ಕೇಂದ್ರ ಗೃಹ ಸಚಿವಾಲಯವು ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯಲ್ಲಿ ಮಾಜಿ ಅಗ್ನಿಶಾಮಕ ಸಿಬ್ಬಂದಿಗೆ ಶೇಕಡ 10 ರಷ್ಟು ಮೀಸಲಾತಿಯನ್ನು ಪ್ರಕಟಿಸಿದೆ. ಒಂದು ವಾರದ ಹಿಂದೆ, ಗೃಹ ಸಚಿವಾಲಯವು ಅಗ್ನಿವೀರ್ಗಳಿಗಾಗಿ ಬಿಎಸ್ಎಫ್ ನೇಮಕಾತಿಯಲ್ಲಿ ಇದೇ ರೀತಿಯ ಪ್ರಕಟಣೆ ನೀಡಿದೆ. ಅಗ್ನಿವೀರರಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯನ್ನೂ ಸಚಿವಾಲಯ ಪ್ರಕಟಿಸಿದೆ. ಇದು ಅಗ್ನಿವೀರರ ಮೊದಲ ಬ್ಯಾಚ್ ಅಥವಾ ನಂತರದ ಬ್ಯಾಚ್ಗಳ ಆಧಾರದ ಮೇಲೆ ಲಭ್ಯವಿರುತ್ತದೆ. ಇದಕ್ಕಾಗಿ […]
ಕರ್ನಾಟಕ
ಬೆಂಗಳೂರು: ಇದೇ 25ರಂದು ಮತ್ತೊಮ್ಮೆ ರಾಜ್ಯಕ್ಕೆ ಬರಲಿರುವ ಪ್ರಧಾನಿ ನರೇಂದ್ರ ಮೋದಿ, ದಾವಣಗೆರೆ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ದಾವಣಗೆರೆಯಲ್ಲಿ ನಡೆಯಲಿದ್ದು, ಅದರಲ್ಲಿ ಭಾಗವಹಿಸಲಿರುವ ಪ್ರಧಾನಿ, ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಶ್ರೀಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆ. ಅದೇ ದಿನ ಬೆಂಗಳೂರಿನಲ್ಲಿ ಕೆ.ಆರ್. ಪುರ- ವೈಟ್ಫೀಲ್ಡ್ ಮೆಟ್ರೊ ಮಾರ್ಗ ಲೋಕಾರ್ಪಣೆ ಮಾಡಲಿರುವ ಅವರು […]
ಬೆಂಗಳೂರು: ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಸಹಾಯವಾಣಿ ಆರಂಭಿಸಲಾಗಿದೆ. ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರಲ್ಲಿ ಯಾವುದೇ ಸಂದೇಹ, ಗೊಂದಲ, ಆತಂಕ ಪರಿಹರಿಸಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸಹಾಯವಾಣಿ ಆರಂಭಿಸಲಾಗಿದೆ. ಮಾರ್ಚ್ 20 ರಿಂದ 28 ರವರೆಗೆ ರಜಾ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಮಧ್ಯಾಹ್ನ 3 ಗಂಟೆಯಿಂದ ಸಂಜೆ 7:30ರ ವರೆಗೆ ಹಾಗೂ ಮಾರ್ಚ್ 26ರಂದು […]
ನವದೆಹಲಿ: ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ದೇಶದ 6 ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳ ದಿಢೀರ್ ಏರಿಕೆ ದಾಖಲಾಗುತ್ತಿದ್ದು, ಈ ಬಗ್ಗೆ ನಿಗಾವಹಿಸಿ, ಸೋಂಕು ತಡೆಗಟ್ಟುವ ಕ್ರಮವನ್ನು ಹೆಚ್ಚಿಸಲು ರಾಜ್ಯಗಳಿಗೆ ಕೇಂದ್ರಸರ್ಕಾರ ಪತ್ರಬರೆದಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಮಹಾರಾಷ್ಟ್ರ, ಗುಜರಾತ್, ತೆಲಂಗಾಣ, ತಮಿಳುನಾಡು, ಕೇರಳ ಹಾಗೂ ಕರ್ನಾಟಕ ರಾಜ್ಯಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಸೋಂಕು ಪರೀಕ್ಷೆ, ಚಿಕಿತ್ಸೆ, ಮೇಲ್ವಿಚಾರಣೆ ಹಾಗೂ ಲಸಿಕೆ ನೀಡಿಕೆಯನ್ನು ಹೆಚ್ಚಿಸಿ, ಖಚಿತಪಡಿಸಿಕೊಳ್ಳುವಂತೆ ಕೇಳಲಾಗಿದೆ. ಅಲ್ಲದೇ, ಪ್ರಕರಣಗಳ ದಿಢೀರ್ […]
ಬೆಂಗಳೂರು: ಕೆಪಿಟಿಸಿಎಲ್, ಎಸ್ಕಾಂ ನೌಕರರ ವೇತನ ಶೇ.20 ಹಾಗೂ ಕೆಎಸ್ ಆರ್ ಟಿಸಿ ನೌಕರರ ವೇತನ ಶೇ.15ರಷ್ಟು ಹೆಚ್ಚಿಸಿ ಇಂದೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಆರ್ ಟಿ ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಗುರುವಾರ ಪ್ರತಿಕ್ರಿಯಿಸಿದ ಅವರು, ವೇತನ ಹೆಚ್ಚಳಕ್ಕೆ ತೀರ್ಮಾನಿಸಿದ್ದು, ಅದರಂತೆಯೇ ಆದೇಶ ಹೊರ ಬೀಳಲಿದೆ ಎಂದು ಹೇಳುವ ಮೂಲಕ ಕೆಪಿಟಿಸಿಎಲ್, ಎಸ್ಕಾಂ, ಸಾರಿಗೆ ಸಂಸ್ಥೆ ನೌಕರರ ಉದ್ದೇಶಿತ ಮುಷ್ಕರ ಬೇಡವೆಂಬ […]
ನಮ್ಮ ಅಡುಗೆಮನೆಗಳಲ್ಲಿ ಸಾಮಾನ್ಯ ಕಂಡುಬರುವ ಮಸಾಲೆಗಳು ಅಂದ್ರೆ ಜೀರಿಗೆ, ಸಾಸಿವೆ, ಏಲಕ್ಕಿ, ದಾಲ್ ಚಿನ್ನಿ ಮತ್ತೆ ಲವಂಗ. ಇದ್ದು ಅದು ಆಹಾರದ ರುಚಿ ಮತ್ತು ಸುವಾಸನೆಯನ್ನು ಹೆಚ್ಚಿಸುತ್ತದೆ. ಅದಕ್ಕೆ ಅಷ್ಟೇ ಅಲ್ಲದೆ ಔಷಧಿ ತಯಾರಿಕೆಯಲ್ಲಿ ಕೂಡ ಬಳಕೆ ಮಾಡಲಾಗುತ್ತದೆ. ಪ್ರತಿ ದಿನ ನಿಯಮಿತವಾಗಿ ಲವಂಗವನ್ನು ಸೇವಿಸುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು. ಲವಂಗದಲ್ಲಿ ಔಷಧಿ ಗುಣಗಳಿರುವುದರಿಂದ ಆಯುರ್ವೇದದಲ್ಲಿ ಬಳಕೆ ಮಾಡಲಾಗುತ್ತದೆ. ಇಂದು ನಾವು ಲವಂಗ ಸೇವನೆಯಿಂದ ಆರೋಗ್ಯಕ್ಕೆ ಆಗುವ ಲಾಭಗಳ […]
ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ’ ನಾಳೆ (ಮಾರ್ಚ್ 17) ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಸಿನಿಮಾ ಬಗ್ಗೆ ಅಂದುಕೊಂಡಂತೆ ಭರ್ಜರಿ ಪ್ರಚಾರವನ್ನೂ ಮಾಡಲಾಗಿದೆ. ಇನ್ನೇನು ಸಿನಿಮಾ ಬಿಡುಗಡೆಗೆ ಇನ್ನೊಂದು ದಿನ ಬಾಕಿ ಇದೆ ಅನ್ನುವಾಗಲೇ ‘ಕಬ್ಜ’ ತಂಡ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳಿದೆ. ‘ಕಬ್ಜ’ ಸಿನಿಮಾದ ಲೀಡ್ ಹೀರೊ ಉಪೇಂದ್ರ, ನಿರ್ದೇಶಕ ಆರ್ ಚಂದ್ರು, ‘ಯುಐ’ ಸಿನಿಮಾದ ನಿರ್ಮಾಪಕ ಕೆ ಪಿ ಶ್ರೀಕಾಂತ್ ಸೇರಿದಂತೆ ಹಲವು ಆತ್ಮೀಯರು ಚಾರ್ಟರ್ಡ್ ಫ್ಲೈಟ್ […]
ರಾಣಿ ಮುಖರ್ಜಿ ಅವರು ಮದುವೆಯಾದ ಮೇಲೆ ಕೇವಲ ತಮ್ಮ ಹೋಮ್ ಪ್ರೊಡಕ್ಷನ್ ಯಶ್ ರಾಜ್ ಫಿಲಂ (YRF) ನಲ್ಲಿ ಮಾತ್ರ ಕೆಲಸ ಮಾಡಲು ಮುಂದಾಗುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಈ ಎಲ್ಲಾ ಗಾಳಿ ಸುದ್ದಿಗೆ ರಾಣಿ ಫುಲ್ ಸ್ಟಾಪ್ ಇಡುವಂತೆ ಉತ್ತರ ಕೊಟ್ಟಿದ್ದಾರೆ. ಯಶ್ ರಾಜ್ ಫಿಲಂ ನಿರ್ಮಾಣವಲ್ಲದ,’ಮಿಸೆಸ್ ಚಟರ್ಜಿ Vs ನಾರ್ವೆ’ ಸಿನಿಮಾದಲ್ಲಿ ರಾಣಿ ನಟಿಸಿದ್ದರು. ಈ ಸಿನಿಮಾದ ಬಗ್ಗೆ ಕರಣ್ ಜೋಹರ್ ಮತ್ತು ನಿರ್ಮಾಪಕ ನಿಖಿಲ್ […]
ಕೂದಲಿಗೆ ನಿತ್ಯ ಎಣ್ಣೆ ಹಚ್ಚುತ್ತೇನೆ, ಆದರೂ ಕೂದಲು ಉದುರುತ್ತದೆ ಎಂದು ಹೇಳುವವರನ್ನು ನೀವು ಕೇಳಿರಬಹುದು. ಇದಕ್ಕೆ ಕಾರಣ ನೀವು ಮಾಡುವ ಕೆಲವು ತಪ್ಪುಗಳು. ಅವುಗಳು ಯಾವುವು ಗೊತ್ತೇ? ಕೂದಲಿಗೆ ಎಣ್ಣೆ ಹಚ್ಚಿದ ತಕ್ಷಣ ಸ್ನಾನ ಮಾಡುವುದರಿಂದ ಅಥವಾ ತಲೆ ತೊಳೆದುಕೊಳ್ಳುವುದರಿಂದ ಎಣ್ಣೆಯ ಯಾವುದೇ ಪ್ರಯೋಜನಗಳು ನಿಮಗೆ ಲಭ್ಯವಾಗುವುದಿಲ್ಲ. ಅದರ ಬದಲು ಎಣ್ಣೆ ಹಚ್ಚಿ ಒಂದರಿಂದ ಎರಡು ಗಂಟೆಯೊಳಗೆ ಸ್ನಾನ ಮಾಡಿ. ಇದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ. ರಾತ್ರಿ ಎಣ್ಣೆ ಹಚ್ಚಿ […]
ದೂರದರ್ಶನದ ಪ್ರಸಿದ್ಧ ಶೋ ‘ನುಕ್ಕಡ್’ ನಲ್ಲಿ ಖೋಪ್ಡಿ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ಹಿರಿಯ ನಟ ಸಮೀರ್ ಖಾಖರ್(71) ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಸತೀಶ್ ಕೌಶಿಕ್ ಅವರ ಸಾವಿನಿಂದ ಅಭಿಮಾನಿಗಳು ಇನ್ನೂ ತತ್ತರಿಸುತ್ತಿರುವಾಗ, ಇದು ಉದ್ಯಮಕ್ಕೆ ಮತ್ತೊಂದು ಹೊಡೆತವಾಗಿದೆ. ವರದಿಯ ಪ್ರಕಾರ, ಹಿರಿಯ ನಟ ಸಮೀರ್ ಅವರಿಗೆ ಮಂಗಳವಾರ ಉಸಿರಾಟದ ಸಮಸ್ಯೆ ಎದುರಿಸಿದ ನಂತರ ಮೂರ್ಛೆ ಹೋಗಿದ್ದಾರೆ. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಐಸಿಯುಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನಂತರ ಅವರನ್ನು ವೆಂಟಿಲೇಟರ್ನಲ್ಲಿ […]