ವ್ಯಕ್ತಿಯೊಬ್ಬ ಅನಧಿಕೃತವಾಗಿ ಗೈರು ಹಾಜರಾದ ಹಿನ್ನೆಲೆಯಲ್ಲಿ ಆತನನ್ನು ಕೆಲಸದಿಂದ ತೆಗೆದುಹಾಕಲಾಗಿದ್ದು, ಇದರಿಂದ ಆಕ್ರೋಶಗೊಂಡ ಆತ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಪಟ್ಟಣದಲ್ಲಿ ನಡೆದಿದೆ.ಹೊಸದುರ್ಗ ಪಟ್ಟಣದ ಚಾಮರಾಜಪೇಟೆ ನಿವಾಸಿ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ್ದು, ಈತ ಗುತ್ತಿಗೆ ಆಧಾರಿತ ಪೌರ ಕಾರ್ಮಿಕನಾಗಿ ಪುರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಂದು ಹೇಳಲಾಗಿದೆ. ಆದರೆ ಆರು ತಿಂಗಳಿಂದ ಸತತವಾಗಿ ಗೈರು ಹಾಜರಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿ […]

ಕಿರುತೆರೆ ಜನಪ್ರಿಯ ನಟಿ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಜಾದವ್‌ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹಿಂ ದಿ ಧಾರಾವಾಹಿಯಲ್ಲಿ ಅಭಿನಯಿಸಿರುವ ನಟಿಯ ದೂರು ಸ್ವೀಕರಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅತ್ಯಾಚಾರವೆಸಗಿದ ವ್ಯಕ್ತಿ ಮತ್ತು ನಟಿ ಹಲವು ವರ್ಷಗಳಿಂದ ಪರಿಚಯವಿದ್ದು ಇಬ್ಬರು ಸ್ನೇಹಿತರಾಗಿದ್ದರು.ಇತ್ತೀಚಿಗೆ ಅವರಿಬ್ಬರ ನಡುವೆ ವೈಮನಸ್ಸು ಉಂ ಟಾದ ಕಾರಣ ಈ ಘಟನೆ ನಡೆದಿರಬಹುದು ಎಂದು ಯುವತಿ ಆಪ್ತರು ತಿಳಿಸಿದ್ದಾರೆ. ಪಶ್ಚಿಮ ಬಂಗಾಳದ ಬಿಜೋಯ್‌ಗನ ಅಪಾರ್ಟೆ ಮೆಂಟ್‌ನಲ್ಲಿ […]

ಬಿಹಾರ: ನನ್ನ ಮಗಳನ್ನು ಅಪಹರಣ ಮಾಡಲಾಗಿದೆ ಎಂದು ಪೊಲೀಸರಿಗೆ ದೂರು ಕೊಟ್ಟಿದ್ದ ತಂದೆಗೆ ಶಾಕ್​ ಎದುರಾಗಿದೆ. ಆತನ ದೂರಿನ ಅನ್ವಯ ಪೊಲೀಸರು ಕಿಡ್ನ್ಯಾಪ್ ಕೇಸ್ ಎಫ್‌ಐಆರ್ ದಾಖಲಿಸಿದ್ದರು. ಅತ್ತ ಪೊಲೀಸರು ಯುವತಿಗಾಗಿ ಹುಡುಕಾಟ ನಡೆಸಿದ್ದರೆ, ಇತ್ತ ಯುವತಿ ತನಗೆ ಮದುವೆಯಾಯ್ತು ಎಂದು ತನ್ನ ಸೋಶಿಯಲ್ ಮೀಡಿಯಾದಲ್ಲಿ ಬಹಿರಂಗ ಪಡಿಸಿದ್ದಾಳೆ.ಮಗಳ ವಿಡಿಯೋ ನೋಡಿದ ಆಕೆಯ ಕುಟುಂಬದವರು ದಿಕ್ಕು ತೋಚದೆ ಕಂಗಾಲಾಗಿದ್ದಾರೆ. ಬಿಹಾರದಲ್ಲಿ ಈ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು […]

  ಚೆನ್ನೈ: ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್   ಪುತ್ರಿ ಐಶ್ವರ್ಯಾ   ಅವರಿಗೂ ಕೊರೋನಾ ಪಾಸಿಟಿವ್   ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರೋದಾಗಿ ತಿಳಿದು ಬಂದಿದೆ.ಈ ಕುರಿತಂತೆ ತಮ್ಮ ಇನ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿರುವಂತ ರಜನಿಕಾಂತ್ ಪುತ್ರಿ ಐಶ್ವರ್ಯಾ, ಕೊರೋನಾ ಎಲ್ಲಾ ಮುಂಜಾಗ್ರತಾ ಕ್ರಮಗಳ ನಂತ್ರವೂ, ತನಗೊ ಕೊರೋನಾ ಪರೀಕ್ಷೆಯಿಂದಾಗಿ ಕೋವಿಡ್ ಪಾಸಿಟಿವ್ ಎಂದು ದೃಢಪಟ್ಟಿದೆ. ತಪ್ಪದೇ ಎಲ್ಲರೂ ಮಾಸ್ಕ್ ಧರಿಸಿ, ಲಸಿಕೆಯನ್ನು ಪಡೆಯೋದು ಮರೆಯಬೇಡಿ ಎಂಬುದಾಗಿ […]

  ರಸ್ತೆಗಳ ಮೇಲೆ ಬಳಿಯಲಾಗಿರುವ ಬಿಳಿ ಮತ್ತು ಹಳದಿ ಪಟ್ಟಿಗಳು ಸಂಚಾರ ಸುರಕ್ಷತೆ ದೃಷ್ಟಿಯಿಂದ ಏನನ್ನು ಸೂಚಿಸುತ್ತವೆ ಎಂದು ನಮಗೆ ಸಾಮಾನ್ಯವಾಗಿ ಸ್ಪಷ್ಟವಾಗಿ ತಿಳಿದಿರುವುದಿಲ್ಲ.ರಸ್ತೆಗಳ ಮೇಲಿನ ಬಿಳಿ ಮತ್ತು ಹಳದಿ ಪಟ್ಟಿಗಳ ಬಗ್ಗೆ ಈ ಅಂಶಗಳು ನಿಮಗೆ ತಿಳಿದಿರಲಿ: ಬಿಳಿ ಪಟ್ಟಿಗಳು ಒಂದೇ ದಿಕ್ಕಿನಲ್ಲಿ ಸಂಚರಿಸುತ್ತಿರುವ ವಾಹನಗಳನ್ನು ಈ ಪಟ್ಟಿಗಳು ಪ್ರತ್ಯೇಕಿಸುತ್ತವೆ.ಬಿಳಿ ಪಟ್ಟಿಗಳನ್ನು ಮೂರು ವರ್ಗಗಳಾಗಿ ವಿಭಾಗಿಸಲಾಗಿದೆ: ಸಿಂಗಲ್ ಬ್ರೋಕನ್, ಸಿಂಗಲ್ ಸಾಲಿಡ್ ಮಾರ್ಕಿಂಗ್ ಮತ್ತು ಡಬಲ್ ಸಾಲಿಡ್ ಮಾರ್ಕಿಂಗ್.ಬ್ರೋಕನ್ […]

  ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 2 ರಂದು ಬೆಳಗ್ಗೆ ಸುಮಾರು 11 ಗಂಟೆಗೆ ಬಜೆಟ್ ಬಗ್ಗೆ ಭಾಷಣ ಮಾಡಲಿದ್ದಾರೆ.ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು, ದೇಶದ ಜನರನ್ನುದ್ದೇಶಿಸಿ ಅವರು ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡಿಸಿದ ಒಂದು ದಿನದ ನಂತರ ಪ್ರಧಾನಿ ಮೋದಿಯವರ ಭಾಷಣ ಇದೆ.ವರದಿಯ ಪ್ರಕಾರ, ಪ್ರಧಾನಿಯವರು ತಮ್ಮ ಭಾಷಣದಲ್ಲಿ ಕೇಂದ್ರ ಬಜೆಟ್ 2022 […]

ನವದೆಹಲಿ: ದೇಶದ ಎಲ್ಲಾ ಗ್ರಾಮಗಳಲ್ಲಿ ಆಪ್ಟಿಕಲ್ ಫೈಬರ್ ಜಾಲ ನಿರ್ಮಿಸಿ ಇಂಟರ್ನೆಟ್ ವೇಗ ಹೆಚ್ಚಿಸಲು ಕೇಂದ್ರ ಬಜೆಟ್ ನಲ್ಲಿ ಪ್ರಸ್ತಾಪಿಸಲಾಗಿದೆ.ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ ಗ್ರಾಮಗಳಿಗೆ OFC ಸಂಪರ್ಕ ಜಾಲ ನಿರ್ಮಿಸಿ ಇಂಟರ್ನೆಟ್ ವೇಗ ಹೆಚ್ಚಿಸಲು ಭಾರತ ಯೋಜನೆಯಡಿ ಇನ್ನಷ್ಟು ಸ್ಥಳಗಳನ್ನು ಆಯ್ಕೆ ಮಾಡಲಾಗುವುದು.ಈ ಮೂಲಕ ಗ್ರಾಮೀಣ ಪ್ರದೇಶಗಳನ್ನು ಮುಖ್ಯವಾಹಿನಿಗೆ ತರಲಾಗುತ್ತದೆ. ಮುಖ್ಯವಾಹಿನಿಯ ಸಂಪರ್ಕದಿಂದ ವಂಚಿತವಾದ ಗುಡ್ಡಗಾಡು ಪ್ರದೇಶಗಳಲ್ಲಿ ಅಳವಡಿಸಲಾಗುತ್ತದೆ. ಈ ಮೂಲಕ […]

  ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿಂದು ಮಂಡಿಸಿದ 2022-23ನೇ ಸಾಲಿನ ಬಜೆಟ್ ನಲ್ಲಿ ‘ಡಿಜಿಟಲ್ ರೂಪಾಯಿ’ಯನ್ನು ಮಾರುಕಟ್ಟೆಗೆ ಪರಿಚಯಿಸುವ ಪ್ರಸ್ತಾಪ ಪ್ರಕಟಿಸಿದ್ದಾರೆ.2022-23ರಿಂದ ಅಂದರೆ ಪ್ರಸಕ್ತ ವರ್ಷದಿಂದಲೇ ಆರಂಭವಾಗುವಂತೆ ಭಾರತೀಯ ರಿಸರ್ವ್ ಬ್ಯಾಂಕ್, ಡಿಜಿಟಲ್ ರೂಪಾಯಿ ಅನ್ನು ಹಣಕಾಸು ಮಾರುಕಟ್ಟೆಗೆ ಪರಿಚಯಿಸಲಿದೆ.ಕೇಂದ್ರೀಯ ಬ್ಯಾಂಕ್‌ನ ಜಿಡಿಟಲ್ ಕರೆನ್ಸಿ(ಸಿಬಿಡಿಸಿ)ಯು ಡಿಜಿಟಲ್ ಆರ್ಥಿಕತೆಯನ್ನು ಹೆಚ್ಚಿಸಲಿದೆ. ಡಿಜಿಟಲ್ ಕರೆನ್ಸಿ ಹೆಚ್ಚು ಪರಿಣಾಮಕಾರಿ ಮತ್ತು ಅಗ್ಗದ ಕರೆನ್ಸಿ ನಿರ್ವಹಣಾ ವ್ಯವಸ್ಥೆಗೆ ಕಾರಣವಾಗುತ್ತದೆ. […]

ನೊಯ್ಡಾ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಶೋಧ ಕಾರ್ಯಾಚರಣೆ ವೇಳೆ ನಿವೃತ್ತ ಐಪಿಎಸ್​ ಅಧಿಕಾರಿಯ ಮನೆಯಲ್ಲಿ ದಾಖಲೆಯಿಲ್ಲದ ಕೋಟಿಗಟ್ಟಲೇ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಈ ಘಟನೆ ಉತ್ತರ ಪ್ರದೇಶದ ನೊಯ್ಡಾದಲ್ಲಿ ನಡೆದಿದೆ.2000 ಮತ್ತು 500 ರೂ. ಹೊಸ ನೋಟಗಳನ್ನು ಐಟಿ ದಾಳಿಯ ವೇಳೆ ವಶಕ್ಕೆ ಪಡೆಯಲಾಗಿದೆ. ಹಣವನ್ನು ಕಟ್ಟಡದ ನೆಲಮಾಳಿಗೆಯಲ್ಲಿ ಇಡಲಾಗಿತ್ತು. ಮಾಹಿತಿ ಅಧಿಕಾರಿಯ ಪ್ರಕಾರ ನೆಲಮಾಳಿಗೆಯಲ್ಲಿ 650 ಲಾಕರ್‌ಗಳನ್ನು ಹೊಂದಿರುವ ಸಂಸ್ಥೆಯನ್ನು ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.ಪತ್ತೆಯಾಗಿರುವ ಹಣ ಬೇನಾಮಿ ಆಸ್ತಿಗೆ […]

ಕಳೆದ ಬಾರಿ ನನಗೆ ಸಚಿವ ಸ್ಥಾನ ತಪ್ಪಿ ಹೋಗಿತ್ತು ಈ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ಸಿಗುತ್ತದೆ.ನಾನು ಸಚಿವ ಸ್ಥಾನ ಕೊಡಿ ಎಂದು ಇನ್ನು ಕೇಳುವುದಿಲ್ಲ ಎಂದು ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಹೇಳಿದ್ದಾರೆ.ಕಾಗವಾಡದಲ್ಲಿ ಮಾತನಾಡಿದ ಪಾಟೀಲ್, ನಿನಗೆ ಸಚಿವ ಸ್ಥಾನ ನೀಡುತ್ತೇವೆ ಎಂದು ನಮ್ಮ ಪಕ್ಷದ ನಾಯಕರು ಭರವಸೆ ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಸಚಿವ ಸ್ಥಾನದ ಬಗ್ಗೆ ಮಾತನಾಡುವುದಿಲ್ಲ ಎಂದು ಶ್ರೀಮಂತ ಪಾಟೀಲ್ ಹೇಳಿದ್ದಾರೆ.ನಾನು ಸಚಿವ ಸ್ಥಾನದ […]

Advertisement

Wordpress Social Share Plugin powered by Ultimatelysocial