ACCIDENT:ವ್ಯಕ್ತಿಗೆ ಗುದ್ದಿದ ಆಟೋ,ಸ್ಥಿತಿ ಗಂಭೀರ;

ಸರಕು ತುಂಬಿಕೊಂಡಿದ್ದ ಆಟೋವೊಂದು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಪರಿಣಾಮ ದೇವರ ಉತ್ಸವ ನೋಡುತ್ತ ನಿಂತಿದ್ದ ವ್ಯಕ್ತಿ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಈ ಘಟನೆ ಮಧುಗಿರಿ ತಾಲೂಕಿನ ಸಿದ್ದಾಪುರ ಗೇಟ್ ಹತ್ತಿರ ನಡೆದಿದ್ದು, ಗಂಗಾಧರ್(40) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

ಈ ವ್ಯಕ್ತಿ ದೇವರ ಉತ್ಸವ ನೋಡುವುದಕ್ಕಾಗಿ ಅಲ್ಲಿಗೆ ತೆರಳಿದ್ದರು. ಅಲ್ಲಿ ಮಣ್ಣಮ್ಮ ದೇವರ ಉತ್ಸವ ನಡೆಯುತ್ತಿತ್ತು. ಹೀಗಾಗಿ ಅಲ್ಲಿದ್ದ ಜನರೊಂದಿಗೆ ಇವರು ಕೂಡ ದೇವರ ಉತ್ಸವ ವೀಕ್ಷಿಸುತ್ತಿದ್ದರು. ಆದರೆ, ವೇಗವಾಗಿ ಬಂದ ಆಟೋ ಇವರಿಗೆ ಡಿಕ್ಕಿ ಹೊಡೆದಿದೆ.

ಘಟನೆ ನಡೆಯುತ್ತಿದ್ದಂತೆ ಸ್ಥಳೀಯರು ಚಾಲಕನನ್ನು ಹಿಡಿದು ಥಳಿಸಿದ್ದಾರೆ. ಗಂಗಾಧರ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕುಮಾರ್, ದೊಡ್ಡಮ್ಮ, ನರಸಮ್ಮ ಸೇರಿದಂತೆ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಈ ಕುರಿತು ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಗ್ರೇಟರ್ ನೋಯ್ಡಾದಲ್ಲಿ ಆಸ್ತಿ ವಿಚಾರಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ತಂದೆಯನ್ನು ಗುಂಡಿಕ್ಕಿ ಕೊಂದಿದ್ದಾನೆ

Sat Jan 29 , 2022
ಗ್ರೇಟರ್ ನೋಯ್ಡಾ: ದೆಹಲಿ ಸಮೀಪದ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ದಾದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಪಲ್ಲಾ ಗ್ರಾಮದ ಅವರ ಮನೆಯ ಸಮೀಪ ಬುಧವಾರ ಮಧ್ಯಾಹ್ನ ವ್ಯಕ್ತಿಯೊಬ್ಬನನ್ನು ಆತನ ಮಗ ಗುಂಡಿಕ್ಕಿ ಕೊಂದಿದ್ದಾನೆ. ಆಸ್ತಿ ವಿವಾದ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಲೋಕೇಶ್ ಭಾಟಿ ಎಂದು ಪೊಲೀಸರು ಗುರುತಿಸಿದ್ದು, ಸಂತ್ರಸ್ತೆಯನ್ನು ಆತನ ತಂದೆ ವಿಪತ್ರಂ ಭಾಟಿ ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ ಅಪರಿಚಿತ ವ್ಯಕ್ತಿಯೊಬ್ಬ ವ್ಯಕ್ತಿಯೊಬ್ಬನ ಮೇಲೆ […]

Advertisement

Wordpress Social Share Plugin powered by Ultimatelysocial