ಮಹಾಮಾರಿ ಕರೋನ ದಿಂದ ರಾಜ್ಯದಾದ್ಯಂತ ಲಾಕ್ ಡೌನ್ ಆಗಿ ಎಲ್ಲರಿಗೂ ಒಂದೊಂದು ಸಮಸ್ಯೆ ಇದ್ದರೆ ಕೆಲವರಿಗೆ ಮಾತ್ರ ಒಂದು ಹೊತ್ತಿನ ತುತ್ತು ಊಟಕ್ಕೂ ಸಂಕಷ್ಟ ಎದುರಾಗಿದೆ. ಇಂತಹ ಪರಿಸ್ಥಿತಿ ನಡುವೆಯೂ ಕನ್ನಡ ಚಿತ್ರ ರಂಗದ ಕೆಲವು ನಟರು ಹಾಗೂ ಅವರ ಅಭಿಮಾನಿಗಳಿಂದ ಸಹಾಯ ಮಾಡುತ್ತಿದ್ದು, ಅದೇ ರೀತಿ ಗಣಿನಾಡು ಬಳ್ಳಾರಿಯಲ್ಲಿ ಕೂಡ ಬಡ ಜನರ ಊಟದ ಸೇವೆಗಾಗಿ ಸತತ ೨೫ ದಿನಗಳಿಂದ ಪೊಗರು ಚಿತ್ರ ನಟ ಧ್ರುವ ಸರ್ಜಾ ಅವರ […]

ಕರ್ನಾಟಕದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಒಂದೇ ದಿನ 7 ಜನರಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 425 ಕ್ಕೆ ಏರಿಕೆಯಾಗಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ, ಕಲಬುರಗಿಯಲ್ಲಿ ಇಂದು 4 ತಿಂಗಳ ಮಗು ಸೇರಿದಂತೆ ಹೊಸದಾಗಿ 5 ಜನರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಕಲಬುರಗಿಯ ಐದು ಜನರಿಗೆ […]

ಬೆಂಗಳೂರು : ಲಾಕ್ ಡೌನ್ ನಿಂದಾಗಿ ಅಗತ್ಯ ವಸ್ತುಗಳು ಸಿಗದೇ ಕಷ್ಟದಲ್ಲಿರುವ ನಗರದ ಜನತೆಗೆ ,ಮಹಾನಗರ ಪಾಲಿಕೆ ಸಿಹಿಸುದ್ದಿ ನೀಡಿದ್ದು, ಅಗತ್ಯ ವಸ್ತುಗಳನ್ನು ಪೂರೈಸುವ ಸಹಾಯವಾಣಿಯನ್ನು ಆರಂಭಿಸಿದೆ. ಜನರು ಹೋಂ ಡೆಲಿವರಿ ಸಹಾಯವಾಣಿ ೦೮೦-೬೧೯೧೪೯೬೦ ಸಂಖ್ಯೆಗೆ ಕರೆ ಮಾಡಿದರೆ ದಿನಸಿ, ತರಕಾರಿ,ಔಷಧಿ ಮುಂತಾದ ಅಗತ್ಯ ವಸ್ತುಗಳನ್ನು ಮನೆಗೆ ತಲುಪಿಸಲಾಗುತ್ತದೆ. ಇದಕ್ಕೆ ಹೆಚ್ಚುವರಿಯಾಗಿ ೧೦ ರೂ. ಸೇವಾಶುಲ್ಕ ಪಡೆಯಲಾಗುತ್ತದೆ. ಖಾಸಗಿ ಏಜೆನ್ಸಿಯ ಸಹಯೋಗದಲ್ಲಿ ಅಗತ್ಯ ವಸ್ತುಗಳನ್ನು ನೀಡಲಾಗುತ್ತದೆ. ಇದಕ್ಕಾಗಿ ೫ ಸಾವಿರ […]

ಬೆಂಗಳೂರು : ಪಾದರಾಯನಪುರ ಗೂಂಡಾಗಿರಿ ಪ್ರಕರಣದಲ್ಲಿ ಪುಂಡರಿಗೆ ಸಪೋರ್ಟ್ ಮಾಡಿದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಪಾದರಾಯನಪುರ ಗೂಂಡಾಗಿರಿ ಪ್ರಕರಣದಲ್ಲಿ ಶಾಸಕ ಜಮೀರ್ ಅಹಮ್ಮದ್ ದಿನಕ್ಕೊಂದು ಹೇಳಿಕೆ ಕೊಡುತ್ತಿರುವ ಹಿನ್ನಲೆ ತಮ್ಮ ನಿವಾಸಕ್ಕೆ ಕರೆಸಿಕೊಂಡ ಸಿದ್ದರಾಮಯ್ಯ ಎಚ್ಚರಿಕೆಯಿಂದ ಮಾತನಾಡುವಂತೆ ತಿಳಿಸಿದ್ದಾರೆ. ದಿನಕ್ಕೊಂದು ಹೇಳಿಕೆ ನೀಡಬೇಡ. ಇದರಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ. ಸುಮ್ಮನೆ ವಿವಾದ ಮಾಡಿಕೊಳ್ಳಬೇಡ. ತಪ್ಪು ನಡೆದಿದೆ, ಪೊಲೀಸರು ಅವರ […]

ನವದೆಹಲಿ : ಕರ್ತವ್ಯ ನಿರ್ವಹಣೆ ವೇಳೆ ವೈದ್ಯರಿಗೆ ಸೂಕ್ತ ಭದ್ರತೆ ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮಾರಕ ಕೊರೊನಾ ವೈರಸ್ ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ವೈದ್ಯರು, ವೈದ್ಯಕೀಯ ಸಿಬ್ಬಂದಿ ಹಗಲಿರುಳು ತಮ್ಮ ಜೀವದ ಹಂಗು ತೊರೆದು ಶ್ರಮಿಸುತ್ತಿದ್ದಾರೆ. ಹೀಗಿದ್ದರೂ ದೇಶದ ವಿವಿಧೆಡೆ ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆ, ದೌರ್ಜನ್ಯ ಘಟನೆಗಳು ವರದಿಯಾಗುತ್ತಲೇ ಇವೆ. ಹೀಗಾಗಿ ವೈದ್ಯರು ಸಾಂಕೇತಿಕ ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಬೆನ್ನಲ್ಲೇ ಇಂದು […]

ಧಾರವಾಡ: ಕೊರೊನಾ ಕಂಟಕ ವಿಶ್ವದಾದ್ಯಂತ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಜನ ಗೃಹ ಬಂಧನದಲ್ಲಿದ್ದಾರೆ. ಇತ್ತ ಮದುವೆ ನಿಶ್ಚಯವಾಗಿ ಹಸೆಮಣೆ ಏರಬೇಕಿದ್ದ ಬಹುತೇಕ ಜೋಡಿಗಳು ಮದುವೆ ಮುಂದೂಡಿದ್ದರೆ, ಕೆಲವರು ಸರಳವಾಗಿ ವಿವಾಹವಾಗಿದ್ದಾರೆ. ಆದ್ರೆ ಧಾರವಾಡದಲ್ಲಿ ಡಿಫರೆಂಟ್ ಮದುವೆ ನಡೆದಿದೆ. ಲಾಕ್‌ಡೌನ್ ಪಾಲಿಸುವುದರೊಂದಿಗೆ ಈ ಜೋಡಿ ಆನ್‌ಲೈನ್‌ನಲ್ಲಿಯೇ ಸತಿ-ಪತಿ ಆಗಿದ್ದಾರೆ. ಧಾರವಾಡದ ಯುವಕ ಇಮ್ರಾನ್ -ಕೊಪ್ಪಳ ತಾಜಮಾ ಬೇಗಂ ಎಂಬುವರನ್ನು ವಿಡಿಯೋ ಕಾಲ್ ಮೂಲಕ ವರಿಸಿದ್ದಾರೆ. ಈ ಇಬ್ಬರ ಅಂತರ್ಜಾಲ ಮದುವೆಗೆ ಹಿರಿಯರು […]

ಶಾಸಕ ಜಮೀರ್ ಅಹ್ಮದ್ ಅವರನ್ನ ಹೋಮ್ ಕ್ವಾರಂಟೈನ್ ಮಾಡಬೇಕು ಅಂತ ಆರೋಗ್ಯ ಸಚಿವ ಶ್ರೀರಾಮುಲು ಬಳ್ಳಾರಿಯಲ್ಲಿ ಹೇಳಿದ್ದಾರೆ. ಅಲ್ಲದೆ ಪಾದರಾಯನ ಪುರಕ್ಕೆ ಭೇಟಿ ನೀಡಿದ್ದ ಗೃಹಸಚಿವ ಬಸವರಾಜ್ ಬೊಮ್ಮಯಿ ಅವರನ್ನ ಕೂಡಾ ತಪಾಸಣೆ ಮಾಡಬೇಕಿದೆ ಅಂತ ಹೇಳಿದ್ದಾರೆ. ಈ ಹಿಂದೆ ವೃದ್ಧೆಯೊಬ್ಬರ ಸಾವಿಗೆ ಜಮೀರ್ ಅಹ್ಮದ್ ತೆರಳಿದ್ರು. ಅಲ್ಲಿ ಸುಮಾರು ೨೫ ಜನ ಸೇರಿದ್ರು. ಹೀಗಾಗಿ ಶಾಸಕ ಜಮೀರ್ ಅವರನ್ನ ಹೋಮ್ ಕ್ವಾರಂಟೈನ್ ಮಾಡಬೇಕು ಅಂತ ಹೇಳಿದ್ದಾರೆ.

ಬೆಂಗಳೂರು: ಕೊರೊನಾ ಸೋಂಕಿತ ರೋಗಿಗಳಿಗೆ ಅಗತ್ಯ ಸೇವೆ ಸಲ್ಲಿಸಲು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ರೋಬೋಗಳನ್ನ ತಯಾರಿಸಲು ಮುಂದಾಗಿದೆ. ಕೊರೊನಾ ಸೋಂಕಿತರೊಂದಿಗೆ ವೈದ್ಯರು ಮತ್ತು ಇತರೆ ಆರೋಗ್ಯ ಕಾರ್ಯಕರ್ತರು ಪದೇ ಪದೇ ಸಂಪರ್ಕ ಹೊಂದುವುದರಿಂದ ಅವರಿಗೂ ಸೋಂಕು ತಗುಲುವ ಸಾಧ್ಯತೆಯಿದೆ. ಹೀಗಾಗಿ, ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವಿಶೇಷ ವಾರ್ಡ್ಗಳಲ್ಲಿ, ಪ್ರಾಥಮಿಕ ಉಪಚಾರ ಹಾಗೂ ಆರೈಕೆಗೆ ಈ ರೋಬೋಗಳನ್ನು ಬಳಸಬಹುದು ಎಂದು ಬೆಂಗಳೂರು ವೈದ್ಯಕೀಯ ಮಹಾ ವಿದ್ಯಾಲಯ ಮತ್ತು […]

ಆಶಾ ಕಾರ್ಯಕರ್ತೆಯ ಮೇಲೆ ನಡೆದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಗೆ ನಿಂದಿಸಿ ಹಲ್ಲೆ ಮಾಡುವವರು, ಧಮ್ಕಿ ಹಾಕಿದವರು ಮನುಷ್ಯರಲ್ಲ, ಮೃಗಗಳು. ಇಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತರಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.  

ಪಾದರಾಯನಪುರದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹಮದ್ ನೇರ ಕಾರಣರಾಗಿದ್ದು, ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸುವಂತೆ ಸಂಸದ ಪ್ರತಾಪ್ ಸಿಂಹ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದರಾಯನಪುರದಲ್ಲಿ ಪೊಲೀಸರು ಮತ್ತು ವೈದ್ಯಕೀಯ ಸಿಬ್ಬಂದಿಯ ಮೇಲೆ ನಡೆಸಿದ ಹಲ್ಲೆ ಖಂಡನೀಯ. ಈ ಪ್ರಕರಣದಲ್ಲಿ ಬಿಬಿಎಂಪಿ ಮತ್ತು ಪೊಲೀಸ್ ಸಿಬ್ಬಂದಿಯ ನಡೆಯೇ ತಪ್ಪು ಎಂಬಂತೆ ಮಾತನಾಡಿರುವ ಶಾಸಕರ ಜಮೀರ್ ಅಹಮದ್ ಖಾನ್ ಅವರ ವಿರುದ್ಧ ನ್ಯಾಷನಲ್ ಸೆಕ್ಯೂರಿಟಿ […]

Advertisement

Wordpress Social Share Plugin powered by Ultimatelysocial