ರಸ್ತೆಯಲ್ಲಿ ರಾಗಿ ಹಾಗೂ ಹುರುಳಿ ಒಕ್ಕಣೆ ಮಾಡುತ್ತಿದ್ದ ವೇಳೆ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರ ಜಾರಿ ಬಿದ್ದು ಗಾಯಗಳಾಗಿವೆ, ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಎಳೆಸಂದ್ರ ಗ್ರಾಮದ ಬಳಿ ಈ ಘಟನೆ ನಡೆದಿದೆ, ಗುಟ್ಟೂರು ಗ್ರಾಮದ ಸುಬ್ರಮಣಿ ಬೈಕ್ ನಿಂದ ಬಿದ್ದು ಗಾಯಗಳಾದ ಹಿನ್ನೆಲೆ ಆಕ್ರೋಶಗೊಂಡ ಆತನ ತಂದೆ ಒಕ್ಕಣೆ ಮಾಡುತ್ತಿದ್ದ ಹುರುಳಿಗೆ ಬೆಂಕಿ ಹಚ್ಚಿದ್ದಾನೆ, ಸದ್ಯ ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ:`ರಾಬರ್ಟ್’ […]
ಪ್ರಮುಖಸುದ್ದಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆ ಮೋಸ್ಟ್ ಅವೇಯ್ಟೆಡ್ ಸಿನಿಮಾ ರಾಬರ್ಟ್.. ತರುಣ್ ಸುಧೀರ್ ನಿರ್ದೇಶನದಲ್ಲಿ ಮೂಡಿಬರ್ತಿರುವ ಈ ಚಿತ್ರ ಕನ್ನಡ ಹಾಗೂ ತೆಲುಗು ಎರಡೂ ಭಾಷೆಗಳಲ್ಲೂ ಮೂಡಿಬರ್ತಿದೆ.. ಸ್ಯಾಂಪಲ್ಸ್ ಮೂಲಕವೇ ಸಿನಿಮಾ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿದೆ..ಇತ್ತೀಚೆಗಷೆ್ಟೀ ರಾಬರ್ಟ್ ಚಿತ್ರದ ತೆಲುಗು ವರ್ಷನ್ ಟೀಸರ್ ರಿಲೀಸ್ ಆಗಿತ್ತು.. ಟಾಲಿವುಡ್ ಮಂದಿ ಕೂಡ ಟೀಸರ್ ನೋಡಿ ಬೆರಗಾಗಿದ್ರು.. ಇದೀಗ ರಾಬರ್ಟ್ ಚಿತ್ರದ ತೆಲುಗು ವರ್ಷನ್ ಸಾಂಗ್ ಕೂಡ ರಿಲೀಸ್ ಆಗಿದೆ.. ಈ […]
ಬೈಕ್ ಸರ್ವಿಸ್ ಸೆಂಟರ್ ಗೆ ಬೆಂಕಿ ಬಿದ್ದು, 10 ಬೈಕ್ ಗಳು ಸುಟ್ಟು ಭಸ್ಮವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಚಾಮನಾಳದಲ್ಲಿ ನಡೆದಿದೆ.ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಬೈಕ್ ಗಳು ಬೆಂಕಿಗಾಹುತಿಯಾಗಿದ್ದು, ಸುಮಾರು 10 ಲಕ್ಷ ಮೌಲ್ಯದ ಬೈಕ್ ಗಳು ಸುಟ್ಟುಹೋಗಿವೆ.ಶಹಾಪುರ ರಸ್ತೆಯಲ್ಲಿರೋ ಶಿವ ಸೇಲ್ ಬೈಕ್ ಸರ್ವಿಸ್ ಸೆಂಟರ್ ನಲ್ಲಿ ಅವಘಢ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.ಈ ಕುರಿತು ಕೆಂಭಾವಿ ಪೊಲೀಸ್ ಠಾಣೆಯಲ್ಲಿ […]
ಬೀದರ ಜಿಲ್ಲೆಯೆ ಹುಲಸುರು ತಾಲೂಕಿನ ಬೇಲೂರು ಗ್ರಾಮದಲ್ಲಿ ಧಿಡೀರನೆ ವಿದ್ಯತ್ ಕಂಬ ಕುಸಿದು ಬಿದ್ದಿದ್ದು, K.E.B ಅವರ ನಿರ್ಲಕ್ಷದಿಂದ ಕಂಬ ಕೊಳೆತಂತ್ತಾಗಿದೆ.ಯುವಕನೊಬ್ಬ ಬ್ಯಾನರ್ ಅಂಟಿಸಲು ಎಣಿಯಿಂದ ಏರುವಾಗ ಈ ಘಟನೆ ಸಂಭವಿಸಿದ್ದು ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.ಈ ಕಂಬಕ್ಕೆ ಯಾವುದೇ ವಿದ್ಯುತ್ ಸಂಪರ್ಕ ಇಲ್ಲದಿದ್ದು,ಒಟ್ಟಿನಲ್ಲಿ ಯಾರ ಮೇಲೂ ಬಿದ್ದಿಲ್ಲ.ಒಂದು ವೇಳೆ ಜನರ ಮೇಲೆ ಬಿದ್ದರೆ ಏನು ಗತಿ ಎಂದು ಜನ ಆಕ್ರೋಶಗೊಂಡಿದ್ದಾರೆ. ಇದನ್ನೂ ಓದಿ:ವೆಂಕಟ ಚೈತನ್ಯ ರೆಡ್ಡಿ (22) ಆತ್ಮಹತ್ಯೆ ಮಾಡಿಕೊಂಡಿರುವ […]
ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಪೆಟ್ರೋಲ್ ಡೀಸೆಲ್ ಗ್ಯಾಸ್ ಬೆಲೆಯನ್ನು ಕೂಡಲೇ ಇಳಿಸಬೇಕೆಂದು ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ಇಳಕಲ್ ನಗರದಲ್ಲಿ ಪ್ರತಿಭಟನೆಯನ್ನು ಮಾಡಿದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಹುನಗುಂದ ವಿಧಾನಸಭಾ ಮತಕ್ಷೇತ್ರ ಹಾಗೂ ಎಲ್ಲಾ ಘಟಕಗಳ ಪದಾಧಿಕಾರಿಗಳೊಂದಿಗೆ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯನ್ನು ಮಾಡಿದರು. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಬೆಲೆ ಏರಿಕೆಯ ಬಗ್ಗೆ ಮಾತನಾಡಿದರು. ` ಇದನ್ನೂ […]
ರೈತ ವಿರೋಧಿ ಕಾಯ್ದೆ ಹಾಗೂ ಮಾರುಕಟ್ಟೆ ತಿದ್ದುಪಡಿ ಕಾನೂನು ಹಿಂಪಡೆಯಲು ರಾಷ್ಟ್ರೀಯ ರಿಪಬ್ಲಿಕನ್ ಸೇನೆ ವತಿಯಿಂದ ವಿಜಯಪುರ ಜಿಲ್ಲೆಯ ಕೋಲಾರ ತಾಲೂಕಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಸಂಘಟನಾಕಾರರು ನೀಲಿ ಶಾಲನ್ನು ಧರಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ಕನಕ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೂ ಜಾಥಾ ನಡೆಸಿ, ದುಡಿದು ತಿನ್ನಲು ಆಗದ ರೀತಿಯಲ್ಲಿ ಇಂದು ಒಂದು ಪರಿಸ್ಥಿತಿ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಾರಿಗೆ ತಂದಿರುವ ನೀತಿಯನ್ನು ಕೂಡಲೆ ರದ್ದು ಮಾಡಬೇಕು […]
ಕಾಲೇಜಿನಲ್ಲಿಯೇ ನೇಣುಬಿಗಿದುಕೊಂಡು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಪಟ್ಟಣದಲ್ಲಿ ನಡೆದಿದೆ. ವೆಂಕಟ ಚೈತನ್ಯ ರೆಡ್ಡಿ ಆತ್ಮಹತ್ಯೆಗೆ ಶರಣಾದ ಯುವಕ. ಚನ್ನಪಟ್ಟಣದ ಖಾಸಗಿ ಕಾಲೇಜಿನಲ್ಲಿ BSC ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ವೆಂಕಟ್ ಶೌಚಾಲಯದ ಕಿಟಕಿಯ ಸರಳುಗಳಿಗೆ ನೇಣುಬಿಗಿದುಕೊಂಡಿದ್ದಾನೆ. ಸದ್ಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಸ್ಥಳಾಂತರ ಮಾಡಿದ್ದು, ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಕೇಸ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ:ರಾಷ್ಟ್ರೀಯ ಹೆದ್ದಾರಿಯಲ್ಲಿ ಜವರಾಯನ ಅಟ್ಟಹಾಸ,ಅಪಘಾತದಲ್ಲಿ ವ್ಯಕ್ತಿ ಸ್ಥಳದಲ್ಲೇ ಸಾವು
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ದಾಟುವಾಗ ಅಪಘಾತವಾಗಿ ಓರ್ವ ವ್ಯಕ್ತಿ ಸಾವನ್ನಪಿರುವ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬಳಿ ನಡೆದಿದೆ. ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಾಗಳಾಗಿದ್ದು, ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಮಹ್ಮದ್ ಸಗೀರ್ (30) ಮೃತ ದುರ್ದೈವಿ.ಇನ್ನು ಈ ಪ್ರಕರಣವು ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಇದನ್ನೂ ಓದಿ :ಕೊಲೆ ಆರೋಪಿ ಕಾಲಿಗೆ ಗುಂಡೇಟು
ಬೆಳ್ಳಂಬೆಳಗ್ಗೆ ನಗರದಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ಕೊಲೆ ಆರೋಪಿಯ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆರೋಪಿ ಸಂತೋಷ್(21) ಕಾಲಿಗೆ ಗುಂಡು ತಗುಲಿದೆ. ರಾಜಗೋಪಾಲನಗರದ ಜಿ.ಕೆ. ಡಬ್ಲ್ಯೂ ಲೇಔಟ್ನಲ್ಲಿ ಫೈರಿಂಗ್ ನಡೆದಿದ್ದು, ಸಂತೋಷ್ ಅದೇ ಬಡಾವಣೆಯ ರೌಡಿಶೀಟರ್ ಆಗಿದ್ದ ಎಂದು ತಿಳಿದು ಬಂದಿದೆ. ಇದೇ ಜ. 9ರಂದು ಶ್ರೀನಿವಾಸ್ ಅಲಿಯಾಸ್ ಕರಿ ಸೀನನ ಕೊಲೆ ನಡೆದಿದ್ದು, ಸಂತೋಷ್ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ. ಹಾಡಹಹಗಲೇ ರಾಜಗೋಪಾಲನಗರದ ಕಸ್ತೂರಿ ನಗರದಲ್ಲಿ ಆರೋಪಿಗಳು ಹತ್ಯೆಗೈದಿದ್ದರು. […]
ಕನ್ನಡದ ವರನಟ ಡಾ.ರಾಜ್ ಕುಮಾರ್ ಅವರನ್ನ ಅಪಹರಿಸಿದ್ದ ನರಹಂತಕ ವೀರಪ್ಪನ್ಗೆ ಕೋಟ್ಯಂತರ ಹಣವನ್ನು ರಾಜ್ಯ ಸರ್ಕಾರ ಕೊಟ್ಟಿತ್ತು ಎಂಬ ಸ್ಫೋಟಕ ಮಾಹಿತಿ ಬಯಲಾಗಿದೆ.ಅಣ್ಣಾವ್ರನ್ನು ಬಿಡುಗಡೆ ಮಾಡಲು ಮೂರು ಹಂತದಲ್ಲಿ 15.22 ಕೋಟಿ ರೂಪಾಯಿಯನ್ನು ಅಂದಿನ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನೇತೃತ್ವದ ಸರ್ಕಾರ ನೀಡಿತ್ತು ಎಂಬ ಮಾಹಿತಿ ಪತ್ರಕರ್ತ ಶಿವಸುಬ್ರಮಣ್ಯನ್ ಅವರು ಬರೆದಿರುವ ಪುಸ್ತಕದಲ್ಲಿ ರಿವೀಲ್ ಆಗಿದೆ. ಇದನ್ನೂ ಓದಿ:ಪಾದಯಾತ್ರೆ ನಡುವೆ ಕ್ರಿಕೆಟ್ ಆಡಿದ ಶ್ರೀಗಳು