ಶ್ರೀ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಸಂಯುಕ್ತ ಆಶ್ರಯದಲ್ಲಿ “ಆಝಾದಿ ಕಾ ಅಮೃತ ಮಹೋತ್ಸವ” ನಡೆಯಿತು.. ಬಾಗಲಕೋಟೆಯ ಇಳಕಲ್‌ ನಗರದಲ್ಲಿ  ನಡೆದ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಡಾ.ಬದ್ರಶೆಟ್ಟಿ ವಹಿಸಿದ್ದರು .. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಆರೋಗ್ಯ ಒಂದು ಭಾಗ್ಯ, ಅದನ್ನು ಕಾಪಾಡಿಕೊಂಡು ದೀರ್ಘಕಾಲ ಸು:ಖ, ಸಂತೋಷ ನೆಮ್ಮದಿಯಿಂದ ಬಾಳಬೇಕಾದರೆ, ಕ್ರಮಬದ್ಧವಾದ ವ್ಯಾಯಾಮ, ಆಹಾರ ಹಾಗೂ ಶಾಂತವಾದ ಮನಸ್ಸನ್ನು ಹೊಂದಬೇಕು ಎಂದು ಹೇಳಿದ್ರು … ಆಯುರ್ವೇದ ಭಾರತೀಯರು ಜಗತ್ತಿಗೆ ನೀಡಿದ […]

ಜಾಗತಿಕ ಮಟ್ಟದಲ್ಲಿ ಲಸಿಕೆಗಳ ತುರ್ತು ಬಳಕೆಗೆ ಕೋವ್ಯಾಕ್ಸಿನ್ ನ್ನು ಸೇರಿಸುವುದಕ್ಕಾಗಿ ಡಬ್ಲ್ಯುಹೆಚ್‌ಒ ಭಾರತ್ ಬಯೋಟೆಕ್ ನಿಂದ ಮತ್ತಷ್ಟು ಸ್ಪಷ್ಟನೆಗಳನ್ನು ಕೇಳಿದೆ. ತುರ್ತು ಬಳಕೆಗೆ ಅನುಮೋದನೆ ನೀಡುವುದಕ್ಕೂ ಮುನ್ನ ಅಂತಿಮ ಹಂತದ ಅಪಾಯ-ಪ್ರಯೋಜನ ಮೌಲ್ಯಮಾಪನವನ್ನು ನಡೆಸುವುದಕ್ಕೆ ಈ ಹೆಚ್ಚುವರಿ ಸ್ಪಷ್ಟನೆಗಳನ್ನು ಡಬ್ಲ್ಯುಹೆಚ್‌ಒ ನ ತಾಂತ್ರಿಕ ಸಲಹಾ ತಂಡ ಕೇಳಿದೆ.   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada

ದಶಕಗಳ ಹಿಂದೆ ಬಂದ ಪ್ರೇಮಲೋಕ ಚಿತ್ರದಲ್ಲಿ ಕ್ರೇಜಿ ಸ್ಟಾರ್​ ರವಿಚಂದ್ರನ್​  ನಟನೆಯ ಪ್ರೀತಿಪ್ರಣಯದ ದೃಶ್ಯಗಳು ಯುವಜನರ ಮನ ಸೆಳೆದಿದ್ದವು. ಇದೀಗ ಅವರ ಮಗ ಮನೋರಂಜನ್ ನಾಯಕತ್ವದ ‘ಮುಗಿಲ್​ಪೇಟೆ’ ಎಂಬ ಪ್ರೇಮಚಿತ್ರದಲ್ಲಿ ಅದೇ ರೀತಿಯ ಜಾದೂ ಸೃಷ್ಟಿಸುವ ಪ್ರಯತ್ನದಲ್ಲಿದ್ದಾರೆ. ಈದೀಗ ಮುಗಿಲ್​ಪೇಟೆ ಚಿತ್ರದ ‘ತಾರೀಫು ಮಾಡಲು ತಾರೀಕು ಮೂಡಿದೆ…’ ಹಾಡಿನ ವಿಡಿಯೋವನ್ನು ಲಹರಿ ಮ್ಯೂಸಿಕ್​ನವರು ಯೂಟ್ಯೂಬ್​ನಲ್ಲಿ ಬಿಡುಗಡೆ ಮಾಡಿದ್ದರು. ಆ ಚಿತ್ರಗೀತೆಗೆ 24 ಗಂಟೆಗಳಲ್ಲಿ 700 ಸಾವಿರ ಪ್ಲಸ್​ ವೀಕ್ಷಣೆಗಳು ಲಭಿಸಿದ್ದು, […]

ಹರ್ಷ ನಿರ್ದೇಶನದ ಶಿವರಾಜ್ ಕುಮಾರ್ ನಟನೆಯ ಭಜರಂಗಿ -2 ಸಿನಿಮಾ ಅಕ್ಟೋಬರ್ 29 ರಂದು ತೆರೆ ಕಾಣಲಿದೆ.ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದ್ದು ಬೆಂಗಳೂರಿನಲ್ಲಿ ಪ್ರಿ ರಿಲೀಸ್ ಇವೆಂಟ್ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಯಶ್ ಮತ್ತು ಪುನೀತ್ ರಾಜ್ ಕುಮಾರ್ ಭಾಗವಹಿಸಲಿದ್ದಾರೆ. ಜಯಣ್ಣ ಬೋಗೇಂದ್ರ ಸಿನಿಮಾ ನಿರ್ಮಾಣ ಮಾಡಿದ್ದು, ಅವರೇ ವಿತರಕರಾಗಿದ್ದಾರೆ. ಕರ್ನಾಟಕದಾದ್ಯಂತ 350 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಭಜರಂಗಿ 2 ತೆಲುಗು […]

ಸಾಮಾಜಿಕ ಮಾಧ್ಯಮಗಳಲ್ಲಿ ನಿಂದನೆಗೆ ಗುರಿಯಾಗಿರುವ ಟೀಮ್ ಇಂಡಿಯಾದ ವೇಗದ ಬೌಲರ್‌ ಮೊಹಮ್ಮದ್‌ ಶಮಿ ಅವರಿಗೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ  ಬೆಂಬಲವನ್ನ  ವ್ಯಕ್ತಪಡಿಸಿದೆ.ಟಿ-20 ವಿಶ್ವಕಪ್‌ನಲ್ಲಿ ಭಾನುವಾರ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ಸೋಲು ಅನುಭವಿಸಿತ್ತು. ಇದೇ ಕಾರಣಕ್ಕೆ ವಿರಾಟ್ ಕೊಹ್ಲಿ ಬಳಗದ ವಿರುದ್ಧ ಅಭಿಮಾನಿಗಳು ಆನ್‌ಲೈನ್ ದಾಳಿ ನಡೆಸಿದ್ದರು. ಸದ್ಯ ಮೊಹಮ್ಮದ್‌ ಶಮಿ ಬೆಂಬಲಕ್ಕೆ ನಿಂತಿರುವ ಬಿಸಿಸಿಐ, ‘ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜೊತೆಗಿನ […]

ಗೋವಿಂದಾಯ ನಮಃ, ಗೂಗ್ಲಿ, ರಣ ವಿಕ್ರಮ, ಜೆಸ್ಸಿ, ನಟರಾಜ ಸರ್ವೀಸ್ ಮತ್ತು ನಟ ಸಾರ್ವಭೌಮ ಸಿನಿಮ ಗಳನ್ನು ನಿರ್ದೇಶಿಸಿರುವ ಪವನ್ ಒಡೆಯರ್ ಡೊಳ್ಳು ಸಿನಿಮಾದ ಮೂಲಕ ನಿರ್ಮಾಪಕರಾಗಿರೋದು ಗೊತ್ತೇ ಇದೆ. ಇದೀಗ ಈ ಸಿನಿಮಾಗೆ ಪ್ರಶಸ್ತಿಗಳ ಮಹಾಪೂರವೇ ಹರಿದು ಬರುತ್ತಿದೆ. ಪವನ್ ಮತ್ತು ಪತ್ನಿ ಅಪೇಕ್ಷಾ ಪುರೋಹಿತ್ ಸೇರಿ ನಿರ್ಮಿಸಿರುವ ಈ ಸಿನಿಮಾ ಸಾಕಷ್ಟು ಜನಮೆಚ್ಚುಗೆ ಕೂಡ ಪಡೆದುಕೊಂಡಿದೆ. ಪವನ್ ಮತ್ತು ಅಪೇಕ್ಷಾ ನಿರ್ಮಾಣದ ಡೊಳ್ಳು ಸಿನಿಮಾ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ. […]

ಮಾಜಿ ಬ್ಯಾಟ್ಸ್‌ ಮನ್‌ ರಾಹುಲ್‌ ದ್ರಾವಿಡ್‌ ಟೀಮ್‌ ಇಂಡಿಯಾದ ಕೋಚ್‌ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಇದರೊಂದಿಗೆ ದ್ರಾವಿಡ್‌ ಅವರೇ ಭಾರತ ತಂಡದ ಕೋಚ್‌ ಆಗುವುದು ಬಹುತೇಕ ಖಚಿತಗೊಂಡಿದೆ. ರಾಹುಲ್‌ ದ್ರಾವಿಡ್‌ ನೂತನ ಕೋಚ್‌ ಆಗಿ ಅಧಿಕಾರ ಸ್ವೀಕರಿಸುವುದು ಕೆಲವು ವಾರಗಳ ಹಿಂದೆಯೇ ಖಾತ್ರಿಯಾಗಿತ್ತು. ಇದನ್ನು ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಔಪಚಾರಿಕವಾಗಿ ಹೇಳಿದ್ದರು. ಆದರೆ ಕ್ರಿಕೆಟ್‌ ಮಂಡಳಿಯ ಸಂಪ್ರದಾಯದಂತೆ ಅರ್ಜಿ ಮೂಲಕವೇ ಈ ಪ್ರಕ್ರಿಯೆ ನಡೆಯ ಬೇಕಿತ್ತು.ಹೀಗಾಗಿ ದ್ರಾವಿಡ್‌ ಇದನ್ನು […]

ಸುಡಾನ್‌ನಲ್ಲಿ ಸೇನಾ ಮುಖ್ಯಸ್ಥ ಜನರಲ್ ಅಬ್ದುಲ್ ಫತಾಹ್ ಬರ್ಹಾನ್ ನೇತೃತ್ವದಲ್ಲಿ ಸೋಮವಾರ ನಡೆದ ಕ್ಷಿಪ್ರಕ್ರಾಂತಿಯನ್ನು ವಿರೋಧಿಸಿ ರಾಜಧಾನಿ ಖರ್ಟೂಮ್‌ನಲ್ಲಿ ಸತತ 2ನೇ ದಿನವೂ ಪ್ರತಿಭಟನೆ ನಡೆದಿದೆ. ಸರಕಾರವನ್ನು ವಿಸರ್ಜಿಸಿ ದೇಶದಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ಜನರಲ್ ಬರ್ಹಾನ್ ಘೋಷಿಸಿದ ಕೆಲವೇ ಗಂಟೆಗಳ ಬಳಿಕ ಪ್ರಜಾಪ್ರಭುತ್ವ ವ್ಯವಸ್ಥೆಯ ಸಾವಿರಾರು ಬೆಂಬಲಿಗರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದರು. ಪ್ರತಿಭಟನೆಯನ್ನು ಹತ್ತಿಕ್ಕಲು ಭದ್ರತಾ ಪಡೆಗಳು ಹಿಂಸಾತ್ಮಕ ಕ್ರಮ ಕೈಗೊಂಡಿದ್ದು ಸೋಮವಾರ 7 ಮಂದಿ ಮೃತಪಟ್ಟಿದ್ದಾರೆ […]

ಸತತ 2 ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ ಕಂಡಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ ಮತ್ತು ಲೀಟರ್ ಡೀಸೆಲ್ ದರದಲ್ಲಿ ಕ್ರಮವಾಗಿ 35 ಪೈಸೆ ಹೆಚ್ಚಳವಾಗಿದೆ.  ಇನ್ನು ಪೆಟ್ರೋಲ್ ಬೆಲೆಯೊಂದೇ ಅಲ್ಲ ಲೀಟರ್ ಡೀಸೆಲ್ ದರದವೂ ಸಹ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಇಂಧನ ದರ ಗರಿಷ್ಠ ಮಟ್ಟ ತಲುಪಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ Rs 111.70, ಡೀಸೆಲ್ Rs 102.60 ಆಗಿದೆ. […]

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದ ಟ್ಯಾಕ್ಸಿ ನಿಲ್ದಾಣದಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಸ್ಫೋಟದಲ್ಲಿ ಆರು ನಾಗರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಂಡಿಪೋರಾದ ಟ್ಯಾಕ್ಸಿ ಸ್ಟಾಂಡ್‌ನಲ್ಲಿ ನಿಂತಿದ್ದ ಟಾಟಾ ಸುಮೋ ಸ್ಫೋಟಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟದ ರಭಸಕ್ಕೆ ಟಾಟಾ ಸುಮೋ ಅಕ್ಕಪಕ್ಕ ಇದ್ದ ವಾಹನಗಳು ಜಖಂಗೊಂಡಿದ್ದು, ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ.   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada    

Advertisement

Wordpress Social Share Plugin powered by Ultimatelysocial