ಲಖೀಂಪುರ್ಖೇರಿ ಹಿಂಸಾಚಾರ ಪ್ರಕರಣಕ್ಕೆ ಪ್ರಮುಖ ಆರೋಪಿಯಾಗಿರುವ ಆಶಿಶ್ ಮಿಶ್ರಾ ರವರನ್ನು ಉತ್ತರ ಪ್ರದೇಶದ ಕ್ರೈಂ ಬ್ರಾಂಚ್ ಪೋಲೀಸರ ಎದುರು ಹಾಜರಾಗಿದ್ದಾರೆ.ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಅಜಯ ಕುಮಾರ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ವಿರುದ್ಧ ಪೊಲೀಸರು ಈಗಾಗಲೇ ಕೊಲೆ ಕೇಸ್ ದಾಖಲಿಸಿಕೊಂಡಿದ್ದು, ಇದುವರೆಗೆ ಬಂಧಿಸಿಲ್ಲ. ತೀವ್ರ ವಿಚಾರಣೆಯನ್ನು ಭಾರಿ ಭದ್ರತೆಯೊಂದಿಗೆ ನಡೆಸುತ್ತಿದ್ದಾರೆ.ಶುಕ್ರವಾರವೂ ವಿಚಾರಣೆಗೆ ಆಗಮಿಸಿರದ ಹಿನ್ನಲೆಯಲ್ಲಿ ಪೊಲೀಸರು ಹೊಸತಾಗಿ ಸಮನ್ಸ್ ನೀಡಿ, ಶನಿವಾರ ಬೆಳಗ್ಗೆ 11 ಗಂಟೆಗೆ ಹಾಜರಾಗುವಂತೆ, ತಪ್ಪಿದಲ್ಲಿ […]
BJP
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ರಾಜ್ಯದ ಕಲ್ಲಿದ್ದಲು ವಿಚಾರಗಳಿಗೆ ಸಂಬಂಧಿಸಿದಂತೆ ಕೇಂದ್ರ ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಪ್ರಹ್ಲಾದ್ ಜೋಶಿ ಅವರನ್ನು ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದರು. ಬಳಿಕ ಕೇಂದ್ರದ ಅರಣ್ಯ, ಪರಿಸರ ಮತ್ತು ಹವಮಾನ ಬದಲಾವಣೆ ಸಚಿವರಾದ ಬೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಸಚಿವರಾದ ಡಾ. ಕೆ. ಸುಧಾಕರ್ , ಸುನೀಲ್ ಕುಮಾರ್, ರಾಜ್ಯ ಸರ್ಕಾರದ ಮುಖ್ಯ […]
ಉತ್ತಮ ಆಡಳಿತ ನೀಡಿ ಮತ್ತೊಮ್ಮೆ ಬಿಜೆಪಿಯನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವುದೇ ನನ್ನ ಗುರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾರತೀಯ ಜನತಾಪಕ್ಷ ಈಗ ಕರ್ನಾಟಕದಲ್ಲಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಅದು ಸಮಾಜದ ಎಲ್ಲ ವರ್ಗದವರಿಗೂ ತಲುಪಿ ಅವರ ಬೆಂಬಲವನ್ನು ಗಳಿಸಿರುವ ಪಕ್ಷವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನವದೆಹಲಿಯಲ್ಲಿ ನಡೆದ ಇಂಡಿಯಾ ಟು ಡೇ ಕಾನ್ಕಲೇವ್ ನಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು ಉತ್ತರ ಕರ್ನಾಟಕ ಭಾಗದಿಂದ ಹಲವಾರು […]
ಕಾನೂನಿಗಿಂತ ಯಾರು ದೊಡ್ಡವರಿಲ್ಲ, ಲಖೀಂಪುರ್ ಖೇರಿ ಘಟನೆಯ ತನಿಖೆಗೆ ಯಾರು ಅಡ್ಡಿಪಡಿಸುವುದಿಲ್ಲ ಎಂದು ಬಿಜೆಪಿ ರಾಷ್ಟ್ರಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಎಂಟು ಮಂದಿಯನ್ನು ಬಲಿಪಡೆದುಕೊಂಡ ಲಖೀಂಪುರ್ ಖೇರಿ ಘಟನೆ ಕುರಿತಂತೆ ಬಿಜೆಪಿ ನಾಯಕರು ಜಾಣ ಮೌನಕ್ಕೆ ಶರಣಾಗಿದ್ದರು.ಬಿಜೆಪಿ ನಾಯಕರ ಈ ಧೋರಣೆ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕಪಿಲ್ ಸಿಬಲ್ ಸೇರಿದಂತೆ ಹಲವಾರು ನಾಯಕರು ಬಿಜೆಪಿ ಪಕ್ಷದ ನಾಯಕರ ವಿರುದ್ಧ ಕಿಡಿಕಾರಿದ್ದರು. ಈ ಬೆಳವಣಿಗೆ ನಂತರ ಪ್ರತಿಕ್ರಿಯೆ […]
ಪುತ್ರ ವಿಜಯೇಂದ್ರ ಹೇಳಿದ್ರ ಅಪ್ಪನ ಭವಿಷ್ಯ..? ಹೌದು ವರಿಷ್ಠರ ಒತ್ತಡದಿಂದಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಮುಂದಿನ ದಿನಗಳು ಹೇಗಿರಲಿದೆ ಎನ್ನುವುದರ ಬಗ್ಗೆ ಅವರ ಪುತ್ರ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷರೂ ಆಗಿರುವ ಬಿ.ವೈ.ವಿಜಯೇಂದ್ರ ಹೊಸ ವಿಷಯವನ್ನ ಹೊರಗೆಡವಿದ್ದಾರೆ. ಎರಡು ಅಸೆಂಬ್ಲಿ ಕ್ಷೇತ್ರಗಳ ಉಪಚುನಾವಣೆಯ ಪೈಕಿ ಹಾನಗಲ್ ಕ್ಷೇತ್ರದ ಉಸ್ತುವಾರಿಯೂ ಆಗಿರುವ ವಿಜಯೇಂದ್ರ ಅವರು, ನಾಡಿನ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ದರ್ಶನ ಪಡೆದು, […]
ಜೆಡಿಎಸ್ ಅವರು ಅಸ್ತಿತ್ವನ್ನ ಉಳಿಸಿಕೊಳ್ಳಲಿ ಎಂದ ವಿಜಯೇಂದ್ರ ಜೆಡಿಎಸ್ ಪಕ್ಷ ಕಾರ್ಯಾಗಾರವನ್ನ ನಡೆಸುತ್ತಿದೆ, ಮಿಷನ್ 123 “ಕಾಂಗ್ರೆಸ್ ಪಕ್ಷ ಗೆಲ್ಲುವುದು ದೂರದ ಮಾತು, ಮೊದಲು ಅವರು ತಮ್ಮ ಅಸ್ತಿತ್ವನ್ನ ಉಳಿಸಿಕೊಳ್ಳಲಿ. ಜೆಡಿಎಸ್ ಪಕ್ಷ ಕಾರ್ಯಾಗಾರವನ್ನ ನಡೆಸುತ್ತಿದೆ, ಮಿಷನ್ 123 ಎಂದು ಆ ಪಕ್ಷದ ಮುಖಂಡರು ಹೇಳುತ್ತಿದ್ದಾರೆ. ಅದು ಮಿಷನ್ 123 ಅಲ್ಲ ಮಿಷನ್ 23, ಎಚ್.ಡಿ.ಕುಮಾರಸ್ವಾಮಿಯವರ ಮಹದಾಸೆ ಏನಂದರೆ ರಾಜ್ಯದಲ್ಲಿ ಅತಂತ್ರ ಅಸೆಂಬ್ಲಿ ಇರಬೇಕು. ಅವರಿಗೆ ಎಷ್ಟು ಕಮ್ಮಿ ಬಂದರೂ […]
ಬೆಳಗಾವಿ: ತೈಲ ಬೆಲೆ ಏರಿಕೆ, ಅಡಿಗೆ ಅನಿಲ ಬೆಲೆ ಹೆಚ್ಚಳದ ಬಗ್ಗೆ ಬೆಳಗಾವಿ ಗ್ರಾಮೀಣ ಶಾಸಕಿ ಮತ್ತು ಕೆಪಿಸಿಸಿ ವಕ್ತಾರರಾದ ಲಕ್ಷ್ಮಿ ಹೆಬ್ಟಾಳಕರ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ಬಿಜೆಪಿ ದುಬಾರಿ ದರ್ಬಾರ್ ಎಂದು ಟ್ವೀಟರ್ ಮೂಲಕ ಟೀಕೆ ಮಾಡಿದ್ದಾರೆ. ಕೇಂದ್ರ ಹಾಗು ರಾಜ್ಯ ಸರಕಾರದ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಹೆಬ್ಟಾಳಕರ ಹತ್ತು ಲಕ್ಷ ರೂ.ಗಿಂತಲೂ ಹೆಚ್ಚು ವಾರ್ಷಿಕ ಆದಾಯವಿರುವ, ಸಮರ್ಥ ಕುಟುಂಬಗಳು ತಮ್ಮ ಗ್ಯಾಸ್ ಸಬ್ಸಿಡಿ […]
ನಾನು ಆರ್.ಎಸ್.ಎಸ್. ನ ಯಾವುದೇ ಬೈಟಕ್ ಕೂತಿಲ್ಲ, ಸಂಘ ಪರಿವಾರವನ್ನು ಹೊಗಳಿಯೂ ಇಲ್ಲ. ಯಾರ್ಯಾರು ಏನು ಮಾಡುತ್ತಿದ್ದಾರೆ ಎಲ್ಲವೂ ಗೊತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದಾರೆ. ಆರ್.ಎಸ್.ಎಸ್. ನ್ನು ಸ್ವತಃ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರೇ ಹೊಗಳಿದ್ದರು. ಆರ್.ಎಸ್.ಎಸ್. ಬಗ್ಗೆ ಆರೋಪ ಮಾಡುವ ಮೊದಲು ಕುಮಾರಸ್ವಾಮಿಯವರು ದೇವೇಗೌಡರನ್ನು ಕೇಳಿ ತಿಳಿದುಕೊಳ್ಳಬಹುದಿತ್ತು ಎಂದು ಬಿ.ವೈ.ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿರುವ ದೇವೇಗೌಡರು, ನನಗೂ […]
ಬಿಜೆಪಿ ನಾಯಕರ ವಾಹನ ಬಂದಾಗ ಬಹಳ ಎಚ್ಚರಿಕೆ, ಜೋಪಾನ ಎಂದು ಕೆಪಿಸಿಸಿ ಅದ್ಯಕ್ಷ ಡಿ.ಕೆ .ಶಿವಕುಮಾರ್ ಅವರು ಶುಕ್ರವಾರ ಜನತೆಗೆ ಕಿವಿಮಾತು, ಬುದ್ದಿಮಾತು ಹೇಳಿದ್ದಾರೆ. ಬಿಜೆಪಿ ನಾಯಕರ ಕಾರು ನಿಮ್ಮ ಅಕ್ಕ ಪಕ್ಕದಲ್ಲಿ ಹೋಗುವಾಗ ಮೊಬೈಲ್ ಕ್ಯಾಮರಾದಿಂದ ರೆಕಾರ್ಡ್ ಮಾಡಿಕೊಳ್ಳಿ. ಯಾವಾಗ, ಯಾರ ಮೇಲೆ ಕಾರು ಹತ್ತಿಸಿ ಕೊಲ್ಲುತ್ತಾರೆ ಎಂಬುದೇ ತಿಳಿಯುವುದಿಲ್ಲ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ಕೇಂದ್ರ ಸಚಿವರೊಬ್ಬರ […]
ಮುಂದಿನ ವಿಧಾನಸಭೆ ಚುನಾವಣೆಗೂ ಮೊದಲು ಕಾಂಗ್ರೆಸ್ ಎರಡು ಹೋಳಾಗಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಸಿಂಧಗಿ ವಿಧಾನಸಭೆ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ ಸಚಿವ ಕೆ ಸ್ ಈಶ್ವರಪ್ಪ ಈವರೆಗೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಾನು ಸಿಎಂ ನಾನು ಸಿಎಂ ಎನ್ನುತ್ತಿದ್ದರು. ಒಬ್ಬರು ಎಡಕ್ಕೆ ಎಳೆದರೆ, ಇನ್ನೊಬ್ಬರು ಬಲಕ್ಕೆ ಎಳೆಯುತ್ತಾರೆ. ಇದೀಗ ಅನಿವಾರ್ಯವಾಗಿ ಒಂದಾಗಿದ್ದಾರೆ ಎಂದು ವ್ಯಂಗ್ಯ […]