ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ ಭದ್ರತಾ ಪಡೆಗಳಿಂದ ನಡೆಯುತ್ತಿರುವ ಕಾರ್ಯಾಚರಣೆಗಳ ಮಧ್ಯೆ, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಭಾರತದ ಶತ್ರುಗಳಿಗೆ ಬಲವಾದ ಎಚ್ಚರಿಕೆ ನೀಡಿದರು.ಅವರು ಭಾರತದ ವಿರುದ್ಧ ಯಾರಾದರೂ ಯುದ್ಧಕ್ಕೆ ಹೋದರೆ, ಅವರ ಮಕ್ಕಳನ್ನು ಬೇರೆಯವರು ಬೆಳೆಸುತ್ತಾರೆ” ಎಂದು ಎಚ್ಚರಿಸಿದ್ದಾರೆ.   “ಭಾರತವು ಯುದ್ಧವನ್ನು ಕಂಡಿದೆ ಮತ್ತು ಯುದ್ಧವನ್ನು ಬಯಸುವುದಿಲ್ಲ. ಆದರೆ ನೀವು ಭಾರತದೊಂದಿಗೆ ಯುದ್ಧಕ್ಕೆ ಹೋದರೆ, ಬೇರೆಯವರು ನಿಮ್ಮ ಮಕ್ಕಳನ್ನು ಬೆಳೆಸುತ್ತಾರೆ” ಎಂದು ಸಚಿವರು ಟ್ವೀಟ್ […]

ನಂಜನಗೂಡು ಮಹಿಳಾ ಸಂಚಾರಿ ಪೊಲೀಸ್​ ಅಧಿಕಾರಿಯ ಪುತ್ರ ವ್ಹೀಲಿಂಗ್​​ ಮಾಡುತ್ತಿದ್ದ ಬೈಕ್​ ಡಿಕ್ಕಿಯಾಗಿ ವೃದ್ಧ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು : ಮಹಿಳಾ ಸಂಚಾರಿ ಪೊಲೀಸ್​ ಅಧಿಕಾರಿಯ ಮಗ ವ್ಹೀಲಿಂಗ್​​ ಮಾಡುತ್ತಿದ್ದ ಬೈಕ್​ ಡಿಕ್ಕಿಯಾಗಿ ದನಗಾಹಿ ವೃದ್ಧ ಸಾವನ್ನಪ್ಪಿ, ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಹಿಮ್ಮಾವು ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಸಂಜೆ ನಡೆದಿದೆ. ಮೃತ ವೃದ್ಧನನ್ನು ಗುರುಸ್ವಾಮಿ (65) ಎಂದು ಗುರುತಿಸಲಾಗಿದೆ. ಗಾಯಾಳು […]

ಹುಬ್ಬಳ್ಳಿ , ಸೆಪ್ಟೆಂಬರ್‌, 17: ವಿಘ್ನ ನಿವಾರಕ ಗಣಪತಿ ಮೂರ್ತಿ ತಯಾರು ಮಾಡುವುದು ಎಂದರೆ ದೊಡ್ಡ ಸವಾಲೇ ಸರಿ. ಇದು ಬಲು ಸ್ಪರ್ಧಾತ್ಮಕ ಕಾಲ ಬೇರೆ. ಹೀಗೆ ಹುಬ್ಬಳ್ಳಿಯಲ್ಲಿ ಮೂರ್ತಿ ತಯಾರಿಕೊಬ್ಬರು 12 ಲಕ್ಷ ರೂಪಾಯಿ ಮೌಲ್ಯದ ಅಮೆರಿಕನ್​​​ ಡೈಮಂಡ್​​ ಹರಳುಗಳಿಂದ ಗಣಪತಿ ಮೂರ್ತಿಯನ್ನು ನಿರ್ಮಿಸಿ ಗಮನ ಸೆಳೆದಿದ್ದಾರೆ. ಅಷ್ಟಕ್ಕೂ ಈ ಮೂರ್ತಿಯನ್ನು ಎಲ್ಲಿಗೆ ಹೊಯ್ಯಲಾಗಿದೆ, ತಯಾರಿಸಿದ್ದು ಯಾರು ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ. ಈ ಗಣಪತಿ ಮೂರ್ತಿ ಒಂದು […]

ಕೆಎನ್‍ಎನ್ ಡಿಜಿಟಲ್ ಡೆಸ್ಕ್ : ಭೂಮಿಯ ಮೇಲಿನ ಅತ್ಯಂತ ಬುದ್ಧಿವಂತ ಪ್ರಾಣಿಗಳಲ್ಲಿ ಆನೆಗಳು ಸೇರಿವೆ. ಆನೆಯ ಜಾಣ್ಮೆಯ ಕುಶಲತೆಯ ಈ ಹೊಸ ದೃಶ್ಯಾವಳಿಯು ಅದರ ಬುದ್ಧಿವಂತಿಕೆಗೆ ಸಾಕ್ಷಿಯಾಗಿದೆ. ಭಾರತೀಯ ಅರಣ್ಯ ಸೇವಾ ಅಧಿಕಾರಿ ಸುಸಂತ ನಂದಾ X ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ, ಪ್ರಾಣಿ ಕಾರಿಡಾರ್‌ನ ಗಡಿಯಲ್ಲಿ ಇರಿಸಲಾಗಿರುವ ಸೌರ ಬೇಲಿಯನ್ನು ಗೇಟ್‌ಕ್ರಾಶ್ ಮಾಡಲು ಆನೆ ಪ್ರಯತ್ನಿಸಿದೆ. ಆರಂಭದಲ್ಲಿ, ಆನೆಯು ಬ್ಯಾರಿಕೇಡ್ ಪ್ರದೇಶವನ್ನು ದಾಟಲು ತನ್ನ ಮುಂಭಾಗದ ಕಾಲುಗಳನ್ನು ಬಳಸುತ್ತದೆ. ಆದರೆ, […]

ಹೊಸದಿಲ್ಲಿ: ಲಕ್ನೋದಿಂದ ಅಬುಧಾಬಿಗೆ ಹೊರಟಿದ್ದ ಇಂಡಿಗೋ ವಿಮಾನವು ಹೈಡ್ರಾಲಿಕ್ ಸಿಸ್ಟಮ್ ಸಮಸ್ಯೆಯ ಕಾರಣದಿಂದ ಶನಿವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲಗಳು ತಿಳಿಸಿವೆ. 6E 093 ಫ್ಲೈಟ್‌ ನಲ್ಲಿ 150 ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.   YashoBhoomi; ತಮ್ಮ ಜನ್ಮದಿನದಂದು ಯಶೋಭೂಮಿ ಸಮಾವೇಶ ಕೇಂದ್ರ ಉದ್ಘಾಟಿಸಿದ ಪ್ರಧಾನಿ ಮೋದಿ ವಿಮಾನವು ಹೈಡ್ರಾಲಿಕ್ ಸಿಸ್ಟಮ್ ಸಮಸ್ಯೆಯನ್ನು ಹೊಂದಿತ್ತು ಮತ್ತು ನಂತರ ದೆಹಲಿ […]

ಕೊಚ್ಚಿ: ಮಲಯಾಳಂ ಲೇಖಕ ಮತ್ತು ಶಿಕ್ಷಣ ತಜ್ಞ ಸಿ ಆರ್ ಓಮನಕುಟ್ಟನ್ (80) ಅವರು ಶನಿವಾರ ಹೃದಯಾಘಾತದಿಂದ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. 1943 ರಲ್ಲಿ ಕೊಟ್ಟಾಯಂನ ತಿರುನಕ್ಕರದಲ್ಲಿ ಜನಿಸಿದ ಓಮನಕುಟ್ಟನ್ ನಾಲ್ಕು ವರ್ಷಗಳ ಕಾಲ ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಮಾಹಿತಿ ಅಧಿಕಾರಿಯಾಗಿ ಕೆಲಸ ಮಾಡಿದರು. ನಂತರ ಅವರು ಅಧ್ಯಾಪಕ ವೃತ್ತಿಯನ್ನು ಆರಿಸಿಕೊಂಡರು ಮತ್ತು ಕೋಝಿಕ್ಕೋಡ್ ಮೀಂಚಂತಾ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇರಿದರು. ಒಂದು ವರ್ಷದ ನಂತರ ಅವರು ಎರ್ನಾಕುಲಂ ಮಹಾರಾಜ […]

ನವದೆಹಲಿ,ಸೆ.17- ಸಂಸತ್‍ನ ನೂತನ ಭವನದಲ್ಲಿ ಇಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ್ದಾರೆ. ಲೋಕಸಭೆಯ ಅಧ್ಯಕ್ಷ ಹೋಂಬಿರ್ಲಾ ಅವರೊಂದಿಗೆ ಹೊಸ ಸಂಸತ್ ಗಜದ್ವಾರದಲ್ಲಿ ಧ್ವಜಾರೋಹಣ ನಡೆದಿದೆ. ಈ ಮೂಲಕ ಸೋಮವಾರದಿಂದ ಆರಂಭಗೊಳ್ಳುವ 5 ದಿನಗಳ ಅಧಿವೇಶನ ಹೊಸಭವನದಲ್ಲೇ ನಡೆಯಲು ಸಿದ್ಧತೆ ನಡೆದಿವೆ.   ಸಂಸತ್ ಅಧಿವೇಶನಕ್ಕೂ ಮುನ್ನ ಉಭಯ ಸದನಗಳ ಅಧ್ಯಕ್ಷರು ಧ್ವಜಾರೋಹಣ ನೆರವೇರಿಸುವ ಸಂಪ್ರದಾಯ ಮೊದಲಿನಿಂದಲೂ ಜಾರಿಯಲ್ಲಿದೆ. ಸರ್ವಾಧಿಕಾರಿ ಆಡಳಿತವನ್ನು ಕಿತ್ತೊಗೆಯಲು ಸಂಘಟನಾತ್ಮಕ ಹೋರಾಟ: ಮಲ್ಲಿಕಾರ್ಜುನ ಖರ್ಗೆ […]

ಚೆನೈ: ಸನಾತನ ಧರ್ಮದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಡಿಎಂಕೆ ನಾಯಕರ ವಿರುದ್ಧ ಮದ್ರಾಸ್ ಹೈಕೋರ್ಟ್ (Madras High Court) ಅಸಮಾಧಾನ ವ್ಯಕ್ತಪಡಿಸಿದೆ. ವಾಕ್ ಸ್ವಾತಂತ್ರ್ಯವು (Freedom Of Speech) ಮೂಲಭೂತ ಹಕ್ಕು ಆದರೆ ಅದು ದ್ವೇಷದ ಭಾಷಣವಾಗಿ ಬದಲಾಗಬಾರದು. ವಿಶೇಷವಾಗಿ ಧರ್ಮದ ವಿಷಯಗಳಿಗೆ ಸಂಬಂಧಿಸಿದಂತೆ ದ್ವೇಷ ಭಾಷಣವಾಗಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಸನಾತನ ಧರ್ಮದ ವಿರುದ್ಧ ಹೇಳಿಕೆ ಖಂಡಿಸಿ ಹೈಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಎನ್ ಶೇಷಸಾಯಿ ಅವರಿದ್ದ ಪೀಠ ವಿಚಾರಣೆ […]

ಬೆಂಗಳೂರು, ಸೆಪ್ಟೆಂಬರ್‌, 17: ರಾಜಾಧಾನಿ ಬೆಂಗಳೂರಿನಲ್ಲಿ‌ ಗೌರಿ – ಗಣೇಶನ ಹಬ್ಬಕ್ಕೆ ಕೌಂಟ್ ಡೌನ್ ಆರಂಭವಾಗಿದ್ದು, ಗಣೇಶ ವಿಸರ್ಜನೆಗೆ ಬೇಕಾದ ಸಕಲ ಸಿದ್ದತೆಯನ್ನ ಮಾಡಿಕೊಳ್ಳಲಾಗಿದೆ. ಆ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ.‌ ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಗೌರಿ – ಗಣೇಶನ ಹಬ್ಬಕ್ಕೆ ಕೌಂಟ್ ಡೌನ್ ಆರಂಭವಾಗಿದೆ. ಈಗಾಗಲೇ ಗೌರಿ – ಗಣೇಶನ ಮೂರ್ತಿಗಳಿಂದ ಸಿಲಿಕಾನ್ ಸಿಟಿ ಕಂಗೋಳಿಸುತ್ತಿದೆ. ಈ ಮಧ್ಯೆ ಬಿಬಿಎಂಪಿ ಗಣೇಶ ಮೂರ್ತಿ ವಿಸರ್ಜನೆಗೆ ಸಕಲ […]

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಯಾವುದಾದರೂ ಮೆಟ್ರೋ ಯೋಜನೆಗಳಿಗೆ ಚಾಲನೆ ನೀಡುವುದಿದ್ದರೆ, ಮೆಟ್ರೋ ರೈಲಿನಲ್ಲಿಯೇ ಪ್ರಯಾಣಿಸುತ್ತಾರೆ. ಅಷ್ಟೇ ಅಲ್ಲ, ಮೆಟ್ರೋ ಪ್ರಯಾಣದ ವೇಳೆ ಯುವಕ, ಯುವತಿಯರು ಸೇರಿ ಎಲ್ಲ ಪ್ರಯಾಣಿಕರ ಜತೆ ಮಾತುಕತೆ ನಡೆಸುತ್ತಾರೆ. ಭಾನುವಾರವೂ (ಸೆಪ್ಟೆಂಬರ್‌ 17) ನರೇಂದ್ರ ಮೋದಿ (Narendra Modi) ಅವರು ದೆಹಲಿ ಏರ್‌ಪೋರ್ಟ್‌ ಮೆಟ್ರೋ ಎಕ್ಸ್‌ಪ್ರೆಸ್‌ ಲೈನ್‌ಗೆ ಚಾಲನೆ ನೀಡುವ ಮೊದಲು ಮೋದಿ ಅವರು ದೆಹಲಿ ಮೆಟ್ರೋದಲ್ಲಿ (Delhi Metro) ಸಂಚರಿಸಿದರು. ದ್ವಾರಕಾ […]

Advertisement

Wordpress Social Share Plugin powered by Ultimatelysocial