮೆ ಮುಖ್ಯಮಂತ್ರಿ ಯಾಗಬೇಕೆಂಬ ಹುಚ್ಚು ಹಿಡಿದಿದೆ ಹೇಳಿಕೆಗೆ  ಡಿಕೆ ಶಿವಕುಮಾರ್ ಗೆ ತಿರುಗೇಟು ನೀಡಿದ್ದ್ದಾರೆರೆ  ಬಿಜೆಪಿಯವರನ್ನು ಎಳೆದುಕೊಳ್ಳಬೇಕು ಅನ್ನೋ ಹುಚ್ಚು ಆಸ್ಪತ್ರೆಗೆ ಸೇರಿಸಬೇಕು ಇದಕ್ಕೆ ಬೇರೆ ಏನು ಉತ್ತರ ಇಲ್ಲ ಎಂದು ಲೇವಡಿ ಮಾಡಿದರು. ಮುಂಬರುವ ವಿಧಾನಸಭೆ ಚುನಾವಣೆ ಮುನ್ನವೇ ಕಾಂಗ್ರೆಸ್ ಎರಡು […]

ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಹನದ ಮೇಲೆ ಚಪ್ಪಲಿ ಎಸೆದಿರುವ ರಮೇಶ್ ಜಾರಕಿಹೊಳಿ ಬೆಂಬಲಿಗರ ವರ್ತನೆಗೆ  ಕರ್ನಾಟಕ ಕಾಂಗ್ರೆಸ್‌ ಸರಣಿ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ. ಸರ್ಕಾರಕ್ಕೆ ಬೆದರಿಕೆ ಹಾಕಿ, ಪುಂಡರಿಗೆ  ಹಣ ಕೊಟ್ಟು ದಾಂಧಲೆ ಎಬ್ಬಿಸಿದಾಕ್ಷಣ ಅತ್ಯಾಚಾರಿ ಸದಾಚಾರಿಯಾಗಿ ಬದಲಾಗುವುದಿಲ್ಲ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದನ್ನೂಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ.!

ಬೆಂಗಳೂರು: ಸಿಡಿ ಪ್ರಕರಣದ ಸಂತ್ರಸ್ತೆ ಯುವತಿ ನನ್ನನ್ನು ಭೇಟಿ ಮಾಡಲು ಪ್ರಯತ್ನಿಸಿರಬಹುದು. ಆದರೆ ನಾವು ಭೇಟಿ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ತಮ್ಮನ್ನು ಭೇಟಿ ಮಾಡಿದ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು ಹೇಳಿದ್ದಿಷ್ಟು: ‘ನಾವು ರಾಜಕಾರಣಿಗಳು ಹಾಗೂ ನೀವು ಮಾಧ್ಯಮದವರು ಸಾರ್ವಜನಿಕ ಜೀವನದಲ್ಲಿ ಇರುವವರು. ಯಾವುದೇ ಪಕ್ಷದ ರಾಜಕಾರಣಿ ಆದರೂ ನೊಂದವರಿಗೆ, ಕಷ್ಟ ಅಂತಾ ಬಂದವರಿಗೆ ಸಹಾಯ ಮಾಡುವ ಪ್ರವೃತ್ತಿ ಹೊಂದಿರುತ್ತಾರೆ. ಹಾಗೇ ಆ […]

Advertisement

Wordpress Social Share Plugin powered by Ultimatelysocial