ಆಶಿಶ್‌ ಮಿಶ್ರಾ ಪೋಲೀಸರ ಎದುರು ಹಾಜರ್‌ ;ಉಪವಾಸ ಸತ್ಯಾಗ್ರಹ ಕೈಬಿಟ್ಟ ಸಿಧು

ಲಖೀಂಪುರ್ಖೇರಿ ಹಿಂಸಾಚಾರ ಪ್ರಕರಣಕ್ಕೆ  ಪ್ರಮುಖ ಆರೋಪಿಯಾಗಿರುವ ಆಶಿಶ್ಮಿಶ್ರಾ ರವರನ್ನು ಉತ್ತರ ಪ್ರದೇಶದ ಕ್ರೈಂ ಬ್ರಾಂಚ್ ಪೋಲೀಸರ ಎದುರು ಹಾಜರಾಗಿದ್ದಾರೆ.ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಅಜಯ ಕುಮಾರ್ಮಿಶ್ರಾ ಪುತ್ರ ಆಶಿಶ್ಮಿಶ್ರಾ ವಿರುದ್ಧ ಪೊಲೀಸರು ಈಗಾಗಲೇ ಕೊಲೆ ಕೇಸ್ ದಾಖಲಿಸಿಕೊಂಡಿದ್ದು, ಇದುವರೆಗೆ ಬಂಧಿಸಿಲ್ಲತೀವ್ರ ವಿಚಾರಣೆಯನ್ನು ಭಾರಿ ಭದ್ರತೆಯೊಂದಿಗೆ ನಡೆಸುತ್ತಿದ್ದಾರೆ.ಶುಕ್ರವಾರವೂ ವಿಚಾರಣೆಗೆ ಆಗಮಿಸಿರದ ಹಿನ್ನಲೆಯಲ್ಲಿ ಪೊಲೀಸರು ಹೊಸತಾಗಿ ಸಮನ್ಸ್ನೀಡಿ, ಶನಿವಾರ ಬೆಳಗ್ಗೆ 11 ಗಂಟೆಗೆ ಹಾಜರಾಗುವಂತೆ, ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿ ಲಖೀಂಪುರ್ಖೇರಿಯಲ್ಲಿರುವ ಅವರ ನಿವಾಸಕ್ಕೆ ನೋಟಿಸ್ಅಂಟಿಸಿದ್ದರು.ಇನ್ನು ಆಶಿಶ್ಮಿಶ್ರಾನನ್ನು ಬಂಧಿಸುವ ವರೆಗೆ ಉಪವಾಸ ಸತ್ಯಾಗ್ರಹ ಕುಳಿತಿದ್ದ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರು ಕಠಿಣ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.ಸಿಧು ಅವರು ಲಖೀಂಪುರ್ಖೇರಿ ಹಿಂಸಾಚಾರದಲ್ಲಿ ಮೃತಪಟ್ಟಿದ್ದ ಪತ್ರಕರ್ತ ರಾಮನ್ ಕಶ್ಯಪ್ ಅವರ ಮನೆಯಲ್ಲಿ ಶುಕ್ರವಾರದಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ಚುನಾವಣೆಯಲ್ಲಿ ಎದುರಿಸಬೇಕಿರುವುದು ಬಿಜೆಪಿಯನ್ನ ಹೊರತು ಆರ್‌ಎಸ್‌ಎಸ್‌ ಅಲ್ಲ: ಸಚಿವ ಗೋವಿಂದ ಕಾರಜೋಳ

Sat Oct 9 , 2021
ಆರ್‌ಎಸ್‌ಎಸ್ ಯಾವುದೇ ಪಕ್ಷಕ್ಕೆ ಸೀಮಿತವಾಗಿಲ್ಲ ಜೆಡಿಎಸ್ ಆಗಲಿ ಬೇರೆಯವರಾಗಲಿ ಚುನಾವಣೆಯಲ್ಲಿ ಎದುರಿಸಬೇಕಿರುವುದು ಬಿಜೆಪಿಯನ್ನ ಹೊರತು ಆರ್‌ಎಸ್‌ಎಸ್‌ ಅಲ್ಲ. ಹೀಗಾಗಿ ವಿನಾಕಾರಣ ಸಂಘಟನೆಯನ್ನು ಚರ್ಚೆಗೆ ಎಳೆಯಬೇಡಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಎಚ್ಚರಿಕೆ ನೀಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ ಎಸ್‌ ಎಸ್ ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸುವ, ಧರ್ಮ ರಕ್ಷಣೆಯ ಉದ್ದೇಶ ಹೊಂದಿದೆ ಎಂದರು. ದೇವೆಗೌಡರು ಪ್ರಧಾನಿ ಆಗಿದ್ದಾಗ […]

Advertisement

Wordpress Social Share Plugin powered by Ultimatelysocial