ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಮಸೂದೆ ಮಂಡನೆಗೆ ಮುಂದಾಗಿದೆ. ಮತಾಂತರ ನಿಷೇಧ ವಿಧೇಯಕ ಮಂಡನೆ ಮಾಡುತ್ತಿದ್ದು, ಎಲ್ಲಾ ಪಕ್ಷಗಳು ಸರ್ವಾನುಮತದಿಂದ ಬೆಂಬಲ ನೀಡಿ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.ಬೆಳಗಾವಿಯಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಮತಾಂತರ ನಿಷೇಧ ಕಾಯ್ದೆ ಮಂಡಿಸುತ್ತಿದ್ದೇವೆ. ಈಗಾಗಲೇ ದೇಶದ ವಿವಿಧ ರಾಜ್ಯಗಳಲ್ಲಿ ಈ ಕಾಯ್ದೆ ಜಾರಿಯಲ್ಲಿದೆ. ಹೀಗಾಗಿ ಜನರ ಹಿತದೃಷ್ಟಿಯಿಂದ ರಾಜ್ಯದಲ್ಲಿಯೂ ಈ ಕಾಯ್ದೆ ಜಾರಿಗೆ ಬರಲಿದೆ. […]
KPCC
ಮೇಕೆದಾಟು ಪಾದಯಾತ್ರೆಗೆ ಸುಪ್ರೀಂ ಕೋರ್ಟ್ ನಿರ್ದೇಶನ ಇದೆ ಜನವರಿ9-19 ರವರೆಗೆ ಪಾದಾಯಾತ್ರೆ ಮಾಡ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ…9 ರಂದು ಪಾದಯಾತ್ರೆ ಪ್ರಾರಂಭ ಮಾಡ್ತಿವಿ,ಐದು ದಿನ ಸಿಟಿಯಲ್ಲಿ ಪಾದಯಾತ್ರೆ ಮಾಡ್ತಿವಿ,ಅಪಾರ್ಟ್ಮೆಂಟ್ ನಲ್ಲಿರೋ ಹಾಗೂ ಇತರ ಜನರು ಕಾಲ್ ಮಾಡ್ತೊದ್ದಾರೆ.ಪಾದಯಾತ್ರೆಯಲ್ಲಿ ಪಾರ್ಟಿಸಿಪೇಟ್ ಮಾಡ್ತಿವಿ ಅಂತೊದ್ದಾರೆ.ಸಮಾಜ ಸೇವಕರು ಸಾಹಿತಿಗಳು ಇದ್ರಲ್ಲಿ ಪಾರ್ಟಿಸಿಪೇಟ್ ಮಾಡಲು ಆಹ್ವಾನ ನೀಡ್ತಿದ್ದೇವೆಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡ್ತಿವಿ,ಯಾವ ಸಂಘಟನೆ ಯಾರಾದ್ರು ಈ […]
ಚಳಿಗಾಲದ ಅಧಿವೇಶನದಲ್ಲಿಂದು ಪ್ರಸ್ತಾವಿತ ಮತಾಂತರ ನಿಷೇಧ ಮಸೂದೆ ಮಂಡನೆ ಮಂಡಿಸಲು ಬೊಮ್ಮಾಯಿ ಸರ್ಕಾರ ಮುಂದಾಗಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಸದನದಲ್ಲಿ ಮಂಡಿಸಲು ಅನುಮೋದನೆ ಪಡೆಯಲಾಗಿದೆ.ಈ ನಡುವೆ ವಿವಾದಿತ ವಿಧೇಯಕದ ಬಗ್ಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಈ ಕಾಯಿದೆಯಿಂದ ರಾಜ್ಯಕ್ಕೆ ಒಂದು ಕಪ್ಪುಚುಕ್ಕೆ ಎಂದಿದ್ದಾರೆ.ಮತಾಂತರ ಕಾಯ್ದೆ ನಿಷೇಧದ ಬಗ್ಗೆ ಇಂದು ವಿರೋಧ ಮಾಡುತ್ತಿರುವವರೇ ಅಂದು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು […]
ಬಾವುಟ ಸುಟ್ಟಿಹಾಕಿದವರ ವಿರುದ್ಧ ಇದುವರೆಗೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಕ್ರಮ ಆಗದೆ ಇರೋದು ಪೊಲೀಸರ ವೈಪಲ್ಯನಾ..? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ…ರಾಜ್ಯದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಆಗ್ತಿದೆ.ಹೀಗಾಗಿ ಇಂತವರ ವಿರುದ್ದ ಸರ್ಕಾರದದಿಂದ ಕಠಿಣ ಕ್ರಮ ಆಗಬೇಕು.ಈಶ್ವರಪ್ಪ ಮುಖ್ಯಮಂತ್ರಿ ಗಳಿಗೆ ಒತ್ತಾಯ ಮಾಡ್ತೀನಿ ಅಂತಾರೆ.ಆದರೆ ನೀವು ಸರ್ಕಾರದ ಒಂದು ಭಾಗ.ನೀವೇ ಕ್ರಮ ಮಾಡಬಹುದಲ್ಲವಾ ಎಂದ ಡಿಕೆಶಿ. ಈ ರೀತಿ ಹೇಳ್ತಿರೋದ್ರಿಂದ ನಿಮ್ಮ ಶಕ್ತಿ ಏನಾದರೂ ಕಡಿಮೆ ಆಗಿದ್ಯಾ […]
ಈ ಪುಂಡರ ಕೃತ್ಯದ ಬಗ್ಗೆ ಸರಿಯಾದ ತನಿಖೆ ಆಗಬೇಕು.ಘಟನೆ ಹಿಂದೆ ಯಾರಿದಾರೆ ಅಂತ ಬಯಲಾಗಬೇಕು ಎಂದು ಸುವರ್ಣಸೌಧದಲ್ಲಿ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ…ಎಂಇಎಸ್ ನ ಈ ಪುಂಡರು ದೇಶದ್ರೋಹಿಗಳು ಸಿದ್ದರಾಮಯ್ಯ ಮಾತಿಗೆ ನಾನೂ ಒಪ್ತೇನೆ .ಎಂಇಎಸ್ ಅನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು.ಎಂಇಎಸ್ ವಿರುದ್ಧ ಖಂಡನಾ ನಿರ್ಣಯ ತಗೋಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು… ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
40 ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ(96) ವಿಧಿವಶರಾಗಿದ್ದಾರೆ.ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಸ್ವಗ್ರಾಮ ತೂಬಗೆರೆಯಲ್ಲಿ ಬೆಳಗ್ಗೆ 9 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.9 ಗಂಟೆಯ ನಂತರ ಪಾರ್ಥಿವ ಶರೀರವನ್ನು ದೊಡ್ಡಬಳ್ಳಾಪುರದ ಜಾಲಪ್ಪ ಇಂಜಿನಿಯರಿಂಗ್ ಕಾಲೇಜಿಗೆ ಸ್ಥಳಾಂತರ ಮಾಡಲಾಗುವುದು. ಅಂತಿಮ ದರ್ಶನದ ನಂತರ ಇಂದು ಸಂಜೆ 5 ಗಂಟೆಯೊಳಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಈಡಿಗರ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.ಅಕ್ಟೋಬರ್ 19, 1925 […]
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಂಸದ ಡಿ.ಕೆ. ಸುರೇಶ್ ಅವರ ಅಜ್ಜಿ ನಿಂಗಮ್ಮ ಅವರು ಕನಕಪುರದ ಹಾರೋಹಳ್ಳಿಯ ದಯಾನಂದಸಾಗರ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗಿವ ಜಾವ ನಿಧನರಾಗಿದ್ದಾರೆ.ನಿಂಗಮ್ಮ ಅವರಿಗೆ (106) ವರ್ಷಗಳಾಗಿದ್ದವು. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಕನಕಪುರದ ಸಾತನೂರಿನ ದೊಡ್ಡಾಲಹಳ್ಳಿಯಲ್ಲಿ ಶುಕ್ರವಾರ ಸಂಜೆ 4.30 ಕ್ಕೆ ನಡೆಯಲಿದೆ.ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರದ ಕಲಾಪದಲ್ಲಿ ಭಾಗವಹಿಸುವುದನ್ನು ಮೊಟಕುಗೊಳಿಸಿ, ಬೆಳಗಾವಿಯಿಂದ 12 ಗಂಟೆ ವಿಮಾನದ ಮೂಲಕ ಬೆಂಗಳೂರಿಗೆ, ನಂತರ […]
ಬೆಂಗಳೂರು ಸುಮಾರು 25 ಲಕ್ಷಕ್ಕೂ ಅಧಿಕ ಅಭಿಮಾನಿಗಳು ಪುನೀತ್ ರಾಜ್ ಕುಮಾರ್ಅವರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಸವಾಲುಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿದ ಕರ್ನಾಟಕ ಪೊಲೀಸ್ ಇಲಾಖೆಗೆ ಧನ್ಯವಾದ ಹೇಳಲೇಬೇಕು. ಸಿಎಂ ಬಸವರಾಜ ಬೊಮ್ಮಾಯಿ ಗೃಹ ಸಚಿವ ಆರಗ ಜ್ಞಾನೇಂದ್ ಡಿಜಿ/ಐಜಿಪಿ ಪ್ರತಿಯೊಬ್ಬ ಪೊಲೀಸ್ ಅಧಿಕಾರಿಗಳನ್ನು ಅಭಿನಂದಿಸಿದ್ದಾರೆ.ನಿರಂತರ 48 ಗಂಟೆ ಭದ್ರತೆ ನೀಡಿದ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ಯವಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಮಾಡಿದ ಸಿಬ್ಬಂದಿ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಬೆಂಗಳೂರು ನಗರದ […]
ಆಸಿಯಾನ್ ರಾಷ್ಟ್ರಗಳ ಏಕತೆ ಮತ್ತು ಕೇಂದ್ರೀಯತೆಯು ಭಾರತಕ್ಕೆ ಯಾವಾಗಲೂ ಪ್ರಮುಖ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಭಾರತ–ಆಸಿಯಾನ್ ರಾಷ್ಟ್ರಗಳ ಶೃಂಗಸಭೆಯನ್ನು ವರ್ಚುವಲ್ ಮೂಲಕ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತದ ಇಂಡೋ–ಪೆಸಿಫಿಕ್ ಸಾಗರಗಳ ಉಪಕ್ರಮ ಮತ್ತು ಇಂಡೋ–ಪೆಸಿಫಿಕ್ ಗಾಗಿ ಆಸಿಯಾನ್ನ ಔಟ್ ಲುಕ್ ಇಂಡೋ–ಪೆಸಿಫಿಕ್ ಪ್ರದೇಶದಲ್ಲಿ ಅವರ ಹಂಚಿಕೆಯ ದೃಷ್ಟಿ ಮತ್ತು ಪರಸ್ಪರ ಸಹಕಾರದ ಚೌಕಟ್ಟಾಗಿದೆ ಎಂದರು.ಭಾರತ–ಆಸಿಯಾನ್ ಸಹಭಾಗಿತ್ವ ಮುಂದಿನ ವರ್ಷಕ್ಕೆ 30 ವರ್ಷಗಳನ್ನು […]
ನಕ್ಸಲರ ಜೊತೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಬಂಧಿತನಾಗಿದ್ದ ವಿದ್ಯಾರ್ಥಿಗೆ ಸುಪ್ರೀಂಕೋರ್ಟ್ ಗುರುವಾರ ಜಾಮೀನು ನೇಡಿದೆ. ಕೇಂದ್ರ ರಾಷ್ಟ್ರೀಯ ತನಿಖಾ ದಳ 2019 ರ ನವೆಂಬರ್ 2 ರಂದು ಪತ್ರಿಕೋದ್ಯಮದ ವಿದ್ಯಾರ್ಥಿ ಥವಾಹ್ ಫಾಸಲ್ ಮತ್ತು ಕಾನೂನು ವಿದ್ಯಾರ್ಥಿ ಅಲ್ಲನ್ ಸೋಯೆಬ್ರನ್ನು ಕಾಜಿಕೋಡದಲ್ಲಿ ಬಂಧಿಸಿ, ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ ಅಡಿ ಪ್ರಕರಣ ದಾಖಲಿಸಿತ್ತು. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada