ಮುಂಬೈ ವಿಮಾನ ನಿಲ್ದಾಣದಲ್ಲಿ ಗುರುವಾರ ಖಾಸಗಿ ವಿಮಾನವೊಂದು ಲ್ಯಾಂಡ್ ಆಗುವ ಹಂತದಲ್ಲಿ ರನ್ವೇಯಿಂದ ಸ್ಕೀಡ್ ಆದ ಪರಿಣಾಮ ಬೆನ್ನು ಮೂಳೆ ಗಾಯಗೊಂಡಿರುವ ಸಹ ಪೈಲಟ್ ನನ್ನು ಮತ್ತೊಂದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕ್ರಿಟಿಕೇರ್ ಏಷ್ಯಾ ಆಸ್ಪತ್ರೆಯ ನಿರ್ದೇಶಕ ಡಾ.ದೀಪಕ್ ನಾಮಜೋಶಿ ಶುಕ್ರವಾರ ತಿಳಿಸಿದ್ದಾರೆ. ಮುಂಬೈ: ಮುಂಬೈ ವಿಮಾನ ನಿಲ್ದಾಣದಲ್ಲಿ ಗುರುವಾರ ಖಾಸಗಿ ವಿಮಾನವೊಂದು ಲ್ಯಾಂಡ್ ಆಗುವ ಹಂತದಲ್ಲಿ ರನ್ವೇಯಿಂದ ಸ್ಕೀಡ್ ಆದ ಪರಿಣಾಮ ಬೆನ್ನು ಮೂಳೆ ಗಾಯಗೊಂಡಿರುವ ಸಹ […]
ಪ್ರಮುಖಸುದ್ದಿ
ನವದೆಹಲಿ: ವರ್ಷಾಂತ್ಯದಲ್ಲಿ ಚುನಾವಣೆ ಎದುರಿಸಲಿರುವ ಮಧ್ಯ ಪ್ರದೇಶದಲ್ಲಿ (MP Election 2023) ಮತದಾರರನ್ನು ಓಲೈಸುವ ಕಸರತ್ತು ಜೋರಾಗಿ ನಡೆಯುತ್ತಿದೆ. ಆಡಳಿತ ಪಕ್ಷವಾಗಿರುವ ಬಿಜೆಪಿ (BJP) ಮತ್ತೆ ಅಧಿಕಾರಕ್ಕೇರುವ ತಂತ್ರ ಹೆಣೆಯುತ್ತಿದ್ದು, ಅಡುಗೆ ಅನಿಲ ಸಿಲಿಂಡರ್ (Gas Cylinder) ಬೆಲೆಯನ್ನು ಕನಿಷ್ಠ ಮಟ್ಟಕ್ಕೆ (Price Cut) ಇಳಿಕೆ ಮಾಡಿದೆ. ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ (CM Shivraj Singh Chouhan) ಅವರು, ಮಧ್ಯ ಪ್ರದೇಶದಲ್ಲಿ 450 ರೂ.ಗೆ ಸಿಲಿಂಡರ್ ನೀಡುವುದಾಗಿ ಹೇಳಿದ್ದಾರೆ. ಬಹುಶಃ […]
ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ತಿರುಪತಿಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಕ್ರೂಸರ್ ಶುಕ್ರವಾರ ಬೆಳಗ್ಗೆ ಲಾರಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಹನ್ನೊಂದು ಮಂದಿ ಗಾಯಗೊಂಡಿದ್ದಾರೆ… ಅನ್ನಮಯ: ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ತಿರುಪತಿಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಕ್ರೂಸರ್ ಶುಕ್ರವಾರ ಬೆಳಗ್ಗೆ ಲಾರಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಹನ್ನೊಂದು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ಏಳು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು […]
ಭಾರತ ಚಂದ್ರಯಾನ-3 ಯಶಸ್ಸಿನ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದು, ಪ್ರಪಂಚದ ಮೂಲೆ ಮೂಲೆಯಲ್ಲೂ ಇಸ್ರೋ ಹೆಸರು ರಾರಾಜಿಸಿದೆ. ಈ ವೇಳೆ ಜಗತ್ತಿನ ಯುಟ್ಯೂಬ್ ಇತಿಹಾಸದಲ್ಲೇ ಅಳಿಸಲಾಗದ ಸಾಧನೆ ಮಾಡಿದೆ. ಈ ಕುರಿತು ಯುಟ್ಯೂಬ್ನ ಮುಖ್ಯಸ್ಥರೇ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಹಾಗಾದರೆ ಇಸ್ರೋ ಬಗ್ಗೆ ಮತ್ತು ‘ಚಂದ್ರಯಾನ-3’ರ ಕುರಿತು ಯುಟ್ಯೂಬ್ ಹೇಳಿದ್ದೇನು? ಭಾರತದ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ ಇಸ್ರೋ ಆಗಸ್ಟ್ 23ರಂದು ವಿಕ್ರಮ್ ಲ್ಯಾಂಡರ್ ಅನ್ನ ಚಂದ್ರನ ಅಂಗಳಕ್ಕೆ ಇಳಿಸಿತ್ತು. ಆಗ ಲ್ಯಾಂಡರ್ […]
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆಯುತ್ತಿರುವ ಗುಂಡಿನ ಕಾಳಗ ಮೂರನೇ ದಿನವೂ ಮುಂದುವರಿದಿದ್ದು, ಇಂದು ಭಾರತೀಯ ಸೇನೆಯ ಮತ್ತೊಬ್ಬ ಯೋಧ ಹುತಾತ್ಮರಾಗಿದ್ದಾರೆ. ಸೆ.13 ರಂದು (ಬುಧವಾರ) ನಡೆದ ಗುಂಡಿನ ಚಕಮಕಿಯ ವೇಳೆ ಕಾಣೆಯಾಗಿದ್ದ ಸೈನಿಕ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅನಂತನಾಗ್ ಪ್ರದೇಶದಲ್ಲಿ ಭಯೋತ್ಪಾದಕರ ವಿರುದ್ಧ ಜಂಟಿ ಭದ್ರತಾ ಕಾರ್ಯಾಚರಣೆಯ ಸಂದರ್ಭದಲ್ಲಿ ನಿನ್ನೆ (ಸೆ.14) ಯೋಧ ನಾಪತ್ತೆಯಾಗಿದ್ದರು. ಸೈನಿಕರು […]
ಪಟ್ನಾ: ರಾಮಚರಿತಮಾನಸದಂತಹ ಪ್ರಾಚೀನ ಕೃತಿಗಳಲ್ಲಿ ‘ಪೊಟ್ಯಾಸಿಯಂ ಸೈನೈಡ್’ಗೆ ಹೋಲಿಸುವಂತಹ ವಿನಾಶಕಾರಿ ಅಂಶಗಳಿವೆ ಎಂದು ಬಿಹಾರ ಶಿಕ್ಷಣ ಸಚಿವ ಚಂದ್ರಶೇಖರ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಆರ್ಜೆಡಿ ನಾಯಕ ಗುರುವಾರ ರಾತ್ರಿ ಕಾರ್ಯಕ್ರಮವೊಂದರಲ್ಲಿ ನೀಡಿದ ಹೇಳಿಕೆಯ ವಿಡಿಯೊ ತುಣುಕು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೆಯಾಗಿದೆ. ‘ಇದು ನನ್ನೊಬ್ಬನ ದೃಷ್ಟಿಕೋನವಷ್ಟೇ ಅಲ್ಲ. ಹಿಂದಿಯ ಪ್ರಸಿದ್ಧ ಲೇಖಕ ನಾಗಾರ್ಜುನ ಮತ್ತು ಸಮಾಜವಾದಿ ಚಿಂತಕ ರಾಮ ಮನೋಹರ ಲೋಹಿಯಾ ಅವರೂ ರಾಮಚರಿತಮಾನಸವು ಪ್ರತಿಗಾಮಿ ಚಿಂತನೆಗಳನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ’ […]
ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ ವಿಚಾರವಾಗಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಪ್ರತಿಕ್ರಿಯಿಸಿದರು. ಬೆಂಗಳೂರು : ಬಿಜೆಪಿ-ಜೆಡಿಎಸ್ ಮೈತ್ರಿ ನೂರಕ್ಕೆ ನೂರರಷ್ಟು ಆಗುತ್ತದೆ. ಕ್ಷೇತ್ರ ಹಂಚಿಕೆ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ ಎಂದು ಮಾಜಿ ಸಚಿವ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗು […]
ಶ್ರೀನಗರ,ಸೆ.15- ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳಲ್ಲಿರುವ ಭಯೋತ್ಪಾದಕರಿಗೆ ಚೀನಾದಲ್ಲಿ ತಯಾರಾದ ಆಧುನಿಕ ಶಸ್ತ್ರಾಸ್ತ್ರಗಳನ್ನು ಪಾಕಿಸ್ತಾನದ ಗುಪ್ತಚರ ವಿಭಾಗ(ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್) ಒದಗಿಸಿರುವುದು ಬೆಳಕಿಗೆ ಬಂದಿದೆ. ಭಯೋತ್ಪಾದಕರಿಗೆ ನೀಡಲಾಗುತ್ತಿರುವ ಶಸ್ತ್ರಾಸ್ತ್ರಗಳಲ್ಲಿ ಪಿಸ್ತೂಲ್ಗಳು, ಗ್ರೆನೇಡ್ಗಳು, ರಾತ್ರಿ ದೃಷ್ಟಿ ಸಾಧನಗಳು ಮತ್ತು ಹೆಚ್ಚಿನವು ಸೇರಿವೆ. ಇವುಗಳನ್ನು ಚೀನಾದ ಡ್ರೋನ್ಗಳ ಮೂಲಕ ಭೂಪ್ರದೇಶಕ್ಕೆ ಸಾಗಿಸಲಾಗಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ. ಇದಲ್ಲದೆ ಭಯೋತ್ಪಾದಕರಿಗೆ ಭೂಪ್ರದೇಶದೊಳಗೆ ನುಸುಳಲು ಸಹಾಯ ಮಾಡಲು ಡಿಜಿಟಲ್ ಮ್ಯಾಪ್ಶೀಟ್ಗಳು ಮತ್ತು ನ್ಯಾವಿಗೇಷನ್ ಸಿಸ್ಟಮ್ಗಳನ್ನು […]
ಧಾರವಾಡ, ಸೆಪ್ಟೆಂಬರ್, 15: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ 5 ವರ್ಷಗಳ ಅವಧಿಗೆ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡುವ ಸಂಬಂಧ ಪಾಲಿಕೆ ಹೊರಡಿಸಿದ್ದ ಠರಾವು ಪ್ರಶ್ನಿಸಿ ಅಂಜುಮನ್ ಇಸ್ಲಾಂ ಸಂಸ್ಥೆಯು ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಜಾಗೊಳಿಸಿದೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ 5 ವರ್ಷಗಳ ಕಾಲ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲು ಪಾಲಿಕೆಯಲ್ಲಿ ಠರಾವು ಪಾಸು ಮಾಡಲಾಗಿತ್ತು. ಈ ಠರಾವನ್ನು ಪ್ರಶ್ನಿಸಿ ಹುಬ್ಬಳ್ಳಿಯ ಅಂಜುಮನ್ ಇಸ್ಲಾಂ ಸಂಸ್ಥೆಯು ಈ ಠರಾವಿಗೆ ತಡೆಯಾಜ್ಞೆ […]
ಚಾಮರಾಜನಗರ, ಸೆಪ್ಟೆಂಬರ್, 15: ರಾಜ್ಯಕ್ಕೆ ಹೊಂದಿಕೊಂಡಿರುವ ಕೇರಳ ಗಡಿ ಪ್ರದೇಶದ ಕೋಯಿಕ್ಕೊಡ್ ಜಿಲ್ಲೆಯಲ್ಲಿ ನಿಪಾ ವೈರಸ್ ಕಾಣಿಸಿಕೊಂಡಿರುವುದರಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ಗುಂಡ್ಲುಪೇಟೆ ತಾಲೂಕಿನ ಗಡಿ ಚೆಕ್ಪೋಸ್ಟ್ ಮೂಲೆಹೊಳೆಯಲ್ಲಿ ಅರಣ್ಯ ಸಿಬ್ಬಂದಿ ಕೇರಳದಿಂದ ಬರುವ ಸಾರ್ವಜನಿಕರ ಆರೋಗ್ಯದ ಮೇಲೆ ತೀವ್ರ ನಿಗಾವಹಿಸುತ್ತಿದ್ದಾರೆ. ಕೇರಳದಲ್ಲಿ ನಿಪಾ ಹಾವಳಿ: ಕರ್ನಾಟಕ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ- ವಿವರ ತಿಳಿಯಿರಿ ಗುಂಡ್ಲುಪೇಟೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಲೀಂ ಪಾಷಾ ಅವರ ನೇತೃತ್ವದಲ್ಲಿ ಕೇರಳದಿಂದ ಬರುವ ವಾಹನಗಳ […]