ರಾಜ್ಯದಲ್ಲಿ ಭಂಡ ಸರ್ಕಾರ ಆಡಳಿತ ನಡೆಸುತ್ತಿದೆ’ ಎಂದು ಮಾಜಿ ಸಚಿವ ರಮಾನಾಥ ರೈ ಕಿಡಿಕಾರಿದರು. ಮಡಿಕೇರಿಯಲ್ಲಿ ಮಾತನಾಡಿದ ಅವರು,‘ವೈದ್ಯಕೀಯ ಉಪಕರಣ ಖರೀದಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಬಂದರೂ ತನಿಖೆ ನಡೆಸುತ್ತಿಲ್ಲ. ಅಧಿಕಾರಕ್ಕೆ ಬಿಜೆಪಿಯುವರು ಏನು ಬೇಕಾದರೂ ಮಾಡಲು ಸಿದ್ಧರಿದ್ದಾರೆ. ಇವರಿಗೆ ಜನಹಿತ ಬೇಕಿಲ್ಲ. ಕೋವಿಡ್‌ ಹೆಸರಿನಲ್ಲಿ ದುಡ್ಡು ಹೊಡೆದಿರುವ ಸರ್ಕಾರದ ವಿರುದ್ದ ನಮ್ಮ ಹೋರಾಟ ನಡೆಯುತ್ತಿದೆ. ಪ್ರತಿ ಗ್ರಾಮಕ್ಕೂ ತೆರಳಿ ಸರ್ಕಾರದ ಭ್ರಷ್ಟಾಚಾರದ ಮಾಹಿತಿ ನೀಡುತ್ತೇವೆ’.ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ […]

ಬಾಗಲಕೋಟೆಯಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಇಳಕಲ್ಲು ತಾಲೂಕಿನ ಸಿದ್ದನಕೊಳ್ಳ ಕಿರು ಜಲಪಾತ ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರು ಮತ್ತು ಸಿದ್ದನಕೊಳ್ಳದ ಸಿದ್ದೇಶ್ವರ ಮಠಕ್ಕೆ ಭೇಟಿ ನೀಡುವ ಭಕ್ತರನ್ನು ತನ್ನತ್ತ ಸೆಳೆಯುತ್ತಿದೆ. ಧಾರ್ಮಿಕ ಸ್ಥಳ ಸಿದ್ದೇಶ್ವರ ಮಠವು ಐಹೊಳೆಯಿಂದ 10 ಕಿ.ಮೀ. ದೂರದಲ್ಲಿದೆ. ಪಕ್ಕದಲ್ಲೇ ಇರುವ ಜಲಪಾತವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಮತ್ತು ಭಕ್ತರ ದಂಡೇ ಹರಿದು ಬರುತ್ತದೆ. ಬೆಟ್ಟದ ಮೇಲೆ ಹಸಿರಿನ ಮಧ್ಯೆ ಜಾರಿ ಬರುವ ನೀರನ್ನು ನೋಡಲು ನಯನ ಮನೋಹರವಾಗಿರುತ್ತದೆ. […]

ಬಿಜೆಪಿ ನಾಯಕರು ನೀಡಿರುವ ನೋಟಿಸ್ ಗೆ ನಾನೇನೂ ಹೆದರುವುದಿಲ್ಲ. ನಾನೂ ಒಬ್ಬ ಲಾಯರ್‌ ತಾನೇ” ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ಆರೋಪಕ್ಕೆ ನೋಟಿಸ್ ನೀಡಿದ ವಿಚಾರದ ಬಗ್ಗೆ ಕಿಡಿಕಾರಿದರು. ನೋಟಿಸ್ ಬಂಡವಾಳ ಏನು ನನಗೆ ಗೊತ್ತಿಲ್ವಾ? ನಾನೇನು ನೋಟಿಸ್ ‌ಗೆ ಹೆದರಿಕೊಳ್ತಿನಾ? ನಾನು ಆರೋಪ ಮಾಡಿರೋದು ಸರ್ಕಾರದ ಮೇಲೆ. ಅವನ್ಯಾರೋ ನೋಟಿಸ್ ಕೊಟ್ಟಿದ್ದಾನೆ. ಯಾರೋ ನೋಟಿಸ್ ಕೊಟ್ಟರೆ ಏನ್ ಪ್ರಯೋಜನ ಎಂದು […]

ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಹೆಣ್ಣು ಮಕ್ಕಳಿಗಂತೂ ಪ್ರಿಯವಾದ ಮಾಸ. ಪ್ರತಿಯೊಂದು ಹಬ್ಬದಲ್ಲೂ ಚೆನ್ನಾಗಿ ಅಲಂಕಾರ ಮಾಡಿಕೊಂಡು ಸಡಗರ ಸಂಭ್ರಮದಿಂದ ಖುಷಿಪಡುತ್ತಾರೆ. ಈ ಎಲ್ಲಾ ಹಬ್ಬಗಳಲ್ಲಿ ವರಮಹಾಲಕ್ಷ್ಮಿ ಹಬ್ಬ ಎಂದರೆ ಎಲ್ಲರಿಗೂ ಬಹಳ ಪ್ರಿಯವಾದುದು. ಪ್ರತಿ ವರ್ಷ ಪೌರ್ಣಮಿಯ ಸಮೀಪದ ಶ್ರಾವಣ ಮಾಸದ ಎರಡನೇ ಶುಕ್ರವಾರ ಬರುವ ಈ ವರಲಕ್ಷ್ಮಿ ವ್ರತವನ್ನು ಎಲ್ಲಾ ಮುತ್ತೈದೆಯರು ಭಕ್ತಿ ಶ್ರದ್ಧೆಯಿಂದ ಆಚರಿಸುತ್ತಾರೆ. ಭವಿಷ್ಯೋತ್ತರ ಪುರಾಣದ ಪ್ರಕಾರ, ಲಕ್ಷ್ಮಿಯು ಕ್ಷೀರ ಸಾಗರದಿಂದ ಅವತಾರ […]

ಕೊರೊನಾ ಸೋಂಕಿತನ ಕುಟುಂಬಕ್ಕೆ ಸಾರ್ವಜನಿಕರು ಸಾಮಾಜಿಕ ಬಹಿಷ್ಕಾರ ಹಾಕಿರುವ ಆರೋಪ ಕೇಲಿಬಂದಿದೆ.ಜಿಲ್ಲೆಯ ಚಾಲುಕ್ಯ ನಗರದಲ್ಲಿರುವ ಸೋಂಕಿತರ ಕುಟುಂಬಕ್ಕೆ ಹಾಲು,ಪತ್ರಿಕೆ ಸೇರಿದಂತೆ ಅಗತ್ಯ ವಸ್ತುಗಳನ್ನು ಮನೆಗೆ ಪೂರೈಸದಂತೆ ಸ್ಥಳೀಯರು ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ತೀವ್ರವಾಗಿ ನೋಂದಿರುವ ಕುಟುಂಬಸ್ಥರು ಪ್ರಧಾನಿ ಕಾರ್ಯಾಲಯ ಮುಖ್ಯಮಂತ್ರಿಗಳಿಗೆ,ಆರೋಗ್ಯ ಸಚಿವರಿಗೆ ಹಾಗೂ ಜಿಲ್ಲಾಧಿಕಾರಿಗೆ ಟ್ವೀಟ್ ಮಾಡುವ ಮೂಲಕ ದೂರು ನೀಡಿದ್ದಾರೆ. ಇದುವರೆಗೂ ಮನೆಯಲ್ಲಿ ಒಬ್ಬ ವ್ಯಕ್ತಿಗೆ ಕೊರೊನಾ ಸೋಂಕು ದೃಢವಾಗಿದೆ.ಅವರನ್ನು ಮನೆಯ ಮೊದಲ ಮಹಡಿಯಲ್ಲಿ ಪ್ರತ್ಯೇಕವಾಗಿ ಇರಿಸಿದ್ದೇವೆ.ಮಾತ್ರೆ […]

ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮೂರು ಪಕ್ಷದವರು ಕೋವಿಡ್ ಗೆ ಒಳಗಾಗಿದ್ದಾರೆ ಎಂದು ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಬಣದಿಂದ ಕೋವಿಡ್ ಅಳತೆ ಮಾಡುವುದು ಬೇಡ. ಯಾವುದೇ  ಕಾರಣಕ್ಕೂ ಸಿಎಂ ಯಡಿಯೂರಪ್ಪ ಬದಲಾವಣೆ ಇಲ್ಲ.‌ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಇದೆಲ್ಲ ಮಾಧ್ಯಮದ ಸೃಷ್ಠಿ ಎಂದು ಆರೋಪಿಸಿದರು. ಬಿಜೆಪಿ ಸರ್ಕಾರದ ಬಗ್ಗೆ ಕುಮಾರಸ್ವಾಮಿ ಒಲವು ಹೊಂದಿದ್ದಾರೆ ಅನ್ನೋ ಸಿಪಿ ಯೋಗೇಶ್ವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಹೆಬ್ಬಾರ್, ಯೋಗಿಶ್ವರ್ […]

ರಾಯಬಾಗ ತಾಲ್ಲೂಕಿನ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಹೆಚ್.ಎ ಭಜಂತ್ರಿ ನಿವೃತ್ತಿ ಹೊಂದಿದ ಪ್ರಯುಕ್ತ ರಾಯಬಾಗ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಬಿಳ್ಕೊಡುವ ಸಮಾರಂಭ ಜರುಗಿತು. ಸರ್ಕಾರಿ ಸೇವೆಗೆ ಸೇರಿದ ಮೇಲೆ ನಿವೃತ್ತಿ ಅನಿವಾರ್ಯ, ಆದರೆ ತಮಗೆ ಸಿಕ್ಕ ಅವಧಿಯಲ್ಲಿ ಮಾಡಿರುವ ಕಾರ್ಯ ಸಾರ್ವಜನಿಕ ವಲಯದಲ್ಲಿ ಅಚ್ಚಳಿಯದೆ  ಸಮಾಜದಲ್ಲಿ ಉತ್ತಮ ಹೆಸರು ಗಳಿಸದವರ ಪೈಕಿ ರಾಯಬಾಗ ತಾಲ್ಲೂಕಿನ ಶಿಕ್ಷಣಾಧಿಕಾರಿ ಹೆಚ್.ಎ ಭಜಂತ್ರಿ , ಸುಮಾರು 15 ತಿಂಗಳುಗಳ ಹಿಂದೆ ರಾಯಬಾಗ ತಾಲೂಕಿನ ಶಿಕ್ಷಣ ಅಧಿಕಾರಿರಾಗಿ […]

ಬಿಹಾರದಲ್ಲಿ ಪ್ರವಾಹದಿಂದ ನದಿಗಳು ಅಪಾಯದ ಮಟ್ಟವನ್ನ ಮೀರಿ ಹರಿಯುತ್ತಿದ್ದು ಸುಮಾರು ೪೦ ಲಕ್ಷಕ್ಕೂ ಹೆಚ್ಚಿನ ಜನರು ಸಂಕಷ್ಟಕ್ಕೆ ಈಡಾಗಿದ್ದಾರೆ. ಒಂದೆಡೆ ಜನ ಪ್ರವಾಹದಿಂದ ಸಂಕಷ್ಟಕ್ಕೊಳಗಾಗಿದ್ದರೆ, ಇನ್ನೊಂದೆಡೆ ಕೊರೋನಾ ಸಮಸ್ಯೆ ಕೂಡ ಹೆಚ್ಚಾಗಿದೆ. ಇದುವರೆಗೂ ಪ್ರವಾಹದಿಂದ ಸುರಕ್ಷಿತವಾಗಿದ್ದ ಮಧುಬನಿ ಮತ್ತು ಸಿವಾನ್ ಜಿಲ್ಲೆಗಳ ೭೧ ಪಂಚಾಯಿತಿಗಳು ಈಗ ವಿಪತ್ತಿಗೆ ತುತ್ತಾಗಿವೆ. ಪ್ರವಾಹ ಪೀಡಿತ ಜಿಲ್ಲೆಗಳ ಸಂಖ್ಯೆ ಈಗ ೧೪ಕ್ಕೆ ಏರಿಕೆಯಾಗಿದೆ. ಜಲ ಪ್ರಳಯದಿಂದ ನಿರಾಶ್ರಿತರಾದವರ ಸಂಖ್ಯೆ ೩೯.೬೩ ಲಕ್ಷಕ್ಕೆ ಏರಿದ್ದು, ಸಾವಿನ […]

ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ಪ್ರೀತಿ-ಪ್ರೇಮ ಎಂದು ಹೇಳಿಕೊಂಡು ೩೧ವರ್ಷದ ಮಹಿಳೆಯನ್ನು ಪಾರ್ಟಿಗೆಂದು ಕರೆದೊಯ್ದು ಮದ್ಯ ಕುಡಿಸಿ ಅತ್ಯಾಚಾರ ಎಸಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬನಶಂಕರಿಯ ಶ್ರೀನಿವಾಸ ನಗರದ ಮಹಿಳೆ ಕೊಟ್ಟ ದೂರಿನ ಮೇರೆಗೆ ವಾಸಿಂ ಪಾಷಾ ಎಂಬಾತನ ವಿರುದ್ಧ ಕೊಡಿಗೇಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ತೆಗೆ ೨೦೧೧ರಲ್ಲಿ ಫೇಸ್‌ಬುಕ್‌ನಲ್ಲಿ ವಾಸಿಂ ಪರಿಚಯವಾಗಿದ್ದ. ಪ್ರತಿದಿನ ಚಾಟಿಂಗ್ ಮಾಡುತ್ತಿದ್ದರು. ಇಬ್ಬರ ನಡುವಿನ ಸ್ನೇಹ ಪ್ರೇತಿಗೆ ತಿರುಗಿತ್ತು. ಸ್ನೇಹಿತರ ಮನೆಯಲ್ಲಿ ಆಯೋಜಿಸಿದ್ದ ಪಾರ್ಟಿಗೆ […]

ಗಡಿ ನಾಡು ಬೀದರ್ ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಕ್ಕಾಗಿ ಕೈಗೊಳ್ಳಲು ನೀಡಿದ ಮರ‍್ಗರ‍್ಶನದಂತೆ ಶಾಂತಿಯುತವಾಗಿ ಬಕ್ರಿದ್ ಹಬ್ಬವನ್ನು ಆಚರಣೆ ಮಾಡುವಂತೆ ಮುಸ್ಲಿಂ ಬಾಂಧವರಲ್ಲಿ ಬೀದರ್ ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ .ಆರ್ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠ ರಾದ ಆ.ಐ ನಾಗೇಶ ಅವರು ಮನವಿ ಮಾಡಿಕೊಂಡರು. ಹಾಗೂ ಮಾನವಕುಲವನ್ನೇ ನಾಶ ಮಾಡಲು ಹೊರಟ ಮಹಾಮಾರಿ ಕೊರೊನಾ ವೈರಸ್ ನಿಂದ ಮನುಷ್ಯರನ್ನು ಕಾಪಾಡುವಂತೆ ದೇವರಲ್ಲಿ ಪ್ರರ‍್ಥನೆ ಮಾಡಿ ,ಮತ್ತು ಸಮಾಜದಲ್ಲಿ ಶಾಂತಿಯನ್ನು […]

Advertisement

Wordpress Social Share Plugin powered by Ultimatelysocial